Homeಫ್ಯಾಕ್ಟ್‌ಚೆಕ್FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಮಹಿಳೆಯೊಬ್ಬಳು ತನ್ನ ಹಿಜಾಬ್ ಮೇಲೆನೇ ಶಾಂಪೂ ಹಾಕಿ ತಲೆ ಸ್ನಾನ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ದಿನಗಳಿಂದ ಈ ವಿಡಿಯೋ ಹರಿದಾಡುತ್ತಿದೆ.

ಅನೇಕ ಬಲಪಂಥೀಯ ಎಕ್ಸ್‌ ಬಳಕೆದಾರರು ವಿಡಿಯೋ ಹಂಚಿಕೊಂಡು ” ಮುಸ್ಲಿಂ ಸಮುದಾಯವನ್ನು ಅಪಹಾಸ್ಯ” ಮಾಡಿದ್ದಾರೆ.

’99 ವಿಕಿ’ ಎಂಬ ವೆಬ್‌ಸೈಟ್‌ “ಶಾಂಪೂ ಜಾಹೀರಾತು ಮುಸ್ಲಿಂ ಮಹಿಳೆಯರ ಶೋಚನೀಯ ಸ್ಥಿತಿಯನ್ನು ಬಹಿರಂಗಪಡಿಸುತ್ತದೆ!” ಎಂಬ ಶೀರ್ಷಿಕೆಯಡಿ ವಿಡಿಯೋ ಕುರಿತು ಲೇಖನ ಪ್ರಕಟಿಸಿತ್ತು. ಅದರಲ್ಲಿ “ಪ್ರತಿಯೊಬ್ಬ ಮತಾಂಧ ಲಿಬ್ಟಾರ್ಡ್ ಉದಾರ ಆಧುನಿಕ ಇಸ್ಲಾಂ ಅನ್ನು ನಿರಂತರವಾಗಿ ಪ್ರತಿಪಾದಿಸುತ್ತಾನೆ. ಅವರೆಲ್ಲರೂ ಈಗ ಶಾಂಪೂ ಜಾಹೀರಾತಿನಂತಹ ಸರಳವಾದ ವಿಷಯದಿಂದ ಬಹಿರಂಗಗೊಂಡಿದ್ದಾರೆ. ಇದು ಯಾವ ರೀತಿಯ ಮಧ್ಯಕಾಲೀನ ಧರ್ಮ?” ಎಂದು ಹೇಳಿತ್ತು. ಆದರೆ, ಪ್ರಸ್ತುತ ಆ ಲೇಖನ ವೆಬ್‌ಸೈಟ್‌ನಿಂದ ಕಣ್ಮರೆಯಾಗಿದೆ.

‘ಇಂಡಿಯನ್ ವಾಯ್ಸ್’ ಎಂಬ ಮತ್ತೊಂದು ವೆಬ್‌ಸೈಟ್‌ ಕೂಡ “ಕಠಿಣ ಶರಿಯಾ ಕಾನೂನು ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಎರಡನೇ ದರ್ಜೆಯ ಸ್ಥಾನಮಾನ ನೀಡುತ್ತದೆ. ಮಹಿಳೆಯರು ಸದಾ ತಮ್ಮ ತಲೆಯನ್ನು ಮುಚ್ಚುವಂತೆ ಆದೇಶಿಸುತ್ತದೆ” ಎಂದು ಹೇಳಿತ್ತು. ಈಗ ಈ ಲೇಖನವೂ ವೆಬ್‌ಸೈಟ್‌ನಿಂದ ಕಾಣೆಯಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋಗೆ ಕೋಮು ಬಣ್ಣ ಬಳಿದಿರುವ ಹಿನ್ನೆಲೆ, ಅದರ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ವಿಡಿಯೋ ಕುರಿತ ವಿವರ ಇಲ್ಲಿದೆ.

“ಎಸ್ಕಾರ್ಫ್ಸ್” ಎಂಬ ಮಲೇಷ್ಯಾದ ಸ್ಕಾರ್ಫ್ ಕಂಪನಿ ಮತ್ತು ಅದರ ಜಾಹೀರಾತು ಏಜೆನ್ಸಿ ತಮ್ಮ ಸ್ಕಾರ್ಫ್‌ಗಳನ್ನು ಪ್ರಚಾರ ಮಾಡಲು ಸನ್‌ಸಿಲ್ಕ್ ಶಾಂಪೂನ ಹಳೆಯ ಜಾಹೀರಾತನ್ನು ವಿಡಂಬನಾತ್ಮಕವಾಗಿ ತೋರಿಸಿತ್ತು. ಅದನ್ನು ಹಂಚಿಕೊಂಡು ತಪ್ಪು ಸಂದೇಶ ಹರಡಲಾಗಿದೆ.

ಎಸ್ಕಾರ್ಫ್ಸ್ ಕಂಪನಿ 2006ರ ಸನ್ ಸಿಲ್ಕ್ ಶಾಂಪೂ ಜಾಹೀರಾತಿನಲ್ಲಿ ಬಳಸಲಾದ ಹಿಂದಿನ ಕ್ಲೀಷೆ ಪ್ರೇಮ ದೃಶ್ಯವನ್ನು ಮರುಸೃಷ್ಟಿಸಿ ವಿಡಂಬನಾತ್ಮಕವಾಗಿ ತೋರಿಸಿದೆ. ಹೊಸ ವಿಡಿಯೋಗೆ ‘ಬುಡಕ್ 90 ಆನ್ ಜೆ ತಾಹು ಇಕ್ಲಾನ್-ಇಕ್ಲಾನ್ ಮಕಾಮ್ ನಿ” ಅಂದರೆ “90 ರ ದಶಕದ ಮಕ್ಕಳು ಮಾತ್ರ ಇದನ್ನು ಅರ್ಥಮಾಡಿಕೊಳ್ಳುತ್ತಾರೆ” ಎಂದು ಹೆಸರಿಸಿದೆ.

ಸನ್ ಸಿಲ್ಕ್ ಶಾಂಪೂನ ಹಳೆಯ ಜಾಹೀರಾತಿನ ಮೂಲ ವಿಡಿಯೋ ಕೆಳಗೆ ನೋಡಬಹುದು.

ಎಸ್ಕಾರ್ಫ್ಸ್ ಸೃಷ್ಟಿಸಿರುವ ಹೊಸ ವಿಡಂಬನಾತ್ಮಕ ಜಾಹೀರಾತು ವಿಡಿಯೋ ಕೆಳಗಿದೆ.

ಎಸ್ಕಾರ್ಫ್ಸ್‌ನ ಸ್ಥಾಪಕಿ ಐಡಾ ಸುಕಿಮನ್ ಕೂಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ಇದು ಕೇವಲ ವಿಡಂಬನಾತ್ಮಕ ವಿಡಿಯೋ ಎಂದು ಹೇಳಿದ್ದಾರೆ. ಮಲೈ ಭಾಷೆಯಲ್ಲಿ ಹಾಕಿರುವ ಪೋಸ್ಟ್ ಮತ್ತು ಅದರ ಅನುವಾದ ಇಲ್ಲಿದೆ.

“ನಮ್ಮ ಶಿರವಸ್ತ್ರಗಳು ಶಾಂಪೂ ಮಾಡಿದ ನಂತರ ನಿಮ್ಮ ಕೂದಲಿಗೆ ಹೇಗೆ ಅನಿಸುತ್ತದೆಯೋ ಅಷ್ಟೇ ಆರಾಮದಾಯಕವಾಗಿದೆ. ಅದನ್ನೇ ನಾವು ವೀಡಿಯೊದಲ್ಲಿ ತೋರಿಸಲು ಪ್ರಯತ್ನಿಸಿದ್ದೇವೆ” ಎಂದು ಎಸ್ಕಾರ್ಫ್ಸ್‌ ಕಂಪನಿಯ ಪ್ರತಿನಿಧಿಯೊಬ್ಬರು ಹೇಳಿರುವುದಾಗಿ ಸಿಲಿಕೋಸ್ ವೆಬ್‌ಸೈಟ್‌ ವರದಿ ಮಾಡಿದೆ.

ಒಟ್ಟಿನಲ್ಲಿ, ಮುಸ್ಲಿಂ ಮಹಿಳೆಯರು ಧರಿಸುವ ಸ್ಕಾರ್ಫ್‌ನ ಮಲೇಷ್ಯಾ ಮೂಲದ ಕಂಪನಿಯೊಂದರ ಜಾಹೀರಾತಿನ ವಿಡಿಯೋ ಅರ್ಧ ವೈರಲ್ ಆಗಿದ್ದು, ಅದು ಮಲೇಷ್ಯಾನ್ನರಿಗೆ ತಮಾಷೆಯಾಗಿ ಕಂಡರೆ, ಇತರ ದೇಶಗಳ ಜನರಿಗೆ ಮುಸ್ಲಿಮರನ್ನು ಅಪಹಾಸ್ಯ ಮಾಡುವ ಸಾಧನವಾಗಿ ಮಾರ್ಪಟ್ಟಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಸನ್‌ಸಿಲ್ಕ್ ಶಾಂಪೂವಿನ ಜಾಹೀರಾತಿನ ಹಳೆಯ ವಿಡಿಯೋವೊಂದರಿಂದ ಪ್ರೇರಿತರಾಗಿ ಎಸ್ಕಾರ್ಫ್ಸ್‌ ಎಂಬ ಸ್ಕಾರ್ಫ್‌ ಕಂಪನಿ ಹೊಸ ಸೃಜನಾತ್ಮಕ ಜಾಹೀರಾತು ವಿಡಿಯೋ ಸೃಷ್ಟಿಸಿತ್ತು. ಅದರ ಅರ್ಧಭಾಗ ವೈರಲ್ ಆಗಿದೆ. ಆ ಕ್ಲಿಪ್‌ ಅನ್ನು ಗೊತ್ತಿದ್ದೋ ಗೊತ್ತಿಲ್ಲದೆಯೋ ಅನೇಕರು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಬಳಸಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ ‘ಗೋ ಬ್ಯಾಕ್’ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...