Homeಫ್ಯಾಕ್ಟ್‌ಚೆಕ್FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಮಹಿಳೆಯೊಬ್ಬಳು ತನ್ನ ಹಿಜಾಬ್ ಮೇಲೆನೇ ಶಾಂಪೂ ಹಾಕಿ ತಲೆ ಸ್ನಾನ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ದಿನಗಳಿಂದ ಈ ವಿಡಿಯೋ ಹರಿದಾಡುತ್ತಿದೆ.

ಅನೇಕ ಬಲಪಂಥೀಯ ಎಕ್ಸ್‌ ಬಳಕೆದಾರರು ವಿಡಿಯೋ ಹಂಚಿಕೊಂಡು ” ಮುಸ್ಲಿಂ ಸಮುದಾಯವನ್ನು ಅಪಹಾಸ್ಯ” ಮಾಡಿದ್ದಾರೆ.

’99 ವಿಕಿ’ ಎಂಬ ವೆಬ್‌ಸೈಟ್‌ “ಶಾಂಪೂ ಜಾಹೀರಾತು ಮುಸ್ಲಿಂ ಮಹಿಳೆಯರ ಶೋಚನೀಯ ಸ್ಥಿತಿಯನ್ನು ಬಹಿರಂಗಪಡಿಸುತ್ತದೆ!” ಎಂಬ ಶೀರ್ಷಿಕೆಯಡಿ ವಿಡಿಯೋ ಕುರಿತು ಲೇಖನ ಪ್ರಕಟಿಸಿತ್ತು. ಅದರಲ್ಲಿ “ಪ್ರತಿಯೊಬ್ಬ ಮತಾಂಧ ಲಿಬ್ಟಾರ್ಡ್ ಉದಾರ ಆಧುನಿಕ ಇಸ್ಲಾಂ ಅನ್ನು ನಿರಂತರವಾಗಿ ಪ್ರತಿಪಾದಿಸುತ್ತಾನೆ. ಅವರೆಲ್ಲರೂ ಈಗ ಶಾಂಪೂ ಜಾಹೀರಾತಿನಂತಹ ಸರಳವಾದ ವಿಷಯದಿಂದ ಬಹಿರಂಗಗೊಂಡಿದ್ದಾರೆ. ಇದು ಯಾವ ರೀತಿಯ ಮಧ್ಯಕಾಲೀನ ಧರ್ಮ?” ಎಂದು ಹೇಳಿತ್ತು. ಆದರೆ, ಪ್ರಸ್ತುತ ಆ ಲೇಖನ ವೆಬ್‌ಸೈಟ್‌ನಿಂದ ಕಣ್ಮರೆಯಾಗಿದೆ.

‘ಇಂಡಿಯನ್ ವಾಯ್ಸ್’ ಎಂಬ ಮತ್ತೊಂದು ವೆಬ್‌ಸೈಟ್‌ ಕೂಡ “ಕಠಿಣ ಶರಿಯಾ ಕಾನೂನು ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಎರಡನೇ ದರ್ಜೆಯ ಸ್ಥಾನಮಾನ ನೀಡುತ್ತದೆ. ಮಹಿಳೆಯರು ಸದಾ ತಮ್ಮ ತಲೆಯನ್ನು ಮುಚ್ಚುವಂತೆ ಆದೇಶಿಸುತ್ತದೆ” ಎಂದು ಹೇಳಿತ್ತು. ಈಗ ಈ ಲೇಖನವೂ ವೆಬ್‌ಸೈಟ್‌ನಿಂದ ಕಾಣೆಯಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋಗೆ ಕೋಮು ಬಣ್ಣ ಬಳಿದಿರುವ ಹಿನ್ನೆಲೆ, ಅದರ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ವಿಡಿಯೋ ಕುರಿತ ವಿವರ ಇಲ್ಲಿದೆ.

“ಎಸ್ಕಾರ್ಫ್ಸ್” ಎಂಬ ಮಲೇಷ್ಯಾದ ಸ್ಕಾರ್ಫ್ ಕಂಪನಿ ಮತ್ತು ಅದರ ಜಾಹೀರಾತು ಏಜೆನ್ಸಿ ತಮ್ಮ ಸ್ಕಾರ್ಫ್‌ಗಳನ್ನು ಪ್ರಚಾರ ಮಾಡಲು ಸನ್‌ಸಿಲ್ಕ್ ಶಾಂಪೂನ ಹಳೆಯ ಜಾಹೀರಾತನ್ನು ವಿಡಂಬನಾತ್ಮಕವಾಗಿ ತೋರಿಸಿತ್ತು. ಅದನ್ನು ಹಂಚಿಕೊಂಡು ತಪ್ಪು ಸಂದೇಶ ಹರಡಲಾಗಿದೆ.

ಎಸ್ಕಾರ್ಫ್ಸ್ ಕಂಪನಿ 2006ರ ಸನ್ ಸಿಲ್ಕ್ ಶಾಂಪೂ ಜಾಹೀರಾತಿನಲ್ಲಿ ಬಳಸಲಾದ ಹಿಂದಿನ ಕ್ಲೀಷೆ ಪ್ರೇಮ ದೃಶ್ಯವನ್ನು ಮರುಸೃಷ್ಟಿಸಿ ವಿಡಂಬನಾತ್ಮಕವಾಗಿ ತೋರಿಸಿದೆ. ಹೊಸ ವಿಡಿಯೋಗೆ ‘ಬುಡಕ್ 90 ಆನ್ ಜೆ ತಾಹು ಇಕ್ಲಾನ್-ಇಕ್ಲಾನ್ ಮಕಾಮ್ ನಿ” ಅಂದರೆ “90 ರ ದಶಕದ ಮಕ್ಕಳು ಮಾತ್ರ ಇದನ್ನು ಅರ್ಥಮಾಡಿಕೊಳ್ಳುತ್ತಾರೆ” ಎಂದು ಹೆಸರಿಸಿದೆ.

ಸನ್ ಸಿಲ್ಕ್ ಶಾಂಪೂನ ಹಳೆಯ ಜಾಹೀರಾತಿನ ಮೂಲ ವಿಡಿಯೋ ಕೆಳಗೆ ನೋಡಬಹುದು.

ಎಸ್ಕಾರ್ಫ್ಸ್ ಸೃಷ್ಟಿಸಿರುವ ಹೊಸ ವಿಡಂಬನಾತ್ಮಕ ಜಾಹೀರಾತು ವಿಡಿಯೋ ಕೆಳಗಿದೆ.

ಎಸ್ಕಾರ್ಫ್ಸ್‌ನ ಸ್ಥಾಪಕಿ ಐಡಾ ಸುಕಿಮನ್ ಕೂಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ಇದು ಕೇವಲ ವಿಡಂಬನಾತ್ಮಕ ವಿಡಿಯೋ ಎಂದು ಹೇಳಿದ್ದಾರೆ. ಮಲೈ ಭಾಷೆಯಲ್ಲಿ ಹಾಕಿರುವ ಪೋಸ್ಟ್ ಮತ್ತು ಅದರ ಅನುವಾದ ಇಲ್ಲಿದೆ.

“ನಮ್ಮ ಶಿರವಸ್ತ್ರಗಳು ಶಾಂಪೂ ಮಾಡಿದ ನಂತರ ನಿಮ್ಮ ಕೂದಲಿಗೆ ಹೇಗೆ ಅನಿಸುತ್ತದೆಯೋ ಅಷ್ಟೇ ಆರಾಮದಾಯಕವಾಗಿದೆ. ಅದನ್ನೇ ನಾವು ವೀಡಿಯೊದಲ್ಲಿ ತೋರಿಸಲು ಪ್ರಯತ್ನಿಸಿದ್ದೇವೆ” ಎಂದು ಎಸ್ಕಾರ್ಫ್ಸ್‌ ಕಂಪನಿಯ ಪ್ರತಿನಿಧಿಯೊಬ್ಬರು ಹೇಳಿರುವುದಾಗಿ ಸಿಲಿಕೋಸ್ ವೆಬ್‌ಸೈಟ್‌ ವರದಿ ಮಾಡಿದೆ.

ಒಟ್ಟಿನಲ್ಲಿ, ಮುಸ್ಲಿಂ ಮಹಿಳೆಯರು ಧರಿಸುವ ಸ್ಕಾರ್ಫ್‌ನ ಮಲೇಷ್ಯಾ ಮೂಲದ ಕಂಪನಿಯೊಂದರ ಜಾಹೀರಾತಿನ ವಿಡಿಯೋ ಅರ್ಧ ವೈರಲ್ ಆಗಿದ್ದು, ಅದು ಮಲೇಷ್ಯಾನ್ನರಿಗೆ ತಮಾಷೆಯಾಗಿ ಕಂಡರೆ, ಇತರ ದೇಶಗಳ ಜನರಿಗೆ ಮುಸ್ಲಿಮರನ್ನು ಅಪಹಾಸ್ಯ ಮಾಡುವ ಸಾಧನವಾಗಿ ಮಾರ್ಪಟ್ಟಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಸನ್‌ಸಿಲ್ಕ್ ಶಾಂಪೂವಿನ ಜಾಹೀರಾತಿನ ಹಳೆಯ ವಿಡಿಯೋವೊಂದರಿಂದ ಪ್ರೇರಿತರಾಗಿ ಎಸ್ಕಾರ್ಫ್ಸ್‌ ಎಂಬ ಸ್ಕಾರ್ಫ್‌ ಕಂಪನಿ ಹೊಸ ಸೃಜನಾತ್ಮಕ ಜಾಹೀರಾತು ವಿಡಿಯೋ ಸೃಷ್ಟಿಸಿತ್ತು. ಅದರ ಅರ್ಧಭಾಗ ವೈರಲ್ ಆಗಿದೆ. ಆ ಕ್ಲಿಪ್‌ ಅನ್ನು ಗೊತ್ತಿದ್ದೋ ಗೊತ್ತಿಲ್ಲದೆಯೋ ಅನೇಕರು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಬಳಸಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ ‘ಗೋ ಬ್ಯಾಕ್’ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...