Homeಫ್ಯಾಕ್ಟ್‌ಚೆಕ್FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಮಹಿಳೆಯೊಬ್ಬಳು ತನ್ನ ಹಿಜಾಬ್ ಮೇಲೆನೇ ಶಾಂಪೂ ಹಾಕಿ ತಲೆ ಸ್ನಾನ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ದಿನಗಳಿಂದ ಈ ವಿಡಿಯೋ ಹರಿದಾಡುತ್ತಿದೆ.

ಅನೇಕ ಬಲಪಂಥೀಯ ಎಕ್ಸ್‌ ಬಳಕೆದಾರರು ವಿಡಿಯೋ ಹಂಚಿಕೊಂಡು ” ಮುಸ್ಲಿಂ ಸಮುದಾಯವನ್ನು ಅಪಹಾಸ್ಯ” ಮಾಡಿದ್ದಾರೆ.

’99 ವಿಕಿ’ ಎಂಬ ವೆಬ್‌ಸೈಟ್‌ “ಶಾಂಪೂ ಜಾಹೀರಾತು ಮುಸ್ಲಿಂ ಮಹಿಳೆಯರ ಶೋಚನೀಯ ಸ್ಥಿತಿಯನ್ನು ಬಹಿರಂಗಪಡಿಸುತ್ತದೆ!” ಎಂಬ ಶೀರ್ಷಿಕೆಯಡಿ ವಿಡಿಯೋ ಕುರಿತು ಲೇಖನ ಪ್ರಕಟಿಸಿತ್ತು. ಅದರಲ್ಲಿ “ಪ್ರತಿಯೊಬ್ಬ ಮತಾಂಧ ಲಿಬ್ಟಾರ್ಡ್ ಉದಾರ ಆಧುನಿಕ ಇಸ್ಲಾಂ ಅನ್ನು ನಿರಂತರವಾಗಿ ಪ್ರತಿಪಾದಿಸುತ್ತಾನೆ. ಅವರೆಲ್ಲರೂ ಈಗ ಶಾಂಪೂ ಜಾಹೀರಾತಿನಂತಹ ಸರಳವಾದ ವಿಷಯದಿಂದ ಬಹಿರಂಗಗೊಂಡಿದ್ದಾರೆ. ಇದು ಯಾವ ರೀತಿಯ ಮಧ್ಯಕಾಲೀನ ಧರ್ಮ?” ಎಂದು ಹೇಳಿತ್ತು. ಆದರೆ, ಪ್ರಸ್ತುತ ಆ ಲೇಖನ ವೆಬ್‌ಸೈಟ್‌ನಿಂದ ಕಣ್ಮರೆಯಾಗಿದೆ.

‘ಇಂಡಿಯನ್ ವಾಯ್ಸ್’ ಎಂಬ ಮತ್ತೊಂದು ವೆಬ್‌ಸೈಟ್‌ ಕೂಡ “ಕಠಿಣ ಶರಿಯಾ ಕಾನೂನು ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಎರಡನೇ ದರ್ಜೆಯ ಸ್ಥಾನಮಾನ ನೀಡುತ್ತದೆ. ಮಹಿಳೆಯರು ಸದಾ ತಮ್ಮ ತಲೆಯನ್ನು ಮುಚ್ಚುವಂತೆ ಆದೇಶಿಸುತ್ತದೆ” ಎಂದು ಹೇಳಿತ್ತು. ಈಗ ಈ ಲೇಖನವೂ ವೆಬ್‌ಸೈಟ್‌ನಿಂದ ಕಾಣೆಯಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋಗೆ ಕೋಮು ಬಣ್ಣ ಬಳಿದಿರುವ ಹಿನ್ನೆಲೆ, ಅದರ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ವಿಡಿಯೋ ಕುರಿತ ವಿವರ ಇಲ್ಲಿದೆ.

“ಎಸ್ಕಾರ್ಫ್ಸ್” ಎಂಬ ಮಲೇಷ್ಯಾದ ಸ್ಕಾರ್ಫ್ ಕಂಪನಿ ಮತ್ತು ಅದರ ಜಾಹೀರಾತು ಏಜೆನ್ಸಿ ತಮ್ಮ ಸ್ಕಾರ್ಫ್‌ಗಳನ್ನು ಪ್ರಚಾರ ಮಾಡಲು ಸನ್‌ಸಿಲ್ಕ್ ಶಾಂಪೂನ ಹಳೆಯ ಜಾಹೀರಾತನ್ನು ವಿಡಂಬನಾತ್ಮಕವಾಗಿ ತೋರಿಸಿತ್ತು. ಅದನ್ನು ಹಂಚಿಕೊಂಡು ತಪ್ಪು ಸಂದೇಶ ಹರಡಲಾಗಿದೆ.

ಎಸ್ಕಾರ್ಫ್ಸ್ ಕಂಪನಿ 2006ರ ಸನ್ ಸಿಲ್ಕ್ ಶಾಂಪೂ ಜಾಹೀರಾತಿನಲ್ಲಿ ಬಳಸಲಾದ ಹಿಂದಿನ ಕ್ಲೀಷೆ ಪ್ರೇಮ ದೃಶ್ಯವನ್ನು ಮರುಸೃಷ್ಟಿಸಿ ವಿಡಂಬನಾತ್ಮಕವಾಗಿ ತೋರಿಸಿದೆ. ಹೊಸ ವಿಡಿಯೋಗೆ ‘ಬುಡಕ್ 90 ಆನ್ ಜೆ ತಾಹು ಇಕ್ಲಾನ್-ಇಕ್ಲಾನ್ ಮಕಾಮ್ ನಿ” ಅಂದರೆ “90 ರ ದಶಕದ ಮಕ್ಕಳು ಮಾತ್ರ ಇದನ್ನು ಅರ್ಥಮಾಡಿಕೊಳ್ಳುತ್ತಾರೆ” ಎಂದು ಹೆಸರಿಸಿದೆ.

ಸನ್ ಸಿಲ್ಕ್ ಶಾಂಪೂನ ಹಳೆಯ ಜಾಹೀರಾತಿನ ಮೂಲ ವಿಡಿಯೋ ಕೆಳಗೆ ನೋಡಬಹುದು.

ಎಸ್ಕಾರ್ಫ್ಸ್ ಸೃಷ್ಟಿಸಿರುವ ಹೊಸ ವಿಡಂಬನಾತ್ಮಕ ಜಾಹೀರಾತು ವಿಡಿಯೋ ಕೆಳಗಿದೆ.

ಎಸ್ಕಾರ್ಫ್ಸ್‌ನ ಸ್ಥಾಪಕಿ ಐಡಾ ಸುಕಿಮನ್ ಕೂಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ಇದು ಕೇವಲ ವಿಡಂಬನಾತ್ಮಕ ವಿಡಿಯೋ ಎಂದು ಹೇಳಿದ್ದಾರೆ. ಮಲೈ ಭಾಷೆಯಲ್ಲಿ ಹಾಕಿರುವ ಪೋಸ್ಟ್ ಮತ್ತು ಅದರ ಅನುವಾದ ಇಲ್ಲಿದೆ.

“ನಮ್ಮ ಶಿರವಸ್ತ್ರಗಳು ಶಾಂಪೂ ಮಾಡಿದ ನಂತರ ನಿಮ್ಮ ಕೂದಲಿಗೆ ಹೇಗೆ ಅನಿಸುತ್ತದೆಯೋ ಅಷ್ಟೇ ಆರಾಮದಾಯಕವಾಗಿದೆ. ಅದನ್ನೇ ನಾವು ವೀಡಿಯೊದಲ್ಲಿ ತೋರಿಸಲು ಪ್ರಯತ್ನಿಸಿದ್ದೇವೆ” ಎಂದು ಎಸ್ಕಾರ್ಫ್ಸ್‌ ಕಂಪನಿಯ ಪ್ರತಿನಿಧಿಯೊಬ್ಬರು ಹೇಳಿರುವುದಾಗಿ ಸಿಲಿಕೋಸ್ ವೆಬ್‌ಸೈಟ್‌ ವರದಿ ಮಾಡಿದೆ.

ಒಟ್ಟಿನಲ್ಲಿ, ಮುಸ್ಲಿಂ ಮಹಿಳೆಯರು ಧರಿಸುವ ಸ್ಕಾರ್ಫ್‌ನ ಮಲೇಷ್ಯಾ ಮೂಲದ ಕಂಪನಿಯೊಂದರ ಜಾಹೀರಾತಿನ ವಿಡಿಯೋ ಅರ್ಧ ವೈರಲ್ ಆಗಿದ್ದು, ಅದು ಮಲೇಷ್ಯಾನ್ನರಿಗೆ ತಮಾಷೆಯಾಗಿ ಕಂಡರೆ, ಇತರ ದೇಶಗಳ ಜನರಿಗೆ ಮುಸ್ಲಿಮರನ್ನು ಅಪಹಾಸ್ಯ ಮಾಡುವ ಸಾಧನವಾಗಿ ಮಾರ್ಪಟ್ಟಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಸನ್‌ಸಿಲ್ಕ್ ಶಾಂಪೂವಿನ ಜಾಹೀರಾತಿನ ಹಳೆಯ ವಿಡಿಯೋವೊಂದರಿಂದ ಪ್ರೇರಿತರಾಗಿ ಎಸ್ಕಾರ್ಫ್ಸ್‌ ಎಂಬ ಸ್ಕಾರ್ಫ್‌ ಕಂಪನಿ ಹೊಸ ಸೃಜನಾತ್ಮಕ ಜಾಹೀರಾತು ವಿಡಿಯೋ ಸೃಷ್ಟಿಸಿತ್ತು. ಅದರ ಅರ್ಧಭಾಗ ವೈರಲ್ ಆಗಿದೆ. ಆ ಕ್ಲಿಪ್‌ ಅನ್ನು ಗೊತ್ತಿದ್ದೋ ಗೊತ್ತಿಲ್ಲದೆಯೋ ಅನೇಕರು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಬಳಸಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ ‘ಗೋ ಬ್ಯಾಕ್’ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...