Homeಫ್ಯಾಕ್ಟ್‌ಚೆಕ್FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಮಹಿಳೆಯೊಬ್ಬಳು ತನ್ನ ಹಿಜಾಬ್ ಮೇಲೆನೇ ಶಾಂಪೂ ಹಾಕಿ ತಲೆ ಸ್ನಾನ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ದಿನಗಳಿಂದ ಈ ವಿಡಿಯೋ ಹರಿದಾಡುತ್ತಿದೆ.

ಅನೇಕ ಬಲಪಂಥೀಯ ಎಕ್ಸ್‌ ಬಳಕೆದಾರರು ವಿಡಿಯೋ ಹಂಚಿಕೊಂಡು ” ಮುಸ್ಲಿಂ ಸಮುದಾಯವನ್ನು ಅಪಹಾಸ್ಯ” ಮಾಡಿದ್ದಾರೆ.

’99 ವಿಕಿ’ ಎಂಬ ವೆಬ್‌ಸೈಟ್‌ “ಶಾಂಪೂ ಜಾಹೀರಾತು ಮುಸ್ಲಿಂ ಮಹಿಳೆಯರ ಶೋಚನೀಯ ಸ್ಥಿತಿಯನ್ನು ಬಹಿರಂಗಪಡಿಸುತ್ತದೆ!” ಎಂಬ ಶೀರ್ಷಿಕೆಯಡಿ ವಿಡಿಯೋ ಕುರಿತು ಲೇಖನ ಪ್ರಕಟಿಸಿತ್ತು. ಅದರಲ್ಲಿ “ಪ್ರತಿಯೊಬ್ಬ ಮತಾಂಧ ಲಿಬ್ಟಾರ್ಡ್ ಉದಾರ ಆಧುನಿಕ ಇಸ್ಲಾಂ ಅನ್ನು ನಿರಂತರವಾಗಿ ಪ್ರತಿಪಾದಿಸುತ್ತಾನೆ. ಅವರೆಲ್ಲರೂ ಈಗ ಶಾಂಪೂ ಜಾಹೀರಾತಿನಂತಹ ಸರಳವಾದ ವಿಷಯದಿಂದ ಬಹಿರಂಗಗೊಂಡಿದ್ದಾರೆ. ಇದು ಯಾವ ರೀತಿಯ ಮಧ್ಯಕಾಲೀನ ಧರ್ಮ?” ಎಂದು ಹೇಳಿತ್ತು. ಆದರೆ, ಪ್ರಸ್ತುತ ಆ ಲೇಖನ ವೆಬ್‌ಸೈಟ್‌ನಿಂದ ಕಣ್ಮರೆಯಾಗಿದೆ.

‘ಇಂಡಿಯನ್ ವಾಯ್ಸ್’ ಎಂಬ ಮತ್ತೊಂದು ವೆಬ್‌ಸೈಟ್‌ ಕೂಡ “ಕಠಿಣ ಶರಿಯಾ ಕಾನೂನು ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಎರಡನೇ ದರ್ಜೆಯ ಸ್ಥಾನಮಾನ ನೀಡುತ್ತದೆ. ಮಹಿಳೆಯರು ಸದಾ ತಮ್ಮ ತಲೆಯನ್ನು ಮುಚ್ಚುವಂತೆ ಆದೇಶಿಸುತ್ತದೆ” ಎಂದು ಹೇಳಿತ್ತು. ಈಗ ಈ ಲೇಖನವೂ ವೆಬ್‌ಸೈಟ್‌ನಿಂದ ಕಾಣೆಯಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋಗೆ ಕೋಮು ಬಣ್ಣ ಬಳಿದಿರುವ ಹಿನ್ನೆಲೆ, ಅದರ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ವಿಡಿಯೋ ಕುರಿತ ವಿವರ ಇಲ್ಲಿದೆ.

“ಎಸ್ಕಾರ್ಫ್ಸ್” ಎಂಬ ಮಲೇಷ್ಯಾದ ಸ್ಕಾರ್ಫ್ ಕಂಪನಿ ಮತ್ತು ಅದರ ಜಾಹೀರಾತು ಏಜೆನ್ಸಿ ತಮ್ಮ ಸ್ಕಾರ್ಫ್‌ಗಳನ್ನು ಪ್ರಚಾರ ಮಾಡಲು ಸನ್‌ಸಿಲ್ಕ್ ಶಾಂಪೂನ ಹಳೆಯ ಜಾಹೀರಾತನ್ನು ವಿಡಂಬನಾತ್ಮಕವಾಗಿ ತೋರಿಸಿತ್ತು. ಅದನ್ನು ಹಂಚಿಕೊಂಡು ತಪ್ಪು ಸಂದೇಶ ಹರಡಲಾಗಿದೆ.

ಎಸ್ಕಾರ್ಫ್ಸ್ ಕಂಪನಿ 2006ರ ಸನ್ ಸಿಲ್ಕ್ ಶಾಂಪೂ ಜಾಹೀರಾತಿನಲ್ಲಿ ಬಳಸಲಾದ ಹಿಂದಿನ ಕ್ಲೀಷೆ ಪ್ರೇಮ ದೃಶ್ಯವನ್ನು ಮರುಸೃಷ್ಟಿಸಿ ವಿಡಂಬನಾತ್ಮಕವಾಗಿ ತೋರಿಸಿದೆ. ಹೊಸ ವಿಡಿಯೋಗೆ ‘ಬುಡಕ್ 90 ಆನ್ ಜೆ ತಾಹು ಇಕ್ಲಾನ್-ಇಕ್ಲಾನ್ ಮಕಾಮ್ ನಿ” ಅಂದರೆ “90 ರ ದಶಕದ ಮಕ್ಕಳು ಮಾತ್ರ ಇದನ್ನು ಅರ್ಥಮಾಡಿಕೊಳ್ಳುತ್ತಾರೆ” ಎಂದು ಹೆಸರಿಸಿದೆ.

ಸನ್ ಸಿಲ್ಕ್ ಶಾಂಪೂನ ಹಳೆಯ ಜಾಹೀರಾತಿನ ಮೂಲ ವಿಡಿಯೋ ಕೆಳಗೆ ನೋಡಬಹುದು.

ಎಸ್ಕಾರ್ಫ್ಸ್ ಸೃಷ್ಟಿಸಿರುವ ಹೊಸ ವಿಡಂಬನಾತ್ಮಕ ಜಾಹೀರಾತು ವಿಡಿಯೋ ಕೆಳಗಿದೆ.

ಎಸ್ಕಾರ್ಫ್ಸ್‌ನ ಸ್ಥಾಪಕಿ ಐಡಾ ಸುಕಿಮನ್ ಕೂಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ಇದು ಕೇವಲ ವಿಡಂಬನಾತ್ಮಕ ವಿಡಿಯೋ ಎಂದು ಹೇಳಿದ್ದಾರೆ. ಮಲೈ ಭಾಷೆಯಲ್ಲಿ ಹಾಕಿರುವ ಪೋಸ್ಟ್ ಮತ್ತು ಅದರ ಅನುವಾದ ಇಲ್ಲಿದೆ.

“ನಮ್ಮ ಶಿರವಸ್ತ್ರಗಳು ಶಾಂಪೂ ಮಾಡಿದ ನಂತರ ನಿಮ್ಮ ಕೂದಲಿಗೆ ಹೇಗೆ ಅನಿಸುತ್ತದೆಯೋ ಅಷ್ಟೇ ಆರಾಮದಾಯಕವಾಗಿದೆ. ಅದನ್ನೇ ನಾವು ವೀಡಿಯೊದಲ್ಲಿ ತೋರಿಸಲು ಪ್ರಯತ್ನಿಸಿದ್ದೇವೆ” ಎಂದು ಎಸ್ಕಾರ್ಫ್ಸ್‌ ಕಂಪನಿಯ ಪ್ರತಿನಿಧಿಯೊಬ್ಬರು ಹೇಳಿರುವುದಾಗಿ ಸಿಲಿಕೋಸ್ ವೆಬ್‌ಸೈಟ್‌ ವರದಿ ಮಾಡಿದೆ.

ಒಟ್ಟಿನಲ್ಲಿ, ಮುಸ್ಲಿಂ ಮಹಿಳೆಯರು ಧರಿಸುವ ಸ್ಕಾರ್ಫ್‌ನ ಮಲೇಷ್ಯಾ ಮೂಲದ ಕಂಪನಿಯೊಂದರ ಜಾಹೀರಾತಿನ ವಿಡಿಯೋ ಅರ್ಧ ವೈರಲ್ ಆಗಿದ್ದು, ಅದು ಮಲೇಷ್ಯಾನ್ನರಿಗೆ ತಮಾಷೆಯಾಗಿ ಕಂಡರೆ, ಇತರ ದೇಶಗಳ ಜನರಿಗೆ ಮುಸ್ಲಿಮರನ್ನು ಅಪಹಾಸ್ಯ ಮಾಡುವ ಸಾಧನವಾಗಿ ಮಾರ್ಪಟ್ಟಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಸನ್‌ಸಿಲ್ಕ್ ಶಾಂಪೂವಿನ ಜಾಹೀರಾತಿನ ಹಳೆಯ ವಿಡಿಯೋವೊಂದರಿಂದ ಪ್ರೇರಿತರಾಗಿ ಎಸ್ಕಾರ್ಫ್ಸ್‌ ಎಂಬ ಸ್ಕಾರ್ಫ್‌ ಕಂಪನಿ ಹೊಸ ಸೃಜನಾತ್ಮಕ ಜಾಹೀರಾತು ವಿಡಿಯೋ ಸೃಷ್ಟಿಸಿತ್ತು. ಅದರ ಅರ್ಧಭಾಗ ವೈರಲ್ ಆಗಿದೆ. ಆ ಕ್ಲಿಪ್‌ ಅನ್ನು ಗೊತ್ತಿದ್ದೋ ಗೊತ್ತಿಲ್ಲದೆಯೋ ಅನೇಕರು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಬಳಸಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ ‘ಗೋ ಬ್ಯಾಕ್’ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...