Homeಫ್ಯಾಕ್ಟ್‌ಚೆಕ್FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಮಹಿಳೆಯೊಬ್ಬಳು ತನ್ನ ಹಿಜಾಬ್ ಮೇಲೆನೇ ಶಾಂಪೂ ಹಾಕಿ ತಲೆ ಸ್ನಾನ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ದಿನಗಳಿಂದ ಈ ವಿಡಿಯೋ ಹರಿದಾಡುತ್ತಿದೆ.

ಅನೇಕ ಬಲಪಂಥೀಯ ಎಕ್ಸ್‌ ಬಳಕೆದಾರರು ವಿಡಿಯೋ ಹಂಚಿಕೊಂಡು ” ಮುಸ್ಲಿಂ ಸಮುದಾಯವನ್ನು ಅಪಹಾಸ್ಯ” ಮಾಡಿದ್ದಾರೆ.

’99 ವಿಕಿ’ ಎಂಬ ವೆಬ್‌ಸೈಟ್‌ “ಶಾಂಪೂ ಜಾಹೀರಾತು ಮುಸ್ಲಿಂ ಮಹಿಳೆಯರ ಶೋಚನೀಯ ಸ್ಥಿತಿಯನ್ನು ಬಹಿರಂಗಪಡಿಸುತ್ತದೆ!” ಎಂಬ ಶೀರ್ಷಿಕೆಯಡಿ ವಿಡಿಯೋ ಕುರಿತು ಲೇಖನ ಪ್ರಕಟಿಸಿತ್ತು. ಅದರಲ್ಲಿ “ಪ್ರತಿಯೊಬ್ಬ ಮತಾಂಧ ಲಿಬ್ಟಾರ್ಡ್ ಉದಾರ ಆಧುನಿಕ ಇಸ್ಲಾಂ ಅನ್ನು ನಿರಂತರವಾಗಿ ಪ್ರತಿಪಾದಿಸುತ್ತಾನೆ. ಅವರೆಲ್ಲರೂ ಈಗ ಶಾಂಪೂ ಜಾಹೀರಾತಿನಂತಹ ಸರಳವಾದ ವಿಷಯದಿಂದ ಬಹಿರಂಗಗೊಂಡಿದ್ದಾರೆ. ಇದು ಯಾವ ರೀತಿಯ ಮಧ್ಯಕಾಲೀನ ಧರ್ಮ?” ಎಂದು ಹೇಳಿತ್ತು. ಆದರೆ, ಪ್ರಸ್ತುತ ಆ ಲೇಖನ ವೆಬ್‌ಸೈಟ್‌ನಿಂದ ಕಣ್ಮರೆಯಾಗಿದೆ.

‘ಇಂಡಿಯನ್ ವಾಯ್ಸ್’ ಎಂಬ ಮತ್ತೊಂದು ವೆಬ್‌ಸೈಟ್‌ ಕೂಡ “ಕಠಿಣ ಶರಿಯಾ ಕಾನೂನು ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಎರಡನೇ ದರ್ಜೆಯ ಸ್ಥಾನಮಾನ ನೀಡುತ್ತದೆ. ಮಹಿಳೆಯರು ಸದಾ ತಮ್ಮ ತಲೆಯನ್ನು ಮುಚ್ಚುವಂತೆ ಆದೇಶಿಸುತ್ತದೆ” ಎಂದು ಹೇಳಿತ್ತು. ಈಗ ಈ ಲೇಖನವೂ ವೆಬ್‌ಸೈಟ್‌ನಿಂದ ಕಾಣೆಯಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋಗೆ ಕೋಮು ಬಣ್ಣ ಬಳಿದಿರುವ ಹಿನ್ನೆಲೆ, ಅದರ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ವಿಡಿಯೋ ಕುರಿತ ವಿವರ ಇಲ್ಲಿದೆ.

“ಎಸ್ಕಾರ್ಫ್ಸ್” ಎಂಬ ಮಲೇಷ್ಯಾದ ಸ್ಕಾರ್ಫ್ ಕಂಪನಿ ಮತ್ತು ಅದರ ಜಾಹೀರಾತು ಏಜೆನ್ಸಿ ತಮ್ಮ ಸ್ಕಾರ್ಫ್‌ಗಳನ್ನು ಪ್ರಚಾರ ಮಾಡಲು ಸನ್‌ಸಿಲ್ಕ್ ಶಾಂಪೂನ ಹಳೆಯ ಜಾಹೀರಾತನ್ನು ವಿಡಂಬನಾತ್ಮಕವಾಗಿ ತೋರಿಸಿತ್ತು. ಅದನ್ನು ಹಂಚಿಕೊಂಡು ತಪ್ಪು ಸಂದೇಶ ಹರಡಲಾಗಿದೆ.

ಎಸ್ಕಾರ್ಫ್ಸ್ ಕಂಪನಿ 2006ರ ಸನ್ ಸಿಲ್ಕ್ ಶಾಂಪೂ ಜಾಹೀರಾತಿನಲ್ಲಿ ಬಳಸಲಾದ ಹಿಂದಿನ ಕ್ಲೀಷೆ ಪ್ರೇಮ ದೃಶ್ಯವನ್ನು ಮರುಸೃಷ್ಟಿಸಿ ವಿಡಂಬನಾತ್ಮಕವಾಗಿ ತೋರಿಸಿದೆ. ಹೊಸ ವಿಡಿಯೋಗೆ ‘ಬುಡಕ್ 90 ಆನ್ ಜೆ ತಾಹು ಇಕ್ಲಾನ್-ಇಕ್ಲಾನ್ ಮಕಾಮ್ ನಿ” ಅಂದರೆ “90 ರ ದಶಕದ ಮಕ್ಕಳು ಮಾತ್ರ ಇದನ್ನು ಅರ್ಥಮಾಡಿಕೊಳ್ಳುತ್ತಾರೆ” ಎಂದು ಹೆಸರಿಸಿದೆ.

ಸನ್ ಸಿಲ್ಕ್ ಶಾಂಪೂನ ಹಳೆಯ ಜಾಹೀರಾತಿನ ಮೂಲ ವಿಡಿಯೋ ಕೆಳಗೆ ನೋಡಬಹುದು.

ಎಸ್ಕಾರ್ಫ್ಸ್ ಸೃಷ್ಟಿಸಿರುವ ಹೊಸ ವಿಡಂಬನಾತ್ಮಕ ಜಾಹೀರಾತು ವಿಡಿಯೋ ಕೆಳಗಿದೆ.

ಎಸ್ಕಾರ್ಫ್ಸ್‌ನ ಸ್ಥಾಪಕಿ ಐಡಾ ಸುಕಿಮನ್ ಕೂಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ಇದು ಕೇವಲ ವಿಡಂಬನಾತ್ಮಕ ವಿಡಿಯೋ ಎಂದು ಹೇಳಿದ್ದಾರೆ. ಮಲೈ ಭಾಷೆಯಲ್ಲಿ ಹಾಕಿರುವ ಪೋಸ್ಟ್ ಮತ್ತು ಅದರ ಅನುವಾದ ಇಲ್ಲಿದೆ.

“ನಮ್ಮ ಶಿರವಸ್ತ್ರಗಳು ಶಾಂಪೂ ಮಾಡಿದ ನಂತರ ನಿಮ್ಮ ಕೂದಲಿಗೆ ಹೇಗೆ ಅನಿಸುತ್ತದೆಯೋ ಅಷ್ಟೇ ಆರಾಮದಾಯಕವಾಗಿದೆ. ಅದನ್ನೇ ನಾವು ವೀಡಿಯೊದಲ್ಲಿ ತೋರಿಸಲು ಪ್ರಯತ್ನಿಸಿದ್ದೇವೆ” ಎಂದು ಎಸ್ಕಾರ್ಫ್ಸ್‌ ಕಂಪನಿಯ ಪ್ರತಿನಿಧಿಯೊಬ್ಬರು ಹೇಳಿರುವುದಾಗಿ ಸಿಲಿಕೋಸ್ ವೆಬ್‌ಸೈಟ್‌ ವರದಿ ಮಾಡಿದೆ.

ಒಟ್ಟಿನಲ್ಲಿ, ಮುಸ್ಲಿಂ ಮಹಿಳೆಯರು ಧರಿಸುವ ಸ್ಕಾರ್ಫ್‌ನ ಮಲೇಷ್ಯಾ ಮೂಲದ ಕಂಪನಿಯೊಂದರ ಜಾಹೀರಾತಿನ ವಿಡಿಯೋ ಅರ್ಧ ವೈರಲ್ ಆಗಿದ್ದು, ಅದು ಮಲೇಷ್ಯಾನ್ನರಿಗೆ ತಮಾಷೆಯಾಗಿ ಕಂಡರೆ, ಇತರ ದೇಶಗಳ ಜನರಿಗೆ ಮುಸ್ಲಿಮರನ್ನು ಅಪಹಾಸ್ಯ ಮಾಡುವ ಸಾಧನವಾಗಿ ಮಾರ್ಪಟ್ಟಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಸನ್‌ಸಿಲ್ಕ್ ಶಾಂಪೂವಿನ ಜಾಹೀರಾತಿನ ಹಳೆಯ ವಿಡಿಯೋವೊಂದರಿಂದ ಪ್ರೇರಿತರಾಗಿ ಎಸ್ಕಾರ್ಫ್ಸ್‌ ಎಂಬ ಸ್ಕಾರ್ಫ್‌ ಕಂಪನಿ ಹೊಸ ಸೃಜನಾತ್ಮಕ ಜಾಹೀರಾತು ವಿಡಿಯೋ ಸೃಷ್ಟಿಸಿತ್ತು. ಅದರ ಅರ್ಧಭಾಗ ವೈರಲ್ ಆಗಿದೆ. ಆ ಕ್ಲಿಪ್‌ ಅನ್ನು ಗೊತ್ತಿದ್ದೋ ಗೊತ್ತಿಲ್ಲದೆಯೋ ಅನೇಕರು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಬಳಸಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ ‘ಗೋ ಬ್ಯಾಕ್’ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...