Homeಫ್ಯಾಕ್ಟ್‌ಚೆಕ್Fact Check: ಅಡುಗೆ ಪಾತ್ರೆಗೆ ಗುಂಡು ತಗುಲಿರುವ ಫೋಟೋ ದೆಹಲಿಯ ರೈತ ಹೋರಾಟದ್ದಲ್ಲ

Fact Check: ಅಡುಗೆ ಪಾತ್ರೆಗೆ ಗುಂಡು ತಗುಲಿರುವ ಫೋಟೋ ದೆಹಲಿಯ ರೈತ ಹೋರಾಟದ್ದಲ್ಲ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರು ಪ್ರಸ್ತುತ ಹರಿಯಾಣ-ಪಂಜಾಬ್ ರಾಜ್ಯಗಳ ಖಾನೌರಿ ಮತ್ತು ಶಂಭು ಗಡಿ ಪ್ರದೇಶಗಳಲ್ಲಿ ಇದ್ದಾರೆ. ಈ ರೈತರ ಮೇಲೆ ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ದಾಳಿ ಮಾಡಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ.

ರೈತರ ಮೇಲೆ ಅಶ್ರುವಾಯು, ಜಲಫಿರಂಗಿ, ರಬ್ಬರ್ ಬುಲೆಟ್ ಮಾತ್ರ ಪ್ರಯೋಗಿಸುತ್ತಿದ್ದೇವೆ ಎಂದು ಪೊಲೀಸರು ಹೇಳಿಕೊಂಡರೆ, “ಇಲ್ಲಾ ಪೊಲೀಸರು ನಮ್ಮ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಇದರಿಂದಲೇ ಓರ್ವ ಯುವ ರೈತ ಮೃತಪಟ್ಟಿದ್ದಾರೆ” ಎಂದು ರೈತರು ಆರೋಪಿಸಿದ್ದಾರೆ.

ಈ ಆರೋಪ ಪ್ರತ್ಯಾರೋಪಗಳ ನಡುವೆ, ‘ಅಡುಗೆ ಪಾತ್ರೆಯೊಂದಕ್ಕೆ ದೊಡ್ಡ ಬುಲೆಟ್ ತಗುಲಿರುವ ಫೋಟೋ’ವೊಂದು ವೈರಲ್ ಆಗಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ‘ದೆಹಲಿ ಚಲೋ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ’ ಎಂಬರ್ಥದಲ್ಲಿ ಪೋಸ್ಟ್‌ಗಳನ್ನು ಮಾಡಿದ್ದಾರೆ.

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಡಿ ಸಮೀರ್ (@SocailSameerINC) ಎಕ್ಸ್‌ನಲ್ಲಿ ಈ ಫೋಟೋ ಹಂಚಿಕೊಂಡಿದ್ದು, “ಮೋದಿಯವರು ರೈತರನ್ನು ಹೇಗೆ ಸಾಯಿಸುತ್ತಿದ್ದಾರೆ ನೋಡಿ. ರೈತರ ಹತ್ಯೆ ಮಾಡಿದವರನ್ನು ತಿರುಗಾಡಲು ಬಿಡುತ್ತೀರಾ? ಕೇವಲ ಮಾತನಾಡಿದ್ದಕ್ಕೆ ಜನರನ್ನು ಬಂಧಿಸುವ ಸರ್ಕಾರ, ಗುಂಡು ಹಾರಿಸುವವರ ಮೇಲೆ ಇಷ್ಟೊಂದು ವ್ಯಾಮೋಹ ತೋರಿಸುತ್ತಿರುವುದು ಏಕೆ?” ಎಂದು ಪ್ರಶ್ನಿಸಿದ್ದಾರೆ.

ಪೋಸ್ಟ್‌ ಲಿಂಕ್ ಇಲ್ಲಿದೆ 

‘Rants&Roasts'(@Sydusm)ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಕೂಡ ವೈರಲ್ ಫೋಟೋ ಹಂಚಿಕೊಂಡಿದ್ದು,” ಇದು ಸಾಂಕೇತಿಕ, ದೇಶಕ್ಕೆ ಅನ್ನ ನೀಡುವವ ಜೀವವನ್ನು ಕಸಿಯಲಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್‌ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋದ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ನಾವು ಫೋಟೋ ಹುಡುಕಾಡಿದಾಗ ಈ ಕುರಿತ ಕೆಲ ವರದಿಗಳು ದೊರೆತಿವೆ.

24onbd.com ಎಂಬ ಬಾಂಗ್ಲಾ ಸುದ್ದಿ ವೆಬ್‌ಸೈಟ್‌ವೊಂದು ಫೆಬ್ರವರಿ 16, 2024ರಂದು ವೈರಲ್ ಫೋಟೋ ಜೊತೆಗೆ ಸುದ್ದಿ ಪ್ರಕಟಿಸಿದ್ದು, ಇದು ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದ ಗಡಿಯಾದ ಟೆಕ್ನಾಫ್‌ನ ಶಾಹಪರಿರ್ ದ್ವೀಪದಲ್ಲಿ ನಡೆದ ಘಟನೆಯದ್ದು ಎಂದು ಹೇಳಿದೆ. “ಮ್ಯಾನ್ಮಾರ್‌ನ ಗುಂಡುಗಳು ಬಾಂಗ್ಲಾದೇಶದ ಗಡಿ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರ ಅಡುಗೆ ಮನೆಯ ಮುಚ್ಚಳದ ಮೇಲೆ ಬಿದ್ದಿದೆ” ಎಂದು ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ 

dhakamail.com ಎಂಬ ಮತ್ತೊಂದು ಸುದ್ದಿ ವೆಬ್‌ಸೈಟ್ 7 ಫೆಬ್ರವರಿ 2024ರಂದು ವೈರಲ್ ಫೋಟೋ ಸಹಿತ ಸುದ್ದಿ ಪ್ರಕಟಿಸಿದ್ದು, “ಮ್ಯಾನ್ಮಾರ್‌ನ ಬಂಡುಕೋರ ಗುಂಪುಗಳು ಮತ್ತು ಮಿಲಿಟರಿ ಆಡಳಿತಗಾರರ ನಡುವಿನ ಘರ್ಷಣೆಗಳು ತೀವ್ರಗೊಂಡಿವೆ. ಮ್ಯಾನ್ಮಾರ್ ನಿಂದ ನಿರಂತರ ಶೆಲ್ ಮತ್ತು ಮಾರ್ಟರ್ ಶೆಲ್ ದಾಳಿಯಿಂದಾಗಿ ಬಾಂಗ್ಲಾದೇಶದ ಗಡಿಯಲ್ಲಿ ದಿನದಿಂದ ದಿನಕ್ಕೆ ಹಾನಿ ಹೆಚ್ಚುತ್ತಿದೆ. ಇದು ಬಾಂಗ್ಲಾದೇಶ ಗಡಿಯಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ” ಎಂದು ವರದಿ ಮಾಡಿದೆ.

KannadaFactcheck.Com ಕೂಡ ವೈರಲ್ ಫೋಟೋ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದು, ಇದು ಬಾಂಗ್ಲಾದೇಶದ ಗಡಿ ಪದೇಶದ ಪೋಟೋ ಎಂದು ತಿಳಿಸಿದೆ.

ನಮಗೆ ಲಭ್ಯವಾದ ಮಾಹಿತಿ ಪ್ರಕಾರ, ಅಡುಗೆ ಪಾತ್ರೆಗೆ ಬುಲೆಟ್ ತಗುಲಿರುವ ಫೋಟೋ ದೆಹಲಿಯ ರೈತ ಹೋರಾಟದ್ದಲ್ಲ. ಮ್ಯಾನ್ಮಾರ್‌ನಲ್ಲಿ ಬಂಡುಕೋರರ ಗುಂಪು ಮತ್ತು ಸೇನೆಯ ನಡುವಿನ ಸಂಘರ್ಷದ ವೇಳೆ ಮ್ಯಾನ್ಮಾರ್‌ ಕಡೆಯಿಂದ ಬಂದ ಬುಲೆಟ್ ಬಾಂಗ್ಲಾದೇಶದ ಗಡಿ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರ ಅಡುಗೆ ಪಾತ್ರೆಯ ಮುಚ್ಚಳದ ಮೇಲೆ ಬಿದ್ದಿರುವುದು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Fact Check: ಪಾಕಿಸ್ತಾನಕ್ಕೆ 5 ಸಾವಿರ ಕೋಟಿ ಸಾಲ ನೀಡುವುದಾಗಿ ರಾಹುಲ್ ಗಾಂಧಿ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...