Homeಫ್ಯಾಕ್ಟ್‌ಚೆಕ್FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ವ್ಯಕ್ತಿಯೊಬ್ಬ ಮಹಿಳೆಯರ ಹೊಟ್ಟೆ, ಬೆನ್ನು ಸೇರಿದಂತೆ ದೇಹದ ವಿವಿಧ ಭಾಗಗಳನ್ನು ಮುಟ್ಟಿ ಚಿಕಿತ್ಸೆ ನೀಡುತ್ತಿರುವಂತೆ ತೋರಿಸುವ ವಿಡಿಯೋವೊಂದು ವೈರಲ್ ಆಗಿದೆ.

ಮಹಿಳೆಯರ ಅಂಗಾಗಳನ್ನು ಮುಟ್ಟುತ್ತಿರುವ ವ್ಯಕ್ತಿ ಮುಸ್ಲಿಂ ಮೌಲ್ವಿಯಂತೆ ವೇಷ ಧರಿಸಿದ್ದು, ಈ ಹಿನ್ನೆಲೆ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು. ‘ಮೌಲಾನ’ ಎಂದು ಉಲ್ಲೇಖಿಸಿ ವಿಡಿಯೋ ಹಂಚಿಕೊಂಡು ಪರೋಕ್ಷವಾಗಿ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ನೋಡಿದಾಕ್ಷಣ ಯಾರಿಗಾದರೂ ಗೊತ್ತಾಗುತ್ತದೆ ಅದೊಂದು ಸ್ಕ್ರಿಪ್ಟೆಡ್ ಕಂಟೆಂಟ್ ಎಂದು. ಆದರೂ ಕೆಲವೊಂದು ಉದಾಹರಣೆಗಳೊಂದಿಗೆ ನಾವು ವಿಡಿಯೋದ ಸತ್ಯಾಸತ್ಯತೆ ತಿಳಿಸುತ್ತೇವೆ.

ವಿಡಿಯೋದಲ್ಲಿ ಪೀಸ್ ಟಿವಿ ಎಂಬ ಲೋಗೋ ಗಮನಿಸಬಹುದು. ಹಾಗಾಗಿ, ನಾವು ಗೂಗಲ್‌ನಲ್ಲಿ ಪೀಸ್ ಟಿವಿ ಎಂದು ಸರ್ಚ್‌ ಮಾಡಿದ್ದೇವೆ. ಈ ವೇಳೆ ‘ಪೀಸ್ ಟಿವಿ ಬಿಡಿ‘ ಎಂಬ ಫೇಸ್ಬುಕ್ ಖಾತೆ ಲಭ್ಯವಾಗಿದೆ. ಅದನ್ನು ಪರಿಶೀಲಿಸಿದಾಗ ವೈರಲ್ ವಿಡಿಯೋ 30 ಜನವರಿ 2024ರಂದು ಖಾತೆಯಲ್ಲಿ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ಬಾಂಗ್ಲಾದೇಶದ ಬರಿಸಾಲ್‌ನಿಂದ ನಡೆಸಲ್ಪಡುವ ಈ ಫೇಸ್‌ಬುಕ್ ಖಾತೆ 14 ಲಕ್ಷ ಅನುಯಾಯಿಗಳನ್ನು ಹೊಂದಿದೆ ಮತ್ತು ತನ್ನನ್ನು ‘ಮಾಧ್ಯಮ / ಸುದ್ದಿ ಕಂಪನಿ’ ಹೇಳಿಕೊಂಡಿದೆ.

ವಿಡಿಯೋದ ಕೊನೆಯ ಎರಡು ಫ್ರೇಮ್‌ಗಳು ಕ್ರಮವಾಗಿ ಎಚ್ಚರಿಕೆಯ ಸಂದೇಶ ಮತ್ತು ಶೀರ್ಷಿಕೆ ಕಾರ್ಡ್ ಅನ್ನು ತೋರಿಸುತ್ತವೆ. ಬಂಗಾಳಿಯಲ್ಲಿ ಸಂದೇಶ ಹೀಗಿದೆ: “ಅಂತಹ ‘ಬಾಬಾ’ಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ”. ಶೀರ್ಷಿಕೆ ಕಾರ್ಡ್ ಹೀಗಿದೆ: “ಪೀಸ್ ಮಲ್ಟಿಮೀಡಿಯಾದಿಂದ ನಿರ್ದೇಶಿಸಲ್ಪಟ್ಟಿದೆ”.

ಹಾಗಾಗಿ, ನಕಲಿ ಬಾಬಾಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ವಿಡಿಯೋ ತಯಾರಿಸಲಾಗಿದೆ ಎಂಬುವುದು ಗೊತ್ತಾಗುತ್ತದೆ.

ಫೇಸ್‌ಬುಕ್ ಪೇಜ್ ಯೂಟ್ಯೂಬ್ ಚಾನೆಲ್‌ ಲಿಂಕ್ ಕೂಡ ಇದ್ದು, ಅದರಲ್ಲೂ ವೈರಲ್ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅಲ್‌ ಅಕ್ಸಾ ಹೆಸರಿನ ಯೂಟ್ಯೂಬ್‌ ಚಾನೆಲ್ ತನ್ನನ್ನು ತಾನು ಬಾಂಗ್ಲಾದೇಶದ ಅತೀ ದೊಡ್ಡ ಇಸ್ಲಾಮಿಕ್ ಕಂಟೆಂಟ್ ಮತ್ತು ವಿಡಿಯೋ ನಿರ್ಮಾಣ ಸಂಸ್ಥೆ ಎಂದು ಹೇಳಿಕೊಂಡಿದೆ. ಈ ಚಾನೆಲ್‌ನಲ್ಲಿ ಇತರ ವಿಷಯಗಳ ಜೊತೆಗೆ, ‘ಶಾರ್ಟ್ ಫಿಲಂ(ಗಳು)’ ಮತ್ತು ‘ಇಸ್ಲಾಮಿಕ್ ನಾಟಕ(ಗಳು)’ ಇವೆ.

ಈ ಚಾನೆಲ್ ಅಪ್ಲೋಡ್ ಮಾಡಿರುವ ಇತರ ವಿಡಿಯೋಗಳು ದಾಂಪತ್ಯ ದ್ರೋಹದಿಂದ ಹಿಡಿದು ಲಿಂಗ ಅನ್ಯಾಯಗಳವರೆಗೆ ಇದೇ ರೀತಿಯ ಸಾಮಾಜಿಕ ಮತ್ತು ಕೌಟುಂಬಿಕ ಸಮಸ್ಯೆಗಳ ಕುರಿತಾಗಿದೆ.

ವೈರಲ್ ವಿಡಿಯೋದಲ್ಲಿ ಮೌಲ್ವಿಯಂತೆ ವೇಷ ತೊಟ್ಟು ಮಹಿಳೆಯರ ಮೈ ಮುಟ್ಟುವ ವ್ಯಕ್ತಿ, ಇತರ ವಿಡಿಯೋಗಳಲ್ಲಿ ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ಚಾನೆಲ್‌ನಲ್ಲಿ ಇದೆ.

ಹಾಗಾಗಿ, ವೈರಲ್ ವಿಡಿಯೋ ಸ್ಕ್ರಿಪ್ಟೆಡ್ ಆಗಿದ್ದು, ನೈಜ ಘಟನೆಯದ್ದಲ್ಲ ಎಂದು ಇದು ಸಾಬೀತುಪಡಿಸುತ್ತದೆ.

ಇದನ್ನೂ ಓದಿ : FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...