Homeಫ್ಯಾಕ್ಟ್‌ಚೆಕ್FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ವ್ಯಕ್ತಿಯೊಬ್ಬ ಮಹಿಳೆಯರ ಹೊಟ್ಟೆ, ಬೆನ್ನು ಸೇರಿದಂತೆ ದೇಹದ ವಿವಿಧ ಭಾಗಗಳನ್ನು ಮುಟ್ಟಿ ಚಿಕಿತ್ಸೆ ನೀಡುತ್ತಿರುವಂತೆ ತೋರಿಸುವ ವಿಡಿಯೋವೊಂದು ವೈರಲ್ ಆಗಿದೆ.

ಮಹಿಳೆಯರ ಅಂಗಾಗಳನ್ನು ಮುಟ್ಟುತ್ತಿರುವ ವ್ಯಕ್ತಿ ಮುಸ್ಲಿಂ ಮೌಲ್ವಿಯಂತೆ ವೇಷ ಧರಿಸಿದ್ದು, ಈ ಹಿನ್ನೆಲೆ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು. ‘ಮೌಲಾನ’ ಎಂದು ಉಲ್ಲೇಖಿಸಿ ವಿಡಿಯೋ ಹಂಚಿಕೊಂಡು ಪರೋಕ್ಷವಾಗಿ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ನೋಡಿದಾಕ್ಷಣ ಯಾರಿಗಾದರೂ ಗೊತ್ತಾಗುತ್ತದೆ ಅದೊಂದು ಸ್ಕ್ರಿಪ್ಟೆಡ್ ಕಂಟೆಂಟ್ ಎಂದು. ಆದರೂ ಕೆಲವೊಂದು ಉದಾಹರಣೆಗಳೊಂದಿಗೆ ನಾವು ವಿಡಿಯೋದ ಸತ್ಯಾಸತ್ಯತೆ ತಿಳಿಸುತ್ತೇವೆ.

ವಿಡಿಯೋದಲ್ಲಿ ಪೀಸ್ ಟಿವಿ ಎಂಬ ಲೋಗೋ ಗಮನಿಸಬಹುದು. ಹಾಗಾಗಿ, ನಾವು ಗೂಗಲ್‌ನಲ್ಲಿ ಪೀಸ್ ಟಿವಿ ಎಂದು ಸರ್ಚ್‌ ಮಾಡಿದ್ದೇವೆ. ಈ ವೇಳೆ ‘ಪೀಸ್ ಟಿವಿ ಬಿಡಿ‘ ಎಂಬ ಫೇಸ್ಬುಕ್ ಖಾತೆ ಲಭ್ಯವಾಗಿದೆ. ಅದನ್ನು ಪರಿಶೀಲಿಸಿದಾಗ ವೈರಲ್ ವಿಡಿಯೋ 30 ಜನವರಿ 2024ರಂದು ಖಾತೆಯಲ್ಲಿ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ಬಾಂಗ್ಲಾದೇಶದ ಬರಿಸಾಲ್‌ನಿಂದ ನಡೆಸಲ್ಪಡುವ ಈ ಫೇಸ್‌ಬುಕ್ ಖಾತೆ 14 ಲಕ್ಷ ಅನುಯಾಯಿಗಳನ್ನು ಹೊಂದಿದೆ ಮತ್ತು ತನ್ನನ್ನು ‘ಮಾಧ್ಯಮ / ಸುದ್ದಿ ಕಂಪನಿ’ ಹೇಳಿಕೊಂಡಿದೆ.

ವಿಡಿಯೋದ ಕೊನೆಯ ಎರಡು ಫ್ರೇಮ್‌ಗಳು ಕ್ರಮವಾಗಿ ಎಚ್ಚರಿಕೆಯ ಸಂದೇಶ ಮತ್ತು ಶೀರ್ಷಿಕೆ ಕಾರ್ಡ್ ಅನ್ನು ತೋರಿಸುತ್ತವೆ. ಬಂಗಾಳಿಯಲ್ಲಿ ಸಂದೇಶ ಹೀಗಿದೆ: “ಅಂತಹ ‘ಬಾಬಾ’ಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ”. ಶೀರ್ಷಿಕೆ ಕಾರ್ಡ್ ಹೀಗಿದೆ: “ಪೀಸ್ ಮಲ್ಟಿಮೀಡಿಯಾದಿಂದ ನಿರ್ದೇಶಿಸಲ್ಪಟ್ಟಿದೆ”.

ಹಾಗಾಗಿ, ನಕಲಿ ಬಾಬಾಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ವಿಡಿಯೋ ತಯಾರಿಸಲಾಗಿದೆ ಎಂಬುವುದು ಗೊತ್ತಾಗುತ್ತದೆ.

ಫೇಸ್‌ಬುಕ್ ಪೇಜ್ ಯೂಟ್ಯೂಬ್ ಚಾನೆಲ್‌ ಲಿಂಕ್ ಕೂಡ ಇದ್ದು, ಅದರಲ್ಲೂ ವೈರಲ್ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅಲ್‌ ಅಕ್ಸಾ ಹೆಸರಿನ ಯೂಟ್ಯೂಬ್‌ ಚಾನೆಲ್ ತನ್ನನ್ನು ತಾನು ಬಾಂಗ್ಲಾದೇಶದ ಅತೀ ದೊಡ್ಡ ಇಸ್ಲಾಮಿಕ್ ಕಂಟೆಂಟ್ ಮತ್ತು ವಿಡಿಯೋ ನಿರ್ಮಾಣ ಸಂಸ್ಥೆ ಎಂದು ಹೇಳಿಕೊಂಡಿದೆ. ಈ ಚಾನೆಲ್‌ನಲ್ಲಿ ಇತರ ವಿಷಯಗಳ ಜೊತೆಗೆ, ‘ಶಾರ್ಟ್ ಫಿಲಂ(ಗಳು)’ ಮತ್ತು ‘ಇಸ್ಲಾಮಿಕ್ ನಾಟಕ(ಗಳು)’ ಇವೆ.

ಈ ಚಾನೆಲ್ ಅಪ್ಲೋಡ್ ಮಾಡಿರುವ ಇತರ ವಿಡಿಯೋಗಳು ದಾಂಪತ್ಯ ದ್ರೋಹದಿಂದ ಹಿಡಿದು ಲಿಂಗ ಅನ್ಯಾಯಗಳವರೆಗೆ ಇದೇ ರೀತಿಯ ಸಾಮಾಜಿಕ ಮತ್ತು ಕೌಟುಂಬಿಕ ಸಮಸ್ಯೆಗಳ ಕುರಿತಾಗಿದೆ.

ವೈರಲ್ ವಿಡಿಯೋದಲ್ಲಿ ಮೌಲ್ವಿಯಂತೆ ವೇಷ ತೊಟ್ಟು ಮಹಿಳೆಯರ ಮೈ ಮುಟ್ಟುವ ವ್ಯಕ್ತಿ, ಇತರ ವಿಡಿಯೋಗಳಲ್ಲಿ ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ಚಾನೆಲ್‌ನಲ್ಲಿ ಇದೆ.

ಹಾಗಾಗಿ, ವೈರಲ್ ವಿಡಿಯೋ ಸ್ಕ್ರಿಪ್ಟೆಡ್ ಆಗಿದ್ದು, ನೈಜ ಘಟನೆಯದ್ದಲ್ಲ ಎಂದು ಇದು ಸಾಬೀತುಪಡಿಸುತ್ತದೆ.

ಇದನ್ನೂ ಓದಿ : FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...