Homeಫ್ಯಾಕ್ಟ್‌ಚೆಕ್FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ವ್ಯಕ್ತಿಯೊಬ್ಬ ಮಹಿಳೆಯರ ಹೊಟ್ಟೆ, ಬೆನ್ನು ಸೇರಿದಂತೆ ದೇಹದ ವಿವಿಧ ಭಾಗಗಳನ್ನು ಮುಟ್ಟಿ ಚಿಕಿತ್ಸೆ ನೀಡುತ್ತಿರುವಂತೆ ತೋರಿಸುವ ವಿಡಿಯೋವೊಂದು ವೈರಲ್ ಆಗಿದೆ.

ಮಹಿಳೆಯರ ಅಂಗಾಗಳನ್ನು ಮುಟ್ಟುತ್ತಿರುವ ವ್ಯಕ್ತಿ ಮುಸ್ಲಿಂ ಮೌಲ್ವಿಯಂತೆ ವೇಷ ಧರಿಸಿದ್ದು, ಈ ಹಿನ್ನೆಲೆ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು. ‘ಮೌಲಾನ’ ಎಂದು ಉಲ್ಲೇಖಿಸಿ ವಿಡಿಯೋ ಹಂಚಿಕೊಂಡು ಪರೋಕ್ಷವಾಗಿ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ನೋಡಿದಾಕ್ಷಣ ಯಾರಿಗಾದರೂ ಗೊತ್ತಾಗುತ್ತದೆ ಅದೊಂದು ಸ್ಕ್ರಿಪ್ಟೆಡ್ ಕಂಟೆಂಟ್ ಎಂದು. ಆದರೂ ಕೆಲವೊಂದು ಉದಾಹರಣೆಗಳೊಂದಿಗೆ ನಾವು ವಿಡಿಯೋದ ಸತ್ಯಾಸತ್ಯತೆ ತಿಳಿಸುತ್ತೇವೆ.

ವಿಡಿಯೋದಲ್ಲಿ ಪೀಸ್ ಟಿವಿ ಎಂಬ ಲೋಗೋ ಗಮನಿಸಬಹುದು. ಹಾಗಾಗಿ, ನಾವು ಗೂಗಲ್‌ನಲ್ಲಿ ಪೀಸ್ ಟಿವಿ ಎಂದು ಸರ್ಚ್‌ ಮಾಡಿದ್ದೇವೆ. ಈ ವೇಳೆ ‘ಪೀಸ್ ಟಿವಿ ಬಿಡಿ‘ ಎಂಬ ಫೇಸ್ಬುಕ್ ಖಾತೆ ಲಭ್ಯವಾಗಿದೆ. ಅದನ್ನು ಪರಿಶೀಲಿಸಿದಾಗ ವೈರಲ್ ವಿಡಿಯೋ 30 ಜನವರಿ 2024ರಂದು ಖಾತೆಯಲ್ಲಿ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ಬಾಂಗ್ಲಾದೇಶದ ಬರಿಸಾಲ್‌ನಿಂದ ನಡೆಸಲ್ಪಡುವ ಈ ಫೇಸ್‌ಬುಕ್ ಖಾತೆ 14 ಲಕ್ಷ ಅನುಯಾಯಿಗಳನ್ನು ಹೊಂದಿದೆ ಮತ್ತು ತನ್ನನ್ನು ‘ಮಾಧ್ಯಮ / ಸುದ್ದಿ ಕಂಪನಿ’ ಹೇಳಿಕೊಂಡಿದೆ.

ವಿಡಿಯೋದ ಕೊನೆಯ ಎರಡು ಫ್ರೇಮ್‌ಗಳು ಕ್ರಮವಾಗಿ ಎಚ್ಚರಿಕೆಯ ಸಂದೇಶ ಮತ್ತು ಶೀರ್ಷಿಕೆ ಕಾರ್ಡ್ ಅನ್ನು ತೋರಿಸುತ್ತವೆ. ಬಂಗಾಳಿಯಲ್ಲಿ ಸಂದೇಶ ಹೀಗಿದೆ: “ಅಂತಹ ‘ಬಾಬಾ’ಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ”. ಶೀರ್ಷಿಕೆ ಕಾರ್ಡ್ ಹೀಗಿದೆ: “ಪೀಸ್ ಮಲ್ಟಿಮೀಡಿಯಾದಿಂದ ನಿರ್ದೇಶಿಸಲ್ಪಟ್ಟಿದೆ”.

ಹಾಗಾಗಿ, ನಕಲಿ ಬಾಬಾಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ವಿಡಿಯೋ ತಯಾರಿಸಲಾಗಿದೆ ಎಂಬುವುದು ಗೊತ್ತಾಗುತ್ತದೆ.

ಫೇಸ್‌ಬುಕ್ ಪೇಜ್ ಯೂಟ್ಯೂಬ್ ಚಾನೆಲ್‌ ಲಿಂಕ್ ಕೂಡ ಇದ್ದು, ಅದರಲ್ಲೂ ವೈರಲ್ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅಲ್‌ ಅಕ್ಸಾ ಹೆಸರಿನ ಯೂಟ್ಯೂಬ್‌ ಚಾನೆಲ್ ತನ್ನನ್ನು ತಾನು ಬಾಂಗ್ಲಾದೇಶದ ಅತೀ ದೊಡ್ಡ ಇಸ್ಲಾಮಿಕ್ ಕಂಟೆಂಟ್ ಮತ್ತು ವಿಡಿಯೋ ನಿರ್ಮಾಣ ಸಂಸ್ಥೆ ಎಂದು ಹೇಳಿಕೊಂಡಿದೆ. ಈ ಚಾನೆಲ್‌ನಲ್ಲಿ ಇತರ ವಿಷಯಗಳ ಜೊತೆಗೆ, ‘ಶಾರ್ಟ್ ಫಿಲಂ(ಗಳು)’ ಮತ್ತು ‘ಇಸ್ಲಾಮಿಕ್ ನಾಟಕ(ಗಳು)’ ಇವೆ.

ಈ ಚಾನೆಲ್ ಅಪ್ಲೋಡ್ ಮಾಡಿರುವ ಇತರ ವಿಡಿಯೋಗಳು ದಾಂಪತ್ಯ ದ್ರೋಹದಿಂದ ಹಿಡಿದು ಲಿಂಗ ಅನ್ಯಾಯಗಳವರೆಗೆ ಇದೇ ರೀತಿಯ ಸಾಮಾಜಿಕ ಮತ್ತು ಕೌಟುಂಬಿಕ ಸಮಸ್ಯೆಗಳ ಕುರಿತಾಗಿದೆ.

ವೈರಲ್ ವಿಡಿಯೋದಲ್ಲಿ ಮೌಲ್ವಿಯಂತೆ ವೇಷ ತೊಟ್ಟು ಮಹಿಳೆಯರ ಮೈ ಮುಟ್ಟುವ ವ್ಯಕ್ತಿ, ಇತರ ವಿಡಿಯೋಗಳಲ್ಲಿ ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ಚಾನೆಲ್‌ನಲ್ಲಿ ಇದೆ.

ಹಾಗಾಗಿ, ವೈರಲ್ ವಿಡಿಯೋ ಸ್ಕ್ರಿಪ್ಟೆಡ್ ಆಗಿದ್ದು, ನೈಜ ಘಟನೆಯದ್ದಲ್ಲ ಎಂದು ಇದು ಸಾಬೀತುಪಡಿಸುತ್ತದೆ.

ಇದನ್ನೂ ಓದಿ : FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...