Homeಫ್ಯಾಕ್ಟ್‌ಚೆಕ್FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ವ್ಯಕ್ತಿಯೊಬ್ಬ ಮಹಿಳೆಯರ ಹೊಟ್ಟೆ, ಬೆನ್ನು ಸೇರಿದಂತೆ ದೇಹದ ವಿವಿಧ ಭಾಗಗಳನ್ನು ಮುಟ್ಟಿ ಚಿಕಿತ್ಸೆ ನೀಡುತ್ತಿರುವಂತೆ ತೋರಿಸುವ ವಿಡಿಯೋವೊಂದು ವೈರಲ್ ಆಗಿದೆ.

ಮಹಿಳೆಯರ ಅಂಗಾಗಳನ್ನು ಮುಟ್ಟುತ್ತಿರುವ ವ್ಯಕ್ತಿ ಮುಸ್ಲಿಂ ಮೌಲ್ವಿಯಂತೆ ವೇಷ ಧರಿಸಿದ್ದು, ಈ ಹಿನ್ನೆಲೆ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು. ‘ಮೌಲಾನ’ ಎಂದು ಉಲ್ಲೇಖಿಸಿ ವಿಡಿಯೋ ಹಂಚಿಕೊಂಡು ಪರೋಕ್ಷವಾಗಿ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ನೋಡಿದಾಕ್ಷಣ ಯಾರಿಗಾದರೂ ಗೊತ್ತಾಗುತ್ತದೆ ಅದೊಂದು ಸ್ಕ್ರಿಪ್ಟೆಡ್ ಕಂಟೆಂಟ್ ಎಂದು. ಆದರೂ ಕೆಲವೊಂದು ಉದಾಹರಣೆಗಳೊಂದಿಗೆ ನಾವು ವಿಡಿಯೋದ ಸತ್ಯಾಸತ್ಯತೆ ತಿಳಿಸುತ್ತೇವೆ.

ವಿಡಿಯೋದಲ್ಲಿ ಪೀಸ್ ಟಿವಿ ಎಂಬ ಲೋಗೋ ಗಮನಿಸಬಹುದು. ಹಾಗಾಗಿ, ನಾವು ಗೂಗಲ್‌ನಲ್ಲಿ ಪೀಸ್ ಟಿವಿ ಎಂದು ಸರ್ಚ್‌ ಮಾಡಿದ್ದೇವೆ. ಈ ವೇಳೆ ‘ಪೀಸ್ ಟಿವಿ ಬಿಡಿ‘ ಎಂಬ ಫೇಸ್ಬುಕ್ ಖಾತೆ ಲಭ್ಯವಾಗಿದೆ. ಅದನ್ನು ಪರಿಶೀಲಿಸಿದಾಗ ವೈರಲ್ ವಿಡಿಯೋ 30 ಜನವರಿ 2024ರಂದು ಖಾತೆಯಲ್ಲಿ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ಬಾಂಗ್ಲಾದೇಶದ ಬರಿಸಾಲ್‌ನಿಂದ ನಡೆಸಲ್ಪಡುವ ಈ ಫೇಸ್‌ಬುಕ್ ಖಾತೆ 14 ಲಕ್ಷ ಅನುಯಾಯಿಗಳನ್ನು ಹೊಂದಿದೆ ಮತ್ತು ತನ್ನನ್ನು ‘ಮಾಧ್ಯಮ / ಸುದ್ದಿ ಕಂಪನಿ’ ಹೇಳಿಕೊಂಡಿದೆ.

ವಿಡಿಯೋದ ಕೊನೆಯ ಎರಡು ಫ್ರೇಮ್‌ಗಳು ಕ್ರಮವಾಗಿ ಎಚ್ಚರಿಕೆಯ ಸಂದೇಶ ಮತ್ತು ಶೀರ್ಷಿಕೆ ಕಾರ್ಡ್ ಅನ್ನು ತೋರಿಸುತ್ತವೆ. ಬಂಗಾಳಿಯಲ್ಲಿ ಸಂದೇಶ ಹೀಗಿದೆ: “ಅಂತಹ ‘ಬಾಬಾ’ಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ”. ಶೀರ್ಷಿಕೆ ಕಾರ್ಡ್ ಹೀಗಿದೆ: “ಪೀಸ್ ಮಲ್ಟಿಮೀಡಿಯಾದಿಂದ ನಿರ್ದೇಶಿಸಲ್ಪಟ್ಟಿದೆ”.

ಹಾಗಾಗಿ, ನಕಲಿ ಬಾಬಾಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ವಿಡಿಯೋ ತಯಾರಿಸಲಾಗಿದೆ ಎಂಬುವುದು ಗೊತ್ತಾಗುತ್ತದೆ.

ಫೇಸ್‌ಬುಕ್ ಪೇಜ್ ಯೂಟ್ಯೂಬ್ ಚಾನೆಲ್‌ ಲಿಂಕ್ ಕೂಡ ಇದ್ದು, ಅದರಲ್ಲೂ ವೈರಲ್ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅಲ್‌ ಅಕ್ಸಾ ಹೆಸರಿನ ಯೂಟ್ಯೂಬ್‌ ಚಾನೆಲ್ ತನ್ನನ್ನು ತಾನು ಬಾಂಗ್ಲಾದೇಶದ ಅತೀ ದೊಡ್ಡ ಇಸ್ಲಾಮಿಕ್ ಕಂಟೆಂಟ್ ಮತ್ತು ವಿಡಿಯೋ ನಿರ್ಮಾಣ ಸಂಸ್ಥೆ ಎಂದು ಹೇಳಿಕೊಂಡಿದೆ. ಈ ಚಾನೆಲ್‌ನಲ್ಲಿ ಇತರ ವಿಷಯಗಳ ಜೊತೆಗೆ, ‘ಶಾರ್ಟ್ ಫಿಲಂ(ಗಳು)’ ಮತ್ತು ‘ಇಸ್ಲಾಮಿಕ್ ನಾಟಕ(ಗಳು)’ ಇವೆ.

ಈ ಚಾನೆಲ್ ಅಪ್ಲೋಡ್ ಮಾಡಿರುವ ಇತರ ವಿಡಿಯೋಗಳು ದಾಂಪತ್ಯ ದ್ರೋಹದಿಂದ ಹಿಡಿದು ಲಿಂಗ ಅನ್ಯಾಯಗಳವರೆಗೆ ಇದೇ ರೀತಿಯ ಸಾಮಾಜಿಕ ಮತ್ತು ಕೌಟುಂಬಿಕ ಸಮಸ್ಯೆಗಳ ಕುರಿತಾಗಿದೆ.

ವೈರಲ್ ವಿಡಿಯೋದಲ್ಲಿ ಮೌಲ್ವಿಯಂತೆ ವೇಷ ತೊಟ್ಟು ಮಹಿಳೆಯರ ಮೈ ಮುಟ್ಟುವ ವ್ಯಕ್ತಿ, ಇತರ ವಿಡಿಯೋಗಳಲ್ಲಿ ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ಚಾನೆಲ್‌ನಲ್ಲಿ ಇದೆ.

ಹಾಗಾಗಿ, ವೈರಲ್ ವಿಡಿಯೋ ಸ್ಕ್ರಿಪ್ಟೆಡ್ ಆಗಿದ್ದು, ನೈಜ ಘಟನೆಯದ್ದಲ್ಲ ಎಂದು ಇದು ಸಾಬೀತುಪಡಿಸುತ್ತದೆ.

ಇದನ್ನೂ ಓದಿ : FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...