Homeಫ್ಯಾಕ್ಟ್‌ಚೆಕ್FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು...

FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿ ಯುವಕನೋರ್ವ ಹಿಂದೂಗಳ ವಿವಾಹ ಸಮಾರಂಭದಲ್ಲಿ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ” ಎಂದು ಆರೋಪಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಅನೇಕ ಎಕ್ಸ್ ಬಳಕೆದಾರರು ಈ ವಿಡಿಯೋ ಪೋಸ್ಟ್ ಮಾಡಿ ‘ಫುಡ್ ಜಿಹಾದ್’ ಎಂದೆಲ್ಲ ಬರೆದುಕೊಂಡಿದ್ದಾರೆ.

ಸದಾ ಕೋಮುದ್ವೇಷದ ಸುಳ್ಳು ಸುದ್ದಿಗಳನ್ನು ಹರಡುವ ‘ಮಿಸ್ಟರ್ ಸಿನ್ಹಾ’ ಎಂಬ ಎಕ್ಸ್ ಬಳಕೆದಾರ ವಿಡಿಯೋ ಪೋಸ್ಟ್ ಮಾಡಿ ಅದನ್ನು ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರಿಗೆ ಟ್ಯಾಗ್ ಮಾಡಿದ್ದು, “ನೀವಿದನ್ನು ತಿನ್ನುವಿರೇ? ಮೊದಲು ನೀವು ತಿಂದು ಬಳಿಕ ನಮಗೆ ತಿನ್ನಲು ಒತ್ತಾಯಿಸಿ ಎಂದು ಬರೆದುಕೊಂಡಿದ್ದಾರೆ. ವಿನೋದ್ ಎಂಬಾತ ‘ಸ್ಟ್ರಿಂಗ್’ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿ, “ತೆಲಂಗಾಣದ ವಾರಂಗಲ್ ನಲ್ಲಿ ಮುಸ್ಲಿಮರು ನಡೆಸುತ್ತಿರುವ ಹೊಟೇಲ್‌ನಲ್ಲಿ ಆಹಾರದ ಮೇಲೆ ಮೂತ್ರ ವಿಸರ್ಜನೆ ಮಾಡಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಹಾಗಾದರೆ, ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದಂತೆ ಮುಸ್ಲಿಂ ಯುವಕ ಹಿಂದೂಗಳ ಮದುವೆ ಸಮಾರಂಭದಲ್ಲಿ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿರುವುದು ನಿಜಾನಾ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋವನ್ನು ಮೊದಲು ಸೂಕ್ಷ್ಮವಾಗಿ ಗಮನಿಸಿದ್ದೇವೆ. ವಿಡಿಯೋದಲ್ಲಿ ಮೊದಲು ಯುವಕ ಪಾತ್ರೆಗೆ ಮೂತ್ರ ಮಾಡಿದಂತೆ ಕಂಡರೂ, ಬಳಿಕ ಆತ ಬಾಟಲಿಯೊಂದರಿಂದ ಪಾತ್ರೆಗೆ ಏನೋ ಸುರಿಯುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಹಾಗಾಗಿ, ಯುವಕ ಪಾತ್ರೆಗೆ ಮೂತ್ರ ಮಾಡಿದ್ದಾನೆ ಎಂಬ ಆರೋಪ ಸುಳ್ಳು ಎಂಬುವುದು ನಮಗೆ ಗೊತ್ತಾಗಿದೆ.

ಈ ಬಗ್ಗೆ ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಈ ವಿಡಿಯೋ 2022ರಲ್ಲೂ ಸುಳ್ಳು ಸಂದೇಶದೊಂದಿಗೆ ವೈರಲ್ ಆಗಿತ್ತು ಎಂದು ತಿಳಿದು ಬಂದಿದೆ.

ಡಿಸೆಂಬರ್ 2022ರಲ್ಲಿ ಝೀ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸುದ್ದಿ ವೆಬ್‌ಸೈಟ್ “बंदे ने शादी के लिए बन रहे खाने में किया कुछ ऐसा, देखकर आएगी घिन” (ಯುವಕ ಗುಲಾಬ್ ಜಾಮೂನ್ ಪಾತ್ರೆಗೆ ಮೂತ್ರ ಮಾಡಿದ್ದಾನೆ) ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿತ್ತು. ಪ್ರಸ್ತುತ ಆ ಸುದ್ದಿಯನ್ನು ಡಿಲಿಟ್ ಮಾಡಲಾಗಿದೆ.

ಅಸಲಿಗೆ @ashiq.billota ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ತಮಾಷೆಗಾಗಿ ಈ ವಿಡಿಯೋ ಪೋಸ್ಟ್ ಮಾಡಲಾಗಿತ್ತು. ಅದು ಬಳಿಕ ಎಲ್ಲೆಡೆ ವೈರಲ್ ಆಗಿದೆ. ಆದರೆ, ಈಗ ಆ ಇನ್‌ಸ್ಟಾಗ್ರಾಂ ಪೇಜ್‌ನಲ್ಲೂ ವಿಡಿಯೋ ಇಲ್ಲ, ಡಿಲಿಟ್ ಮಾಡಲಾಗಿದೆ.

ಒಟ್ಟಿನಲ್ಲಿ, ಮುಸ್ಲಿಂ ಯುವಕ ಹಿಂದೂಗಳ ಮದುವೆ ಸಮಾರಂಭದ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪಕ್ಕೆ ಯಾವುದೇ ಪುರಾವೆಗಳು ನಮಗೆ ಲಭ್ಯವಾಗಿಲ್ಲ. ವೈರಲ್ ವಿಡಿಯೋವನ್ನು ಮೊದಲು ಪೋಸ್ಟ್ ಮಾಡಿದ್ದ ಇನ್‌ಸ್ಟಾಗ್ರಾಂ ಪೇಜ್‌ ಮತ್ತು ಅದನ್ನು ಆಧಾರವಾಗಿಟ್ಟುಕೊಂಡು ಸುದ್ದಿ ಪ್ರಕಟಿಸಿದ್ದ ಝೀ ನ್ಯೂಸ್‌ನಲ್ಲೂ ಈಗ ವಿಡಿಯೋ ಇಲ್ಲ.

ಎಲ್ಲಾ ವಿಷಯಗಳಿಗೂ ಕೋಮು ಬಣ್ಣ ಬಳಿಯುವ ಕೆಲವೊಂದಿಷ್ಟು ಸಾಮಾಜಿಕ ಜಾಲತಾಣ ಬಳಕೆದಾರರು ನಮ್ಮಡೆಯಲ್ಲಿದ್ದಾರೆ. ಮುಖ್ಯವಾಗಿ ವಿಡಿಯೋಗಳನ್ನು ತಿರುಚಿ ಸುಳ್ಳು ಮಾಹಿತಿಯೊಂದಿಗೆ ಮುಸ್ಲಿಮರ ತಲೆಗೆ ಕಟ್ಟುವುದು ಕೆಲವರ ವಾಡಿಕೆಯಾಗಿದೆ. ಅಂಥವುಗಳಲ್ಲಿ ಈ ವಿಡಿಯೋ ಕೂಡ ಒಂದು.

ವೈರಲ್ ವಿಡಿಯೋ ಎಲ್ಲಿಯದ್ದು ಮತ್ತು ಮೂತ್ರ ಮಾಡಿದ್ದಾನೆ ಎಂದು ಆರೋಪಿಸಲಾದ ಯುವಕ ಮುಸ್ಲಿಂ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ, ಎಕ್ಸ್ ಬಳಕೆದಾರರು ಕೋಮುದ್ವೇಷ ಹರಡುವ ಸಲುವಾಗಿ ಸುಳ್ಳು ಸಂದೇಶದೊಂದಿಗೆ ವಿಡಿಯೋ ಹಂಚಿಕೊಂಡಿದ್ದಾರೆ.

ಇಬ್ಬರ ವಿರುದ್ದ ಪ್ರಕರಣ ದಾಖಲು 

ತಮಾಷೆಯ ವಿಡಿಯೋವನ್ನು ಬಳಸಿಕೊಂಡು ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಮಿಸ್ಟರ್ ಸಿನ್ಹಾ ಮತ್ತು ವಿನೋದ್ ಎಂಬ ಎಕ್ಸ್ ಬಳಕೆದಾರರ ವಿರುದ್ದ ಹೈದರಾಬಾದ್‌ನಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಬಲ ಪಂಥೀಯ ಸಾಮಾಜಿಕ ಜಾಲತಾಣದ ಪ್ರಭಾವಿ ಮಿಸ್ಟರ್ ಸಿನ್ಹಾ ಸದಾ ಸುಳ್ಳು, ಕೋಮುದ್ವೇಷಪೂರಿತ ಸುದ್ದಿಗಳನ್ನು ಹರಡುವುದರಲ್ಲಿ ಕುಖ್ಯಾತಿಯನ್ನು ಪಡೆದಿದ್ದಾನೆ.

ಇದನ್ನೂ ಓದಿ : FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...