Homeಫ್ಯಾಕ್ಟ್‌ಚೆಕ್FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು...

FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿ ಯುವಕನೋರ್ವ ಹಿಂದೂಗಳ ವಿವಾಹ ಸಮಾರಂಭದಲ್ಲಿ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ” ಎಂದು ಆರೋಪಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಅನೇಕ ಎಕ್ಸ್ ಬಳಕೆದಾರರು ಈ ವಿಡಿಯೋ ಪೋಸ್ಟ್ ಮಾಡಿ ‘ಫುಡ್ ಜಿಹಾದ್’ ಎಂದೆಲ್ಲ ಬರೆದುಕೊಂಡಿದ್ದಾರೆ.

ಸದಾ ಕೋಮುದ್ವೇಷದ ಸುಳ್ಳು ಸುದ್ದಿಗಳನ್ನು ಹರಡುವ ‘ಮಿಸ್ಟರ್ ಸಿನ್ಹಾ’ ಎಂಬ ಎಕ್ಸ್ ಬಳಕೆದಾರ ವಿಡಿಯೋ ಪೋಸ್ಟ್ ಮಾಡಿ ಅದನ್ನು ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರಿಗೆ ಟ್ಯಾಗ್ ಮಾಡಿದ್ದು, “ನೀವಿದನ್ನು ತಿನ್ನುವಿರೇ? ಮೊದಲು ನೀವು ತಿಂದು ಬಳಿಕ ನಮಗೆ ತಿನ್ನಲು ಒತ್ತಾಯಿಸಿ ಎಂದು ಬರೆದುಕೊಂಡಿದ್ದಾರೆ. ವಿನೋದ್ ಎಂಬಾತ ‘ಸ್ಟ್ರಿಂಗ್’ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿ, “ತೆಲಂಗಾಣದ ವಾರಂಗಲ್ ನಲ್ಲಿ ಮುಸ್ಲಿಮರು ನಡೆಸುತ್ತಿರುವ ಹೊಟೇಲ್‌ನಲ್ಲಿ ಆಹಾರದ ಮೇಲೆ ಮೂತ್ರ ವಿಸರ್ಜನೆ ಮಾಡಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಹಾಗಾದರೆ, ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದಂತೆ ಮುಸ್ಲಿಂ ಯುವಕ ಹಿಂದೂಗಳ ಮದುವೆ ಸಮಾರಂಭದಲ್ಲಿ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿರುವುದು ನಿಜಾನಾ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋವನ್ನು ಮೊದಲು ಸೂಕ್ಷ್ಮವಾಗಿ ಗಮನಿಸಿದ್ದೇವೆ. ವಿಡಿಯೋದಲ್ಲಿ ಮೊದಲು ಯುವಕ ಪಾತ್ರೆಗೆ ಮೂತ್ರ ಮಾಡಿದಂತೆ ಕಂಡರೂ, ಬಳಿಕ ಆತ ಬಾಟಲಿಯೊಂದರಿಂದ ಪಾತ್ರೆಗೆ ಏನೋ ಸುರಿಯುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಹಾಗಾಗಿ, ಯುವಕ ಪಾತ್ರೆಗೆ ಮೂತ್ರ ಮಾಡಿದ್ದಾನೆ ಎಂಬ ಆರೋಪ ಸುಳ್ಳು ಎಂಬುವುದು ನಮಗೆ ಗೊತ್ತಾಗಿದೆ.

ಈ ಬಗ್ಗೆ ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಈ ವಿಡಿಯೋ 2022ರಲ್ಲೂ ಸುಳ್ಳು ಸಂದೇಶದೊಂದಿಗೆ ವೈರಲ್ ಆಗಿತ್ತು ಎಂದು ತಿಳಿದು ಬಂದಿದೆ.

ಡಿಸೆಂಬರ್ 2022ರಲ್ಲಿ ಝೀ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸುದ್ದಿ ವೆಬ್‌ಸೈಟ್ “बंदे ने शादी के लिए बन रहे खाने में किया कुछ ऐसा, देखकर आएगी घिन” (ಯುವಕ ಗುಲಾಬ್ ಜಾಮೂನ್ ಪಾತ್ರೆಗೆ ಮೂತ್ರ ಮಾಡಿದ್ದಾನೆ) ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿತ್ತು. ಪ್ರಸ್ತುತ ಆ ಸುದ್ದಿಯನ್ನು ಡಿಲಿಟ್ ಮಾಡಲಾಗಿದೆ.

ಅಸಲಿಗೆ @ashiq.billota ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ತಮಾಷೆಗಾಗಿ ಈ ವಿಡಿಯೋ ಪೋಸ್ಟ್ ಮಾಡಲಾಗಿತ್ತು. ಅದು ಬಳಿಕ ಎಲ್ಲೆಡೆ ವೈರಲ್ ಆಗಿದೆ. ಆದರೆ, ಈಗ ಆ ಇನ್‌ಸ್ಟಾಗ್ರಾಂ ಪೇಜ್‌ನಲ್ಲೂ ವಿಡಿಯೋ ಇಲ್ಲ, ಡಿಲಿಟ್ ಮಾಡಲಾಗಿದೆ.

ಒಟ್ಟಿನಲ್ಲಿ, ಮುಸ್ಲಿಂ ಯುವಕ ಹಿಂದೂಗಳ ಮದುವೆ ಸಮಾರಂಭದ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪಕ್ಕೆ ಯಾವುದೇ ಪುರಾವೆಗಳು ನಮಗೆ ಲಭ್ಯವಾಗಿಲ್ಲ. ವೈರಲ್ ವಿಡಿಯೋವನ್ನು ಮೊದಲು ಪೋಸ್ಟ್ ಮಾಡಿದ್ದ ಇನ್‌ಸ್ಟಾಗ್ರಾಂ ಪೇಜ್‌ ಮತ್ತು ಅದನ್ನು ಆಧಾರವಾಗಿಟ್ಟುಕೊಂಡು ಸುದ್ದಿ ಪ್ರಕಟಿಸಿದ್ದ ಝೀ ನ್ಯೂಸ್‌ನಲ್ಲೂ ಈಗ ವಿಡಿಯೋ ಇಲ್ಲ.

ಎಲ್ಲಾ ವಿಷಯಗಳಿಗೂ ಕೋಮು ಬಣ್ಣ ಬಳಿಯುವ ಕೆಲವೊಂದಿಷ್ಟು ಸಾಮಾಜಿಕ ಜಾಲತಾಣ ಬಳಕೆದಾರರು ನಮ್ಮಡೆಯಲ್ಲಿದ್ದಾರೆ. ಮುಖ್ಯವಾಗಿ ವಿಡಿಯೋಗಳನ್ನು ತಿರುಚಿ ಸುಳ್ಳು ಮಾಹಿತಿಯೊಂದಿಗೆ ಮುಸ್ಲಿಮರ ತಲೆಗೆ ಕಟ್ಟುವುದು ಕೆಲವರ ವಾಡಿಕೆಯಾಗಿದೆ. ಅಂಥವುಗಳಲ್ಲಿ ಈ ವಿಡಿಯೋ ಕೂಡ ಒಂದು.

ವೈರಲ್ ವಿಡಿಯೋ ಎಲ್ಲಿಯದ್ದು ಮತ್ತು ಮೂತ್ರ ಮಾಡಿದ್ದಾನೆ ಎಂದು ಆರೋಪಿಸಲಾದ ಯುವಕ ಮುಸ್ಲಿಂ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ, ಎಕ್ಸ್ ಬಳಕೆದಾರರು ಕೋಮುದ್ವೇಷ ಹರಡುವ ಸಲುವಾಗಿ ಸುಳ್ಳು ಸಂದೇಶದೊಂದಿಗೆ ವಿಡಿಯೋ ಹಂಚಿಕೊಂಡಿದ್ದಾರೆ.

ಇಬ್ಬರ ವಿರುದ್ದ ಪ್ರಕರಣ ದಾಖಲು 

ತಮಾಷೆಯ ವಿಡಿಯೋವನ್ನು ಬಳಸಿಕೊಂಡು ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಮಿಸ್ಟರ್ ಸಿನ್ಹಾ ಮತ್ತು ವಿನೋದ್ ಎಂಬ ಎಕ್ಸ್ ಬಳಕೆದಾರರ ವಿರುದ್ದ ಹೈದರಾಬಾದ್‌ನಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಬಲ ಪಂಥೀಯ ಸಾಮಾಜಿಕ ಜಾಲತಾಣದ ಪ್ರಭಾವಿ ಮಿಸ್ಟರ್ ಸಿನ್ಹಾ ಸದಾ ಸುಳ್ಳು, ಕೋಮುದ್ವೇಷಪೂರಿತ ಸುದ್ದಿಗಳನ್ನು ಹರಡುವುದರಲ್ಲಿ ಕುಖ್ಯಾತಿಯನ್ನು ಪಡೆದಿದ್ದಾನೆ.

ಇದನ್ನೂ ಓದಿ : FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...