Homeಫ್ಯಾಕ್ಟ್‌ಚೆಕ್FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು...

FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿ ಯುವಕನೋರ್ವ ಹಿಂದೂಗಳ ವಿವಾಹ ಸಮಾರಂಭದಲ್ಲಿ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ” ಎಂದು ಆರೋಪಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಅನೇಕ ಎಕ್ಸ್ ಬಳಕೆದಾರರು ಈ ವಿಡಿಯೋ ಪೋಸ್ಟ್ ಮಾಡಿ ‘ಫುಡ್ ಜಿಹಾದ್’ ಎಂದೆಲ್ಲ ಬರೆದುಕೊಂಡಿದ್ದಾರೆ.

ಸದಾ ಕೋಮುದ್ವೇಷದ ಸುಳ್ಳು ಸುದ್ದಿಗಳನ್ನು ಹರಡುವ ‘ಮಿಸ್ಟರ್ ಸಿನ್ಹಾ’ ಎಂಬ ಎಕ್ಸ್ ಬಳಕೆದಾರ ವಿಡಿಯೋ ಪೋಸ್ಟ್ ಮಾಡಿ ಅದನ್ನು ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರಿಗೆ ಟ್ಯಾಗ್ ಮಾಡಿದ್ದು, “ನೀವಿದನ್ನು ತಿನ್ನುವಿರೇ? ಮೊದಲು ನೀವು ತಿಂದು ಬಳಿಕ ನಮಗೆ ತಿನ್ನಲು ಒತ್ತಾಯಿಸಿ ಎಂದು ಬರೆದುಕೊಂಡಿದ್ದಾರೆ. ವಿನೋದ್ ಎಂಬಾತ ‘ಸ್ಟ್ರಿಂಗ್’ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿ, “ತೆಲಂಗಾಣದ ವಾರಂಗಲ್ ನಲ್ಲಿ ಮುಸ್ಲಿಮರು ನಡೆಸುತ್ತಿರುವ ಹೊಟೇಲ್‌ನಲ್ಲಿ ಆಹಾರದ ಮೇಲೆ ಮೂತ್ರ ವಿಸರ್ಜನೆ ಮಾಡಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಹಾಗಾದರೆ, ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದಂತೆ ಮುಸ್ಲಿಂ ಯುವಕ ಹಿಂದೂಗಳ ಮದುವೆ ಸಮಾರಂಭದಲ್ಲಿ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿರುವುದು ನಿಜಾನಾ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋವನ್ನು ಮೊದಲು ಸೂಕ್ಷ್ಮವಾಗಿ ಗಮನಿಸಿದ್ದೇವೆ. ವಿಡಿಯೋದಲ್ಲಿ ಮೊದಲು ಯುವಕ ಪಾತ್ರೆಗೆ ಮೂತ್ರ ಮಾಡಿದಂತೆ ಕಂಡರೂ, ಬಳಿಕ ಆತ ಬಾಟಲಿಯೊಂದರಿಂದ ಪಾತ್ರೆಗೆ ಏನೋ ಸುರಿಯುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಹಾಗಾಗಿ, ಯುವಕ ಪಾತ್ರೆಗೆ ಮೂತ್ರ ಮಾಡಿದ್ದಾನೆ ಎಂಬ ಆರೋಪ ಸುಳ್ಳು ಎಂಬುವುದು ನಮಗೆ ಗೊತ್ತಾಗಿದೆ.

ಈ ಬಗ್ಗೆ ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಈ ವಿಡಿಯೋ 2022ರಲ್ಲೂ ಸುಳ್ಳು ಸಂದೇಶದೊಂದಿಗೆ ವೈರಲ್ ಆಗಿತ್ತು ಎಂದು ತಿಳಿದು ಬಂದಿದೆ.

ಡಿಸೆಂಬರ್ 2022ರಲ್ಲಿ ಝೀ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸುದ್ದಿ ವೆಬ್‌ಸೈಟ್ “बंदे ने शादी के लिए बन रहे खाने में किया कुछ ऐसा, देखकर आएगी घिन” (ಯುವಕ ಗುಲಾಬ್ ಜಾಮೂನ್ ಪಾತ್ರೆಗೆ ಮೂತ್ರ ಮಾಡಿದ್ದಾನೆ) ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿತ್ತು. ಪ್ರಸ್ತುತ ಆ ಸುದ್ದಿಯನ್ನು ಡಿಲಿಟ್ ಮಾಡಲಾಗಿದೆ.

ಅಸಲಿಗೆ @ashiq.billota ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ತಮಾಷೆಗಾಗಿ ಈ ವಿಡಿಯೋ ಪೋಸ್ಟ್ ಮಾಡಲಾಗಿತ್ತು. ಅದು ಬಳಿಕ ಎಲ್ಲೆಡೆ ವೈರಲ್ ಆಗಿದೆ. ಆದರೆ, ಈಗ ಆ ಇನ್‌ಸ್ಟಾಗ್ರಾಂ ಪೇಜ್‌ನಲ್ಲೂ ವಿಡಿಯೋ ಇಲ್ಲ, ಡಿಲಿಟ್ ಮಾಡಲಾಗಿದೆ.

ಒಟ್ಟಿನಲ್ಲಿ, ಮುಸ್ಲಿಂ ಯುವಕ ಹಿಂದೂಗಳ ಮದುವೆ ಸಮಾರಂಭದ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪಕ್ಕೆ ಯಾವುದೇ ಪುರಾವೆಗಳು ನಮಗೆ ಲಭ್ಯವಾಗಿಲ್ಲ. ವೈರಲ್ ವಿಡಿಯೋವನ್ನು ಮೊದಲು ಪೋಸ್ಟ್ ಮಾಡಿದ್ದ ಇನ್‌ಸ್ಟಾಗ್ರಾಂ ಪೇಜ್‌ ಮತ್ತು ಅದನ್ನು ಆಧಾರವಾಗಿಟ್ಟುಕೊಂಡು ಸುದ್ದಿ ಪ್ರಕಟಿಸಿದ್ದ ಝೀ ನ್ಯೂಸ್‌ನಲ್ಲೂ ಈಗ ವಿಡಿಯೋ ಇಲ್ಲ.

ಎಲ್ಲಾ ವಿಷಯಗಳಿಗೂ ಕೋಮು ಬಣ್ಣ ಬಳಿಯುವ ಕೆಲವೊಂದಿಷ್ಟು ಸಾಮಾಜಿಕ ಜಾಲತಾಣ ಬಳಕೆದಾರರು ನಮ್ಮಡೆಯಲ್ಲಿದ್ದಾರೆ. ಮುಖ್ಯವಾಗಿ ವಿಡಿಯೋಗಳನ್ನು ತಿರುಚಿ ಸುಳ್ಳು ಮಾಹಿತಿಯೊಂದಿಗೆ ಮುಸ್ಲಿಮರ ತಲೆಗೆ ಕಟ್ಟುವುದು ಕೆಲವರ ವಾಡಿಕೆಯಾಗಿದೆ. ಅಂಥವುಗಳಲ್ಲಿ ಈ ವಿಡಿಯೋ ಕೂಡ ಒಂದು.

ವೈರಲ್ ವಿಡಿಯೋ ಎಲ್ಲಿಯದ್ದು ಮತ್ತು ಮೂತ್ರ ಮಾಡಿದ್ದಾನೆ ಎಂದು ಆರೋಪಿಸಲಾದ ಯುವಕ ಮುಸ್ಲಿಂ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ, ಎಕ್ಸ್ ಬಳಕೆದಾರರು ಕೋಮುದ್ವೇಷ ಹರಡುವ ಸಲುವಾಗಿ ಸುಳ್ಳು ಸಂದೇಶದೊಂದಿಗೆ ವಿಡಿಯೋ ಹಂಚಿಕೊಂಡಿದ್ದಾರೆ.

ಇಬ್ಬರ ವಿರುದ್ದ ಪ್ರಕರಣ ದಾಖಲು 

ತಮಾಷೆಯ ವಿಡಿಯೋವನ್ನು ಬಳಸಿಕೊಂಡು ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಮಿಸ್ಟರ್ ಸಿನ್ಹಾ ಮತ್ತು ವಿನೋದ್ ಎಂಬ ಎಕ್ಸ್ ಬಳಕೆದಾರರ ವಿರುದ್ದ ಹೈದರಾಬಾದ್‌ನಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಬಲ ಪಂಥೀಯ ಸಾಮಾಜಿಕ ಜಾಲತಾಣದ ಪ್ರಭಾವಿ ಮಿಸ್ಟರ್ ಸಿನ್ಹಾ ಸದಾ ಸುಳ್ಳು, ಕೋಮುದ್ವೇಷಪೂರಿತ ಸುದ್ದಿಗಳನ್ನು ಹರಡುವುದರಲ್ಲಿ ಕುಖ್ಯಾತಿಯನ್ನು ಪಡೆದಿದ್ದಾನೆ.

ಇದನ್ನೂ ಓದಿ : FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...