Homeಫ್ಯಾಕ್ಟ್‌ಚೆಕ್FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು...

FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿ ಯುವಕನೋರ್ವ ಹಿಂದೂಗಳ ವಿವಾಹ ಸಮಾರಂಭದಲ್ಲಿ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ” ಎಂದು ಆರೋಪಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಅನೇಕ ಎಕ್ಸ್ ಬಳಕೆದಾರರು ಈ ವಿಡಿಯೋ ಪೋಸ್ಟ್ ಮಾಡಿ ‘ಫುಡ್ ಜಿಹಾದ್’ ಎಂದೆಲ್ಲ ಬರೆದುಕೊಂಡಿದ್ದಾರೆ.

ಸದಾ ಕೋಮುದ್ವೇಷದ ಸುಳ್ಳು ಸುದ್ದಿಗಳನ್ನು ಹರಡುವ ‘ಮಿಸ್ಟರ್ ಸಿನ್ಹಾ’ ಎಂಬ ಎಕ್ಸ್ ಬಳಕೆದಾರ ವಿಡಿಯೋ ಪೋಸ್ಟ್ ಮಾಡಿ ಅದನ್ನು ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರಿಗೆ ಟ್ಯಾಗ್ ಮಾಡಿದ್ದು, “ನೀವಿದನ್ನು ತಿನ್ನುವಿರೇ? ಮೊದಲು ನೀವು ತಿಂದು ಬಳಿಕ ನಮಗೆ ತಿನ್ನಲು ಒತ್ತಾಯಿಸಿ ಎಂದು ಬರೆದುಕೊಂಡಿದ್ದಾರೆ. ವಿನೋದ್ ಎಂಬಾತ ‘ಸ್ಟ್ರಿಂಗ್’ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿ, “ತೆಲಂಗಾಣದ ವಾರಂಗಲ್ ನಲ್ಲಿ ಮುಸ್ಲಿಮರು ನಡೆಸುತ್ತಿರುವ ಹೊಟೇಲ್‌ನಲ್ಲಿ ಆಹಾರದ ಮೇಲೆ ಮೂತ್ರ ವಿಸರ್ಜನೆ ಮಾಡಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಹಾಗಾದರೆ, ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದಂತೆ ಮುಸ್ಲಿಂ ಯುವಕ ಹಿಂದೂಗಳ ಮದುವೆ ಸಮಾರಂಭದಲ್ಲಿ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿರುವುದು ನಿಜಾನಾ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋವನ್ನು ಮೊದಲು ಸೂಕ್ಷ್ಮವಾಗಿ ಗಮನಿಸಿದ್ದೇವೆ. ವಿಡಿಯೋದಲ್ಲಿ ಮೊದಲು ಯುವಕ ಪಾತ್ರೆಗೆ ಮೂತ್ರ ಮಾಡಿದಂತೆ ಕಂಡರೂ, ಬಳಿಕ ಆತ ಬಾಟಲಿಯೊಂದರಿಂದ ಪಾತ್ರೆಗೆ ಏನೋ ಸುರಿಯುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಹಾಗಾಗಿ, ಯುವಕ ಪಾತ್ರೆಗೆ ಮೂತ್ರ ಮಾಡಿದ್ದಾನೆ ಎಂಬ ಆರೋಪ ಸುಳ್ಳು ಎಂಬುವುದು ನಮಗೆ ಗೊತ್ತಾಗಿದೆ.

ಈ ಬಗ್ಗೆ ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಈ ವಿಡಿಯೋ 2022ರಲ್ಲೂ ಸುಳ್ಳು ಸಂದೇಶದೊಂದಿಗೆ ವೈರಲ್ ಆಗಿತ್ತು ಎಂದು ತಿಳಿದು ಬಂದಿದೆ.

ಡಿಸೆಂಬರ್ 2022ರಲ್ಲಿ ಝೀ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸುದ್ದಿ ವೆಬ್‌ಸೈಟ್ “बंदे ने शादी के लिए बन रहे खाने में किया कुछ ऐसा, देखकर आएगी घिन” (ಯುವಕ ಗುಲಾಬ್ ಜಾಮೂನ್ ಪಾತ್ರೆಗೆ ಮೂತ್ರ ಮಾಡಿದ್ದಾನೆ) ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿತ್ತು. ಪ್ರಸ್ತುತ ಆ ಸುದ್ದಿಯನ್ನು ಡಿಲಿಟ್ ಮಾಡಲಾಗಿದೆ.

ಅಸಲಿಗೆ @ashiq.billota ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ತಮಾಷೆಗಾಗಿ ಈ ವಿಡಿಯೋ ಪೋಸ್ಟ್ ಮಾಡಲಾಗಿತ್ತು. ಅದು ಬಳಿಕ ಎಲ್ಲೆಡೆ ವೈರಲ್ ಆಗಿದೆ. ಆದರೆ, ಈಗ ಆ ಇನ್‌ಸ್ಟಾಗ್ರಾಂ ಪೇಜ್‌ನಲ್ಲೂ ವಿಡಿಯೋ ಇಲ್ಲ, ಡಿಲಿಟ್ ಮಾಡಲಾಗಿದೆ.

ಒಟ್ಟಿನಲ್ಲಿ, ಮುಸ್ಲಿಂ ಯುವಕ ಹಿಂದೂಗಳ ಮದುವೆ ಸಮಾರಂಭದ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪಕ್ಕೆ ಯಾವುದೇ ಪುರಾವೆಗಳು ನಮಗೆ ಲಭ್ಯವಾಗಿಲ್ಲ. ವೈರಲ್ ವಿಡಿಯೋವನ್ನು ಮೊದಲು ಪೋಸ್ಟ್ ಮಾಡಿದ್ದ ಇನ್‌ಸ್ಟಾಗ್ರಾಂ ಪೇಜ್‌ ಮತ್ತು ಅದನ್ನು ಆಧಾರವಾಗಿಟ್ಟುಕೊಂಡು ಸುದ್ದಿ ಪ್ರಕಟಿಸಿದ್ದ ಝೀ ನ್ಯೂಸ್‌ನಲ್ಲೂ ಈಗ ವಿಡಿಯೋ ಇಲ್ಲ.

ಎಲ್ಲಾ ವಿಷಯಗಳಿಗೂ ಕೋಮು ಬಣ್ಣ ಬಳಿಯುವ ಕೆಲವೊಂದಿಷ್ಟು ಸಾಮಾಜಿಕ ಜಾಲತಾಣ ಬಳಕೆದಾರರು ನಮ್ಮಡೆಯಲ್ಲಿದ್ದಾರೆ. ಮುಖ್ಯವಾಗಿ ವಿಡಿಯೋಗಳನ್ನು ತಿರುಚಿ ಸುಳ್ಳು ಮಾಹಿತಿಯೊಂದಿಗೆ ಮುಸ್ಲಿಮರ ತಲೆಗೆ ಕಟ್ಟುವುದು ಕೆಲವರ ವಾಡಿಕೆಯಾಗಿದೆ. ಅಂಥವುಗಳಲ್ಲಿ ಈ ವಿಡಿಯೋ ಕೂಡ ಒಂದು.

ವೈರಲ್ ವಿಡಿಯೋ ಎಲ್ಲಿಯದ್ದು ಮತ್ತು ಮೂತ್ರ ಮಾಡಿದ್ದಾನೆ ಎಂದು ಆರೋಪಿಸಲಾದ ಯುವಕ ಮುಸ್ಲಿಂ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ, ಎಕ್ಸ್ ಬಳಕೆದಾರರು ಕೋಮುದ್ವೇಷ ಹರಡುವ ಸಲುವಾಗಿ ಸುಳ್ಳು ಸಂದೇಶದೊಂದಿಗೆ ವಿಡಿಯೋ ಹಂಚಿಕೊಂಡಿದ್ದಾರೆ.

ಇಬ್ಬರ ವಿರುದ್ದ ಪ್ರಕರಣ ದಾಖಲು 

ತಮಾಷೆಯ ವಿಡಿಯೋವನ್ನು ಬಳಸಿಕೊಂಡು ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಮಿಸ್ಟರ್ ಸಿನ್ಹಾ ಮತ್ತು ವಿನೋದ್ ಎಂಬ ಎಕ್ಸ್ ಬಳಕೆದಾರರ ವಿರುದ್ದ ಹೈದರಾಬಾದ್‌ನಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಬಲ ಪಂಥೀಯ ಸಾಮಾಜಿಕ ಜಾಲತಾಣದ ಪ್ರಭಾವಿ ಮಿಸ್ಟರ್ ಸಿನ್ಹಾ ಸದಾ ಸುಳ್ಳು, ಕೋಮುದ್ವೇಷಪೂರಿತ ಸುದ್ದಿಗಳನ್ನು ಹರಡುವುದರಲ್ಲಿ ಕುಖ್ಯಾತಿಯನ್ನು ಪಡೆದಿದ್ದಾನೆ.

ಇದನ್ನೂ ಓದಿ : FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...