Homeಕರ್ನಾಟಕ‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ...

‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ…

- Advertisement -
- Advertisement -

ಮಿಥ್ಯ: ನಿನ್ನೆ (ಸೋಮವಾರ) ಫೇಸ್‍ಬುಕ್‍ನಲ್ಲಿ ಒಂದು ಪಠ್ಯದ ಕಾಗದದ ತುಂಡು ತುಂಬ ಸದ್ದು ಮಾಡುತ್ತಿದ್ದು, ಅದರಲ್ಲಿ ‘ಡೌರಿಯ ಅನುಕೂಲಗಳು’ ಎಂಬ ಉಪಶೀರ್ಷಿಕೆಯಿದೆ. ಅದರಲ್ಲಿ ’ಡೌರಿಯಿಂದ ಕುರೂಪಿ ಹುಡುಗಿಯರ ಮದುವೆ ಸಾಧ್ಯ… ಸುಂದರ ಗಂಡಸರನ್ನು ಮದುವೆಯಾಗಬಹುದು.. ಒಲ್ಲದ ಯುವಕರನ್ನು ಸೆಳೆಯಬಹುದು….’ ಇತ್ಯಾದಿ ಸಾಲುಗಳ ಕೆಳಗಡೆ ಮಾರ್ಕರ್‍ನಿಂದ ಅಂಡರ್‍ಲೈನ್ ಮಾಡಲಾಗಿದೆ. ಗುಜರಾತಿನ ಸರ್ಕಾರಿ ಶಾಲೆಗಳ ಸಮಾಜ ವಿಜ್ಞಾನ ಪುಸ್ತಕದಲ್ಲಿ ಇದು ಇದೆ ಎಂದೂ, ಗುಜರಾತ್ ಸರ್ಕಾರದ ಕಂದಾಚಾರದ ಮೌಲ್ಯಗಳಿಗೆ ಇದು ಸಾಕ್ಷಿ ಎಂದೂ ಟೀಕಿಸಲಾಗಿದೆ. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕೂಡ ಇದನ್ನು ಶೇರ್ ಮಾಡಿದ್ದು, ‘ಗುಜರಾತ್ ಮಾದರಿಯ ಕುರೂಪಿ ಪ್ರದರ್ಶನ’ ಎಂದು ಕಿಡಿಕಾರಿದೆ.

ಸತ್ಯ: ಇದು ಸಾಕಷ್ಟು ವೈರಲ್ ಆಗಿದ್ದು ನಮ್ಮ ಪ್ರಗತಿಪರ ಮಿತ್ರರೂ ಇದನ್ನು ಶೇರ್ ಮಾಡಿ ಗುಜರಾತ್ ಬಿಜೆಪಿ ಸರ್ಕಾರದ ಮೇಲೆ ಹರಿ ಹಾಯ್ದಿದ್ದಾರೆ. ಆದರೆ ಫ್ಯಾಕ್ಟ್ ಚೆಕ್ ಮಾಡಿದಾಗ ಗುಜರಾತ್ ಶಿಕ್ಷಣ ಇಲಾಖೆ ಪ್ರಕಟಿಸಿದ ಯಾವ ಪಠ್ಯಪುಸ್ತಕದಲ್ಲೂ ಈ ಕಾಗದದ ತುಣುಕಿನ ಸಾರಾಂಶ ಇರುವ ಪಾಠವಿಲ್ಲ. ಇದರ ಮೂಲ ಹುಡುಕುತ್ತ ಹೋದರೆ ಅದು ಬೆಂಗಳೂರಿಗೆ ಬಂದು ತಲುಪುತ್ತದೆ.

ಇಲ್ಲಿ ಪ್ರಕಟಿಸಿರುವ ಪಠ್ಯದ ಭಾಗ 2017ರಲ್ಲಿ ಸುದ್ದಿಯಲ್ಲಿತ್ತು. ಬೆಂಗಳೂರಿನ ಶಾಂತಿನಗರದ ಸೇಂಟ್ ಜೋಸೆಫ್ ಕಾಲೇಜಿನ ಸಮಾಜಶಾಸ್ತ್ರ ಪುಸ್ತಕದಲ್ಲಿ ಇದು ಇತ್ತು ಎಂದು ವರದಿಯಾಗಿತ್ತು. ಅಕ್ಟೋಬರ್ 21, 2017ರಂದು ಈ ಕುರಿತು ವರದಿ ಪ್ರಕಟಿಸಿದ್ದ ‘ಟೈಮ್ಸ್ ಆಫ್ ಇಂಡಿಯಾ’, ಈ ಪಾಠದಲ್ಲಿನ ಅಂಶಗಳಿಗಾಗಿ ಕಾಲೇಜಿನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು ಎಂದು ಬರೆದಿತ್ತು.

ಇದಕ್ಕೂ ಮೊದಲು ‘ದಿ ನ್ಯೂಸ್ ಮಿನಿಟ್’ ಪ್ರಕಟಿಸಿದ್ದ ವರದಿಯಲ್ಲಿ, ಸೇಂಟ್ ಜೋಸೆಫ್ ಕಾಲೇಜಿನ ಬಿ.ಎ. ತರಗತಿಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಈ ಪಠ್ಯ ಇದೆ ಎಂಬುದನ್ನು ಯುವತಿಯೊಬ್ಬಳು ಬೆಳಕಿಗೆ ತಂದಿದ್ದಾಳೆ ಎಂದು ವಿವರಿಸಿತ್ತು.

ಸೇಂಟ್ ಜೋಸೆಫ್ ಕಾಲೇಜು ಇಂತಹ ಕಂದಾಚಾರದ ಪಠ್ಯ ಅಳವಡಿಸಲು ಸಾಧ್ಯವೇ? ಖಂಡಿತ ಇಲ್ಲ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟವಾದ ದಿನವೇ ಕಾಲೇಜಿನ ಪ್ರೊಫೆಸರ್‍ಗಳು ಒಟ್ಟಾಗಿ, ‘ಸಿಟಿಜನ್ ಜರ್ನಲಿಸ್ಟ್ ಹೆಸರಿನಲ್ಲಿ ಯುವತಿಯೊಬ್ಬಳು ಮಾಡಿದ ಕುಚೋದ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇಂಗ್ಲಿಷ್ ವಿಭಾಗದ ಪ್ರೊಫೆಸರ್ ಚೆರಿಯನ್ ಅಲೆಕ್ಸಾಂಡರ್ ಈ ಕುರಿತು ವಿವರಣೆ ನೀಡಿ, ‘ಸಿಟಿಜನ್ ಜರ್ನಲಿಸ್ಟ್-ಕಮ್-ವೆಲ್ಲೂರ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಇಡೀ ಪಠ್ಯದಲ್ಲಿ ಆಯ್ದ ಭಾಗವನ್ನಷ್ಟೇ ಪ್ರಕಟಿಸಿ ಕುಚೋದ್ಯ ಮಾಡಿದ್ದಾಳೆ.

‘ವರದಕ್ಷಿಣೆಯ ಅನುಕೂಲಗಳು’ ಎಂದು ಸಮಾಜದ ಕೆಲವು ಕಂದಾಚಾರಿ ಮನಸ್ಸುಗಳ ಭಾವಿಸಿರುವುದನ್ನು ಆ ಉಪಶೀರ್ಷಿಕೆಯಡಿ ವಿವರಿಸಿದ್ದು, ಇಂತಹ ಕಂದಾಚಾರಗಳ ವಿರುದ್ಧ ಧ್ವನಿ ಎತ್ತುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂಬ ಪಠ್ಯವೂ ಇದ್ದು ಅದನ್ನು ಬೇಕೆಂತಲೇ ಪ್ರಕಟಿಸಿಲ್ಲ. ಇಡೀ ಪಾಠ ವರದಕ್ಷಿಣೆ ಎಂಬ ಪಿಡುಗಿನ ವಿರುದ್ಧವೇ ಇದೆ. ನಮ್ಮ ಸಂಸ್ಥೆ ಎಂದೂ ಕಂದಾಚಾರ, ಮೌಢ್ಯ ಮತ್ತು ಪುರುಷ ಪ್ರಧಾನ ನಿಲುವುಗಳ ವಿರುದ್ಧವಾಗಿಯೇ ಇದೆ ಎಂದು ಸ್ಪಷ್ಟೀಕರಣ ನೀಡಿದ್ದರು. ಮರುದಿನ ಟೈಮ್ಸ್ ಆಫ್ ಇಂಡಿಯಾ ಈ ಸ್ಪಷ್ಟಿಕರಣವನ್ನು ಪ್ರಕಟಿಸಿತ್ತು.

ಈಗ ಅದೇ ಪಠ್ಯದ ಭಾಗ ವೈರಲ್ ಆಗಿದ್ದು, ಗುಜರಾತಿನ ಶಾಲೆಗಳಲ್ಲಿ ಈ ಪಾಠವಿದೆ ಎಂದು ಸುಳ್ಳನ್ನು ತೇಲಿಬಿಡಲಾಗಿದೆ.
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...