Homeಕರ್ನಾಟಕ‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ...

‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ…

- Advertisement -
- Advertisement -

ಮಿಥ್ಯ: ನಿನ್ನೆ (ಸೋಮವಾರ) ಫೇಸ್‍ಬುಕ್‍ನಲ್ಲಿ ಒಂದು ಪಠ್ಯದ ಕಾಗದದ ತುಂಡು ತುಂಬ ಸದ್ದು ಮಾಡುತ್ತಿದ್ದು, ಅದರಲ್ಲಿ ‘ಡೌರಿಯ ಅನುಕೂಲಗಳು’ ಎಂಬ ಉಪಶೀರ್ಷಿಕೆಯಿದೆ. ಅದರಲ್ಲಿ ’ಡೌರಿಯಿಂದ ಕುರೂಪಿ ಹುಡುಗಿಯರ ಮದುವೆ ಸಾಧ್ಯ… ಸುಂದರ ಗಂಡಸರನ್ನು ಮದುವೆಯಾಗಬಹುದು.. ಒಲ್ಲದ ಯುವಕರನ್ನು ಸೆಳೆಯಬಹುದು….’ ಇತ್ಯಾದಿ ಸಾಲುಗಳ ಕೆಳಗಡೆ ಮಾರ್ಕರ್‍ನಿಂದ ಅಂಡರ್‍ಲೈನ್ ಮಾಡಲಾಗಿದೆ. ಗುಜರಾತಿನ ಸರ್ಕಾರಿ ಶಾಲೆಗಳ ಸಮಾಜ ವಿಜ್ಞಾನ ಪುಸ್ತಕದಲ್ಲಿ ಇದು ಇದೆ ಎಂದೂ, ಗುಜರಾತ್ ಸರ್ಕಾರದ ಕಂದಾಚಾರದ ಮೌಲ್ಯಗಳಿಗೆ ಇದು ಸಾಕ್ಷಿ ಎಂದೂ ಟೀಕಿಸಲಾಗಿದೆ. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕೂಡ ಇದನ್ನು ಶೇರ್ ಮಾಡಿದ್ದು, ‘ಗುಜರಾತ್ ಮಾದರಿಯ ಕುರೂಪಿ ಪ್ರದರ್ಶನ’ ಎಂದು ಕಿಡಿಕಾರಿದೆ.

ಸತ್ಯ: ಇದು ಸಾಕಷ್ಟು ವೈರಲ್ ಆಗಿದ್ದು ನಮ್ಮ ಪ್ರಗತಿಪರ ಮಿತ್ರರೂ ಇದನ್ನು ಶೇರ್ ಮಾಡಿ ಗುಜರಾತ್ ಬಿಜೆಪಿ ಸರ್ಕಾರದ ಮೇಲೆ ಹರಿ ಹಾಯ್ದಿದ್ದಾರೆ. ಆದರೆ ಫ್ಯಾಕ್ಟ್ ಚೆಕ್ ಮಾಡಿದಾಗ ಗುಜರಾತ್ ಶಿಕ್ಷಣ ಇಲಾಖೆ ಪ್ರಕಟಿಸಿದ ಯಾವ ಪಠ್ಯಪುಸ್ತಕದಲ್ಲೂ ಈ ಕಾಗದದ ತುಣುಕಿನ ಸಾರಾಂಶ ಇರುವ ಪಾಠವಿಲ್ಲ. ಇದರ ಮೂಲ ಹುಡುಕುತ್ತ ಹೋದರೆ ಅದು ಬೆಂಗಳೂರಿಗೆ ಬಂದು ತಲುಪುತ್ತದೆ.

ಇಲ್ಲಿ ಪ್ರಕಟಿಸಿರುವ ಪಠ್ಯದ ಭಾಗ 2017ರಲ್ಲಿ ಸುದ್ದಿಯಲ್ಲಿತ್ತು. ಬೆಂಗಳೂರಿನ ಶಾಂತಿನಗರದ ಸೇಂಟ್ ಜೋಸೆಫ್ ಕಾಲೇಜಿನ ಸಮಾಜಶಾಸ್ತ್ರ ಪುಸ್ತಕದಲ್ಲಿ ಇದು ಇತ್ತು ಎಂದು ವರದಿಯಾಗಿತ್ತು. ಅಕ್ಟೋಬರ್ 21, 2017ರಂದು ಈ ಕುರಿತು ವರದಿ ಪ್ರಕಟಿಸಿದ್ದ ‘ಟೈಮ್ಸ್ ಆಫ್ ಇಂಡಿಯಾ’, ಈ ಪಾಠದಲ್ಲಿನ ಅಂಶಗಳಿಗಾಗಿ ಕಾಲೇಜಿನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು ಎಂದು ಬರೆದಿತ್ತು.

ಇದಕ್ಕೂ ಮೊದಲು ‘ದಿ ನ್ಯೂಸ್ ಮಿನಿಟ್’ ಪ್ರಕಟಿಸಿದ್ದ ವರದಿಯಲ್ಲಿ, ಸೇಂಟ್ ಜೋಸೆಫ್ ಕಾಲೇಜಿನ ಬಿ.ಎ. ತರಗತಿಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಈ ಪಠ್ಯ ಇದೆ ಎಂಬುದನ್ನು ಯುವತಿಯೊಬ್ಬಳು ಬೆಳಕಿಗೆ ತಂದಿದ್ದಾಳೆ ಎಂದು ವಿವರಿಸಿತ್ತು.

ಸೇಂಟ್ ಜೋಸೆಫ್ ಕಾಲೇಜು ಇಂತಹ ಕಂದಾಚಾರದ ಪಠ್ಯ ಅಳವಡಿಸಲು ಸಾಧ್ಯವೇ? ಖಂಡಿತ ಇಲ್ಲ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟವಾದ ದಿನವೇ ಕಾಲೇಜಿನ ಪ್ರೊಫೆಸರ್‍ಗಳು ಒಟ್ಟಾಗಿ, ‘ಸಿಟಿಜನ್ ಜರ್ನಲಿಸ್ಟ್ ಹೆಸರಿನಲ್ಲಿ ಯುವತಿಯೊಬ್ಬಳು ಮಾಡಿದ ಕುಚೋದ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇಂಗ್ಲಿಷ್ ವಿಭಾಗದ ಪ್ರೊಫೆಸರ್ ಚೆರಿಯನ್ ಅಲೆಕ್ಸಾಂಡರ್ ಈ ಕುರಿತು ವಿವರಣೆ ನೀಡಿ, ‘ಸಿಟಿಜನ್ ಜರ್ನಲಿಸ್ಟ್-ಕಮ್-ವೆಲ್ಲೂರ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಇಡೀ ಪಠ್ಯದಲ್ಲಿ ಆಯ್ದ ಭಾಗವನ್ನಷ್ಟೇ ಪ್ರಕಟಿಸಿ ಕುಚೋದ್ಯ ಮಾಡಿದ್ದಾಳೆ.

‘ವರದಕ್ಷಿಣೆಯ ಅನುಕೂಲಗಳು’ ಎಂದು ಸಮಾಜದ ಕೆಲವು ಕಂದಾಚಾರಿ ಮನಸ್ಸುಗಳ ಭಾವಿಸಿರುವುದನ್ನು ಆ ಉಪಶೀರ್ಷಿಕೆಯಡಿ ವಿವರಿಸಿದ್ದು, ಇಂತಹ ಕಂದಾಚಾರಗಳ ವಿರುದ್ಧ ಧ್ವನಿ ಎತ್ತುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂಬ ಪಠ್ಯವೂ ಇದ್ದು ಅದನ್ನು ಬೇಕೆಂತಲೇ ಪ್ರಕಟಿಸಿಲ್ಲ. ಇಡೀ ಪಾಠ ವರದಕ್ಷಿಣೆ ಎಂಬ ಪಿಡುಗಿನ ವಿರುದ್ಧವೇ ಇದೆ. ನಮ್ಮ ಸಂಸ್ಥೆ ಎಂದೂ ಕಂದಾಚಾರ, ಮೌಢ್ಯ ಮತ್ತು ಪುರುಷ ಪ್ರಧಾನ ನಿಲುವುಗಳ ವಿರುದ್ಧವಾಗಿಯೇ ಇದೆ ಎಂದು ಸ್ಪಷ್ಟೀಕರಣ ನೀಡಿದ್ದರು. ಮರುದಿನ ಟೈಮ್ಸ್ ಆಫ್ ಇಂಡಿಯಾ ಈ ಸ್ಪಷ್ಟಿಕರಣವನ್ನು ಪ್ರಕಟಿಸಿತ್ತು.

ಈಗ ಅದೇ ಪಠ್ಯದ ಭಾಗ ವೈರಲ್ ಆಗಿದ್ದು, ಗುಜರಾತಿನ ಶಾಲೆಗಳಲ್ಲಿ ಈ ಪಾಠವಿದೆ ಎಂದು ಸುಳ್ಳನ್ನು ತೇಲಿಬಿಡಲಾಗಿದೆ.
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...