Homeಕರ್ನಾಟಕ‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ...

‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ…

- Advertisement -
- Advertisement -

ಮಿಥ್ಯ: ನಿನ್ನೆ (ಸೋಮವಾರ) ಫೇಸ್‍ಬುಕ್‍ನಲ್ಲಿ ಒಂದು ಪಠ್ಯದ ಕಾಗದದ ತುಂಡು ತುಂಬ ಸದ್ದು ಮಾಡುತ್ತಿದ್ದು, ಅದರಲ್ಲಿ ‘ಡೌರಿಯ ಅನುಕೂಲಗಳು’ ಎಂಬ ಉಪಶೀರ್ಷಿಕೆಯಿದೆ. ಅದರಲ್ಲಿ ’ಡೌರಿಯಿಂದ ಕುರೂಪಿ ಹುಡುಗಿಯರ ಮದುವೆ ಸಾಧ್ಯ… ಸುಂದರ ಗಂಡಸರನ್ನು ಮದುವೆಯಾಗಬಹುದು.. ಒಲ್ಲದ ಯುವಕರನ್ನು ಸೆಳೆಯಬಹುದು….’ ಇತ್ಯಾದಿ ಸಾಲುಗಳ ಕೆಳಗಡೆ ಮಾರ್ಕರ್‍ನಿಂದ ಅಂಡರ್‍ಲೈನ್ ಮಾಡಲಾಗಿದೆ. ಗುಜರಾತಿನ ಸರ್ಕಾರಿ ಶಾಲೆಗಳ ಸಮಾಜ ವಿಜ್ಞಾನ ಪುಸ್ತಕದಲ್ಲಿ ಇದು ಇದೆ ಎಂದೂ, ಗುಜರಾತ್ ಸರ್ಕಾರದ ಕಂದಾಚಾರದ ಮೌಲ್ಯಗಳಿಗೆ ಇದು ಸಾಕ್ಷಿ ಎಂದೂ ಟೀಕಿಸಲಾಗಿದೆ. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕೂಡ ಇದನ್ನು ಶೇರ್ ಮಾಡಿದ್ದು, ‘ಗುಜರಾತ್ ಮಾದರಿಯ ಕುರೂಪಿ ಪ್ರದರ್ಶನ’ ಎಂದು ಕಿಡಿಕಾರಿದೆ.

ಸತ್ಯ: ಇದು ಸಾಕಷ್ಟು ವೈರಲ್ ಆಗಿದ್ದು ನಮ್ಮ ಪ್ರಗತಿಪರ ಮಿತ್ರರೂ ಇದನ್ನು ಶೇರ್ ಮಾಡಿ ಗುಜರಾತ್ ಬಿಜೆಪಿ ಸರ್ಕಾರದ ಮೇಲೆ ಹರಿ ಹಾಯ್ದಿದ್ದಾರೆ. ಆದರೆ ಫ್ಯಾಕ್ಟ್ ಚೆಕ್ ಮಾಡಿದಾಗ ಗುಜರಾತ್ ಶಿಕ್ಷಣ ಇಲಾಖೆ ಪ್ರಕಟಿಸಿದ ಯಾವ ಪಠ್ಯಪುಸ್ತಕದಲ್ಲೂ ಈ ಕಾಗದದ ತುಣುಕಿನ ಸಾರಾಂಶ ಇರುವ ಪಾಠವಿಲ್ಲ. ಇದರ ಮೂಲ ಹುಡುಕುತ್ತ ಹೋದರೆ ಅದು ಬೆಂಗಳೂರಿಗೆ ಬಂದು ತಲುಪುತ್ತದೆ.

ಇಲ್ಲಿ ಪ್ರಕಟಿಸಿರುವ ಪಠ್ಯದ ಭಾಗ 2017ರಲ್ಲಿ ಸುದ್ದಿಯಲ್ಲಿತ್ತು. ಬೆಂಗಳೂರಿನ ಶಾಂತಿನಗರದ ಸೇಂಟ್ ಜೋಸೆಫ್ ಕಾಲೇಜಿನ ಸಮಾಜಶಾಸ್ತ್ರ ಪುಸ್ತಕದಲ್ಲಿ ಇದು ಇತ್ತು ಎಂದು ವರದಿಯಾಗಿತ್ತು. ಅಕ್ಟೋಬರ್ 21, 2017ರಂದು ಈ ಕುರಿತು ವರದಿ ಪ್ರಕಟಿಸಿದ್ದ ‘ಟೈಮ್ಸ್ ಆಫ್ ಇಂಡಿಯಾ’, ಈ ಪಾಠದಲ್ಲಿನ ಅಂಶಗಳಿಗಾಗಿ ಕಾಲೇಜಿನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು ಎಂದು ಬರೆದಿತ್ತು.

ಇದಕ್ಕೂ ಮೊದಲು ‘ದಿ ನ್ಯೂಸ್ ಮಿನಿಟ್’ ಪ್ರಕಟಿಸಿದ್ದ ವರದಿಯಲ್ಲಿ, ಸೇಂಟ್ ಜೋಸೆಫ್ ಕಾಲೇಜಿನ ಬಿ.ಎ. ತರಗತಿಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಈ ಪಠ್ಯ ಇದೆ ಎಂಬುದನ್ನು ಯುವತಿಯೊಬ್ಬಳು ಬೆಳಕಿಗೆ ತಂದಿದ್ದಾಳೆ ಎಂದು ವಿವರಿಸಿತ್ತು.

ಸೇಂಟ್ ಜೋಸೆಫ್ ಕಾಲೇಜು ಇಂತಹ ಕಂದಾಚಾರದ ಪಠ್ಯ ಅಳವಡಿಸಲು ಸಾಧ್ಯವೇ? ಖಂಡಿತ ಇಲ್ಲ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟವಾದ ದಿನವೇ ಕಾಲೇಜಿನ ಪ್ರೊಫೆಸರ್‍ಗಳು ಒಟ್ಟಾಗಿ, ‘ಸಿಟಿಜನ್ ಜರ್ನಲಿಸ್ಟ್ ಹೆಸರಿನಲ್ಲಿ ಯುವತಿಯೊಬ್ಬಳು ಮಾಡಿದ ಕುಚೋದ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇಂಗ್ಲಿಷ್ ವಿಭಾಗದ ಪ್ರೊಫೆಸರ್ ಚೆರಿಯನ್ ಅಲೆಕ್ಸಾಂಡರ್ ಈ ಕುರಿತು ವಿವರಣೆ ನೀಡಿ, ‘ಸಿಟಿಜನ್ ಜರ್ನಲಿಸ್ಟ್-ಕಮ್-ವೆಲ್ಲೂರ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಇಡೀ ಪಠ್ಯದಲ್ಲಿ ಆಯ್ದ ಭಾಗವನ್ನಷ್ಟೇ ಪ್ರಕಟಿಸಿ ಕುಚೋದ್ಯ ಮಾಡಿದ್ದಾಳೆ.

‘ವರದಕ್ಷಿಣೆಯ ಅನುಕೂಲಗಳು’ ಎಂದು ಸಮಾಜದ ಕೆಲವು ಕಂದಾಚಾರಿ ಮನಸ್ಸುಗಳ ಭಾವಿಸಿರುವುದನ್ನು ಆ ಉಪಶೀರ್ಷಿಕೆಯಡಿ ವಿವರಿಸಿದ್ದು, ಇಂತಹ ಕಂದಾಚಾರಗಳ ವಿರುದ್ಧ ಧ್ವನಿ ಎತ್ತುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂಬ ಪಠ್ಯವೂ ಇದ್ದು ಅದನ್ನು ಬೇಕೆಂತಲೇ ಪ್ರಕಟಿಸಿಲ್ಲ. ಇಡೀ ಪಾಠ ವರದಕ್ಷಿಣೆ ಎಂಬ ಪಿಡುಗಿನ ವಿರುದ್ಧವೇ ಇದೆ. ನಮ್ಮ ಸಂಸ್ಥೆ ಎಂದೂ ಕಂದಾಚಾರ, ಮೌಢ್ಯ ಮತ್ತು ಪುರುಷ ಪ್ರಧಾನ ನಿಲುವುಗಳ ವಿರುದ್ಧವಾಗಿಯೇ ಇದೆ ಎಂದು ಸ್ಪಷ್ಟೀಕರಣ ನೀಡಿದ್ದರು. ಮರುದಿನ ಟೈಮ್ಸ್ ಆಫ್ ಇಂಡಿಯಾ ಈ ಸ್ಪಷ್ಟಿಕರಣವನ್ನು ಪ್ರಕಟಿಸಿತ್ತು.

ಈಗ ಅದೇ ಪಠ್ಯದ ಭಾಗ ವೈರಲ್ ಆಗಿದ್ದು, ಗುಜರಾತಿನ ಶಾಲೆಗಳಲ್ಲಿ ಈ ಪಾಠವಿದೆ ಎಂದು ಸುಳ್ಳನ್ನು ತೇಲಿಬಿಡಲಾಗಿದೆ.
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...