Homeಕರ್ನಾಟಕ‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ...

‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ…

- Advertisement -
- Advertisement -

ಮಿಥ್ಯ: ನಿನ್ನೆ (ಸೋಮವಾರ) ಫೇಸ್‍ಬುಕ್‍ನಲ್ಲಿ ಒಂದು ಪಠ್ಯದ ಕಾಗದದ ತುಂಡು ತುಂಬ ಸದ್ದು ಮಾಡುತ್ತಿದ್ದು, ಅದರಲ್ಲಿ ‘ಡೌರಿಯ ಅನುಕೂಲಗಳು’ ಎಂಬ ಉಪಶೀರ್ಷಿಕೆಯಿದೆ. ಅದರಲ್ಲಿ ’ಡೌರಿಯಿಂದ ಕುರೂಪಿ ಹುಡುಗಿಯರ ಮದುವೆ ಸಾಧ್ಯ… ಸುಂದರ ಗಂಡಸರನ್ನು ಮದುವೆಯಾಗಬಹುದು.. ಒಲ್ಲದ ಯುವಕರನ್ನು ಸೆಳೆಯಬಹುದು….’ ಇತ್ಯಾದಿ ಸಾಲುಗಳ ಕೆಳಗಡೆ ಮಾರ್ಕರ್‍ನಿಂದ ಅಂಡರ್‍ಲೈನ್ ಮಾಡಲಾಗಿದೆ. ಗುಜರಾತಿನ ಸರ್ಕಾರಿ ಶಾಲೆಗಳ ಸಮಾಜ ವಿಜ್ಞಾನ ಪುಸ್ತಕದಲ್ಲಿ ಇದು ಇದೆ ಎಂದೂ, ಗುಜರಾತ್ ಸರ್ಕಾರದ ಕಂದಾಚಾರದ ಮೌಲ್ಯಗಳಿಗೆ ಇದು ಸಾಕ್ಷಿ ಎಂದೂ ಟೀಕಿಸಲಾಗಿದೆ. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕೂಡ ಇದನ್ನು ಶೇರ್ ಮಾಡಿದ್ದು, ‘ಗುಜರಾತ್ ಮಾದರಿಯ ಕುರೂಪಿ ಪ್ರದರ್ಶನ’ ಎಂದು ಕಿಡಿಕಾರಿದೆ.

ಸತ್ಯ: ಇದು ಸಾಕಷ್ಟು ವೈರಲ್ ಆಗಿದ್ದು ನಮ್ಮ ಪ್ರಗತಿಪರ ಮಿತ್ರರೂ ಇದನ್ನು ಶೇರ್ ಮಾಡಿ ಗುಜರಾತ್ ಬಿಜೆಪಿ ಸರ್ಕಾರದ ಮೇಲೆ ಹರಿ ಹಾಯ್ದಿದ್ದಾರೆ. ಆದರೆ ಫ್ಯಾಕ್ಟ್ ಚೆಕ್ ಮಾಡಿದಾಗ ಗುಜರಾತ್ ಶಿಕ್ಷಣ ಇಲಾಖೆ ಪ್ರಕಟಿಸಿದ ಯಾವ ಪಠ್ಯಪುಸ್ತಕದಲ್ಲೂ ಈ ಕಾಗದದ ತುಣುಕಿನ ಸಾರಾಂಶ ಇರುವ ಪಾಠವಿಲ್ಲ. ಇದರ ಮೂಲ ಹುಡುಕುತ್ತ ಹೋದರೆ ಅದು ಬೆಂಗಳೂರಿಗೆ ಬಂದು ತಲುಪುತ್ತದೆ.

ಇಲ್ಲಿ ಪ್ರಕಟಿಸಿರುವ ಪಠ್ಯದ ಭಾಗ 2017ರಲ್ಲಿ ಸುದ್ದಿಯಲ್ಲಿತ್ತು. ಬೆಂಗಳೂರಿನ ಶಾಂತಿನಗರದ ಸೇಂಟ್ ಜೋಸೆಫ್ ಕಾಲೇಜಿನ ಸಮಾಜಶಾಸ್ತ್ರ ಪುಸ್ತಕದಲ್ಲಿ ಇದು ಇತ್ತು ಎಂದು ವರದಿಯಾಗಿತ್ತು. ಅಕ್ಟೋಬರ್ 21, 2017ರಂದು ಈ ಕುರಿತು ವರದಿ ಪ್ರಕಟಿಸಿದ್ದ ‘ಟೈಮ್ಸ್ ಆಫ್ ಇಂಡಿಯಾ’, ಈ ಪಾಠದಲ್ಲಿನ ಅಂಶಗಳಿಗಾಗಿ ಕಾಲೇಜಿನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು ಎಂದು ಬರೆದಿತ್ತು.

ಇದಕ್ಕೂ ಮೊದಲು ‘ದಿ ನ್ಯೂಸ್ ಮಿನಿಟ್’ ಪ್ರಕಟಿಸಿದ್ದ ವರದಿಯಲ್ಲಿ, ಸೇಂಟ್ ಜೋಸೆಫ್ ಕಾಲೇಜಿನ ಬಿ.ಎ. ತರಗತಿಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಈ ಪಠ್ಯ ಇದೆ ಎಂಬುದನ್ನು ಯುವತಿಯೊಬ್ಬಳು ಬೆಳಕಿಗೆ ತಂದಿದ್ದಾಳೆ ಎಂದು ವಿವರಿಸಿತ್ತು.

ಸೇಂಟ್ ಜೋಸೆಫ್ ಕಾಲೇಜು ಇಂತಹ ಕಂದಾಚಾರದ ಪಠ್ಯ ಅಳವಡಿಸಲು ಸಾಧ್ಯವೇ? ಖಂಡಿತ ಇಲ್ಲ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟವಾದ ದಿನವೇ ಕಾಲೇಜಿನ ಪ್ರೊಫೆಸರ್‍ಗಳು ಒಟ್ಟಾಗಿ, ‘ಸಿಟಿಜನ್ ಜರ್ನಲಿಸ್ಟ್ ಹೆಸರಿನಲ್ಲಿ ಯುವತಿಯೊಬ್ಬಳು ಮಾಡಿದ ಕುಚೋದ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇಂಗ್ಲಿಷ್ ವಿಭಾಗದ ಪ್ರೊಫೆಸರ್ ಚೆರಿಯನ್ ಅಲೆಕ್ಸಾಂಡರ್ ಈ ಕುರಿತು ವಿವರಣೆ ನೀಡಿ, ‘ಸಿಟಿಜನ್ ಜರ್ನಲಿಸ್ಟ್-ಕಮ್-ವೆಲ್ಲೂರ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಇಡೀ ಪಠ್ಯದಲ್ಲಿ ಆಯ್ದ ಭಾಗವನ್ನಷ್ಟೇ ಪ್ರಕಟಿಸಿ ಕುಚೋದ್ಯ ಮಾಡಿದ್ದಾಳೆ.

‘ವರದಕ್ಷಿಣೆಯ ಅನುಕೂಲಗಳು’ ಎಂದು ಸಮಾಜದ ಕೆಲವು ಕಂದಾಚಾರಿ ಮನಸ್ಸುಗಳ ಭಾವಿಸಿರುವುದನ್ನು ಆ ಉಪಶೀರ್ಷಿಕೆಯಡಿ ವಿವರಿಸಿದ್ದು, ಇಂತಹ ಕಂದಾಚಾರಗಳ ವಿರುದ್ಧ ಧ್ವನಿ ಎತ್ತುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂಬ ಪಠ್ಯವೂ ಇದ್ದು ಅದನ್ನು ಬೇಕೆಂತಲೇ ಪ್ರಕಟಿಸಿಲ್ಲ. ಇಡೀ ಪಾಠ ವರದಕ್ಷಿಣೆ ಎಂಬ ಪಿಡುಗಿನ ವಿರುದ್ಧವೇ ಇದೆ. ನಮ್ಮ ಸಂಸ್ಥೆ ಎಂದೂ ಕಂದಾಚಾರ, ಮೌಢ್ಯ ಮತ್ತು ಪುರುಷ ಪ್ರಧಾನ ನಿಲುವುಗಳ ವಿರುದ್ಧವಾಗಿಯೇ ಇದೆ ಎಂದು ಸ್ಪಷ್ಟೀಕರಣ ನೀಡಿದ್ದರು. ಮರುದಿನ ಟೈಮ್ಸ್ ಆಫ್ ಇಂಡಿಯಾ ಈ ಸ್ಪಷ್ಟಿಕರಣವನ್ನು ಪ್ರಕಟಿಸಿತ್ತು.

ಈಗ ಅದೇ ಪಠ್ಯದ ಭಾಗ ವೈರಲ್ ಆಗಿದ್ದು, ಗುಜರಾತಿನ ಶಾಲೆಗಳಲ್ಲಿ ಈ ಪಾಠವಿದೆ ಎಂದು ಸುಳ್ಳನ್ನು ತೇಲಿಬಿಡಲಾಗಿದೆ.
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...