Homeಕರ್ನಾಟಕ‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ...

‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ…

- Advertisement -
- Advertisement -

ಮಿಥ್ಯ: ನಿನ್ನೆ (ಸೋಮವಾರ) ಫೇಸ್‍ಬುಕ್‍ನಲ್ಲಿ ಒಂದು ಪಠ್ಯದ ಕಾಗದದ ತುಂಡು ತುಂಬ ಸದ್ದು ಮಾಡುತ್ತಿದ್ದು, ಅದರಲ್ಲಿ ‘ಡೌರಿಯ ಅನುಕೂಲಗಳು’ ಎಂಬ ಉಪಶೀರ್ಷಿಕೆಯಿದೆ. ಅದರಲ್ಲಿ ’ಡೌರಿಯಿಂದ ಕುರೂಪಿ ಹುಡುಗಿಯರ ಮದುವೆ ಸಾಧ್ಯ… ಸುಂದರ ಗಂಡಸರನ್ನು ಮದುವೆಯಾಗಬಹುದು.. ಒಲ್ಲದ ಯುವಕರನ್ನು ಸೆಳೆಯಬಹುದು….’ ಇತ್ಯಾದಿ ಸಾಲುಗಳ ಕೆಳಗಡೆ ಮಾರ್ಕರ್‍ನಿಂದ ಅಂಡರ್‍ಲೈನ್ ಮಾಡಲಾಗಿದೆ. ಗುಜರಾತಿನ ಸರ್ಕಾರಿ ಶಾಲೆಗಳ ಸಮಾಜ ವಿಜ್ಞಾನ ಪುಸ್ತಕದಲ್ಲಿ ಇದು ಇದೆ ಎಂದೂ, ಗುಜರಾತ್ ಸರ್ಕಾರದ ಕಂದಾಚಾರದ ಮೌಲ್ಯಗಳಿಗೆ ಇದು ಸಾಕ್ಷಿ ಎಂದೂ ಟೀಕಿಸಲಾಗಿದೆ. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕೂಡ ಇದನ್ನು ಶೇರ್ ಮಾಡಿದ್ದು, ‘ಗುಜರಾತ್ ಮಾದರಿಯ ಕುರೂಪಿ ಪ್ರದರ್ಶನ’ ಎಂದು ಕಿಡಿಕಾರಿದೆ.

ಸತ್ಯ: ಇದು ಸಾಕಷ್ಟು ವೈರಲ್ ಆಗಿದ್ದು ನಮ್ಮ ಪ್ರಗತಿಪರ ಮಿತ್ರರೂ ಇದನ್ನು ಶೇರ್ ಮಾಡಿ ಗುಜರಾತ್ ಬಿಜೆಪಿ ಸರ್ಕಾರದ ಮೇಲೆ ಹರಿ ಹಾಯ್ದಿದ್ದಾರೆ. ಆದರೆ ಫ್ಯಾಕ್ಟ್ ಚೆಕ್ ಮಾಡಿದಾಗ ಗುಜರಾತ್ ಶಿಕ್ಷಣ ಇಲಾಖೆ ಪ್ರಕಟಿಸಿದ ಯಾವ ಪಠ್ಯಪುಸ್ತಕದಲ್ಲೂ ಈ ಕಾಗದದ ತುಣುಕಿನ ಸಾರಾಂಶ ಇರುವ ಪಾಠವಿಲ್ಲ. ಇದರ ಮೂಲ ಹುಡುಕುತ್ತ ಹೋದರೆ ಅದು ಬೆಂಗಳೂರಿಗೆ ಬಂದು ತಲುಪುತ್ತದೆ.

ಇಲ್ಲಿ ಪ್ರಕಟಿಸಿರುವ ಪಠ್ಯದ ಭಾಗ 2017ರಲ್ಲಿ ಸುದ್ದಿಯಲ್ಲಿತ್ತು. ಬೆಂಗಳೂರಿನ ಶಾಂತಿನಗರದ ಸೇಂಟ್ ಜೋಸೆಫ್ ಕಾಲೇಜಿನ ಸಮಾಜಶಾಸ್ತ್ರ ಪುಸ್ತಕದಲ್ಲಿ ಇದು ಇತ್ತು ಎಂದು ವರದಿಯಾಗಿತ್ತು. ಅಕ್ಟೋಬರ್ 21, 2017ರಂದು ಈ ಕುರಿತು ವರದಿ ಪ್ರಕಟಿಸಿದ್ದ ‘ಟೈಮ್ಸ್ ಆಫ್ ಇಂಡಿಯಾ’, ಈ ಪಾಠದಲ್ಲಿನ ಅಂಶಗಳಿಗಾಗಿ ಕಾಲೇಜಿನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು ಎಂದು ಬರೆದಿತ್ತು.

ಇದಕ್ಕೂ ಮೊದಲು ‘ದಿ ನ್ಯೂಸ್ ಮಿನಿಟ್’ ಪ್ರಕಟಿಸಿದ್ದ ವರದಿಯಲ್ಲಿ, ಸೇಂಟ್ ಜೋಸೆಫ್ ಕಾಲೇಜಿನ ಬಿ.ಎ. ತರಗತಿಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಈ ಪಠ್ಯ ಇದೆ ಎಂಬುದನ್ನು ಯುವತಿಯೊಬ್ಬಳು ಬೆಳಕಿಗೆ ತಂದಿದ್ದಾಳೆ ಎಂದು ವಿವರಿಸಿತ್ತು.

ಸೇಂಟ್ ಜೋಸೆಫ್ ಕಾಲೇಜು ಇಂತಹ ಕಂದಾಚಾರದ ಪಠ್ಯ ಅಳವಡಿಸಲು ಸಾಧ್ಯವೇ? ಖಂಡಿತ ಇಲ್ಲ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟವಾದ ದಿನವೇ ಕಾಲೇಜಿನ ಪ್ರೊಫೆಸರ್‍ಗಳು ಒಟ್ಟಾಗಿ, ‘ಸಿಟಿಜನ್ ಜರ್ನಲಿಸ್ಟ್ ಹೆಸರಿನಲ್ಲಿ ಯುವತಿಯೊಬ್ಬಳು ಮಾಡಿದ ಕುಚೋದ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇಂಗ್ಲಿಷ್ ವಿಭಾಗದ ಪ್ರೊಫೆಸರ್ ಚೆರಿಯನ್ ಅಲೆಕ್ಸಾಂಡರ್ ಈ ಕುರಿತು ವಿವರಣೆ ನೀಡಿ, ‘ಸಿಟಿಜನ್ ಜರ್ನಲಿಸ್ಟ್-ಕಮ್-ವೆಲ್ಲೂರ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಇಡೀ ಪಠ್ಯದಲ್ಲಿ ಆಯ್ದ ಭಾಗವನ್ನಷ್ಟೇ ಪ್ರಕಟಿಸಿ ಕುಚೋದ್ಯ ಮಾಡಿದ್ದಾಳೆ.

‘ವರದಕ್ಷಿಣೆಯ ಅನುಕೂಲಗಳು’ ಎಂದು ಸಮಾಜದ ಕೆಲವು ಕಂದಾಚಾರಿ ಮನಸ್ಸುಗಳ ಭಾವಿಸಿರುವುದನ್ನು ಆ ಉಪಶೀರ್ಷಿಕೆಯಡಿ ವಿವರಿಸಿದ್ದು, ಇಂತಹ ಕಂದಾಚಾರಗಳ ವಿರುದ್ಧ ಧ್ವನಿ ಎತ್ತುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂಬ ಪಠ್ಯವೂ ಇದ್ದು ಅದನ್ನು ಬೇಕೆಂತಲೇ ಪ್ರಕಟಿಸಿಲ್ಲ. ಇಡೀ ಪಾಠ ವರದಕ್ಷಿಣೆ ಎಂಬ ಪಿಡುಗಿನ ವಿರುದ್ಧವೇ ಇದೆ. ನಮ್ಮ ಸಂಸ್ಥೆ ಎಂದೂ ಕಂದಾಚಾರ, ಮೌಢ್ಯ ಮತ್ತು ಪುರುಷ ಪ್ರಧಾನ ನಿಲುವುಗಳ ವಿರುದ್ಧವಾಗಿಯೇ ಇದೆ ಎಂದು ಸ್ಪಷ್ಟೀಕರಣ ನೀಡಿದ್ದರು. ಮರುದಿನ ಟೈಮ್ಸ್ ಆಫ್ ಇಂಡಿಯಾ ಈ ಸ್ಪಷ್ಟಿಕರಣವನ್ನು ಪ್ರಕಟಿಸಿತ್ತು.

ಈಗ ಅದೇ ಪಠ್ಯದ ಭಾಗ ವೈರಲ್ ಆಗಿದ್ದು, ಗುಜರಾತಿನ ಶಾಲೆಗಳಲ್ಲಿ ಈ ಪಾಠವಿದೆ ಎಂದು ಸುಳ್ಳನ್ನು ತೇಲಿಬಿಡಲಾಗಿದೆ.
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...