Homeಕರ್ನಾಟಕ‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ...

‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ…

- Advertisement -
- Advertisement -

ಮಿಥ್ಯ: ನಿನ್ನೆ (ಸೋಮವಾರ) ಫೇಸ್‍ಬುಕ್‍ನಲ್ಲಿ ಒಂದು ಪಠ್ಯದ ಕಾಗದದ ತುಂಡು ತುಂಬ ಸದ್ದು ಮಾಡುತ್ತಿದ್ದು, ಅದರಲ್ಲಿ ‘ಡೌರಿಯ ಅನುಕೂಲಗಳು’ ಎಂಬ ಉಪಶೀರ್ಷಿಕೆಯಿದೆ. ಅದರಲ್ಲಿ ’ಡೌರಿಯಿಂದ ಕುರೂಪಿ ಹುಡುಗಿಯರ ಮದುವೆ ಸಾಧ್ಯ… ಸುಂದರ ಗಂಡಸರನ್ನು ಮದುವೆಯಾಗಬಹುದು.. ಒಲ್ಲದ ಯುವಕರನ್ನು ಸೆಳೆಯಬಹುದು….’ ಇತ್ಯಾದಿ ಸಾಲುಗಳ ಕೆಳಗಡೆ ಮಾರ್ಕರ್‍ನಿಂದ ಅಂಡರ್‍ಲೈನ್ ಮಾಡಲಾಗಿದೆ. ಗುಜರಾತಿನ ಸರ್ಕಾರಿ ಶಾಲೆಗಳ ಸಮಾಜ ವಿಜ್ಞಾನ ಪುಸ್ತಕದಲ್ಲಿ ಇದು ಇದೆ ಎಂದೂ, ಗುಜರಾತ್ ಸರ್ಕಾರದ ಕಂದಾಚಾರದ ಮೌಲ್ಯಗಳಿಗೆ ಇದು ಸಾಕ್ಷಿ ಎಂದೂ ಟೀಕಿಸಲಾಗಿದೆ. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕೂಡ ಇದನ್ನು ಶೇರ್ ಮಾಡಿದ್ದು, ‘ಗುಜರಾತ್ ಮಾದರಿಯ ಕುರೂಪಿ ಪ್ರದರ್ಶನ’ ಎಂದು ಕಿಡಿಕಾರಿದೆ.

ಸತ್ಯ: ಇದು ಸಾಕಷ್ಟು ವೈರಲ್ ಆಗಿದ್ದು ನಮ್ಮ ಪ್ರಗತಿಪರ ಮಿತ್ರರೂ ಇದನ್ನು ಶೇರ್ ಮಾಡಿ ಗುಜರಾತ್ ಬಿಜೆಪಿ ಸರ್ಕಾರದ ಮೇಲೆ ಹರಿ ಹಾಯ್ದಿದ್ದಾರೆ. ಆದರೆ ಫ್ಯಾಕ್ಟ್ ಚೆಕ್ ಮಾಡಿದಾಗ ಗುಜರಾತ್ ಶಿಕ್ಷಣ ಇಲಾಖೆ ಪ್ರಕಟಿಸಿದ ಯಾವ ಪಠ್ಯಪುಸ್ತಕದಲ್ಲೂ ಈ ಕಾಗದದ ತುಣುಕಿನ ಸಾರಾಂಶ ಇರುವ ಪಾಠವಿಲ್ಲ. ಇದರ ಮೂಲ ಹುಡುಕುತ್ತ ಹೋದರೆ ಅದು ಬೆಂಗಳೂರಿಗೆ ಬಂದು ತಲುಪುತ್ತದೆ.

ಇಲ್ಲಿ ಪ್ರಕಟಿಸಿರುವ ಪಠ್ಯದ ಭಾಗ 2017ರಲ್ಲಿ ಸುದ್ದಿಯಲ್ಲಿತ್ತು. ಬೆಂಗಳೂರಿನ ಶಾಂತಿನಗರದ ಸೇಂಟ್ ಜೋಸೆಫ್ ಕಾಲೇಜಿನ ಸಮಾಜಶಾಸ್ತ್ರ ಪುಸ್ತಕದಲ್ಲಿ ಇದು ಇತ್ತು ಎಂದು ವರದಿಯಾಗಿತ್ತು. ಅಕ್ಟೋಬರ್ 21, 2017ರಂದು ಈ ಕುರಿತು ವರದಿ ಪ್ರಕಟಿಸಿದ್ದ ‘ಟೈಮ್ಸ್ ಆಫ್ ಇಂಡಿಯಾ’, ಈ ಪಾಠದಲ್ಲಿನ ಅಂಶಗಳಿಗಾಗಿ ಕಾಲೇಜಿನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು ಎಂದು ಬರೆದಿತ್ತು.

ಇದಕ್ಕೂ ಮೊದಲು ‘ದಿ ನ್ಯೂಸ್ ಮಿನಿಟ್’ ಪ್ರಕಟಿಸಿದ್ದ ವರದಿಯಲ್ಲಿ, ಸೇಂಟ್ ಜೋಸೆಫ್ ಕಾಲೇಜಿನ ಬಿ.ಎ. ತರಗತಿಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಈ ಪಠ್ಯ ಇದೆ ಎಂಬುದನ್ನು ಯುವತಿಯೊಬ್ಬಳು ಬೆಳಕಿಗೆ ತಂದಿದ್ದಾಳೆ ಎಂದು ವಿವರಿಸಿತ್ತು.

ಸೇಂಟ್ ಜೋಸೆಫ್ ಕಾಲೇಜು ಇಂತಹ ಕಂದಾಚಾರದ ಪಠ್ಯ ಅಳವಡಿಸಲು ಸಾಧ್ಯವೇ? ಖಂಡಿತ ಇಲ್ಲ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟವಾದ ದಿನವೇ ಕಾಲೇಜಿನ ಪ್ರೊಫೆಸರ್‍ಗಳು ಒಟ್ಟಾಗಿ, ‘ಸಿಟಿಜನ್ ಜರ್ನಲಿಸ್ಟ್ ಹೆಸರಿನಲ್ಲಿ ಯುವತಿಯೊಬ್ಬಳು ಮಾಡಿದ ಕುಚೋದ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇಂಗ್ಲಿಷ್ ವಿಭಾಗದ ಪ್ರೊಫೆಸರ್ ಚೆರಿಯನ್ ಅಲೆಕ್ಸಾಂಡರ್ ಈ ಕುರಿತು ವಿವರಣೆ ನೀಡಿ, ‘ಸಿಟಿಜನ್ ಜರ್ನಲಿಸ್ಟ್-ಕಮ್-ವೆಲ್ಲೂರ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಇಡೀ ಪಠ್ಯದಲ್ಲಿ ಆಯ್ದ ಭಾಗವನ್ನಷ್ಟೇ ಪ್ರಕಟಿಸಿ ಕುಚೋದ್ಯ ಮಾಡಿದ್ದಾಳೆ.

‘ವರದಕ್ಷಿಣೆಯ ಅನುಕೂಲಗಳು’ ಎಂದು ಸಮಾಜದ ಕೆಲವು ಕಂದಾಚಾರಿ ಮನಸ್ಸುಗಳ ಭಾವಿಸಿರುವುದನ್ನು ಆ ಉಪಶೀರ್ಷಿಕೆಯಡಿ ವಿವರಿಸಿದ್ದು, ಇಂತಹ ಕಂದಾಚಾರಗಳ ವಿರುದ್ಧ ಧ್ವನಿ ಎತ್ತುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂಬ ಪಠ್ಯವೂ ಇದ್ದು ಅದನ್ನು ಬೇಕೆಂತಲೇ ಪ್ರಕಟಿಸಿಲ್ಲ. ಇಡೀ ಪಾಠ ವರದಕ್ಷಿಣೆ ಎಂಬ ಪಿಡುಗಿನ ವಿರುದ್ಧವೇ ಇದೆ. ನಮ್ಮ ಸಂಸ್ಥೆ ಎಂದೂ ಕಂದಾಚಾರ, ಮೌಢ್ಯ ಮತ್ತು ಪುರುಷ ಪ್ರಧಾನ ನಿಲುವುಗಳ ವಿರುದ್ಧವಾಗಿಯೇ ಇದೆ ಎಂದು ಸ್ಪಷ್ಟೀಕರಣ ನೀಡಿದ್ದರು. ಮರುದಿನ ಟೈಮ್ಸ್ ಆಫ್ ಇಂಡಿಯಾ ಈ ಸ್ಪಷ್ಟಿಕರಣವನ್ನು ಪ್ರಕಟಿಸಿತ್ತು.

ಈಗ ಅದೇ ಪಠ್ಯದ ಭಾಗ ವೈರಲ್ ಆಗಿದ್ದು, ಗುಜರಾತಿನ ಶಾಲೆಗಳಲ್ಲಿ ಈ ಪಾಠವಿದೆ ಎಂದು ಸುಳ್ಳನ್ನು ತೇಲಿಬಿಡಲಾಗಿದೆ.
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...