Homeಕರ್ನಾಟಕ‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ...

‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ…

- Advertisement -
- Advertisement -

ಮಿಥ್ಯ: ನಿನ್ನೆ (ಸೋಮವಾರ) ಫೇಸ್‍ಬುಕ್‍ನಲ್ಲಿ ಒಂದು ಪಠ್ಯದ ಕಾಗದದ ತುಂಡು ತುಂಬ ಸದ್ದು ಮಾಡುತ್ತಿದ್ದು, ಅದರಲ್ಲಿ ‘ಡೌರಿಯ ಅನುಕೂಲಗಳು’ ಎಂಬ ಉಪಶೀರ್ಷಿಕೆಯಿದೆ. ಅದರಲ್ಲಿ ’ಡೌರಿಯಿಂದ ಕುರೂಪಿ ಹುಡುಗಿಯರ ಮದುವೆ ಸಾಧ್ಯ… ಸುಂದರ ಗಂಡಸರನ್ನು ಮದುವೆಯಾಗಬಹುದು.. ಒಲ್ಲದ ಯುವಕರನ್ನು ಸೆಳೆಯಬಹುದು….’ ಇತ್ಯಾದಿ ಸಾಲುಗಳ ಕೆಳಗಡೆ ಮಾರ್ಕರ್‍ನಿಂದ ಅಂಡರ್‍ಲೈನ್ ಮಾಡಲಾಗಿದೆ. ಗುಜರಾತಿನ ಸರ್ಕಾರಿ ಶಾಲೆಗಳ ಸಮಾಜ ವಿಜ್ಞಾನ ಪುಸ್ತಕದಲ್ಲಿ ಇದು ಇದೆ ಎಂದೂ, ಗುಜರಾತ್ ಸರ್ಕಾರದ ಕಂದಾಚಾರದ ಮೌಲ್ಯಗಳಿಗೆ ಇದು ಸಾಕ್ಷಿ ಎಂದೂ ಟೀಕಿಸಲಾಗಿದೆ. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕೂಡ ಇದನ್ನು ಶೇರ್ ಮಾಡಿದ್ದು, ‘ಗುಜರಾತ್ ಮಾದರಿಯ ಕುರೂಪಿ ಪ್ರದರ್ಶನ’ ಎಂದು ಕಿಡಿಕಾರಿದೆ.

ಸತ್ಯ: ಇದು ಸಾಕಷ್ಟು ವೈರಲ್ ಆಗಿದ್ದು ನಮ್ಮ ಪ್ರಗತಿಪರ ಮಿತ್ರರೂ ಇದನ್ನು ಶೇರ್ ಮಾಡಿ ಗುಜರಾತ್ ಬಿಜೆಪಿ ಸರ್ಕಾರದ ಮೇಲೆ ಹರಿ ಹಾಯ್ದಿದ್ದಾರೆ. ಆದರೆ ಫ್ಯಾಕ್ಟ್ ಚೆಕ್ ಮಾಡಿದಾಗ ಗುಜರಾತ್ ಶಿಕ್ಷಣ ಇಲಾಖೆ ಪ್ರಕಟಿಸಿದ ಯಾವ ಪಠ್ಯಪುಸ್ತಕದಲ್ಲೂ ಈ ಕಾಗದದ ತುಣುಕಿನ ಸಾರಾಂಶ ಇರುವ ಪಾಠವಿಲ್ಲ. ಇದರ ಮೂಲ ಹುಡುಕುತ್ತ ಹೋದರೆ ಅದು ಬೆಂಗಳೂರಿಗೆ ಬಂದು ತಲುಪುತ್ತದೆ.

ಇಲ್ಲಿ ಪ್ರಕಟಿಸಿರುವ ಪಠ್ಯದ ಭಾಗ 2017ರಲ್ಲಿ ಸುದ್ದಿಯಲ್ಲಿತ್ತು. ಬೆಂಗಳೂರಿನ ಶಾಂತಿನಗರದ ಸೇಂಟ್ ಜೋಸೆಫ್ ಕಾಲೇಜಿನ ಸಮಾಜಶಾಸ್ತ್ರ ಪುಸ್ತಕದಲ್ಲಿ ಇದು ಇತ್ತು ಎಂದು ವರದಿಯಾಗಿತ್ತು. ಅಕ್ಟೋಬರ್ 21, 2017ರಂದು ಈ ಕುರಿತು ವರದಿ ಪ್ರಕಟಿಸಿದ್ದ ‘ಟೈಮ್ಸ್ ಆಫ್ ಇಂಡಿಯಾ’, ಈ ಪಾಠದಲ್ಲಿನ ಅಂಶಗಳಿಗಾಗಿ ಕಾಲೇಜಿನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು ಎಂದು ಬರೆದಿತ್ತು.

ಇದಕ್ಕೂ ಮೊದಲು ‘ದಿ ನ್ಯೂಸ್ ಮಿನಿಟ್’ ಪ್ರಕಟಿಸಿದ್ದ ವರದಿಯಲ್ಲಿ, ಸೇಂಟ್ ಜೋಸೆಫ್ ಕಾಲೇಜಿನ ಬಿ.ಎ. ತರಗತಿಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಈ ಪಠ್ಯ ಇದೆ ಎಂಬುದನ್ನು ಯುವತಿಯೊಬ್ಬಳು ಬೆಳಕಿಗೆ ತಂದಿದ್ದಾಳೆ ಎಂದು ವಿವರಿಸಿತ್ತು.

ಸೇಂಟ್ ಜೋಸೆಫ್ ಕಾಲೇಜು ಇಂತಹ ಕಂದಾಚಾರದ ಪಠ್ಯ ಅಳವಡಿಸಲು ಸಾಧ್ಯವೇ? ಖಂಡಿತ ಇಲ್ಲ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟವಾದ ದಿನವೇ ಕಾಲೇಜಿನ ಪ್ರೊಫೆಸರ್‍ಗಳು ಒಟ್ಟಾಗಿ, ‘ಸಿಟಿಜನ್ ಜರ್ನಲಿಸ್ಟ್ ಹೆಸರಿನಲ್ಲಿ ಯುವತಿಯೊಬ್ಬಳು ಮಾಡಿದ ಕುಚೋದ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇಂಗ್ಲಿಷ್ ವಿಭಾಗದ ಪ್ರೊಫೆಸರ್ ಚೆರಿಯನ್ ಅಲೆಕ್ಸಾಂಡರ್ ಈ ಕುರಿತು ವಿವರಣೆ ನೀಡಿ, ‘ಸಿಟಿಜನ್ ಜರ್ನಲಿಸ್ಟ್-ಕಮ್-ವೆಲ್ಲೂರ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಇಡೀ ಪಠ್ಯದಲ್ಲಿ ಆಯ್ದ ಭಾಗವನ್ನಷ್ಟೇ ಪ್ರಕಟಿಸಿ ಕುಚೋದ್ಯ ಮಾಡಿದ್ದಾಳೆ.

‘ವರದಕ್ಷಿಣೆಯ ಅನುಕೂಲಗಳು’ ಎಂದು ಸಮಾಜದ ಕೆಲವು ಕಂದಾಚಾರಿ ಮನಸ್ಸುಗಳ ಭಾವಿಸಿರುವುದನ್ನು ಆ ಉಪಶೀರ್ಷಿಕೆಯಡಿ ವಿವರಿಸಿದ್ದು, ಇಂತಹ ಕಂದಾಚಾರಗಳ ವಿರುದ್ಧ ಧ್ವನಿ ಎತ್ತುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂಬ ಪಠ್ಯವೂ ಇದ್ದು ಅದನ್ನು ಬೇಕೆಂತಲೇ ಪ್ರಕಟಿಸಿಲ್ಲ. ಇಡೀ ಪಾಠ ವರದಕ್ಷಿಣೆ ಎಂಬ ಪಿಡುಗಿನ ವಿರುದ್ಧವೇ ಇದೆ. ನಮ್ಮ ಸಂಸ್ಥೆ ಎಂದೂ ಕಂದಾಚಾರ, ಮೌಢ್ಯ ಮತ್ತು ಪುರುಷ ಪ್ರಧಾನ ನಿಲುವುಗಳ ವಿರುದ್ಧವಾಗಿಯೇ ಇದೆ ಎಂದು ಸ್ಪಷ್ಟೀಕರಣ ನೀಡಿದ್ದರು. ಮರುದಿನ ಟೈಮ್ಸ್ ಆಫ್ ಇಂಡಿಯಾ ಈ ಸ್ಪಷ್ಟಿಕರಣವನ್ನು ಪ್ರಕಟಿಸಿತ್ತು.

ಈಗ ಅದೇ ಪಠ್ಯದ ಭಾಗ ವೈರಲ್ ಆಗಿದ್ದು, ಗುಜರಾತಿನ ಶಾಲೆಗಳಲ್ಲಿ ಈ ಪಾಠವಿದೆ ಎಂದು ಸುಳ್ಳನ್ನು ತೇಲಿಬಿಡಲಾಗಿದೆ.
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...