Homeಕರ್ನಾಟಕ‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ...

‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ…

- Advertisement -
- Advertisement -

ಮಿಥ್ಯ: ನಿನ್ನೆ (ಸೋಮವಾರ) ಫೇಸ್‍ಬುಕ್‍ನಲ್ಲಿ ಒಂದು ಪಠ್ಯದ ಕಾಗದದ ತುಂಡು ತುಂಬ ಸದ್ದು ಮಾಡುತ್ತಿದ್ದು, ಅದರಲ್ಲಿ ‘ಡೌರಿಯ ಅನುಕೂಲಗಳು’ ಎಂಬ ಉಪಶೀರ್ಷಿಕೆಯಿದೆ. ಅದರಲ್ಲಿ ’ಡೌರಿಯಿಂದ ಕುರೂಪಿ ಹುಡುಗಿಯರ ಮದುವೆ ಸಾಧ್ಯ… ಸುಂದರ ಗಂಡಸರನ್ನು ಮದುವೆಯಾಗಬಹುದು.. ಒಲ್ಲದ ಯುವಕರನ್ನು ಸೆಳೆಯಬಹುದು….’ ಇತ್ಯಾದಿ ಸಾಲುಗಳ ಕೆಳಗಡೆ ಮಾರ್ಕರ್‍ನಿಂದ ಅಂಡರ್‍ಲೈನ್ ಮಾಡಲಾಗಿದೆ. ಗುಜರಾತಿನ ಸರ್ಕಾರಿ ಶಾಲೆಗಳ ಸಮಾಜ ವಿಜ್ಞಾನ ಪುಸ್ತಕದಲ್ಲಿ ಇದು ಇದೆ ಎಂದೂ, ಗುಜರಾತ್ ಸರ್ಕಾರದ ಕಂದಾಚಾರದ ಮೌಲ್ಯಗಳಿಗೆ ಇದು ಸಾಕ್ಷಿ ಎಂದೂ ಟೀಕಿಸಲಾಗಿದೆ. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕೂಡ ಇದನ್ನು ಶೇರ್ ಮಾಡಿದ್ದು, ‘ಗುಜರಾತ್ ಮಾದರಿಯ ಕುರೂಪಿ ಪ್ರದರ್ಶನ’ ಎಂದು ಕಿಡಿಕಾರಿದೆ.

ಸತ್ಯ: ಇದು ಸಾಕಷ್ಟು ವೈರಲ್ ಆಗಿದ್ದು ನಮ್ಮ ಪ್ರಗತಿಪರ ಮಿತ್ರರೂ ಇದನ್ನು ಶೇರ್ ಮಾಡಿ ಗುಜರಾತ್ ಬಿಜೆಪಿ ಸರ್ಕಾರದ ಮೇಲೆ ಹರಿ ಹಾಯ್ದಿದ್ದಾರೆ. ಆದರೆ ಫ್ಯಾಕ್ಟ್ ಚೆಕ್ ಮಾಡಿದಾಗ ಗುಜರಾತ್ ಶಿಕ್ಷಣ ಇಲಾಖೆ ಪ್ರಕಟಿಸಿದ ಯಾವ ಪಠ್ಯಪುಸ್ತಕದಲ್ಲೂ ಈ ಕಾಗದದ ತುಣುಕಿನ ಸಾರಾಂಶ ಇರುವ ಪಾಠವಿಲ್ಲ. ಇದರ ಮೂಲ ಹುಡುಕುತ್ತ ಹೋದರೆ ಅದು ಬೆಂಗಳೂರಿಗೆ ಬಂದು ತಲುಪುತ್ತದೆ.

ಇಲ್ಲಿ ಪ್ರಕಟಿಸಿರುವ ಪಠ್ಯದ ಭಾಗ 2017ರಲ್ಲಿ ಸುದ್ದಿಯಲ್ಲಿತ್ತು. ಬೆಂಗಳೂರಿನ ಶಾಂತಿನಗರದ ಸೇಂಟ್ ಜೋಸೆಫ್ ಕಾಲೇಜಿನ ಸಮಾಜಶಾಸ್ತ್ರ ಪುಸ್ತಕದಲ್ಲಿ ಇದು ಇತ್ತು ಎಂದು ವರದಿಯಾಗಿತ್ತು. ಅಕ್ಟೋಬರ್ 21, 2017ರಂದು ಈ ಕುರಿತು ವರದಿ ಪ್ರಕಟಿಸಿದ್ದ ‘ಟೈಮ್ಸ್ ಆಫ್ ಇಂಡಿಯಾ’, ಈ ಪಾಠದಲ್ಲಿನ ಅಂಶಗಳಿಗಾಗಿ ಕಾಲೇಜಿನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು ಎಂದು ಬರೆದಿತ್ತು.

ಇದಕ್ಕೂ ಮೊದಲು ‘ದಿ ನ್ಯೂಸ್ ಮಿನಿಟ್’ ಪ್ರಕಟಿಸಿದ್ದ ವರದಿಯಲ್ಲಿ, ಸೇಂಟ್ ಜೋಸೆಫ್ ಕಾಲೇಜಿನ ಬಿ.ಎ. ತರಗತಿಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಈ ಪಠ್ಯ ಇದೆ ಎಂಬುದನ್ನು ಯುವತಿಯೊಬ್ಬಳು ಬೆಳಕಿಗೆ ತಂದಿದ್ದಾಳೆ ಎಂದು ವಿವರಿಸಿತ್ತು.

ಸೇಂಟ್ ಜೋಸೆಫ್ ಕಾಲೇಜು ಇಂತಹ ಕಂದಾಚಾರದ ಪಠ್ಯ ಅಳವಡಿಸಲು ಸಾಧ್ಯವೇ? ಖಂಡಿತ ಇಲ್ಲ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟವಾದ ದಿನವೇ ಕಾಲೇಜಿನ ಪ್ರೊಫೆಸರ್‍ಗಳು ಒಟ್ಟಾಗಿ, ‘ಸಿಟಿಜನ್ ಜರ್ನಲಿಸ್ಟ್ ಹೆಸರಿನಲ್ಲಿ ಯುವತಿಯೊಬ್ಬಳು ಮಾಡಿದ ಕುಚೋದ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇಂಗ್ಲಿಷ್ ವಿಭಾಗದ ಪ್ರೊಫೆಸರ್ ಚೆರಿಯನ್ ಅಲೆಕ್ಸಾಂಡರ್ ಈ ಕುರಿತು ವಿವರಣೆ ನೀಡಿ, ‘ಸಿಟಿಜನ್ ಜರ್ನಲಿಸ್ಟ್-ಕಮ್-ವೆಲ್ಲೂರ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಇಡೀ ಪಠ್ಯದಲ್ಲಿ ಆಯ್ದ ಭಾಗವನ್ನಷ್ಟೇ ಪ್ರಕಟಿಸಿ ಕುಚೋದ್ಯ ಮಾಡಿದ್ದಾಳೆ.

‘ವರದಕ್ಷಿಣೆಯ ಅನುಕೂಲಗಳು’ ಎಂದು ಸಮಾಜದ ಕೆಲವು ಕಂದಾಚಾರಿ ಮನಸ್ಸುಗಳ ಭಾವಿಸಿರುವುದನ್ನು ಆ ಉಪಶೀರ್ಷಿಕೆಯಡಿ ವಿವರಿಸಿದ್ದು, ಇಂತಹ ಕಂದಾಚಾರಗಳ ವಿರುದ್ಧ ಧ್ವನಿ ಎತ್ತುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂಬ ಪಠ್ಯವೂ ಇದ್ದು ಅದನ್ನು ಬೇಕೆಂತಲೇ ಪ್ರಕಟಿಸಿಲ್ಲ. ಇಡೀ ಪಾಠ ವರದಕ್ಷಿಣೆ ಎಂಬ ಪಿಡುಗಿನ ವಿರುದ್ಧವೇ ಇದೆ. ನಮ್ಮ ಸಂಸ್ಥೆ ಎಂದೂ ಕಂದಾಚಾರ, ಮೌಢ್ಯ ಮತ್ತು ಪುರುಷ ಪ್ರಧಾನ ನಿಲುವುಗಳ ವಿರುದ್ಧವಾಗಿಯೇ ಇದೆ ಎಂದು ಸ್ಪಷ್ಟೀಕರಣ ನೀಡಿದ್ದರು. ಮರುದಿನ ಟೈಮ್ಸ್ ಆಫ್ ಇಂಡಿಯಾ ಈ ಸ್ಪಷ್ಟಿಕರಣವನ್ನು ಪ್ರಕಟಿಸಿತ್ತು.

ಈಗ ಅದೇ ಪಠ್ಯದ ಭಾಗ ವೈರಲ್ ಆಗಿದ್ದು, ಗುಜರಾತಿನ ಶಾಲೆಗಳಲ್ಲಿ ಈ ಪಾಠವಿದೆ ಎಂದು ಸುಳ್ಳನ್ನು ತೇಲಿಬಿಡಲಾಗಿದೆ.
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...