Homeಫ್ಯಾಕ್ಟ್‌ಚೆಕ್ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

- Advertisement -
- Advertisement -

ಗುರುವಾರ (ಮೇ.8) ರಾತ್ರಿ ಭಾರತದ ಹಲವು ಪ್ರದೇಶಗಳ ಮೇಲೆ ವಿವಿಧ ರೀತಿಯಲ್ಲಿ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನಿಸಿತ್ತು. ಅದನ್ನು ಭಾರತ ಯಶಸ್ವಿಯಾಗಿ ತಡೆದಿದೆ ಎಂದು ವರದಿಯಾಗಿದೆ.

ದೇಶದ ಬಹುತೇಕ ದೃಶ್ಯ ಮಾಧ್ಯಮಗಳು ಗುರುವಾರ ರಾತ್ರಿ ಪಾಕಿಸ್ತಾನ ದಾಳಿ ನಡೆಸಿದೆ ಎಂಬ ಸುದ್ದಿಯನ್ನು ನೇರ ಪ್ರಸಾರ ರೀತಿಯಲ್ಲಿ ಪ್ರಕಟಿಸಿತ್ತು. ಇದೇ ವೇಳೆ ಸಾಮಾಜಿಕ ಮಾಧ್ಯಮಗಳಲ್ಲೂ ಭಾರತ-ಪಾಕಿಸ್ತಾನ ಪರಸ್ಪರ ದಾಳಿ ಮಾಡಿಕೊಂಡಿವೆ ಎಂಬ ಹಲವು ಸುದ್ದಿ ಮತ್ತು ವಿಡಿಯೋಗಳು ಹರಿದಾಡಿತ್ತು. ಅಂತಹ ವಿಡಿಯೋಗಳನ್ನು ದೇಶದ ಮುಖ್ಯವಾಹಿನಿ ಮಾಧ್ಯಮಗಳೂ ಪ್ರಸಾರ ಮಾಡಿತ್ತು.

ವೈರಲ್ ವಿಡಿಯೋಗಳ ಪೈಕಿ 37 ಸೆಕೆಂಡ್‌ ವಿಡಿಯೋವೊಂದನ್ನು ಹೆಚ್ಚಿನ ಜನರು ಹಂಚಿಕೊಂಡಿದ್ದರು. ಅದರಲ್ಲಿ, ಯಾವುದೋ ಸ್ಪೋಟ ಸಂಭವಿಸಿದ ಬಳಿಕದ ಚಿತ್ರಣ ಇತ್ತು. ಸುತ್ತಲು ಕಾರುಗಳು ನಿಂತಿರುವುದು, ಬೆಂಕಿ ಹೊತ್ತಿ ಉರಿಯುತ್ತಿರುವುದು ಮತ್ತು ಒಬ್ಬರು ವ್ಯಕ್ತಿ ಹಿಂದಿ/ಉರ್ದು ಭಾಷೆಯಲ್ಲಿ “ನಿಮ್ಮ ಮಕ್ಕಳು ಮತ್ತು ವೃದ್ಧರನ್ನು ಕರೆದುಕೊಂಡು ಹೋಗಿ, ನಿಮ್ಮ ಮನೆಗೆ ಬೀಗ ಹಾಕಿ ಮತ್ತು ಮುಂದಿನ ರಸ್ತೆಯ ಕಡೆಗೆ ಹೋಗಿ…”ಇತ್ಯಾದಿ ಹೇಳುವುದು ಆ ವಿಡಿಯೋದಲ್ಲಿ ಇತ್ತು.

ಬಂಗಾಳಿ ಸುದ್ದಿ ವಾಹಿನಿ ಎಬಿಪಿ ಆನಂದ ತನ್ನ ನೇರ ಪ್ರಸಾರದ ಸಮಯದಲ್ಲಿ ಮೇಲೆ ತಿಳಿಸಿದ ವಿಡಿಯೋವನ್ನು ಪ್ಲೇ ಮಾಡಿತ್ತು. ವಾಹಿನಿಯ ನಿರೂಪಕರಲ್ಲಿ ಒಬ್ಬರು “ಇದೀಗ ನೀವು ಕರಾಚಿಯ ದೃಶ್ಯಗಳನ್ನು ನೋಡುತ್ತಿದ್ದೀರಿ, ಅಲ್ಲಿ ಎಲ್ಲವೂ ನಾಶವಾಗಿದೆ” ಎಂದಿದ್ದರು. ಮತ್ತೊಬ್ಬ ನಿರೂಪಕ “ಇದು ಐಎನ್ಎಸ್ ವಿಕ್ರಾಂತ್ ನಡೆಸಿದ ದಾಳಿ ದೃಶ್ಯವಾಗಿದೆ” ಎಂದಿದ್ದರು.

ಎಬಿಪಿ ಆನಂದ ಈಗ ನೇರ ಪ್ರಸಾರ ವಿಡಿಯೋವನ್ನು ಡಿಲಿಟ್ ಮಾಡಿದೆ. ಅದರೆ, ಅದರ ಸಂಗ್ರಹ ತುಣುಕು ಮತ್ತು ಆರ್ಕೈವ್ ಲಿಂಕ್ ಕೆಳಗಿದೆ. ವಿಡಿಯೋದಲ್ಲಿ 5 ನಿಮಿಷ 8 ಸೆಕೆಂಡ್‌ ಅವಧಿಯಲ್ಲಿ ನಾವು ಮೇಲ್ಗಡೆ ವಿವರಿಸಿದ ದೃಶ್ಯವಿದೆ.

ಆರ್ಕೈವ್ ಲಿಂಕ್

VC : youtube.com/@abpanandatv Via altnews.in

ಎಬಿಪಿ ಆನಂದ ತನ್ನ ವೆಬ್‌ಸೈಟ್‌ನಲ್ಲಿ ‘ಆಪರೇಷನ್ ಸಿಂಧೂರ್’ ಎಂಬ ಹೆಸರಿನಲ್ಲಿ ಲೈವ್ ಅಪ್ಡೇಟ್ ನೀಡಲು ಮತ್ತು ಭಾರತ-ಪಾಕಿಸ್ತಾನ ಉದ್ವಿಗ್ನತೆ ಕುರಿತು ವರದಿ ಪ್ರಕಟಿಸಲೂ ಅದೇ ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಇಮೇಜ್ ಬಳಸಿಕೊಂಡಿತ್ತು. ಅದರ ಆರ್ಕೈವ್ ಲಿಂಕ್ ಇಲ್ಲಿ, ಇಲ್ಲಿ ನೋಡಬಹುದು.

ಎರಡೂ ಪುಟಗಳ ಸ್ಕ್ರೀನ್ ಶಾಟ್‌ಗಳು ಕೆಳಗಿವೆ

ವೈರಲ್ ಕ್ಲಿಪ್‌ನ ಸ್ಕ್ರೀನ್‌ಶಾಟ್ ಅನ್ನು ಎಬಿಪಿ ಆನಂದ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ “ಬಿಗ್ ಬ್ರೇಕಿಂಗ್: ಐಎನ್‌ಎಸ್ ವಿಕ್ರಾಂತ್‌ನ ಪ್ರಮುಖ ಕಾರ್ಯಾಚರಣೆ, ಬೃಹತ್ ಸ್ಫೋಟ, ಕರಾಚಿ ಧ್ವಂಸ, ಭಾರತದಿಂದ ಸತತ ದಾಳಿಗಳು” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿತ್ತು. ನಂತರ ಪೋಸ್ಟ್ ಎಡಿಟ್ ಮಾಡಿ ವೈರಲ್ ಕ್ಲಿಪ್‌ನ ಸ್ಕ್ರೀನ್‌ಶಾಟ್ ಜಾಗಕ್ಕೆ ಪಾಕಿಸ್ತಾನದ ರಾಷ್ಟ್ರ ಧ್ವಜದ ಚಿತ್ರವನ್ನು ಬದಲಿಸಿದೆ (ಆರ್ಕೈವ್)

Credit: altnews.in

ಅದೇ ವೈರಲ್ ವಿಡಿಯೋವನ್ನು ಹಲವಾರು ಎಕ್ಸ್‌ ಹ್ಯಾಂಡಲ್‌ಗಳು ಹಂಚಿಕೊಂಡಿತ್ತು.

ಎಕ್ಸ್‌ ಬಳಕೆದಾರರಾದ ನೈನಾ ಯಾದವ್ (@NAINAYADAV_06) (ತಮ್ಮ ಎಕ್ಸ್‌ ಬಯೋದಲ್ಲಿ ಪತ್ರಕರ್ತೆ ಎಂದು ಹೇಳಿಕೊಂಡಿದ್ದಾರೆ) ಅವರು ಮೇ 8 ರಂದು ವೈರಲ್ ಕ್ಲಿಪ್ ಅನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ “ಲಾಹೋರ್‌ನ ಜಿನ್ನಾ ಮಾರುಕಟ್ಟೆ ರಸ್ತೆ ಸಂಪೂರ್ಣವಾಗಿ ನಾಶವಾಯಿತು” #IndiaPakistanWar ಎಂದು ಬರೆದುಕೊಂಡಿದ್ದರು. (ಆರ್ಕೈವ್)

 

 

 

 

 

 

 

 

 

 

 

 

 

 

@IndiaTales7, @JaipurDialogues, @mkr4411, @wokeflix_, @iSinghApurva, @SonOfBharat7, @KreatelyMedia, @madhur_panktiya ಮುಂತಾದ ಎಕ್ಸ್‌ ಬಳೆದಾರರು ವೈರಲ್ ಕ್ಲಿಪ್ ಅನ್ನು ಹಂಚಿಕೊಂಡಿದ್ದರು. ಅವುಗಳು ಕೆಲವು ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿವೆ.

ನಾವು ಇಲ್ಲಿ ಉಲ್ಲೇಖಿಸಿದ ಬಹುತೇಕ ಎಕ್ಸ್ ಬಳಕೆದಾರರು ಈ ಹಿಂದೆ ಹಲವು ಸುಳ್ಳು ಸುದ್ದಿಗಳನ್ನು ಹಂಚಿಕೊಂಡವರಾಗಿದ್ದಾರೆ.

ಫ್ಯಾಕ್ಟ್‌ಚೆಕ್ 

ವೈರಲ್ ಕ್ಲಿಪ್‌ನ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್‌ ಶಾಟ್‌ ಬಳಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದೇವೆ ಮತ್ತು ವಿವಿಧ ಕೀ ವರ್ಡ್‌ಗಳನ್ನು ಬಳಸಿ ವಿಡಿಯೋ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಸಾಮಾಜಿಕ ಜಾಲತಾಣ ಥ್ರೆಡ್‌ನಲ್ಲಿ ವೈರಲ್ ಕ್ಲಿಪ್‌ಗೆ ಹೋಲಿಕೆಯಾಗುವ ಫೋಟೋವೊಂದು ನಮಗೆ ದೊರೆತಿದೆ.

ಫೆಬ್ರವರಿ 1, 2025ರಂದು joe.kendra ಎಂಬವರು ಫೋಟೋ ಪೋಸ್ಟ್ ಮಾಡಿದ್ದು, “ಮತ್ತೊಂದು ಅಪಘಾತ ಅಮೆರಿಕದ ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದ ಜನನಿಬಿಡ ಪ್ರದೇಶದಲ್ಲಿ ವೈದ್ಯಕೀಯ ಸಾರಿಗೆ ಲಿಯರ್‌ಜೆಟ್ ಅವಳಿ ಎಂಜಿನ್ ಜೆಟ್ ವಿಮಾನ ಅಪಘಾತಕ್ಕೀಡಾಗಿದೆ ಎಂದು ವರದಿಗಳು ಹೇಳಿವೆ. ಈ ಪ್ರದೇಶದಲ್ಲಿ ಮೂರು ಕಟ್ಟಡಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ” ಎಂದು ಬರೆದುಕೊಂಡಿದ್ದರು.

 

 

 

 

 

 

 

 

 

ಈ ಪೋಸ್ಟ್‌ನ ಸುಳಿವು ಹಿಡಿದುಕೊಂಡ ನಾವು ಕೀ ವರ್ಡ್‌ ಬಳಸಿ ವಿಡಿಯೋಗಾಗಿ ಹುಡುಕಾಟ ನಡೆಸಿದ್ದೇವೆ. ಈ ವೇಳೆ ಫೆಬ್ರವರಿ 1, 2025ರಂದು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋವೊಂದು ನಮಗೆ ಲಭ್ಯವಾಗಿದೆ. Hakan Tuluhan ಎಂಬ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ 1 ನಿಮಿಷ 4 ಸೆಕೆಂಡ್‌ನ ವಿಡಿಯೋದಲ್ಲಿ, 25 ಸೆಕಂಡ್‌ನಿಂದ ಎಬಿಪಿ ಆನಂದ ಸುದ್ದಿ ವಾಹಿನಿ ಮತ್ತು ಇತರ ಎಕ್ಸ್ ಬಳಕೆದಾರರು ಹಂಚಿಕೊಂಡಿರುವ ವಿಡಿಯೋ ತುಣುಕನ್ನು ನೋಡಬಹುದು.

ವಿಡಿಯೋದ ಡಿಸ್ಕ್ರಿಪ್ಶನ್‌ನಲ್ಲಿ “ಇದು ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದಲ್ಲಿ ಸಂಭವಿಸಿದ ವಿಮಾನ ಅಪಘಾತದ್ದು” ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ವಿಡಿಯೋದಲ್ಲಿ ಅದನ್ನು ರೆಕಾರ್ಡ್ ಮಾಡಿದ ವ್ಯಕ್ತಿಯು ಡಂಕಿನ್ ಡೋನಟ್ಸ್ ಔಟ್‌ಲೆಟ್‌ಗೆ ಪ್ರವೇಶಿಸುತ್ತಿರುವಂತೆ ಕಾಣುತ್ತಿದೆ. ದೃಶ್ಯಗಳು ಸ್ವಲ್ಪ ಅಸ್ಪಷ್ಟವಾಗಿದ್ದರೂ, ಡಂಕಿನ್ ಡೋನಟ್ಸ್ ಸೈನ್‌ಬೋರ್ಡ್ ಸ್ಪಷ್ಟವಾಗಿ ಗೋಚರಿಸುತ್ತದೆ. ಔಟ್‌ಲೆಟ್ ಇರುವಿಕೆ ಮತ್ತು ಸೈನ್‌ನೇಜ್‌ನ ಆಕಾರ ಮತ್ತು ಬಣ್ಣವನ್ನು ಆಧರಿಸಿ, ಅದನ್ನು ಗುರುತಿಸಬಹುದು.

Credi: altnews.in

ಔಟ್‌ಲೆಟ್‌ ಇರುವಿಕೆಯನ್ನು ಗೂಗಲ್ ಮ್ಯಾಪ್‌ ಮೂಲಕ ನೋಡಬಹುದು..ಲಿಂಕ್ ಇಲ್ಲಿದೆ 

Credit : altnews.in

ಆದ್ದರಿಂದ, ಐಎನ್ಎಸ್ ವಿಕ್ರಾಂತ್‌ನ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಪಾಕಿಸ್ತಾನದಲ್ಲಿ ನಾಶ ಸಂಭವಿಸಿದೆ ಎಂದು ಎಬಿಪಿ ಆನಂದ ಮತ್ತು ಎಕ್ಸ್ ಬಳಕೆದಾರರು ಹಂಚಿಕೊಂಡಿದ್ದ ವೈರಲ್ ಕ್ಲಿಪ್ ವಾಸ್ತವವಾಗಿ ಮೂರು ತಿಂಗಳ ಹಳೆಯದು ಮತ್ತು ಫಿಲಡೆಲ್ಫಿಯಾದ್ದಾಗಿದೆ.

ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...