Homeಫ್ಯಾಕ್ಟ್‌ಚೆಕ್ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

- Advertisement -
- Advertisement -

ಗುರುವಾರ (ಮೇ.8) ರಾತ್ರಿ ಭಾರತದ ಹಲವು ಪ್ರದೇಶಗಳ ಮೇಲೆ ವಿವಿಧ ರೀತಿಯಲ್ಲಿ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನಿಸಿತ್ತು. ಅದನ್ನು ಭಾರತ ಯಶಸ್ವಿಯಾಗಿ ತಡೆದಿದೆ ಎಂದು ವರದಿಯಾಗಿದೆ.

ದೇಶದ ಬಹುತೇಕ ದೃಶ್ಯ ಮಾಧ್ಯಮಗಳು ಗುರುವಾರ ರಾತ್ರಿ ಪಾಕಿಸ್ತಾನ ದಾಳಿ ನಡೆಸಿದೆ ಎಂಬ ಸುದ್ದಿಯನ್ನು ನೇರ ಪ್ರಸಾರ ರೀತಿಯಲ್ಲಿ ಪ್ರಕಟಿಸಿತ್ತು. ಇದೇ ವೇಳೆ ಸಾಮಾಜಿಕ ಮಾಧ್ಯಮಗಳಲ್ಲೂ ಭಾರತ-ಪಾಕಿಸ್ತಾನ ಪರಸ್ಪರ ದಾಳಿ ಮಾಡಿಕೊಂಡಿವೆ ಎಂಬ ಹಲವು ಸುದ್ದಿ ಮತ್ತು ವಿಡಿಯೋಗಳು ಹರಿದಾಡಿತ್ತು. ಅಂತಹ ವಿಡಿಯೋಗಳನ್ನು ದೇಶದ ಮುಖ್ಯವಾಹಿನಿ ಮಾಧ್ಯಮಗಳೂ ಪ್ರಸಾರ ಮಾಡಿತ್ತು.

ವೈರಲ್ ವಿಡಿಯೋಗಳ ಪೈಕಿ 37 ಸೆಕೆಂಡ್‌ ವಿಡಿಯೋವೊಂದನ್ನು ಹೆಚ್ಚಿನ ಜನರು ಹಂಚಿಕೊಂಡಿದ್ದರು. ಅದರಲ್ಲಿ, ಯಾವುದೋ ಸ್ಪೋಟ ಸಂಭವಿಸಿದ ಬಳಿಕದ ಚಿತ್ರಣ ಇತ್ತು. ಸುತ್ತಲು ಕಾರುಗಳು ನಿಂತಿರುವುದು, ಬೆಂಕಿ ಹೊತ್ತಿ ಉರಿಯುತ್ತಿರುವುದು ಮತ್ತು ಒಬ್ಬರು ವ್ಯಕ್ತಿ ಹಿಂದಿ/ಉರ್ದು ಭಾಷೆಯಲ್ಲಿ “ನಿಮ್ಮ ಮಕ್ಕಳು ಮತ್ತು ವೃದ್ಧರನ್ನು ಕರೆದುಕೊಂಡು ಹೋಗಿ, ನಿಮ್ಮ ಮನೆಗೆ ಬೀಗ ಹಾಕಿ ಮತ್ತು ಮುಂದಿನ ರಸ್ತೆಯ ಕಡೆಗೆ ಹೋಗಿ…”ಇತ್ಯಾದಿ ಹೇಳುವುದು ಆ ವಿಡಿಯೋದಲ್ಲಿ ಇತ್ತು.

ಬಂಗಾಳಿ ಸುದ್ದಿ ವಾಹಿನಿ ಎಬಿಪಿ ಆನಂದ ತನ್ನ ನೇರ ಪ್ರಸಾರದ ಸಮಯದಲ್ಲಿ ಮೇಲೆ ತಿಳಿಸಿದ ವಿಡಿಯೋವನ್ನು ಪ್ಲೇ ಮಾಡಿತ್ತು. ವಾಹಿನಿಯ ನಿರೂಪಕರಲ್ಲಿ ಒಬ್ಬರು “ಇದೀಗ ನೀವು ಕರಾಚಿಯ ದೃಶ್ಯಗಳನ್ನು ನೋಡುತ್ತಿದ್ದೀರಿ, ಅಲ್ಲಿ ಎಲ್ಲವೂ ನಾಶವಾಗಿದೆ” ಎಂದಿದ್ದರು. ಮತ್ತೊಬ್ಬ ನಿರೂಪಕ “ಇದು ಐಎನ್ಎಸ್ ವಿಕ್ರಾಂತ್ ನಡೆಸಿದ ದಾಳಿ ದೃಶ್ಯವಾಗಿದೆ” ಎಂದಿದ್ದರು.

ಎಬಿಪಿ ಆನಂದ ಈಗ ನೇರ ಪ್ರಸಾರ ವಿಡಿಯೋವನ್ನು ಡಿಲಿಟ್ ಮಾಡಿದೆ. ಅದರೆ, ಅದರ ಸಂಗ್ರಹ ತುಣುಕು ಮತ್ತು ಆರ್ಕೈವ್ ಲಿಂಕ್ ಕೆಳಗಿದೆ. ವಿಡಿಯೋದಲ್ಲಿ 5 ನಿಮಿಷ 8 ಸೆಕೆಂಡ್‌ ಅವಧಿಯಲ್ಲಿ ನಾವು ಮೇಲ್ಗಡೆ ವಿವರಿಸಿದ ದೃಶ್ಯವಿದೆ.

ಆರ್ಕೈವ್ ಲಿಂಕ್

VC : youtube.com/@abpanandatv Via altnews.in

ಎಬಿಪಿ ಆನಂದ ತನ್ನ ವೆಬ್‌ಸೈಟ್‌ನಲ್ಲಿ ‘ಆಪರೇಷನ್ ಸಿಂಧೂರ್’ ಎಂಬ ಹೆಸರಿನಲ್ಲಿ ಲೈವ್ ಅಪ್ಡೇಟ್ ನೀಡಲು ಮತ್ತು ಭಾರತ-ಪಾಕಿಸ್ತಾನ ಉದ್ವಿಗ್ನತೆ ಕುರಿತು ವರದಿ ಪ್ರಕಟಿಸಲೂ ಅದೇ ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಇಮೇಜ್ ಬಳಸಿಕೊಂಡಿತ್ತು. ಅದರ ಆರ್ಕೈವ್ ಲಿಂಕ್ ಇಲ್ಲಿ, ಇಲ್ಲಿ ನೋಡಬಹುದು.

ಎರಡೂ ಪುಟಗಳ ಸ್ಕ್ರೀನ್ ಶಾಟ್‌ಗಳು ಕೆಳಗಿವೆ

ವೈರಲ್ ಕ್ಲಿಪ್‌ನ ಸ್ಕ್ರೀನ್‌ಶಾಟ್ ಅನ್ನು ಎಬಿಪಿ ಆನಂದ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ “ಬಿಗ್ ಬ್ರೇಕಿಂಗ್: ಐಎನ್‌ಎಸ್ ವಿಕ್ರಾಂತ್‌ನ ಪ್ರಮುಖ ಕಾರ್ಯಾಚರಣೆ, ಬೃಹತ್ ಸ್ಫೋಟ, ಕರಾಚಿ ಧ್ವಂಸ, ಭಾರತದಿಂದ ಸತತ ದಾಳಿಗಳು” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿತ್ತು. ನಂತರ ಪೋಸ್ಟ್ ಎಡಿಟ್ ಮಾಡಿ ವೈರಲ್ ಕ್ಲಿಪ್‌ನ ಸ್ಕ್ರೀನ್‌ಶಾಟ್ ಜಾಗಕ್ಕೆ ಪಾಕಿಸ್ತಾನದ ರಾಷ್ಟ್ರ ಧ್ವಜದ ಚಿತ್ರವನ್ನು ಬದಲಿಸಿದೆ (ಆರ್ಕೈವ್)

Credit: altnews.in

ಅದೇ ವೈರಲ್ ವಿಡಿಯೋವನ್ನು ಹಲವಾರು ಎಕ್ಸ್‌ ಹ್ಯಾಂಡಲ್‌ಗಳು ಹಂಚಿಕೊಂಡಿತ್ತು.

ಎಕ್ಸ್‌ ಬಳಕೆದಾರರಾದ ನೈನಾ ಯಾದವ್ (@NAINAYADAV_06) (ತಮ್ಮ ಎಕ್ಸ್‌ ಬಯೋದಲ್ಲಿ ಪತ್ರಕರ್ತೆ ಎಂದು ಹೇಳಿಕೊಂಡಿದ್ದಾರೆ) ಅವರು ಮೇ 8 ರಂದು ವೈರಲ್ ಕ್ಲಿಪ್ ಅನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ “ಲಾಹೋರ್‌ನ ಜಿನ್ನಾ ಮಾರುಕಟ್ಟೆ ರಸ್ತೆ ಸಂಪೂರ್ಣವಾಗಿ ನಾಶವಾಯಿತು” #IndiaPakistanWar ಎಂದು ಬರೆದುಕೊಂಡಿದ್ದರು. (ಆರ್ಕೈವ್)

 

 

 

 

 

 

 

 

 

 

 

 

 

 

@IndiaTales7, @JaipurDialogues, @mkr4411, @wokeflix_, @iSinghApurva, @SonOfBharat7, @KreatelyMedia, @madhur_panktiya ಮುಂತಾದ ಎಕ್ಸ್‌ ಬಳೆದಾರರು ವೈರಲ್ ಕ್ಲಿಪ್ ಅನ್ನು ಹಂಚಿಕೊಂಡಿದ್ದರು. ಅವುಗಳು ಕೆಲವು ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿವೆ.

ನಾವು ಇಲ್ಲಿ ಉಲ್ಲೇಖಿಸಿದ ಬಹುತೇಕ ಎಕ್ಸ್ ಬಳಕೆದಾರರು ಈ ಹಿಂದೆ ಹಲವು ಸುಳ್ಳು ಸುದ್ದಿಗಳನ್ನು ಹಂಚಿಕೊಂಡವರಾಗಿದ್ದಾರೆ.

ಫ್ಯಾಕ್ಟ್‌ಚೆಕ್ 

ವೈರಲ್ ಕ್ಲಿಪ್‌ನ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್‌ ಶಾಟ್‌ ಬಳಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದೇವೆ ಮತ್ತು ವಿವಿಧ ಕೀ ವರ್ಡ್‌ಗಳನ್ನು ಬಳಸಿ ವಿಡಿಯೋ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಸಾಮಾಜಿಕ ಜಾಲತಾಣ ಥ್ರೆಡ್‌ನಲ್ಲಿ ವೈರಲ್ ಕ್ಲಿಪ್‌ಗೆ ಹೋಲಿಕೆಯಾಗುವ ಫೋಟೋವೊಂದು ನಮಗೆ ದೊರೆತಿದೆ.

ಫೆಬ್ರವರಿ 1, 2025ರಂದು joe.kendra ಎಂಬವರು ಫೋಟೋ ಪೋಸ್ಟ್ ಮಾಡಿದ್ದು, “ಮತ್ತೊಂದು ಅಪಘಾತ ಅಮೆರಿಕದ ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದ ಜನನಿಬಿಡ ಪ್ರದೇಶದಲ್ಲಿ ವೈದ್ಯಕೀಯ ಸಾರಿಗೆ ಲಿಯರ್‌ಜೆಟ್ ಅವಳಿ ಎಂಜಿನ್ ಜೆಟ್ ವಿಮಾನ ಅಪಘಾತಕ್ಕೀಡಾಗಿದೆ ಎಂದು ವರದಿಗಳು ಹೇಳಿವೆ. ಈ ಪ್ರದೇಶದಲ್ಲಿ ಮೂರು ಕಟ್ಟಡಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ” ಎಂದು ಬರೆದುಕೊಂಡಿದ್ದರು.

 

 

 

 

 

 

 

 

 

ಈ ಪೋಸ್ಟ್‌ನ ಸುಳಿವು ಹಿಡಿದುಕೊಂಡ ನಾವು ಕೀ ವರ್ಡ್‌ ಬಳಸಿ ವಿಡಿಯೋಗಾಗಿ ಹುಡುಕಾಟ ನಡೆಸಿದ್ದೇವೆ. ಈ ವೇಳೆ ಫೆಬ್ರವರಿ 1, 2025ರಂದು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋವೊಂದು ನಮಗೆ ಲಭ್ಯವಾಗಿದೆ. Hakan Tuluhan ಎಂಬ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ 1 ನಿಮಿಷ 4 ಸೆಕೆಂಡ್‌ನ ವಿಡಿಯೋದಲ್ಲಿ, 25 ಸೆಕಂಡ್‌ನಿಂದ ಎಬಿಪಿ ಆನಂದ ಸುದ್ದಿ ವಾಹಿನಿ ಮತ್ತು ಇತರ ಎಕ್ಸ್ ಬಳಕೆದಾರರು ಹಂಚಿಕೊಂಡಿರುವ ವಿಡಿಯೋ ತುಣುಕನ್ನು ನೋಡಬಹುದು.

ವಿಡಿಯೋದ ಡಿಸ್ಕ್ರಿಪ್ಶನ್‌ನಲ್ಲಿ “ಇದು ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದಲ್ಲಿ ಸಂಭವಿಸಿದ ವಿಮಾನ ಅಪಘಾತದ್ದು” ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ವಿಡಿಯೋದಲ್ಲಿ ಅದನ್ನು ರೆಕಾರ್ಡ್ ಮಾಡಿದ ವ್ಯಕ್ತಿಯು ಡಂಕಿನ್ ಡೋನಟ್ಸ್ ಔಟ್‌ಲೆಟ್‌ಗೆ ಪ್ರವೇಶಿಸುತ್ತಿರುವಂತೆ ಕಾಣುತ್ತಿದೆ. ದೃಶ್ಯಗಳು ಸ್ವಲ್ಪ ಅಸ್ಪಷ್ಟವಾಗಿದ್ದರೂ, ಡಂಕಿನ್ ಡೋನಟ್ಸ್ ಸೈನ್‌ಬೋರ್ಡ್ ಸ್ಪಷ್ಟವಾಗಿ ಗೋಚರಿಸುತ್ತದೆ. ಔಟ್‌ಲೆಟ್ ಇರುವಿಕೆ ಮತ್ತು ಸೈನ್‌ನೇಜ್‌ನ ಆಕಾರ ಮತ್ತು ಬಣ್ಣವನ್ನು ಆಧರಿಸಿ, ಅದನ್ನು ಗುರುತಿಸಬಹುದು.

Credi: altnews.in

ಔಟ್‌ಲೆಟ್‌ ಇರುವಿಕೆಯನ್ನು ಗೂಗಲ್ ಮ್ಯಾಪ್‌ ಮೂಲಕ ನೋಡಬಹುದು..ಲಿಂಕ್ ಇಲ್ಲಿದೆ 

Credit : altnews.in

ಆದ್ದರಿಂದ, ಐಎನ್ಎಸ್ ವಿಕ್ರಾಂತ್‌ನ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಪಾಕಿಸ್ತಾನದಲ್ಲಿ ನಾಶ ಸಂಭವಿಸಿದೆ ಎಂದು ಎಬಿಪಿ ಆನಂದ ಮತ್ತು ಎಕ್ಸ್ ಬಳಕೆದಾರರು ಹಂಚಿಕೊಂಡಿದ್ದ ವೈರಲ್ ಕ್ಲಿಪ್ ವಾಸ್ತವವಾಗಿ ಮೂರು ತಿಂಗಳ ಹಳೆಯದು ಮತ್ತು ಫಿಲಡೆಲ್ಫಿಯಾದ್ದಾಗಿದೆ.

ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...