Homeಫ್ಯಾಕ್ಟ್‌ಚೆಕ್ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

- Advertisement -
- Advertisement -

ಗುರುವಾರ (ಮೇ.8) ರಾತ್ರಿ ಭಾರತದ ಹಲವು ಪ್ರದೇಶಗಳ ಮೇಲೆ ವಿವಿಧ ರೀತಿಯಲ್ಲಿ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನಿಸಿತ್ತು. ಅದನ್ನು ಭಾರತ ಯಶಸ್ವಿಯಾಗಿ ತಡೆದಿದೆ ಎಂದು ವರದಿಯಾಗಿದೆ.

ದೇಶದ ಬಹುತೇಕ ದೃಶ್ಯ ಮಾಧ್ಯಮಗಳು ಗುರುವಾರ ರಾತ್ರಿ ಪಾಕಿಸ್ತಾನ ದಾಳಿ ನಡೆಸಿದೆ ಎಂಬ ಸುದ್ದಿಯನ್ನು ನೇರ ಪ್ರಸಾರ ರೀತಿಯಲ್ಲಿ ಪ್ರಕಟಿಸಿತ್ತು. ಇದೇ ವೇಳೆ ಸಾಮಾಜಿಕ ಮಾಧ್ಯಮಗಳಲ್ಲೂ ಭಾರತ-ಪಾಕಿಸ್ತಾನ ಪರಸ್ಪರ ದಾಳಿ ಮಾಡಿಕೊಂಡಿವೆ ಎಂಬ ಹಲವು ಸುದ್ದಿ ಮತ್ತು ವಿಡಿಯೋಗಳು ಹರಿದಾಡಿತ್ತು. ಅಂತಹ ವಿಡಿಯೋಗಳನ್ನು ದೇಶದ ಮುಖ್ಯವಾಹಿನಿ ಮಾಧ್ಯಮಗಳೂ ಪ್ರಸಾರ ಮಾಡಿತ್ತು.

ವೈರಲ್ ವಿಡಿಯೋಗಳ ಪೈಕಿ 37 ಸೆಕೆಂಡ್‌ ವಿಡಿಯೋವೊಂದನ್ನು ಹೆಚ್ಚಿನ ಜನರು ಹಂಚಿಕೊಂಡಿದ್ದರು. ಅದರಲ್ಲಿ, ಯಾವುದೋ ಸ್ಪೋಟ ಸಂಭವಿಸಿದ ಬಳಿಕದ ಚಿತ್ರಣ ಇತ್ತು. ಸುತ್ತಲು ಕಾರುಗಳು ನಿಂತಿರುವುದು, ಬೆಂಕಿ ಹೊತ್ತಿ ಉರಿಯುತ್ತಿರುವುದು ಮತ್ತು ಒಬ್ಬರು ವ್ಯಕ್ತಿ ಹಿಂದಿ/ಉರ್ದು ಭಾಷೆಯಲ್ಲಿ “ನಿಮ್ಮ ಮಕ್ಕಳು ಮತ್ತು ವೃದ್ಧರನ್ನು ಕರೆದುಕೊಂಡು ಹೋಗಿ, ನಿಮ್ಮ ಮನೆಗೆ ಬೀಗ ಹಾಕಿ ಮತ್ತು ಮುಂದಿನ ರಸ್ತೆಯ ಕಡೆಗೆ ಹೋಗಿ…”ಇತ್ಯಾದಿ ಹೇಳುವುದು ಆ ವಿಡಿಯೋದಲ್ಲಿ ಇತ್ತು.

ಬಂಗಾಳಿ ಸುದ್ದಿ ವಾಹಿನಿ ಎಬಿಪಿ ಆನಂದ ತನ್ನ ನೇರ ಪ್ರಸಾರದ ಸಮಯದಲ್ಲಿ ಮೇಲೆ ತಿಳಿಸಿದ ವಿಡಿಯೋವನ್ನು ಪ್ಲೇ ಮಾಡಿತ್ತು. ವಾಹಿನಿಯ ನಿರೂಪಕರಲ್ಲಿ ಒಬ್ಬರು “ಇದೀಗ ನೀವು ಕರಾಚಿಯ ದೃಶ್ಯಗಳನ್ನು ನೋಡುತ್ತಿದ್ದೀರಿ, ಅಲ್ಲಿ ಎಲ್ಲವೂ ನಾಶವಾಗಿದೆ” ಎಂದಿದ್ದರು. ಮತ್ತೊಬ್ಬ ನಿರೂಪಕ “ಇದು ಐಎನ್ಎಸ್ ವಿಕ್ರಾಂತ್ ನಡೆಸಿದ ದಾಳಿ ದೃಶ್ಯವಾಗಿದೆ” ಎಂದಿದ್ದರು.

ಎಬಿಪಿ ಆನಂದ ಈಗ ನೇರ ಪ್ರಸಾರ ವಿಡಿಯೋವನ್ನು ಡಿಲಿಟ್ ಮಾಡಿದೆ. ಅದರೆ, ಅದರ ಸಂಗ್ರಹ ತುಣುಕು ಮತ್ತು ಆರ್ಕೈವ್ ಲಿಂಕ್ ಕೆಳಗಿದೆ. ವಿಡಿಯೋದಲ್ಲಿ 5 ನಿಮಿಷ 8 ಸೆಕೆಂಡ್‌ ಅವಧಿಯಲ್ಲಿ ನಾವು ಮೇಲ್ಗಡೆ ವಿವರಿಸಿದ ದೃಶ್ಯವಿದೆ.

ಆರ್ಕೈವ್ ಲಿಂಕ್

VC : youtube.com/@abpanandatv Via altnews.in

ಎಬಿಪಿ ಆನಂದ ತನ್ನ ವೆಬ್‌ಸೈಟ್‌ನಲ್ಲಿ ‘ಆಪರೇಷನ್ ಸಿಂಧೂರ್’ ಎಂಬ ಹೆಸರಿನಲ್ಲಿ ಲೈವ್ ಅಪ್ಡೇಟ್ ನೀಡಲು ಮತ್ತು ಭಾರತ-ಪಾಕಿಸ್ತಾನ ಉದ್ವಿಗ್ನತೆ ಕುರಿತು ವರದಿ ಪ್ರಕಟಿಸಲೂ ಅದೇ ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಇಮೇಜ್ ಬಳಸಿಕೊಂಡಿತ್ತು. ಅದರ ಆರ್ಕೈವ್ ಲಿಂಕ್ ಇಲ್ಲಿ, ಇಲ್ಲಿ ನೋಡಬಹುದು.

ಎರಡೂ ಪುಟಗಳ ಸ್ಕ್ರೀನ್ ಶಾಟ್‌ಗಳು ಕೆಳಗಿವೆ

ವೈರಲ್ ಕ್ಲಿಪ್‌ನ ಸ್ಕ್ರೀನ್‌ಶಾಟ್ ಅನ್ನು ಎಬಿಪಿ ಆನಂದ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ “ಬಿಗ್ ಬ್ರೇಕಿಂಗ್: ಐಎನ್‌ಎಸ್ ವಿಕ್ರಾಂತ್‌ನ ಪ್ರಮುಖ ಕಾರ್ಯಾಚರಣೆ, ಬೃಹತ್ ಸ್ಫೋಟ, ಕರಾಚಿ ಧ್ವಂಸ, ಭಾರತದಿಂದ ಸತತ ದಾಳಿಗಳು” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿತ್ತು. ನಂತರ ಪೋಸ್ಟ್ ಎಡಿಟ್ ಮಾಡಿ ವೈರಲ್ ಕ್ಲಿಪ್‌ನ ಸ್ಕ್ರೀನ್‌ಶಾಟ್ ಜಾಗಕ್ಕೆ ಪಾಕಿಸ್ತಾನದ ರಾಷ್ಟ್ರ ಧ್ವಜದ ಚಿತ್ರವನ್ನು ಬದಲಿಸಿದೆ (ಆರ್ಕೈವ್)

Credit: altnews.in

ಅದೇ ವೈರಲ್ ವಿಡಿಯೋವನ್ನು ಹಲವಾರು ಎಕ್ಸ್‌ ಹ್ಯಾಂಡಲ್‌ಗಳು ಹಂಚಿಕೊಂಡಿತ್ತು.

ಎಕ್ಸ್‌ ಬಳಕೆದಾರರಾದ ನೈನಾ ಯಾದವ್ (@NAINAYADAV_06) (ತಮ್ಮ ಎಕ್ಸ್‌ ಬಯೋದಲ್ಲಿ ಪತ್ರಕರ್ತೆ ಎಂದು ಹೇಳಿಕೊಂಡಿದ್ದಾರೆ) ಅವರು ಮೇ 8 ರಂದು ವೈರಲ್ ಕ್ಲಿಪ್ ಅನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ “ಲಾಹೋರ್‌ನ ಜಿನ್ನಾ ಮಾರುಕಟ್ಟೆ ರಸ್ತೆ ಸಂಪೂರ್ಣವಾಗಿ ನಾಶವಾಯಿತು” #IndiaPakistanWar ಎಂದು ಬರೆದುಕೊಂಡಿದ್ದರು. (ಆರ್ಕೈವ್)

 

 

 

 

 

 

 

 

 

 

 

 

 

 

@IndiaTales7, @JaipurDialogues, @mkr4411, @wokeflix_, @iSinghApurva, @SonOfBharat7, @KreatelyMedia, @madhur_panktiya ಮುಂತಾದ ಎಕ್ಸ್‌ ಬಳೆದಾರರು ವೈರಲ್ ಕ್ಲಿಪ್ ಅನ್ನು ಹಂಚಿಕೊಂಡಿದ್ದರು. ಅವುಗಳು ಕೆಲವು ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿವೆ.

ನಾವು ಇಲ್ಲಿ ಉಲ್ಲೇಖಿಸಿದ ಬಹುತೇಕ ಎಕ್ಸ್ ಬಳಕೆದಾರರು ಈ ಹಿಂದೆ ಹಲವು ಸುಳ್ಳು ಸುದ್ದಿಗಳನ್ನು ಹಂಚಿಕೊಂಡವರಾಗಿದ್ದಾರೆ.

ಫ್ಯಾಕ್ಟ್‌ಚೆಕ್ 

ವೈರಲ್ ಕ್ಲಿಪ್‌ನ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್‌ ಶಾಟ್‌ ಬಳಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದೇವೆ ಮತ್ತು ವಿವಿಧ ಕೀ ವರ್ಡ್‌ಗಳನ್ನು ಬಳಸಿ ವಿಡಿಯೋ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಸಾಮಾಜಿಕ ಜಾಲತಾಣ ಥ್ರೆಡ್‌ನಲ್ಲಿ ವೈರಲ್ ಕ್ಲಿಪ್‌ಗೆ ಹೋಲಿಕೆಯಾಗುವ ಫೋಟೋವೊಂದು ನಮಗೆ ದೊರೆತಿದೆ.

ಫೆಬ್ರವರಿ 1, 2025ರಂದು joe.kendra ಎಂಬವರು ಫೋಟೋ ಪೋಸ್ಟ್ ಮಾಡಿದ್ದು, “ಮತ್ತೊಂದು ಅಪಘಾತ ಅಮೆರಿಕದ ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದ ಜನನಿಬಿಡ ಪ್ರದೇಶದಲ್ಲಿ ವೈದ್ಯಕೀಯ ಸಾರಿಗೆ ಲಿಯರ್‌ಜೆಟ್ ಅವಳಿ ಎಂಜಿನ್ ಜೆಟ್ ವಿಮಾನ ಅಪಘಾತಕ್ಕೀಡಾಗಿದೆ ಎಂದು ವರದಿಗಳು ಹೇಳಿವೆ. ಈ ಪ್ರದೇಶದಲ್ಲಿ ಮೂರು ಕಟ್ಟಡಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ” ಎಂದು ಬರೆದುಕೊಂಡಿದ್ದರು.

 

 

 

 

 

 

 

 

 

ಈ ಪೋಸ್ಟ್‌ನ ಸುಳಿವು ಹಿಡಿದುಕೊಂಡ ನಾವು ಕೀ ವರ್ಡ್‌ ಬಳಸಿ ವಿಡಿಯೋಗಾಗಿ ಹುಡುಕಾಟ ನಡೆಸಿದ್ದೇವೆ. ಈ ವೇಳೆ ಫೆಬ್ರವರಿ 1, 2025ರಂದು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋವೊಂದು ನಮಗೆ ಲಭ್ಯವಾಗಿದೆ. Hakan Tuluhan ಎಂಬ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ 1 ನಿಮಿಷ 4 ಸೆಕೆಂಡ್‌ನ ವಿಡಿಯೋದಲ್ಲಿ, 25 ಸೆಕಂಡ್‌ನಿಂದ ಎಬಿಪಿ ಆನಂದ ಸುದ್ದಿ ವಾಹಿನಿ ಮತ್ತು ಇತರ ಎಕ್ಸ್ ಬಳಕೆದಾರರು ಹಂಚಿಕೊಂಡಿರುವ ವಿಡಿಯೋ ತುಣುಕನ್ನು ನೋಡಬಹುದು.

ವಿಡಿಯೋದ ಡಿಸ್ಕ್ರಿಪ್ಶನ್‌ನಲ್ಲಿ “ಇದು ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದಲ್ಲಿ ಸಂಭವಿಸಿದ ವಿಮಾನ ಅಪಘಾತದ್ದು” ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ವಿಡಿಯೋದಲ್ಲಿ ಅದನ್ನು ರೆಕಾರ್ಡ್ ಮಾಡಿದ ವ್ಯಕ್ತಿಯು ಡಂಕಿನ್ ಡೋನಟ್ಸ್ ಔಟ್‌ಲೆಟ್‌ಗೆ ಪ್ರವೇಶಿಸುತ್ತಿರುವಂತೆ ಕಾಣುತ್ತಿದೆ. ದೃಶ್ಯಗಳು ಸ್ವಲ್ಪ ಅಸ್ಪಷ್ಟವಾಗಿದ್ದರೂ, ಡಂಕಿನ್ ಡೋನಟ್ಸ್ ಸೈನ್‌ಬೋರ್ಡ್ ಸ್ಪಷ್ಟವಾಗಿ ಗೋಚರಿಸುತ್ತದೆ. ಔಟ್‌ಲೆಟ್ ಇರುವಿಕೆ ಮತ್ತು ಸೈನ್‌ನೇಜ್‌ನ ಆಕಾರ ಮತ್ತು ಬಣ್ಣವನ್ನು ಆಧರಿಸಿ, ಅದನ್ನು ಗುರುತಿಸಬಹುದು.

Credi: altnews.in

ಔಟ್‌ಲೆಟ್‌ ಇರುವಿಕೆಯನ್ನು ಗೂಗಲ್ ಮ್ಯಾಪ್‌ ಮೂಲಕ ನೋಡಬಹುದು..ಲಿಂಕ್ ಇಲ್ಲಿದೆ 

Credit : altnews.in

ಆದ್ದರಿಂದ, ಐಎನ್ಎಸ್ ವಿಕ್ರಾಂತ್‌ನ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಪಾಕಿಸ್ತಾನದಲ್ಲಿ ನಾಶ ಸಂಭವಿಸಿದೆ ಎಂದು ಎಬಿಪಿ ಆನಂದ ಮತ್ತು ಎಕ್ಸ್ ಬಳಕೆದಾರರು ಹಂಚಿಕೊಂಡಿದ್ದ ವೈರಲ್ ಕ್ಲಿಪ್ ವಾಸ್ತವವಾಗಿ ಮೂರು ತಿಂಗಳ ಹಳೆಯದು ಮತ್ತು ಫಿಲಡೆಲ್ಫಿಯಾದ್ದಾಗಿದೆ.

ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...