Homeಫ್ಯಾಕ್ಟ್‌ಚೆಕ್FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ...

FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ ಹಂಚಿಕೆ

- Advertisement -
- Advertisement -

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್ ಏಂಜಲೀಸ್ ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಕಾಡ್ಗಿಚ್ಚಿಗೆ ಸುಮಾರು 35,000 ಎಕರೆಗಿಂತಲೂ ಅಧಿಕ ಪ್ರದೇಶ ಸುಟ್ಟು ಭಸ್ಮವಾಗಿದೆ. ವಿಶೇಷವಾಗಿ ಹಾಲಿವುಡ್ ಸಿನಿಮಾ ತಾರೆಯರ ಮನೆಗಳಿರುವ ಪೆಸಿಫಿಕ್ ಪ್ಯಾಲಿಸೈಡ್ಸ್ ಪ್ರದೇಶದ ಹಾಲಿವುಡ್‌ ಹಿಲ್ಸ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಸುಮಾರು 16,000ಕ್ಕೂ ಎಕರೆ ಪ್ರದೇಶ ಸುಟ್ಟು ಹೋಗಿದೆ. ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿರುವ  ಅಗ್ನಿ ದುರಂತದ ನಡುವೆ ವಿವಿಧ ಪ್ರತಿಪಾದನೆಗಳೊಂದಿಗೆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪರ್ವತಗಳು ಬೆಂಕಿಯಿಂದ ಉರಿಯುತ್ತಿರುವ ಮತ್ತು ಅಗ್ನಿ ಜ್ವಾಲೆಯಿಂದ ನಗರಗಳು ಮುಳುಗಿರುವ ವಿಡಿಯೋಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿರುವ ಕಾಡ್ಗಿಚ್ಚಿನ ನೈಜ ತುಣುಕುಗಳು ಎನ್ನಲಾಗುತ್ತಿದೆ.

ಫೇಸ್​ಬುಕ್ ಬಳಕೆದಾರರು ವಿಡಿಯೋವೊಂದನ್ನು ಹಂಚಿಕೊಂಡು, ‘‘ಇದು ಹಾಲಿವುಡ್ ಗ್ರಾಫಿಕ್ಸ್ ಅಲ್ಲ, ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್’’ ಎಂದು ಬರೆದುಕೊಂಡಿದ್ದರು.

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ 

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಬಹುತೇಕ ವಿಡಿಯೋಗಳು ಎಐ- ರಚಿತವಾಗಿದೆ ಮತ್ತು ಅದರಲ್ಲಿರುವ ಕಾಡ್ಗಿಚ್ಚಿನ ದೃಶ್ಯಗಳು ನಿಜವಾದದು ಅಲ್ಲ ಎಂದು ಗೊತ್ತಾಗಿದೆ.

ವಿಡಿಯೋಗಳ ನಿಜಾಂಶವನ್ನು ತಿಳಿಯಲು ನಾವು ಅವುಗಳಿಗೆ ಸಂಬಂಧಪಟ್ಟ ವಿಶ್ವಾಸಾರ್ಹ ವರದಿಗಳನ್ನು ಹುಡುಕಿದ್ದೇವೆ. ಆದರೆ, ಈ ವಿಡಿಯೋಗೆ ಹೋಲುವ ಯಾವುದೇ ವರದಿಯೂ ನಮಗೆ ಕಂಡುಬಂದಿಲ್ಲ. ಎಐ ಬಳಸಿಕೊಂಡು ವಿಡಿಯೋಗಳನ್ನು ರಚಿಸಲಾಗಿದೆ ಎಂದು ವೈರಲ್ ಪೋಸ್ಟ್‌ಗೆ ಅನೇಕ ಬಳಕೆದಾರರು ಕಾಮೆಂಟ್‌ಗಳನ್ನು ಮಾಡಿರುವುದನ್ನು ನಾವು ನೋಡಿದ್ದೇವೆ.

ವಿವಿಧ ಸ್ಥಳಗಳಲ್ಲಿ ಬೆಂಕಿ ಆವರಿಸುತ್ತಿರುವುದನ್ನು ತೋರಿಸುವ ಆರು ಕ್ಲಿಪ್‌ಗಳನ್ನು ವಿಲೀನಗೊಳಿಸಿ ವಿಡಿಯೋವನ್ನು ರಚಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ನಾವು ಕೀ ಫ್ರೇಮ್‌ಗಳನ್ನು ಹೊರತೆಗೆಯುವ ಮೂಲಕ ವಿಡಿಯೋವನ್ನು ವಿಶ್ಲೇಷಿಸಿದ್ದೇವೆ ಮತ್ತು ಎಐ ಡಿಟೆಕ್ಟರ್ ಮೂಲಕ ಅದನ್ನು ಪರಿಶೀಲಿಸಿದ್ದೇವೆ.

ಮೊದಲ ಕೀಫ್ರೇಮ್ ಸುಡುವ ಪರ್ವತದ ಕಡೆಗೆ ಹೋಗುವ ತಾಳೆ ಮರಗಳಿಂದ ಕೂಡಿದ ರಸ್ತೆಯನ್ನು ತೋರಿಸುತ್ತದೆ, ಎರಡನೆಯದು ಉರಿಯುತ್ತಿರುವ ಬೆಂಕಿಯ ಮಧ್ಯೆ ಟ್ರಾಫಿಕ್ ಲೈಟ್‌ನಲ್ಲಿ ಕಾರುಗಳನ್ನು ನಿಲ್ಲಿಸಿರುವುದನ್ನು ಕಾಣಬಹುದು. ಮೂರನೆಯದು ರಾತ್ರಿಯಲ್ಲಿ ಜ್ವಾಲೆ ಮತ್ತು ಹೊಗೆಯಲ್ಲಿ ಮುಳುಗಿರುವ ನಗರದ ವೈಮಾನಿಕ ನೋಟವನ್ನು ನೋಡಬಹುದು, ನಾಲ್ಕನೆಯದು ಕಟ್ಟಡಗಳು ಮತ್ತು ರಸ್ತೆಗಳಲ್ಲಿ ವ್ಯಾಪಕ ಬೆಂಕಿ ಹರಡಿದಿರುವುದು ತೋರಿಸುತ್ತದೆ. ಐದನೇಯದರಲ್ಲಿ ಜ್ವಾಲೆಯು ಬೆಟ್ಟದ ತುದಿಯನ್ನು ಆವರಿಸಿದೆ. ಅಂತಿಮ ಕೀಫ್ರೇಮ್​ನಲ್ಲಿ ಕಿತ್ತಳೆ ಬಣ್ಣದ ಆಕಾಶದಲ್ಲಿ ಜ್ವಾಲೆಗಳಿಂದ ಮುಳುಗಿರುವ ನಗರವನ್ನು ಕಾಣಬಹುದು. ಈ ಎಲ್ಲಾ ದೃಶ್ಯಗಳು ಎಐ- ರಚಿತವಾದವು ಎಂದು ಪತ್ತೆಹಚ್ಚಲಾಗಿದೆ. (ಇದನ್ನು ಇಲ್ಲಿ , ಇಲ್ಲಿ , ಇಲ್ಲಿ , ಇಲ್ಲಿ , ಇಲ್ಲಿ ಮತ್ತು ಇಲ್ಲಿ ಪರಿಶೀಲಿಸಿ)

ಮತ್ತೊಂದು ಡಿಟೆಕ್ಟರ್, “ವಾಸಿತ್ ಎಐ”, ಕೊನೆಯ ಕೀಫ್ರೇಮ್ ಹೊರತುಪಡಿಸಿ, ಇತರ ಐದು ಎಐ- ರಚಿತವಾಗಿದೆ ಎಂದು ಕಂಡುಹಿಡಿದಿದೆ.

ಹೈವ್ ಮಾಡರೇಶನ್ ಮೂಲಕ ವಿಡಿಯೊವನ್ನು ಪರಿಶೀಲಿಸಿದಾಗ, ಫಲಿತಾಂಶಗಳು 99.8% ರ ಒಟ್ಟು ಸ್ಕೋರ್‌ನೊಂದಿಗೆ ಎಐ- ರಚಿತ ಅಥವಾ ಡೀಪ್‌ಫೇಕ್ ವಿಷಯವನ್ನು ಒಳಗೊಂಡಿರುವ ಸಾಧ್ಯತೆಯಿದೆ ಎಂದು ಹೇಳಿದೆ.
|

 

ಆದ್ದರಿಂದ, ವೈರಲ್ ವೀಡಿಯೊ ಎಐ- ರಚಿತವಾಗಿದೆ ಎಂದು ನಾವು ತೀರ್ಮಾನಿಸುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...