Homeಫ್ಯಾಕ್ಟ್‌ಚೆಕ್FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ...

FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ ಹಂಚಿಕೆ

- Advertisement -
- Advertisement -

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್ ಏಂಜಲೀಸ್ ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಕಾಡ್ಗಿಚ್ಚಿಗೆ ಸುಮಾರು 35,000 ಎಕರೆಗಿಂತಲೂ ಅಧಿಕ ಪ್ರದೇಶ ಸುಟ್ಟು ಭಸ್ಮವಾಗಿದೆ. ವಿಶೇಷವಾಗಿ ಹಾಲಿವುಡ್ ಸಿನಿಮಾ ತಾರೆಯರ ಮನೆಗಳಿರುವ ಪೆಸಿಫಿಕ್ ಪ್ಯಾಲಿಸೈಡ್ಸ್ ಪ್ರದೇಶದ ಹಾಲಿವುಡ್‌ ಹಿಲ್ಸ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಸುಮಾರು 16,000ಕ್ಕೂ ಎಕರೆ ಪ್ರದೇಶ ಸುಟ್ಟು ಹೋಗಿದೆ. ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿರುವ  ಅಗ್ನಿ ದುರಂತದ ನಡುವೆ ವಿವಿಧ ಪ್ರತಿಪಾದನೆಗಳೊಂದಿಗೆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪರ್ವತಗಳು ಬೆಂಕಿಯಿಂದ ಉರಿಯುತ್ತಿರುವ ಮತ್ತು ಅಗ್ನಿ ಜ್ವಾಲೆಯಿಂದ ನಗರಗಳು ಮುಳುಗಿರುವ ವಿಡಿಯೋಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿರುವ ಕಾಡ್ಗಿಚ್ಚಿನ ನೈಜ ತುಣುಕುಗಳು ಎನ್ನಲಾಗುತ್ತಿದೆ.

ಫೇಸ್​ಬುಕ್ ಬಳಕೆದಾರರು ವಿಡಿಯೋವೊಂದನ್ನು ಹಂಚಿಕೊಂಡು, ‘‘ಇದು ಹಾಲಿವುಡ್ ಗ್ರಾಫಿಕ್ಸ್ ಅಲ್ಲ, ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್’’ ಎಂದು ಬರೆದುಕೊಂಡಿದ್ದರು.

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ 

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಬಹುತೇಕ ವಿಡಿಯೋಗಳು ಎಐ- ರಚಿತವಾಗಿದೆ ಮತ್ತು ಅದರಲ್ಲಿರುವ ಕಾಡ್ಗಿಚ್ಚಿನ ದೃಶ್ಯಗಳು ನಿಜವಾದದು ಅಲ್ಲ ಎಂದು ಗೊತ್ತಾಗಿದೆ.

ವಿಡಿಯೋಗಳ ನಿಜಾಂಶವನ್ನು ತಿಳಿಯಲು ನಾವು ಅವುಗಳಿಗೆ ಸಂಬಂಧಪಟ್ಟ ವಿಶ್ವಾಸಾರ್ಹ ವರದಿಗಳನ್ನು ಹುಡುಕಿದ್ದೇವೆ. ಆದರೆ, ಈ ವಿಡಿಯೋಗೆ ಹೋಲುವ ಯಾವುದೇ ವರದಿಯೂ ನಮಗೆ ಕಂಡುಬಂದಿಲ್ಲ. ಎಐ ಬಳಸಿಕೊಂಡು ವಿಡಿಯೋಗಳನ್ನು ರಚಿಸಲಾಗಿದೆ ಎಂದು ವೈರಲ್ ಪೋಸ್ಟ್‌ಗೆ ಅನೇಕ ಬಳಕೆದಾರರು ಕಾಮೆಂಟ್‌ಗಳನ್ನು ಮಾಡಿರುವುದನ್ನು ನಾವು ನೋಡಿದ್ದೇವೆ.

ವಿವಿಧ ಸ್ಥಳಗಳಲ್ಲಿ ಬೆಂಕಿ ಆವರಿಸುತ್ತಿರುವುದನ್ನು ತೋರಿಸುವ ಆರು ಕ್ಲಿಪ್‌ಗಳನ್ನು ವಿಲೀನಗೊಳಿಸಿ ವಿಡಿಯೋವನ್ನು ರಚಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ನಾವು ಕೀ ಫ್ರೇಮ್‌ಗಳನ್ನು ಹೊರತೆಗೆಯುವ ಮೂಲಕ ವಿಡಿಯೋವನ್ನು ವಿಶ್ಲೇಷಿಸಿದ್ದೇವೆ ಮತ್ತು ಎಐ ಡಿಟೆಕ್ಟರ್ ಮೂಲಕ ಅದನ್ನು ಪರಿಶೀಲಿಸಿದ್ದೇವೆ.

ಮೊದಲ ಕೀಫ್ರೇಮ್ ಸುಡುವ ಪರ್ವತದ ಕಡೆಗೆ ಹೋಗುವ ತಾಳೆ ಮರಗಳಿಂದ ಕೂಡಿದ ರಸ್ತೆಯನ್ನು ತೋರಿಸುತ್ತದೆ, ಎರಡನೆಯದು ಉರಿಯುತ್ತಿರುವ ಬೆಂಕಿಯ ಮಧ್ಯೆ ಟ್ರಾಫಿಕ್ ಲೈಟ್‌ನಲ್ಲಿ ಕಾರುಗಳನ್ನು ನಿಲ್ಲಿಸಿರುವುದನ್ನು ಕಾಣಬಹುದು. ಮೂರನೆಯದು ರಾತ್ರಿಯಲ್ಲಿ ಜ್ವಾಲೆ ಮತ್ತು ಹೊಗೆಯಲ್ಲಿ ಮುಳುಗಿರುವ ನಗರದ ವೈಮಾನಿಕ ನೋಟವನ್ನು ನೋಡಬಹುದು, ನಾಲ್ಕನೆಯದು ಕಟ್ಟಡಗಳು ಮತ್ತು ರಸ್ತೆಗಳಲ್ಲಿ ವ್ಯಾಪಕ ಬೆಂಕಿ ಹರಡಿದಿರುವುದು ತೋರಿಸುತ್ತದೆ. ಐದನೇಯದರಲ್ಲಿ ಜ್ವಾಲೆಯು ಬೆಟ್ಟದ ತುದಿಯನ್ನು ಆವರಿಸಿದೆ. ಅಂತಿಮ ಕೀಫ್ರೇಮ್​ನಲ್ಲಿ ಕಿತ್ತಳೆ ಬಣ್ಣದ ಆಕಾಶದಲ್ಲಿ ಜ್ವಾಲೆಗಳಿಂದ ಮುಳುಗಿರುವ ನಗರವನ್ನು ಕಾಣಬಹುದು. ಈ ಎಲ್ಲಾ ದೃಶ್ಯಗಳು ಎಐ- ರಚಿತವಾದವು ಎಂದು ಪತ್ತೆಹಚ್ಚಲಾಗಿದೆ. (ಇದನ್ನು ಇಲ್ಲಿ , ಇಲ್ಲಿ , ಇಲ್ಲಿ , ಇಲ್ಲಿ , ಇಲ್ಲಿ ಮತ್ತು ಇಲ್ಲಿ ಪರಿಶೀಲಿಸಿ)

ಮತ್ತೊಂದು ಡಿಟೆಕ್ಟರ್, “ವಾಸಿತ್ ಎಐ”, ಕೊನೆಯ ಕೀಫ್ರೇಮ್ ಹೊರತುಪಡಿಸಿ, ಇತರ ಐದು ಎಐ- ರಚಿತವಾಗಿದೆ ಎಂದು ಕಂಡುಹಿಡಿದಿದೆ.

ಹೈವ್ ಮಾಡರೇಶನ್ ಮೂಲಕ ವಿಡಿಯೊವನ್ನು ಪರಿಶೀಲಿಸಿದಾಗ, ಫಲಿತಾಂಶಗಳು 99.8% ರ ಒಟ್ಟು ಸ್ಕೋರ್‌ನೊಂದಿಗೆ ಎಐ- ರಚಿತ ಅಥವಾ ಡೀಪ್‌ಫೇಕ್ ವಿಷಯವನ್ನು ಒಳಗೊಂಡಿರುವ ಸಾಧ್ಯತೆಯಿದೆ ಎಂದು ಹೇಳಿದೆ.
|

 

ಆದ್ದರಿಂದ, ವೈರಲ್ ವೀಡಿಯೊ ಎಐ- ರಚಿತವಾಗಿದೆ ಎಂದು ನಾವು ತೀರ್ಮಾನಿಸುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...