Homeಫ್ಯಾಕ್ಟ್‌ಚೆಕ್FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ...

FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ ಹಂಚಿಕೆ

- Advertisement -
- Advertisement -

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್ ಏಂಜಲೀಸ್ ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಕಾಡ್ಗಿಚ್ಚಿಗೆ ಸುಮಾರು 35,000 ಎಕರೆಗಿಂತಲೂ ಅಧಿಕ ಪ್ರದೇಶ ಸುಟ್ಟು ಭಸ್ಮವಾಗಿದೆ. ವಿಶೇಷವಾಗಿ ಹಾಲಿವುಡ್ ಸಿನಿಮಾ ತಾರೆಯರ ಮನೆಗಳಿರುವ ಪೆಸಿಫಿಕ್ ಪ್ಯಾಲಿಸೈಡ್ಸ್ ಪ್ರದೇಶದ ಹಾಲಿವುಡ್‌ ಹಿಲ್ಸ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಸುಮಾರು 16,000ಕ್ಕೂ ಎಕರೆ ಪ್ರದೇಶ ಸುಟ್ಟು ಹೋಗಿದೆ. ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿರುವ  ಅಗ್ನಿ ದುರಂತದ ನಡುವೆ ವಿವಿಧ ಪ್ರತಿಪಾದನೆಗಳೊಂದಿಗೆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪರ್ವತಗಳು ಬೆಂಕಿಯಿಂದ ಉರಿಯುತ್ತಿರುವ ಮತ್ತು ಅಗ್ನಿ ಜ್ವಾಲೆಯಿಂದ ನಗರಗಳು ಮುಳುಗಿರುವ ವಿಡಿಯೋಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿರುವ ಕಾಡ್ಗಿಚ್ಚಿನ ನೈಜ ತುಣುಕುಗಳು ಎನ್ನಲಾಗುತ್ತಿದೆ.

ಫೇಸ್​ಬುಕ್ ಬಳಕೆದಾರರು ವಿಡಿಯೋವೊಂದನ್ನು ಹಂಚಿಕೊಂಡು, ‘‘ಇದು ಹಾಲಿವುಡ್ ಗ್ರಾಫಿಕ್ಸ್ ಅಲ್ಲ, ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್’’ ಎಂದು ಬರೆದುಕೊಂಡಿದ್ದರು.

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ 

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಬಹುತೇಕ ವಿಡಿಯೋಗಳು ಎಐ- ರಚಿತವಾಗಿದೆ ಮತ್ತು ಅದರಲ್ಲಿರುವ ಕಾಡ್ಗಿಚ್ಚಿನ ದೃಶ್ಯಗಳು ನಿಜವಾದದು ಅಲ್ಲ ಎಂದು ಗೊತ್ತಾಗಿದೆ.

ವಿಡಿಯೋಗಳ ನಿಜಾಂಶವನ್ನು ತಿಳಿಯಲು ನಾವು ಅವುಗಳಿಗೆ ಸಂಬಂಧಪಟ್ಟ ವಿಶ್ವಾಸಾರ್ಹ ವರದಿಗಳನ್ನು ಹುಡುಕಿದ್ದೇವೆ. ಆದರೆ, ಈ ವಿಡಿಯೋಗೆ ಹೋಲುವ ಯಾವುದೇ ವರದಿಯೂ ನಮಗೆ ಕಂಡುಬಂದಿಲ್ಲ. ಎಐ ಬಳಸಿಕೊಂಡು ವಿಡಿಯೋಗಳನ್ನು ರಚಿಸಲಾಗಿದೆ ಎಂದು ವೈರಲ್ ಪೋಸ್ಟ್‌ಗೆ ಅನೇಕ ಬಳಕೆದಾರರು ಕಾಮೆಂಟ್‌ಗಳನ್ನು ಮಾಡಿರುವುದನ್ನು ನಾವು ನೋಡಿದ್ದೇವೆ.

ವಿವಿಧ ಸ್ಥಳಗಳಲ್ಲಿ ಬೆಂಕಿ ಆವರಿಸುತ್ತಿರುವುದನ್ನು ತೋರಿಸುವ ಆರು ಕ್ಲಿಪ್‌ಗಳನ್ನು ವಿಲೀನಗೊಳಿಸಿ ವಿಡಿಯೋವನ್ನು ರಚಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ನಾವು ಕೀ ಫ್ರೇಮ್‌ಗಳನ್ನು ಹೊರತೆಗೆಯುವ ಮೂಲಕ ವಿಡಿಯೋವನ್ನು ವಿಶ್ಲೇಷಿಸಿದ್ದೇವೆ ಮತ್ತು ಎಐ ಡಿಟೆಕ್ಟರ್ ಮೂಲಕ ಅದನ್ನು ಪರಿಶೀಲಿಸಿದ್ದೇವೆ.

ಮೊದಲ ಕೀಫ್ರೇಮ್ ಸುಡುವ ಪರ್ವತದ ಕಡೆಗೆ ಹೋಗುವ ತಾಳೆ ಮರಗಳಿಂದ ಕೂಡಿದ ರಸ್ತೆಯನ್ನು ತೋರಿಸುತ್ತದೆ, ಎರಡನೆಯದು ಉರಿಯುತ್ತಿರುವ ಬೆಂಕಿಯ ಮಧ್ಯೆ ಟ್ರಾಫಿಕ್ ಲೈಟ್‌ನಲ್ಲಿ ಕಾರುಗಳನ್ನು ನಿಲ್ಲಿಸಿರುವುದನ್ನು ಕಾಣಬಹುದು. ಮೂರನೆಯದು ರಾತ್ರಿಯಲ್ಲಿ ಜ್ವಾಲೆ ಮತ್ತು ಹೊಗೆಯಲ್ಲಿ ಮುಳುಗಿರುವ ನಗರದ ವೈಮಾನಿಕ ನೋಟವನ್ನು ನೋಡಬಹುದು, ನಾಲ್ಕನೆಯದು ಕಟ್ಟಡಗಳು ಮತ್ತು ರಸ್ತೆಗಳಲ್ಲಿ ವ್ಯಾಪಕ ಬೆಂಕಿ ಹರಡಿದಿರುವುದು ತೋರಿಸುತ್ತದೆ. ಐದನೇಯದರಲ್ಲಿ ಜ್ವಾಲೆಯು ಬೆಟ್ಟದ ತುದಿಯನ್ನು ಆವರಿಸಿದೆ. ಅಂತಿಮ ಕೀಫ್ರೇಮ್​ನಲ್ಲಿ ಕಿತ್ತಳೆ ಬಣ್ಣದ ಆಕಾಶದಲ್ಲಿ ಜ್ವಾಲೆಗಳಿಂದ ಮುಳುಗಿರುವ ನಗರವನ್ನು ಕಾಣಬಹುದು. ಈ ಎಲ್ಲಾ ದೃಶ್ಯಗಳು ಎಐ- ರಚಿತವಾದವು ಎಂದು ಪತ್ತೆಹಚ್ಚಲಾಗಿದೆ. (ಇದನ್ನು ಇಲ್ಲಿ , ಇಲ್ಲಿ , ಇಲ್ಲಿ , ಇಲ್ಲಿ , ಇಲ್ಲಿ ಮತ್ತು ಇಲ್ಲಿ ಪರಿಶೀಲಿಸಿ)

ಮತ್ತೊಂದು ಡಿಟೆಕ್ಟರ್, “ವಾಸಿತ್ ಎಐ”, ಕೊನೆಯ ಕೀಫ್ರೇಮ್ ಹೊರತುಪಡಿಸಿ, ಇತರ ಐದು ಎಐ- ರಚಿತವಾಗಿದೆ ಎಂದು ಕಂಡುಹಿಡಿದಿದೆ.

ಹೈವ್ ಮಾಡರೇಶನ್ ಮೂಲಕ ವಿಡಿಯೊವನ್ನು ಪರಿಶೀಲಿಸಿದಾಗ, ಫಲಿತಾಂಶಗಳು 99.8% ರ ಒಟ್ಟು ಸ್ಕೋರ್‌ನೊಂದಿಗೆ ಎಐ- ರಚಿತ ಅಥವಾ ಡೀಪ್‌ಫೇಕ್ ವಿಷಯವನ್ನು ಒಳಗೊಂಡಿರುವ ಸಾಧ್ಯತೆಯಿದೆ ಎಂದು ಹೇಳಿದೆ.
|

 

ಆದ್ದರಿಂದ, ವೈರಲ್ ವೀಡಿಯೊ ಎಐ- ರಚಿತವಾಗಿದೆ ಎಂದು ನಾವು ತೀರ್ಮಾನಿಸುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...