Homeಫ್ಯಾಕ್ಟ್‌ಚೆಕ್FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ...

FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ ಹಂಚಿಕೆ

- Advertisement -
- Advertisement -

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್ ಏಂಜಲೀಸ್ ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಕಾಡ್ಗಿಚ್ಚಿಗೆ ಸುಮಾರು 35,000 ಎಕರೆಗಿಂತಲೂ ಅಧಿಕ ಪ್ರದೇಶ ಸುಟ್ಟು ಭಸ್ಮವಾಗಿದೆ. ವಿಶೇಷವಾಗಿ ಹಾಲಿವುಡ್ ಸಿನಿಮಾ ತಾರೆಯರ ಮನೆಗಳಿರುವ ಪೆಸಿಫಿಕ್ ಪ್ಯಾಲಿಸೈಡ್ಸ್ ಪ್ರದೇಶದ ಹಾಲಿವುಡ್‌ ಹಿಲ್ಸ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಸುಮಾರು 16,000ಕ್ಕೂ ಎಕರೆ ಪ್ರದೇಶ ಸುಟ್ಟು ಹೋಗಿದೆ. ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿರುವ  ಅಗ್ನಿ ದುರಂತದ ನಡುವೆ ವಿವಿಧ ಪ್ರತಿಪಾದನೆಗಳೊಂದಿಗೆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪರ್ವತಗಳು ಬೆಂಕಿಯಿಂದ ಉರಿಯುತ್ತಿರುವ ಮತ್ತು ಅಗ್ನಿ ಜ್ವಾಲೆಯಿಂದ ನಗರಗಳು ಮುಳುಗಿರುವ ವಿಡಿಯೋಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿರುವ ಕಾಡ್ಗಿಚ್ಚಿನ ನೈಜ ತುಣುಕುಗಳು ಎನ್ನಲಾಗುತ್ತಿದೆ.

ಫೇಸ್​ಬುಕ್ ಬಳಕೆದಾರರು ವಿಡಿಯೋವೊಂದನ್ನು ಹಂಚಿಕೊಂಡು, ‘‘ಇದು ಹಾಲಿವುಡ್ ಗ್ರಾಫಿಕ್ಸ್ ಅಲ್ಲ, ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್’’ ಎಂದು ಬರೆದುಕೊಂಡಿದ್ದರು.

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ 

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಬಹುತೇಕ ವಿಡಿಯೋಗಳು ಎಐ- ರಚಿತವಾಗಿದೆ ಮತ್ತು ಅದರಲ್ಲಿರುವ ಕಾಡ್ಗಿಚ್ಚಿನ ದೃಶ್ಯಗಳು ನಿಜವಾದದು ಅಲ್ಲ ಎಂದು ಗೊತ್ತಾಗಿದೆ.

ವಿಡಿಯೋಗಳ ನಿಜಾಂಶವನ್ನು ತಿಳಿಯಲು ನಾವು ಅವುಗಳಿಗೆ ಸಂಬಂಧಪಟ್ಟ ವಿಶ್ವಾಸಾರ್ಹ ವರದಿಗಳನ್ನು ಹುಡುಕಿದ್ದೇವೆ. ಆದರೆ, ಈ ವಿಡಿಯೋಗೆ ಹೋಲುವ ಯಾವುದೇ ವರದಿಯೂ ನಮಗೆ ಕಂಡುಬಂದಿಲ್ಲ. ಎಐ ಬಳಸಿಕೊಂಡು ವಿಡಿಯೋಗಳನ್ನು ರಚಿಸಲಾಗಿದೆ ಎಂದು ವೈರಲ್ ಪೋಸ್ಟ್‌ಗೆ ಅನೇಕ ಬಳಕೆದಾರರು ಕಾಮೆಂಟ್‌ಗಳನ್ನು ಮಾಡಿರುವುದನ್ನು ನಾವು ನೋಡಿದ್ದೇವೆ.

ವಿವಿಧ ಸ್ಥಳಗಳಲ್ಲಿ ಬೆಂಕಿ ಆವರಿಸುತ್ತಿರುವುದನ್ನು ತೋರಿಸುವ ಆರು ಕ್ಲಿಪ್‌ಗಳನ್ನು ವಿಲೀನಗೊಳಿಸಿ ವಿಡಿಯೋವನ್ನು ರಚಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ನಾವು ಕೀ ಫ್ರೇಮ್‌ಗಳನ್ನು ಹೊರತೆಗೆಯುವ ಮೂಲಕ ವಿಡಿಯೋವನ್ನು ವಿಶ್ಲೇಷಿಸಿದ್ದೇವೆ ಮತ್ತು ಎಐ ಡಿಟೆಕ್ಟರ್ ಮೂಲಕ ಅದನ್ನು ಪರಿಶೀಲಿಸಿದ್ದೇವೆ.

ಮೊದಲ ಕೀಫ್ರೇಮ್ ಸುಡುವ ಪರ್ವತದ ಕಡೆಗೆ ಹೋಗುವ ತಾಳೆ ಮರಗಳಿಂದ ಕೂಡಿದ ರಸ್ತೆಯನ್ನು ತೋರಿಸುತ್ತದೆ, ಎರಡನೆಯದು ಉರಿಯುತ್ತಿರುವ ಬೆಂಕಿಯ ಮಧ್ಯೆ ಟ್ರಾಫಿಕ್ ಲೈಟ್‌ನಲ್ಲಿ ಕಾರುಗಳನ್ನು ನಿಲ್ಲಿಸಿರುವುದನ್ನು ಕಾಣಬಹುದು. ಮೂರನೆಯದು ರಾತ್ರಿಯಲ್ಲಿ ಜ್ವಾಲೆ ಮತ್ತು ಹೊಗೆಯಲ್ಲಿ ಮುಳುಗಿರುವ ನಗರದ ವೈಮಾನಿಕ ನೋಟವನ್ನು ನೋಡಬಹುದು, ನಾಲ್ಕನೆಯದು ಕಟ್ಟಡಗಳು ಮತ್ತು ರಸ್ತೆಗಳಲ್ಲಿ ವ್ಯಾಪಕ ಬೆಂಕಿ ಹರಡಿದಿರುವುದು ತೋರಿಸುತ್ತದೆ. ಐದನೇಯದರಲ್ಲಿ ಜ್ವಾಲೆಯು ಬೆಟ್ಟದ ತುದಿಯನ್ನು ಆವರಿಸಿದೆ. ಅಂತಿಮ ಕೀಫ್ರೇಮ್​ನಲ್ಲಿ ಕಿತ್ತಳೆ ಬಣ್ಣದ ಆಕಾಶದಲ್ಲಿ ಜ್ವಾಲೆಗಳಿಂದ ಮುಳುಗಿರುವ ನಗರವನ್ನು ಕಾಣಬಹುದು. ಈ ಎಲ್ಲಾ ದೃಶ್ಯಗಳು ಎಐ- ರಚಿತವಾದವು ಎಂದು ಪತ್ತೆಹಚ್ಚಲಾಗಿದೆ. (ಇದನ್ನು ಇಲ್ಲಿ , ಇಲ್ಲಿ , ಇಲ್ಲಿ , ಇಲ್ಲಿ , ಇಲ್ಲಿ ಮತ್ತು ಇಲ್ಲಿ ಪರಿಶೀಲಿಸಿ)

ಮತ್ತೊಂದು ಡಿಟೆಕ್ಟರ್, “ವಾಸಿತ್ ಎಐ”, ಕೊನೆಯ ಕೀಫ್ರೇಮ್ ಹೊರತುಪಡಿಸಿ, ಇತರ ಐದು ಎಐ- ರಚಿತವಾಗಿದೆ ಎಂದು ಕಂಡುಹಿಡಿದಿದೆ.

ಹೈವ್ ಮಾಡರೇಶನ್ ಮೂಲಕ ವಿಡಿಯೊವನ್ನು ಪರಿಶೀಲಿಸಿದಾಗ, ಫಲಿತಾಂಶಗಳು 99.8% ರ ಒಟ್ಟು ಸ್ಕೋರ್‌ನೊಂದಿಗೆ ಎಐ- ರಚಿತ ಅಥವಾ ಡೀಪ್‌ಫೇಕ್ ವಿಷಯವನ್ನು ಒಳಗೊಂಡಿರುವ ಸಾಧ್ಯತೆಯಿದೆ ಎಂದು ಹೇಳಿದೆ.
|

 

ಆದ್ದರಿಂದ, ವೈರಲ್ ವೀಡಿಯೊ ಎಐ- ರಚಿತವಾಗಿದೆ ಎಂದು ನಾವು ತೀರ್ಮಾನಿಸುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...