Homeಫ್ಯಾಕ್ಟ್‌ಚೆಕ್FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ...

FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ ಹಂಚಿಕೆ

- Advertisement -
- Advertisement -

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್ ಏಂಜಲೀಸ್ ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಕಾಡ್ಗಿಚ್ಚಿಗೆ ಸುಮಾರು 35,000 ಎಕರೆಗಿಂತಲೂ ಅಧಿಕ ಪ್ರದೇಶ ಸುಟ್ಟು ಭಸ್ಮವಾಗಿದೆ. ವಿಶೇಷವಾಗಿ ಹಾಲಿವುಡ್ ಸಿನಿಮಾ ತಾರೆಯರ ಮನೆಗಳಿರುವ ಪೆಸಿಫಿಕ್ ಪ್ಯಾಲಿಸೈಡ್ಸ್ ಪ್ರದೇಶದ ಹಾಲಿವುಡ್‌ ಹಿಲ್ಸ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಸುಮಾರು 16,000ಕ್ಕೂ ಎಕರೆ ಪ್ರದೇಶ ಸುಟ್ಟು ಹೋಗಿದೆ. ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿರುವ  ಅಗ್ನಿ ದುರಂತದ ನಡುವೆ ವಿವಿಧ ಪ್ರತಿಪಾದನೆಗಳೊಂದಿಗೆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪರ್ವತಗಳು ಬೆಂಕಿಯಿಂದ ಉರಿಯುತ್ತಿರುವ ಮತ್ತು ಅಗ್ನಿ ಜ್ವಾಲೆಯಿಂದ ನಗರಗಳು ಮುಳುಗಿರುವ ವಿಡಿಯೋಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿರುವ ಕಾಡ್ಗಿಚ್ಚಿನ ನೈಜ ತುಣುಕುಗಳು ಎನ್ನಲಾಗುತ್ತಿದೆ.

ಫೇಸ್​ಬುಕ್ ಬಳಕೆದಾರರು ವಿಡಿಯೋವೊಂದನ್ನು ಹಂಚಿಕೊಂಡು, ‘‘ಇದು ಹಾಲಿವುಡ್ ಗ್ರಾಫಿಕ್ಸ್ ಅಲ್ಲ, ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್’’ ಎಂದು ಬರೆದುಕೊಂಡಿದ್ದರು.

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ 

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಬಹುತೇಕ ವಿಡಿಯೋಗಳು ಎಐ- ರಚಿತವಾಗಿದೆ ಮತ್ತು ಅದರಲ್ಲಿರುವ ಕಾಡ್ಗಿಚ್ಚಿನ ದೃಶ್ಯಗಳು ನಿಜವಾದದು ಅಲ್ಲ ಎಂದು ಗೊತ್ತಾಗಿದೆ.

ವಿಡಿಯೋಗಳ ನಿಜಾಂಶವನ್ನು ತಿಳಿಯಲು ನಾವು ಅವುಗಳಿಗೆ ಸಂಬಂಧಪಟ್ಟ ವಿಶ್ವಾಸಾರ್ಹ ವರದಿಗಳನ್ನು ಹುಡುಕಿದ್ದೇವೆ. ಆದರೆ, ಈ ವಿಡಿಯೋಗೆ ಹೋಲುವ ಯಾವುದೇ ವರದಿಯೂ ನಮಗೆ ಕಂಡುಬಂದಿಲ್ಲ. ಎಐ ಬಳಸಿಕೊಂಡು ವಿಡಿಯೋಗಳನ್ನು ರಚಿಸಲಾಗಿದೆ ಎಂದು ವೈರಲ್ ಪೋಸ್ಟ್‌ಗೆ ಅನೇಕ ಬಳಕೆದಾರರು ಕಾಮೆಂಟ್‌ಗಳನ್ನು ಮಾಡಿರುವುದನ್ನು ನಾವು ನೋಡಿದ್ದೇವೆ.

ವಿವಿಧ ಸ್ಥಳಗಳಲ್ಲಿ ಬೆಂಕಿ ಆವರಿಸುತ್ತಿರುವುದನ್ನು ತೋರಿಸುವ ಆರು ಕ್ಲಿಪ್‌ಗಳನ್ನು ವಿಲೀನಗೊಳಿಸಿ ವಿಡಿಯೋವನ್ನು ರಚಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ನಾವು ಕೀ ಫ್ರೇಮ್‌ಗಳನ್ನು ಹೊರತೆಗೆಯುವ ಮೂಲಕ ವಿಡಿಯೋವನ್ನು ವಿಶ್ಲೇಷಿಸಿದ್ದೇವೆ ಮತ್ತು ಎಐ ಡಿಟೆಕ್ಟರ್ ಮೂಲಕ ಅದನ್ನು ಪರಿಶೀಲಿಸಿದ್ದೇವೆ.

ಮೊದಲ ಕೀಫ್ರೇಮ್ ಸುಡುವ ಪರ್ವತದ ಕಡೆಗೆ ಹೋಗುವ ತಾಳೆ ಮರಗಳಿಂದ ಕೂಡಿದ ರಸ್ತೆಯನ್ನು ತೋರಿಸುತ್ತದೆ, ಎರಡನೆಯದು ಉರಿಯುತ್ತಿರುವ ಬೆಂಕಿಯ ಮಧ್ಯೆ ಟ್ರಾಫಿಕ್ ಲೈಟ್‌ನಲ್ಲಿ ಕಾರುಗಳನ್ನು ನಿಲ್ಲಿಸಿರುವುದನ್ನು ಕಾಣಬಹುದು. ಮೂರನೆಯದು ರಾತ್ರಿಯಲ್ಲಿ ಜ್ವಾಲೆ ಮತ್ತು ಹೊಗೆಯಲ್ಲಿ ಮುಳುಗಿರುವ ನಗರದ ವೈಮಾನಿಕ ನೋಟವನ್ನು ನೋಡಬಹುದು, ನಾಲ್ಕನೆಯದು ಕಟ್ಟಡಗಳು ಮತ್ತು ರಸ್ತೆಗಳಲ್ಲಿ ವ್ಯಾಪಕ ಬೆಂಕಿ ಹರಡಿದಿರುವುದು ತೋರಿಸುತ್ತದೆ. ಐದನೇಯದರಲ್ಲಿ ಜ್ವಾಲೆಯು ಬೆಟ್ಟದ ತುದಿಯನ್ನು ಆವರಿಸಿದೆ. ಅಂತಿಮ ಕೀಫ್ರೇಮ್​ನಲ್ಲಿ ಕಿತ್ತಳೆ ಬಣ್ಣದ ಆಕಾಶದಲ್ಲಿ ಜ್ವಾಲೆಗಳಿಂದ ಮುಳುಗಿರುವ ನಗರವನ್ನು ಕಾಣಬಹುದು. ಈ ಎಲ್ಲಾ ದೃಶ್ಯಗಳು ಎಐ- ರಚಿತವಾದವು ಎಂದು ಪತ್ತೆಹಚ್ಚಲಾಗಿದೆ. (ಇದನ್ನು ಇಲ್ಲಿ , ಇಲ್ಲಿ , ಇಲ್ಲಿ , ಇಲ್ಲಿ , ಇಲ್ಲಿ ಮತ್ತು ಇಲ್ಲಿ ಪರಿಶೀಲಿಸಿ)

ಮತ್ತೊಂದು ಡಿಟೆಕ್ಟರ್, “ವಾಸಿತ್ ಎಐ”, ಕೊನೆಯ ಕೀಫ್ರೇಮ್ ಹೊರತುಪಡಿಸಿ, ಇತರ ಐದು ಎಐ- ರಚಿತವಾಗಿದೆ ಎಂದು ಕಂಡುಹಿಡಿದಿದೆ.

ಹೈವ್ ಮಾಡರೇಶನ್ ಮೂಲಕ ವಿಡಿಯೊವನ್ನು ಪರಿಶೀಲಿಸಿದಾಗ, ಫಲಿತಾಂಶಗಳು 99.8% ರ ಒಟ್ಟು ಸ್ಕೋರ್‌ನೊಂದಿಗೆ ಎಐ- ರಚಿತ ಅಥವಾ ಡೀಪ್‌ಫೇಕ್ ವಿಷಯವನ್ನು ಒಳಗೊಂಡಿರುವ ಸಾಧ್ಯತೆಯಿದೆ ಎಂದು ಹೇಳಿದೆ.
|

 

ಆದ್ದರಿಂದ, ವೈರಲ್ ವೀಡಿಯೊ ಎಐ- ರಚಿತವಾಗಿದೆ ಎಂದು ನಾವು ತೀರ್ಮಾನಿಸುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....