Homeನಿಜವೋ ಸುಳ್ಳೋಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?

ಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?

- Advertisement -
- Advertisement -

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲೀಮೀನ್ (ಎಐಎಂಐಎಂ) ಬ್ಯಾನರ್ ಮುಂದೆ ಇಬ್ಬರು ಮುಸ್ಲಿಮರು ಧ್ವಜಗಳನ್ನು ಸುಡುವ ಮೂರು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ “ಉತ್ತರ ಪ್ರದೇಶದ ಎಐಎಂಐಎಂ ಪ್ರತಾಪಘಡದ ಸದಸ್ಯರು ಕೇಸರಿ ಧ್ವಜಗಳನ್ನು ಸುಟ್ಟುಹಾಕಿದರು” ಎಂದು ಬರೆಯಲಾಗಿದೆ.

ವೈರಲಾದ ಸಂದೇಶವನ್ನು ಹಲವಾರು ಜನರು ಟ್ವಿಟ್ಟರ್‌ನಲ್ಲಿ ಹಂಚಿ “ಇದು ಪ್ರತಾಪಗಡದ ಎಐಎಂಐಎಂನ ಎಂ.ಡಿ. ಸಲೀಮ್ ಅನ್ಸಾರಿ, ಅವರು ಕೇಸರಿ ಧ್ವಜವನ್ನು ಸಾರ್ವಜನಿಕವಾಗಿ ಸುಡುತ್ತಿದ್ದಾರೆ. ಇಂತವರು ಗಲಭೆಗೆ ಕಾರಣರಾಗುತ್ತಾರೆ” ಎಂದು ಯುಪಿ ಪೊಲೀಸರಿಗೆ ಆಪಾದಿತ ಘಟನೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಕೆಲವು ಫೇಸ್‌ಬುಕ್ ಬಳಕೆದಾರರು ಘಟನೆಯ ಮತ್ತೊಂದು ಚಿತ್ರವನ್ನು ಹಂಚಿಕೊಂಡು, “ಭಾರತದ ರಾಷ್ಟ್ರಧ್ವಜವನ್ನು ಸುಟ್ಟುಹಾಕುತ್ತಿದ್ದಾರೆ” ಎಂದು ಹೇಳಿಕೊಂಡಿದ್ದಾರೆ. ಚಿತ್ರದ ಹಿನ್ನಲೆಯಲ್ಲಿ ‘ಇಂಡಿಯಾ ಮುರ್ದಾಬಾದ್’ ಎಂದು ಬರೆದ ಪೋಸ್ಟರ್ ಕಂಡುಬರುತ್ತಿದೆ.

ಫ್ಯಾಕ್ಟ್-ಚೆಕ್

ಈ ವೈರಲ್ ಚಿತ್ರವನ್ನು ಜೂನ್ 14 ರಂದು ಪರ್ವಾನ ಮಲಿಕ್ ಜಿಯಾ ಎಂಬವರು ಪೋಸ್ಟ್ ಮಾಡಿದ್ದಾರೆ. ಪೋಸ್ಟ್‌ನಲ್ಲಿ, “ಭಾರತೀಯ ಭೂಪ್ರದೇಶವನ್ನು ತಮ್ಮದೆಂದು ಘೋಷಿಸಿದ ನೇಪಾಳದ ವಿರುದ್ದ ನೇಪಾಳದ ಧ್ವಜವನ್ನು ಸುಟ್ಟು ಎಐಐಎಂ ಸದಸ್ಯರು ಪ್ರತಿಭಟಿಸಿದರು” ಎಂದು ಜಿಯಾ ಬರೆದಿದ್ದರು. ಈ ಪೋಸ್ಟ್ ಪ್ರಕಾರ ವೈರಲ್ ಚಿತ್ರದಲ್ಲಿರುವವರ ಹೆಸರು ಸಲೀಮ್ ಅಹ್ಮದ್ ಅನ್ಸಾರಿ ಮತ್ತು ಇಸ್ರಾರ್ ಅಹ್ಮದ್.

ಅಲ್ಲದೆ, ವೈರಲಾಗುತ್ತಿರುವ ಈ ಚಿತ್ರಕ್ಕೆ ಪ್ರತಾಪ್‌ಗಡದ ಪೊಲೀಸರು “ವಿವೇಕ್ 21 ಶುಕ್ಲಾ” ಎಂಬವರಿಗೆ ಪ್ರತಿಕ್ರಿಯಿಸಿ “ಮೇಲೆ ತಿಳಿಸಿದ ಪ್ರಕರಣದಲ್ಲಿ ಪ್ರದರ್ಶಿಸಲಾದ ಧ್ವಜ ನೇಪಾಳದದ್ದಾಗಿದ್ದು, ಭಾರತದ ಭೂಪ್ರದೇಶಗಳನ್ನು ತಮ್ಮ ಭೂಮಿ ಎಂದು ಘೋಷಿಸಿದ ನೇಪಾಳದ ಸಂಸತ್ತಿನ ವಿರುದ್ದ ಎಐಐಎಂ ಪಕ್ಷದ ಪ್ರತಾಪಗಡದ ಸದಸ್ಯರು ನೇಪಾಳದ ಧ್ವಜಗಳನ್ನು ಸುಟ್ಟುಹಾಕಿ ಪ್ರತಿಭಟಿಸಿದರು” ಎಂದು ಬರೆದಿದ್ದಾರೆ.

 

ಲಿಪುಲೆಖ್, ಕಾಲಾಪಾನಿ ಮತ್ತು ಲಿಂಪಿಯಾಡುರಾ ಪ್ರದೇಶಗಳನ್ನು ಒಳಗೊಂಡ ಹೊಸ ನಕ್ಷೆಯನ್ನು ನೇಪಾಳದ ಸಂಸತ್ತಿನಲ್ಲಿ ಇತ್ತೀಚೆಗೆ ಅಂಗೀಕರಿಸಲಾಗಿದೆ.

ಪ್ರತಾಪ್‌‌ಗಡದ ಪೊಲೀಸರು ಹಂಚಿಕೊಂಡ ಕ್ಲಿಪಿಂಗ್‌ನಲ್ಲಿ ಧ್ವಜವೂ ನೇಪಾಳದ್ದು ಎಂದು ಸ್ಪಷ್ಟವಾಗಿ ಕಾಣಬಹುದಾಗಿದೆ.

ಟ್ವಿಟ್ಟರ್‌ ಬಳಕೆದಾರರಾದ @ಅಸ್ಲಿ_ಶಿವಾನಿ ಎಂಬವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಪ್ರತಾಪಗಡ ಪೊಲೀಸರು ವೈರಲ್ ವೀಡಿಯೊದಲ್ಲಿರುವ ಪುರುಷರೊಬ್ಬರ ವೀಡಿಯೊ ಸ್ಪಷ್ಟೀಕರಣವನ್ನು ಅಪ್‌ಲೋಡ್ ಮಾಡಿದ್ದಾರೆ. ಅದರಲ್ಲಿ ಅವರು ಹೇಳಿದಂತೆ “ಈ ಪ್ರತಿಭಟನೆಯ ಕುರಿತು ಗೌರವಾನ್ವಿತ ಅಧ್ಯಕ್ಷ ಮತ್ತು ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ ಹಾಗೂ ನಾನು ನೇಪಾಳ ವಿರುದ್ಧ ಪ್ರತಿಭಟಿಸಿದ್ದೇನೆ. ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶದಿಂದ ಈ ಕೃತ್ಯ ಮಾಡಲಾಗಿದೆ ಎಂದು ಯಾರಾದರೂ ಭಾವಿಸಿದರೆ, ನಾನು ಕ್ಷಮೆಯಾಚಿಸುತ್ತೇನೆ” ಎಂದು ಹೇಳಿದ್ದಾರೆ.

ಇದಲ್ಲದೆ, ‘ನೇಪಾಳ ಮುರ್ದಾಬಾದ್’ ಎನ್ನುವ ಪೋಸ್ಟರ್‌ನೊಂದಿಗೆ ವೈರಲ್ ಚಿತ್ರಗಳಲ್ಲಿ ಎಐಐಎಂ ನ ಬ್ಯಾನರ್ ಅನ್ನು ಸ್ಪಷ್ಟವಾಗಿ ನೋಡಬಹುದಾಗಿದೆ.

ಜೂನ್ 18 ರಂದು ಯೂಟ್ಯೂಬ್ ಚಾನೆಲ್ ಓಸೋಕಿಂಗ್ ಒ’ಟಿವಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ಘಟನೆಯನ್ನು ಕಾಣಬಹುದಾಗಿದೆ.

ಆದ್ದರಿಂದ ಕೆಳಗಿನ ಚಿತ್ರದಲ್ಲಿ ಕಾಣುತ್ತಿರುವಂತೆ ವೈರಲಾಗುತ್ತಿರುವ ಚಿತ್ರ ನಕಲಿಯಾಗಿದ್ದು ಅದನ್ನು ತಿದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದಾರೆ. 


ಓದಿ: ಈ ಚಿತ್ರ ಭಾರತ-ಚೀನಾ ಘರ್ಷಣೆಯಲ್ಲಿ ಗಾಯಗೊಂಡ ಭಾರತೀಯ ಯೋಧನದ್ದೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...