Homeನಿಜವೋ ಸುಳ್ಳೋಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?

ಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?

- Advertisement -
- Advertisement -

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲೀಮೀನ್ (ಎಐಎಂಐಎಂ) ಬ್ಯಾನರ್ ಮುಂದೆ ಇಬ್ಬರು ಮುಸ್ಲಿಮರು ಧ್ವಜಗಳನ್ನು ಸುಡುವ ಮೂರು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ “ಉತ್ತರ ಪ್ರದೇಶದ ಎಐಎಂಐಎಂ ಪ್ರತಾಪಘಡದ ಸದಸ್ಯರು ಕೇಸರಿ ಧ್ವಜಗಳನ್ನು ಸುಟ್ಟುಹಾಕಿದರು” ಎಂದು ಬರೆಯಲಾಗಿದೆ.

ವೈರಲಾದ ಸಂದೇಶವನ್ನು ಹಲವಾರು ಜನರು ಟ್ವಿಟ್ಟರ್‌ನಲ್ಲಿ ಹಂಚಿ “ಇದು ಪ್ರತಾಪಗಡದ ಎಐಎಂಐಎಂನ ಎಂ.ಡಿ. ಸಲೀಮ್ ಅನ್ಸಾರಿ, ಅವರು ಕೇಸರಿ ಧ್ವಜವನ್ನು ಸಾರ್ವಜನಿಕವಾಗಿ ಸುಡುತ್ತಿದ್ದಾರೆ. ಇಂತವರು ಗಲಭೆಗೆ ಕಾರಣರಾಗುತ್ತಾರೆ” ಎಂದು ಯುಪಿ ಪೊಲೀಸರಿಗೆ ಆಪಾದಿತ ಘಟನೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಕೆಲವು ಫೇಸ್‌ಬುಕ್ ಬಳಕೆದಾರರು ಘಟನೆಯ ಮತ್ತೊಂದು ಚಿತ್ರವನ್ನು ಹಂಚಿಕೊಂಡು, “ಭಾರತದ ರಾಷ್ಟ್ರಧ್ವಜವನ್ನು ಸುಟ್ಟುಹಾಕುತ್ತಿದ್ದಾರೆ” ಎಂದು ಹೇಳಿಕೊಂಡಿದ್ದಾರೆ. ಚಿತ್ರದ ಹಿನ್ನಲೆಯಲ್ಲಿ ‘ಇಂಡಿಯಾ ಮುರ್ದಾಬಾದ್’ ಎಂದು ಬರೆದ ಪೋಸ್ಟರ್ ಕಂಡುಬರುತ್ತಿದೆ.

ಫ್ಯಾಕ್ಟ್-ಚೆಕ್

ಈ ವೈರಲ್ ಚಿತ್ರವನ್ನು ಜೂನ್ 14 ರಂದು ಪರ್ವಾನ ಮಲಿಕ್ ಜಿಯಾ ಎಂಬವರು ಪೋಸ್ಟ್ ಮಾಡಿದ್ದಾರೆ. ಪೋಸ್ಟ್‌ನಲ್ಲಿ, “ಭಾರತೀಯ ಭೂಪ್ರದೇಶವನ್ನು ತಮ್ಮದೆಂದು ಘೋಷಿಸಿದ ನೇಪಾಳದ ವಿರುದ್ದ ನೇಪಾಳದ ಧ್ವಜವನ್ನು ಸುಟ್ಟು ಎಐಐಎಂ ಸದಸ್ಯರು ಪ್ರತಿಭಟಿಸಿದರು” ಎಂದು ಜಿಯಾ ಬರೆದಿದ್ದರು. ಈ ಪೋಸ್ಟ್ ಪ್ರಕಾರ ವೈರಲ್ ಚಿತ್ರದಲ್ಲಿರುವವರ ಹೆಸರು ಸಲೀಮ್ ಅಹ್ಮದ್ ಅನ್ಸಾರಿ ಮತ್ತು ಇಸ್ರಾರ್ ಅಹ್ಮದ್.

ಅಲ್ಲದೆ, ವೈರಲಾಗುತ್ತಿರುವ ಈ ಚಿತ್ರಕ್ಕೆ ಪ್ರತಾಪ್‌ಗಡದ ಪೊಲೀಸರು “ವಿವೇಕ್ 21 ಶುಕ್ಲಾ” ಎಂಬವರಿಗೆ ಪ್ರತಿಕ್ರಿಯಿಸಿ “ಮೇಲೆ ತಿಳಿಸಿದ ಪ್ರಕರಣದಲ್ಲಿ ಪ್ರದರ್ಶಿಸಲಾದ ಧ್ವಜ ನೇಪಾಳದದ್ದಾಗಿದ್ದು, ಭಾರತದ ಭೂಪ್ರದೇಶಗಳನ್ನು ತಮ್ಮ ಭೂಮಿ ಎಂದು ಘೋಷಿಸಿದ ನೇಪಾಳದ ಸಂಸತ್ತಿನ ವಿರುದ್ದ ಎಐಐಎಂ ಪಕ್ಷದ ಪ್ರತಾಪಗಡದ ಸದಸ್ಯರು ನೇಪಾಳದ ಧ್ವಜಗಳನ್ನು ಸುಟ್ಟುಹಾಕಿ ಪ್ರತಿಭಟಿಸಿದರು” ಎಂದು ಬರೆದಿದ್ದಾರೆ.

 

ಲಿಪುಲೆಖ್, ಕಾಲಾಪಾನಿ ಮತ್ತು ಲಿಂಪಿಯಾಡುರಾ ಪ್ರದೇಶಗಳನ್ನು ಒಳಗೊಂಡ ಹೊಸ ನಕ್ಷೆಯನ್ನು ನೇಪಾಳದ ಸಂಸತ್ತಿನಲ್ಲಿ ಇತ್ತೀಚೆಗೆ ಅಂಗೀಕರಿಸಲಾಗಿದೆ.

ಪ್ರತಾಪ್‌‌ಗಡದ ಪೊಲೀಸರು ಹಂಚಿಕೊಂಡ ಕ್ಲಿಪಿಂಗ್‌ನಲ್ಲಿ ಧ್ವಜವೂ ನೇಪಾಳದ್ದು ಎಂದು ಸ್ಪಷ್ಟವಾಗಿ ಕಾಣಬಹುದಾಗಿದೆ.

ಟ್ವಿಟ್ಟರ್‌ ಬಳಕೆದಾರರಾದ @ಅಸ್ಲಿ_ಶಿವಾನಿ ಎಂಬವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಪ್ರತಾಪಗಡ ಪೊಲೀಸರು ವೈರಲ್ ವೀಡಿಯೊದಲ್ಲಿರುವ ಪುರುಷರೊಬ್ಬರ ವೀಡಿಯೊ ಸ್ಪಷ್ಟೀಕರಣವನ್ನು ಅಪ್‌ಲೋಡ್ ಮಾಡಿದ್ದಾರೆ. ಅದರಲ್ಲಿ ಅವರು ಹೇಳಿದಂತೆ “ಈ ಪ್ರತಿಭಟನೆಯ ಕುರಿತು ಗೌರವಾನ್ವಿತ ಅಧ್ಯಕ್ಷ ಮತ್ತು ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ ಹಾಗೂ ನಾನು ನೇಪಾಳ ವಿರುದ್ಧ ಪ್ರತಿಭಟಿಸಿದ್ದೇನೆ. ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶದಿಂದ ಈ ಕೃತ್ಯ ಮಾಡಲಾಗಿದೆ ಎಂದು ಯಾರಾದರೂ ಭಾವಿಸಿದರೆ, ನಾನು ಕ್ಷಮೆಯಾಚಿಸುತ್ತೇನೆ” ಎಂದು ಹೇಳಿದ್ದಾರೆ.

ಇದಲ್ಲದೆ, ‘ನೇಪಾಳ ಮುರ್ದಾಬಾದ್’ ಎನ್ನುವ ಪೋಸ್ಟರ್‌ನೊಂದಿಗೆ ವೈರಲ್ ಚಿತ್ರಗಳಲ್ಲಿ ಎಐಐಎಂ ನ ಬ್ಯಾನರ್ ಅನ್ನು ಸ್ಪಷ್ಟವಾಗಿ ನೋಡಬಹುದಾಗಿದೆ.

ಜೂನ್ 18 ರಂದು ಯೂಟ್ಯೂಬ್ ಚಾನೆಲ್ ಓಸೋಕಿಂಗ್ ಒ’ಟಿವಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ಘಟನೆಯನ್ನು ಕಾಣಬಹುದಾಗಿದೆ.

ಆದ್ದರಿಂದ ಕೆಳಗಿನ ಚಿತ್ರದಲ್ಲಿ ಕಾಣುತ್ತಿರುವಂತೆ ವೈರಲಾಗುತ್ತಿರುವ ಚಿತ್ರ ನಕಲಿಯಾಗಿದ್ದು ಅದನ್ನು ತಿದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದಾರೆ. 


ಓದಿ: ಈ ಚಿತ್ರ ಭಾರತ-ಚೀನಾ ಘರ್ಷಣೆಯಲ್ಲಿ ಗಾಯಗೊಂಡ ಭಾರತೀಯ ಯೋಧನದ್ದೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...