Homeನಿಜವೋ ಸುಳ್ಳೋಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?

ಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?

- Advertisement -
- Advertisement -

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲೀಮೀನ್ (ಎಐಎಂಐಎಂ) ಬ್ಯಾನರ್ ಮುಂದೆ ಇಬ್ಬರು ಮುಸ್ಲಿಮರು ಧ್ವಜಗಳನ್ನು ಸುಡುವ ಮೂರು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ “ಉತ್ತರ ಪ್ರದೇಶದ ಎಐಎಂಐಎಂ ಪ್ರತಾಪಘಡದ ಸದಸ್ಯರು ಕೇಸರಿ ಧ್ವಜಗಳನ್ನು ಸುಟ್ಟುಹಾಕಿದರು” ಎಂದು ಬರೆಯಲಾಗಿದೆ.

ವೈರಲಾದ ಸಂದೇಶವನ್ನು ಹಲವಾರು ಜನರು ಟ್ವಿಟ್ಟರ್‌ನಲ್ಲಿ ಹಂಚಿ “ಇದು ಪ್ರತಾಪಗಡದ ಎಐಎಂಐಎಂನ ಎಂ.ಡಿ. ಸಲೀಮ್ ಅನ್ಸಾರಿ, ಅವರು ಕೇಸರಿ ಧ್ವಜವನ್ನು ಸಾರ್ವಜನಿಕವಾಗಿ ಸುಡುತ್ತಿದ್ದಾರೆ. ಇಂತವರು ಗಲಭೆಗೆ ಕಾರಣರಾಗುತ್ತಾರೆ” ಎಂದು ಯುಪಿ ಪೊಲೀಸರಿಗೆ ಆಪಾದಿತ ಘಟನೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಕೆಲವು ಫೇಸ್‌ಬುಕ್ ಬಳಕೆದಾರರು ಘಟನೆಯ ಮತ್ತೊಂದು ಚಿತ್ರವನ್ನು ಹಂಚಿಕೊಂಡು, “ಭಾರತದ ರಾಷ್ಟ್ರಧ್ವಜವನ್ನು ಸುಟ್ಟುಹಾಕುತ್ತಿದ್ದಾರೆ” ಎಂದು ಹೇಳಿಕೊಂಡಿದ್ದಾರೆ. ಚಿತ್ರದ ಹಿನ್ನಲೆಯಲ್ಲಿ ‘ಇಂಡಿಯಾ ಮುರ್ದಾಬಾದ್’ ಎಂದು ಬರೆದ ಪೋಸ್ಟರ್ ಕಂಡುಬರುತ್ತಿದೆ.

ಫ್ಯಾಕ್ಟ್-ಚೆಕ್

ಈ ವೈರಲ್ ಚಿತ್ರವನ್ನು ಜೂನ್ 14 ರಂದು ಪರ್ವಾನ ಮಲಿಕ್ ಜಿಯಾ ಎಂಬವರು ಪೋಸ್ಟ್ ಮಾಡಿದ್ದಾರೆ. ಪೋಸ್ಟ್‌ನಲ್ಲಿ, “ಭಾರತೀಯ ಭೂಪ್ರದೇಶವನ್ನು ತಮ್ಮದೆಂದು ಘೋಷಿಸಿದ ನೇಪಾಳದ ವಿರುದ್ದ ನೇಪಾಳದ ಧ್ವಜವನ್ನು ಸುಟ್ಟು ಎಐಐಎಂ ಸದಸ್ಯರು ಪ್ರತಿಭಟಿಸಿದರು” ಎಂದು ಜಿಯಾ ಬರೆದಿದ್ದರು. ಈ ಪೋಸ್ಟ್ ಪ್ರಕಾರ ವೈರಲ್ ಚಿತ್ರದಲ್ಲಿರುವವರ ಹೆಸರು ಸಲೀಮ್ ಅಹ್ಮದ್ ಅನ್ಸಾರಿ ಮತ್ತು ಇಸ್ರಾರ್ ಅಹ್ಮದ್.

ಅಲ್ಲದೆ, ವೈರಲಾಗುತ್ತಿರುವ ಈ ಚಿತ್ರಕ್ಕೆ ಪ್ರತಾಪ್‌ಗಡದ ಪೊಲೀಸರು “ವಿವೇಕ್ 21 ಶುಕ್ಲಾ” ಎಂಬವರಿಗೆ ಪ್ರತಿಕ್ರಿಯಿಸಿ “ಮೇಲೆ ತಿಳಿಸಿದ ಪ್ರಕರಣದಲ್ಲಿ ಪ್ರದರ್ಶಿಸಲಾದ ಧ್ವಜ ನೇಪಾಳದದ್ದಾಗಿದ್ದು, ಭಾರತದ ಭೂಪ್ರದೇಶಗಳನ್ನು ತಮ್ಮ ಭೂಮಿ ಎಂದು ಘೋಷಿಸಿದ ನೇಪಾಳದ ಸಂಸತ್ತಿನ ವಿರುದ್ದ ಎಐಐಎಂ ಪಕ್ಷದ ಪ್ರತಾಪಗಡದ ಸದಸ್ಯರು ನೇಪಾಳದ ಧ್ವಜಗಳನ್ನು ಸುಟ್ಟುಹಾಕಿ ಪ್ರತಿಭಟಿಸಿದರು” ಎಂದು ಬರೆದಿದ್ದಾರೆ.

 

ಲಿಪುಲೆಖ್, ಕಾಲಾಪಾನಿ ಮತ್ತು ಲಿಂಪಿಯಾಡುರಾ ಪ್ರದೇಶಗಳನ್ನು ಒಳಗೊಂಡ ಹೊಸ ನಕ್ಷೆಯನ್ನು ನೇಪಾಳದ ಸಂಸತ್ತಿನಲ್ಲಿ ಇತ್ತೀಚೆಗೆ ಅಂಗೀಕರಿಸಲಾಗಿದೆ.

ಪ್ರತಾಪ್‌‌ಗಡದ ಪೊಲೀಸರು ಹಂಚಿಕೊಂಡ ಕ್ಲಿಪಿಂಗ್‌ನಲ್ಲಿ ಧ್ವಜವೂ ನೇಪಾಳದ್ದು ಎಂದು ಸ್ಪಷ್ಟವಾಗಿ ಕಾಣಬಹುದಾಗಿದೆ.

ಟ್ವಿಟ್ಟರ್‌ ಬಳಕೆದಾರರಾದ @ಅಸ್ಲಿ_ಶಿವಾನಿ ಎಂಬವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಪ್ರತಾಪಗಡ ಪೊಲೀಸರು ವೈರಲ್ ವೀಡಿಯೊದಲ್ಲಿರುವ ಪುರುಷರೊಬ್ಬರ ವೀಡಿಯೊ ಸ್ಪಷ್ಟೀಕರಣವನ್ನು ಅಪ್‌ಲೋಡ್ ಮಾಡಿದ್ದಾರೆ. ಅದರಲ್ಲಿ ಅವರು ಹೇಳಿದಂತೆ “ಈ ಪ್ರತಿಭಟನೆಯ ಕುರಿತು ಗೌರವಾನ್ವಿತ ಅಧ್ಯಕ್ಷ ಮತ್ತು ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ ಹಾಗೂ ನಾನು ನೇಪಾಳ ವಿರುದ್ಧ ಪ್ರತಿಭಟಿಸಿದ್ದೇನೆ. ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶದಿಂದ ಈ ಕೃತ್ಯ ಮಾಡಲಾಗಿದೆ ಎಂದು ಯಾರಾದರೂ ಭಾವಿಸಿದರೆ, ನಾನು ಕ್ಷಮೆಯಾಚಿಸುತ್ತೇನೆ” ಎಂದು ಹೇಳಿದ್ದಾರೆ.

ಇದಲ್ಲದೆ, ‘ನೇಪಾಳ ಮುರ್ದಾಬಾದ್’ ಎನ್ನುವ ಪೋಸ್ಟರ್‌ನೊಂದಿಗೆ ವೈರಲ್ ಚಿತ್ರಗಳಲ್ಲಿ ಎಐಐಎಂ ನ ಬ್ಯಾನರ್ ಅನ್ನು ಸ್ಪಷ್ಟವಾಗಿ ನೋಡಬಹುದಾಗಿದೆ.

ಜೂನ್ 18 ರಂದು ಯೂಟ್ಯೂಬ್ ಚಾನೆಲ್ ಓಸೋಕಿಂಗ್ ಒ’ಟಿವಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ಘಟನೆಯನ್ನು ಕಾಣಬಹುದಾಗಿದೆ.

ಆದ್ದರಿಂದ ಕೆಳಗಿನ ಚಿತ್ರದಲ್ಲಿ ಕಾಣುತ್ತಿರುವಂತೆ ವೈರಲಾಗುತ್ತಿರುವ ಚಿತ್ರ ನಕಲಿಯಾಗಿದ್ದು ಅದನ್ನು ತಿದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದಾರೆ. 


ಓದಿ: ಈ ಚಿತ್ರ ಭಾರತ-ಚೀನಾ ಘರ್ಷಣೆಯಲ್ಲಿ ಗಾಯಗೊಂಡ ಭಾರತೀಯ ಯೋಧನದ್ದೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...