Homeನಿಜವೋ ಸುಳ್ಳೋಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?

ಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?

- Advertisement -
- Advertisement -

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲೀಮೀನ್ (ಎಐಎಂಐಎಂ) ಬ್ಯಾನರ್ ಮುಂದೆ ಇಬ್ಬರು ಮುಸ್ಲಿಮರು ಧ್ವಜಗಳನ್ನು ಸುಡುವ ಮೂರು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ “ಉತ್ತರ ಪ್ರದೇಶದ ಎಐಎಂಐಎಂ ಪ್ರತಾಪಘಡದ ಸದಸ್ಯರು ಕೇಸರಿ ಧ್ವಜಗಳನ್ನು ಸುಟ್ಟುಹಾಕಿದರು” ಎಂದು ಬರೆಯಲಾಗಿದೆ.

ವೈರಲಾದ ಸಂದೇಶವನ್ನು ಹಲವಾರು ಜನರು ಟ್ವಿಟ್ಟರ್‌ನಲ್ಲಿ ಹಂಚಿ “ಇದು ಪ್ರತಾಪಗಡದ ಎಐಎಂಐಎಂನ ಎಂ.ಡಿ. ಸಲೀಮ್ ಅನ್ಸಾರಿ, ಅವರು ಕೇಸರಿ ಧ್ವಜವನ್ನು ಸಾರ್ವಜನಿಕವಾಗಿ ಸುಡುತ್ತಿದ್ದಾರೆ. ಇಂತವರು ಗಲಭೆಗೆ ಕಾರಣರಾಗುತ್ತಾರೆ” ಎಂದು ಯುಪಿ ಪೊಲೀಸರಿಗೆ ಆಪಾದಿತ ಘಟನೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಕೆಲವು ಫೇಸ್‌ಬುಕ್ ಬಳಕೆದಾರರು ಘಟನೆಯ ಮತ್ತೊಂದು ಚಿತ್ರವನ್ನು ಹಂಚಿಕೊಂಡು, “ಭಾರತದ ರಾಷ್ಟ್ರಧ್ವಜವನ್ನು ಸುಟ್ಟುಹಾಕುತ್ತಿದ್ದಾರೆ” ಎಂದು ಹೇಳಿಕೊಂಡಿದ್ದಾರೆ. ಚಿತ್ರದ ಹಿನ್ನಲೆಯಲ್ಲಿ ‘ಇಂಡಿಯಾ ಮುರ್ದಾಬಾದ್’ ಎಂದು ಬರೆದ ಪೋಸ್ಟರ್ ಕಂಡುಬರುತ್ತಿದೆ.

ಫ್ಯಾಕ್ಟ್-ಚೆಕ್

ಈ ವೈರಲ್ ಚಿತ್ರವನ್ನು ಜೂನ್ 14 ರಂದು ಪರ್ವಾನ ಮಲಿಕ್ ಜಿಯಾ ಎಂಬವರು ಪೋಸ್ಟ್ ಮಾಡಿದ್ದಾರೆ. ಪೋಸ್ಟ್‌ನಲ್ಲಿ, “ಭಾರತೀಯ ಭೂಪ್ರದೇಶವನ್ನು ತಮ್ಮದೆಂದು ಘೋಷಿಸಿದ ನೇಪಾಳದ ವಿರುದ್ದ ನೇಪಾಳದ ಧ್ವಜವನ್ನು ಸುಟ್ಟು ಎಐಐಎಂ ಸದಸ್ಯರು ಪ್ರತಿಭಟಿಸಿದರು” ಎಂದು ಜಿಯಾ ಬರೆದಿದ್ದರು. ಈ ಪೋಸ್ಟ್ ಪ್ರಕಾರ ವೈರಲ್ ಚಿತ್ರದಲ್ಲಿರುವವರ ಹೆಸರು ಸಲೀಮ್ ಅಹ್ಮದ್ ಅನ್ಸಾರಿ ಮತ್ತು ಇಸ್ರಾರ್ ಅಹ್ಮದ್.

ಅಲ್ಲದೆ, ವೈರಲಾಗುತ್ತಿರುವ ಈ ಚಿತ್ರಕ್ಕೆ ಪ್ರತಾಪ್‌ಗಡದ ಪೊಲೀಸರು “ವಿವೇಕ್ 21 ಶುಕ್ಲಾ” ಎಂಬವರಿಗೆ ಪ್ರತಿಕ್ರಿಯಿಸಿ “ಮೇಲೆ ತಿಳಿಸಿದ ಪ್ರಕರಣದಲ್ಲಿ ಪ್ರದರ್ಶಿಸಲಾದ ಧ್ವಜ ನೇಪಾಳದದ್ದಾಗಿದ್ದು, ಭಾರತದ ಭೂಪ್ರದೇಶಗಳನ್ನು ತಮ್ಮ ಭೂಮಿ ಎಂದು ಘೋಷಿಸಿದ ನೇಪಾಳದ ಸಂಸತ್ತಿನ ವಿರುದ್ದ ಎಐಐಎಂ ಪಕ್ಷದ ಪ್ರತಾಪಗಡದ ಸದಸ್ಯರು ನೇಪಾಳದ ಧ್ವಜಗಳನ್ನು ಸುಟ್ಟುಹಾಕಿ ಪ್ರತಿಭಟಿಸಿದರು” ಎಂದು ಬರೆದಿದ್ದಾರೆ.

 

ಲಿಪುಲೆಖ್, ಕಾಲಾಪಾನಿ ಮತ್ತು ಲಿಂಪಿಯಾಡುರಾ ಪ್ರದೇಶಗಳನ್ನು ಒಳಗೊಂಡ ಹೊಸ ನಕ್ಷೆಯನ್ನು ನೇಪಾಳದ ಸಂಸತ್ತಿನಲ್ಲಿ ಇತ್ತೀಚೆಗೆ ಅಂಗೀಕರಿಸಲಾಗಿದೆ.

ಪ್ರತಾಪ್‌‌ಗಡದ ಪೊಲೀಸರು ಹಂಚಿಕೊಂಡ ಕ್ಲಿಪಿಂಗ್‌ನಲ್ಲಿ ಧ್ವಜವೂ ನೇಪಾಳದ್ದು ಎಂದು ಸ್ಪಷ್ಟವಾಗಿ ಕಾಣಬಹುದಾಗಿದೆ.

ಟ್ವಿಟ್ಟರ್‌ ಬಳಕೆದಾರರಾದ @ಅಸ್ಲಿ_ಶಿವಾನಿ ಎಂಬವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಪ್ರತಾಪಗಡ ಪೊಲೀಸರು ವೈರಲ್ ವೀಡಿಯೊದಲ್ಲಿರುವ ಪುರುಷರೊಬ್ಬರ ವೀಡಿಯೊ ಸ್ಪಷ್ಟೀಕರಣವನ್ನು ಅಪ್‌ಲೋಡ್ ಮಾಡಿದ್ದಾರೆ. ಅದರಲ್ಲಿ ಅವರು ಹೇಳಿದಂತೆ “ಈ ಪ್ರತಿಭಟನೆಯ ಕುರಿತು ಗೌರವಾನ್ವಿತ ಅಧ್ಯಕ್ಷ ಮತ್ತು ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ ಹಾಗೂ ನಾನು ನೇಪಾಳ ವಿರುದ್ಧ ಪ್ರತಿಭಟಿಸಿದ್ದೇನೆ. ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶದಿಂದ ಈ ಕೃತ್ಯ ಮಾಡಲಾಗಿದೆ ಎಂದು ಯಾರಾದರೂ ಭಾವಿಸಿದರೆ, ನಾನು ಕ್ಷಮೆಯಾಚಿಸುತ್ತೇನೆ” ಎಂದು ಹೇಳಿದ್ದಾರೆ.

ಇದಲ್ಲದೆ, ‘ನೇಪಾಳ ಮುರ್ದಾಬಾದ್’ ಎನ್ನುವ ಪೋಸ್ಟರ್‌ನೊಂದಿಗೆ ವೈರಲ್ ಚಿತ್ರಗಳಲ್ಲಿ ಎಐಐಎಂ ನ ಬ್ಯಾನರ್ ಅನ್ನು ಸ್ಪಷ್ಟವಾಗಿ ನೋಡಬಹುದಾಗಿದೆ.

ಜೂನ್ 18 ರಂದು ಯೂಟ್ಯೂಬ್ ಚಾನೆಲ್ ಓಸೋಕಿಂಗ್ ಒ’ಟಿವಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ಘಟನೆಯನ್ನು ಕಾಣಬಹುದಾಗಿದೆ.

ಆದ್ದರಿಂದ ಕೆಳಗಿನ ಚಿತ್ರದಲ್ಲಿ ಕಾಣುತ್ತಿರುವಂತೆ ವೈರಲಾಗುತ್ತಿರುವ ಚಿತ್ರ ನಕಲಿಯಾಗಿದ್ದು ಅದನ್ನು ತಿದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದಾರೆ. 


ಓದಿ: ಈ ಚಿತ್ರ ಭಾರತ-ಚೀನಾ ಘರ್ಷಣೆಯಲ್ಲಿ ಗಾಯಗೊಂಡ ಭಾರತೀಯ ಯೋಧನದ್ದೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...