Homeನಿಜವೋ ಸುಳ್ಳೋಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?

ಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?

- Advertisement -
- Advertisement -

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲೀಮೀನ್ (ಎಐಎಂಐಎಂ) ಬ್ಯಾನರ್ ಮುಂದೆ ಇಬ್ಬರು ಮುಸ್ಲಿಮರು ಧ್ವಜಗಳನ್ನು ಸುಡುವ ಮೂರು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ “ಉತ್ತರ ಪ್ರದೇಶದ ಎಐಎಂಐಎಂ ಪ್ರತಾಪಘಡದ ಸದಸ್ಯರು ಕೇಸರಿ ಧ್ವಜಗಳನ್ನು ಸುಟ್ಟುಹಾಕಿದರು” ಎಂದು ಬರೆಯಲಾಗಿದೆ.

ವೈರಲಾದ ಸಂದೇಶವನ್ನು ಹಲವಾರು ಜನರು ಟ್ವಿಟ್ಟರ್‌ನಲ್ಲಿ ಹಂಚಿ “ಇದು ಪ್ರತಾಪಗಡದ ಎಐಎಂಐಎಂನ ಎಂ.ಡಿ. ಸಲೀಮ್ ಅನ್ಸಾರಿ, ಅವರು ಕೇಸರಿ ಧ್ವಜವನ್ನು ಸಾರ್ವಜನಿಕವಾಗಿ ಸುಡುತ್ತಿದ್ದಾರೆ. ಇಂತವರು ಗಲಭೆಗೆ ಕಾರಣರಾಗುತ್ತಾರೆ” ಎಂದು ಯುಪಿ ಪೊಲೀಸರಿಗೆ ಆಪಾದಿತ ಘಟನೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಕೆಲವು ಫೇಸ್‌ಬುಕ್ ಬಳಕೆದಾರರು ಘಟನೆಯ ಮತ್ತೊಂದು ಚಿತ್ರವನ್ನು ಹಂಚಿಕೊಂಡು, “ಭಾರತದ ರಾಷ್ಟ್ರಧ್ವಜವನ್ನು ಸುಟ್ಟುಹಾಕುತ್ತಿದ್ದಾರೆ” ಎಂದು ಹೇಳಿಕೊಂಡಿದ್ದಾರೆ. ಚಿತ್ರದ ಹಿನ್ನಲೆಯಲ್ಲಿ ‘ಇಂಡಿಯಾ ಮುರ್ದಾಬಾದ್’ ಎಂದು ಬರೆದ ಪೋಸ್ಟರ್ ಕಂಡುಬರುತ್ತಿದೆ.

ಫ್ಯಾಕ್ಟ್-ಚೆಕ್

ಈ ವೈರಲ್ ಚಿತ್ರವನ್ನು ಜೂನ್ 14 ರಂದು ಪರ್ವಾನ ಮಲಿಕ್ ಜಿಯಾ ಎಂಬವರು ಪೋಸ್ಟ್ ಮಾಡಿದ್ದಾರೆ. ಪೋಸ್ಟ್‌ನಲ್ಲಿ, “ಭಾರತೀಯ ಭೂಪ್ರದೇಶವನ್ನು ತಮ್ಮದೆಂದು ಘೋಷಿಸಿದ ನೇಪಾಳದ ವಿರುದ್ದ ನೇಪಾಳದ ಧ್ವಜವನ್ನು ಸುಟ್ಟು ಎಐಐಎಂ ಸದಸ್ಯರು ಪ್ರತಿಭಟಿಸಿದರು” ಎಂದು ಜಿಯಾ ಬರೆದಿದ್ದರು. ಈ ಪೋಸ್ಟ್ ಪ್ರಕಾರ ವೈರಲ್ ಚಿತ್ರದಲ್ಲಿರುವವರ ಹೆಸರು ಸಲೀಮ್ ಅಹ್ಮದ್ ಅನ್ಸಾರಿ ಮತ್ತು ಇಸ್ರಾರ್ ಅಹ್ಮದ್.

ಅಲ್ಲದೆ, ವೈರಲಾಗುತ್ತಿರುವ ಈ ಚಿತ್ರಕ್ಕೆ ಪ್ರತಾಪ್‌ಗಡದ ಪೊಲೀಸರು “ವಿವೇಕ್ 21 ಶುಕ್ಲಾ” ಎಂಬವರಿಗೆ ಪ್ರತಿಕ್ರಿಯಿಸಿ “ಮೇಲೆ ತಿಳಿಸಿದ ಪ್ರಕರಣದಲ್ಲಿ ಪ್ರದರ್ಶಿಸಲಾದ ಧ್ವಜ ನೇಪಾಳದದ್ದಾಗಿದ್ದು, ಭಾರತದ ಭೂಪ್ರದೇಶಗಳನ್ನು ತಮ್ಮ ಭೂಮಿ ಎಂದು ಘೋಷಿಸಿದ ನೇಪಾಳದ ಸಂಸತ್ತಿನ ವಿರುದ್ದ ಎಐಐಎಂ ಪಕ್ಷದ ಪ್ರತಾಪಗಡದ ಸದಸ್ಯರು ನೇಪಾಳದ ಧ್ವಜಗಳನ್ನು ಸುಟ್ಟುಹಾಕಿ ಪ್ರತಿಭಟಿಸಿದರು” ಎಂದು ಬರೆದಿದ್ದಾರೆ.

 

ಲಿಪುಲೆಖ್, ಕಾಲಾಪಾನಿ ಮತ್ತು ಲಿಂಪಿಯಾಡುರಾ ಪ್ರದೇಶಗಳನ್ನು ಒಳಗೊಂಡ ಹೊಸ ನಕ್ಷೆಯನ್ನು ನೇಪಾಳದ ಸಂಸತ್ತಿನಲ್ಲಿ ಇತ್ತೀಚೆಗೆ ಅಂಗೀಕರಿಸಲಾಗಿದೆ.

ಪ್ರತಾಪ್‌‌ಗಡದ ಪೊಲೀಸರು ಹಂಚಿಕೊಂಡ ಕ್ಲಿಪಿಂಗ್‌ನಲ್ಲಿ ಧ್ವಜವೂ ನೇಪಾಳದ್ದು ಎಂದು ಸ್ಪಷ್ಟವಾಗಿ ಕಾಣಬಹುದಾಗಿದೆ.

ಟ್ವಿಟ್ಟರ್‌ ಬಳಕೆದಾರರಾದ @ಅಸ್ಲಿ_ಶಿವಾನಿ ಎಂಬವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಪ್ರತಾಪಗಡ ಪೊಲೀಸರು ವೈರಲ್ ವೀಡಿಯೊದಲ್ಲಿರುವ ಪುರುಷರೊಬ್ಬರ ವೀಡಿಯೊ ಸ್ಪಷ್ಟೀಕರಣವನ್ನು ಅಪ್‌ಲೋಡ್ ಮಾಡಿದ್ದಾರೆ. ಅದರಲ್ಲಿ ಅವರು ಹೇಳಿದಂತೆ “ಈ ಪ್ರತಿಭಟನೆಯ ಕುರಿತು ಗೌರವಾನ್ವಿತ ಅಧ್ಯಕ್ಷ ಮತ್ತು ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ ಹಾಗೂ ನಾನು ನೇಪಾಳ ವಿರುದ್ಧ ಪ್ರತಿಭಟಿಸಿದ್ದೇನೆ. ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶದಿಂದ ಈ ಕೃತ್ಯ ಮಾಡಲಾಗಿದೆ ಎಂದು ಯಾರಾದರೂ ಭಾವಿಸಿದರೆ, ನಾನು ಕ್ಷಮೆಯಾಚಿಸುತ್ತೇನೆ” ಎಂದು ಹೇಳಿದ್ದಾರೆ.

ಇದಲ್ಲದೆ, ‘ನೇಪಾಳ ಮುರ್ದಾಬಾದ್’ ಎನ್ನುವ ಪೋಸ್ಟರ್‌ನೊಂದಿಗೆ ವೈರಲ್ ಚಿತ್ರಗಳಲ್ಲಿ ಎಐಐಎಂ ನ ಬ್ಯಾನರ್ ಅನ್ನು ಸ್ಪಷ್ಟವಾಗಿ ನೋಡಬಹುದಾಗಿದೆ.

ಜೂನ್ 18 ರಂದು ಯೂಟ್ಯೂಬ್ ಚಾನೆಲ್ ಓಸೋಕಿಂಗ್ ಒ’ಟಿವಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ಘಟನೆಯನ್ನು ಕಾಣಬಹುದಾಗಿದೆ.

ಆದ್ದರಿಂದ ಕೆಳಗಿನ ಚಿತ್ರದಲ್ಲಿ ಕಾಣುತ್ತಿರುವಂತೆ ವೈರಲಾಗುತ್ತಿರುವ ಚಿತ್ರ ನಕಲಿಯಾಗಿದ್ದು ಅದನ್ನು ತಿದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದಾರೆ. 


ಓದಿ: ಈ ಚಿತ್ರ ಭಾರತ-ಚೀನಾ ಘರ್ಷಣೆಯಲ್ಲಿ ಗಾಯಗೊಂಡ ಭಾರತೀಯ ಯೋಧನದ್ದೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...