Homeಫ್ಯಾಕ್ಟ್‌ಚೆಕ್Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

- Advertisement -
- Advertisement -

2008 ರ ಮುಂಬೈ ದಾಳಿಯ ಅಪರಾಧಿ ಮೊಹಮ್ಮದ್ ಅಜ್ಮಲ್ ಅಮೀರ್ ಕಸಬ್‌ಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ತಡೆಯಬೇಕೆಂದು ಸಲ್ಲಿಸಿದ್ದ ಅರ್ಜಿಗೆ ಸಹಿ ಮಾಡಿದ 302 ಜನರಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹ ಒಬ್ಬರು ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿದ್ದಾರೆ.

[ವೈರಲ್ ಹೇಳಿಕೆ: ಕಸಬ್ ನನ್ನು ನೇಣಿಗೇರಿಸುವುದನ್ನು ತಡೆಯುವಂತೆ ಮನವಿ ಮಾಡಿದ್ದ ಅರ್ಜಿಗೆ ಸಹಿ ಹಾಕಿದ 302 ಜನರಲ್ಲಿ ಅಖಿಲೇಶ್ ಯಾದವ್ ಒಬ್ಬರು, ಇದನ್ನು ಸಹೋದರರ ಮತ್ತು ಸಹೋದರಿಯರು ನೆನಪಿಸಿಕೊಂಡಿದ್ದಾರೆಯೇ ಅಥವಾ ಮರೆತಿದ್ದಾರೆಯೇ]

ಹರಿಯಾಣ ಬಿಜೆಪಿ ಸಾಮಾಜಿಕ ಮಾಧ್ಯಮ ಮುಖ್ಯಸ್ಥ ಅರುಣ್ ಯಾದವ್ ಈ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಅನ್ನು 23,000 ಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ.

ಹಿಂದೂ ಯುವ ವಾಹಿನಿ ಗುಜರಾತ್-ಉಸ್ತುವಾರಿ ಯೋಗಿ ದೇವನಾಥ್ ಕೂಡ ಈ ಹೇಳಿಕೆನ್ನು ಟ್ವೀಟ್ ಮಾಡಿದ್ದಾರೆ ಮತ್ತು 3,000 ಕ್ಕೂ ಹೆಚ್ಚು ರಿಟ್ವೀಟ್‌ಗಳು (ಆರ್‌ಟಿ) ಆದ ನಂತರ ಅದನ್ನು ಅಳಿಸಿದ್ದಾರೆ.

ಇದೇ ಹೇಳಿಕೆಯನ್ನು ಹಲವಾರು ಫೇಸ್‌ಬುಕ್‌ ಪೇಜ್‌ಗಳಲ್ಲಿ ಪೋಸ್ಟ್‌ ಮಾಡಲಾಗಿದೆ. ಅವುಗಳೆಂದರೆ – ಮಹಾನ್ ಹಿಂದೂಸ್ತಾನ್ (2,000 ಶೇರ್‌ಗಳು), ಯುಪಿ ಸಿಎಂ ರಿಪೋರ್ಟ್ ಕಾರ್ಡ್ (7,500 ಇಷ್ಟಗಳು), ಪ್ರೊ ಮೋದಿ ನ್ಯೂಸ್ (4,500 ಇಷ್ಟಗಳು), ಸರ್ಚ್ ಇಂಡಿಯಾ (2,800 ಲೈಕ್‌ಗಳು) ಅಬ್ ಮೋದಿ ಹೈ ಟು ಮಮ್ಕಿನ್ ಹೈ (1000 ಲೈಕ್‌ಗಳು) ) ), ಏಕ್ ಬಿಹಾರಿ 100 ಪೆ ಭಾರಿ (2,300 ಇಷ್ಟಗಳು).

ಸತ್ಯ:

25 ವರ್ಷದ ಕಸಬ್‌ನನ್ನು ನವೆಂಬರ್ 21, 2012 ರಂದು ಗಲ್ಲಿಗೇರಿಸಲಾಯಿತು. ಕ್ರಿಮಿನಲ್ ಪಿತೂರಿ, ರಾಷ್ಟ್ರದ ವಿರುದ್ಧ ಭಯೋತ್ಪಾದನೆ ನಡೆಸುವುದು ಮತ್ತು ಭಾರತೀಯ ದಂಡ ಸಂಹಿತೆ ಮತ್ತು ಭಯೋತ್ಪಾದನಾ-ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯಿದೆಯ ವಿವಿಧ ನಿಬಂಧನೆಗಳ ಆರೋಪದ ಮೇಲೆ ಮರಣದಂಡನೆಯನ್ನು ಎತ್ತಿಹಿಡಿಯಲಾಯಿತು.

ಮರಣದಂಡನೆಗೆ ಕೆಲವು ವಾರಗಳ ಮೊದಲು ಕಸಬ್‌ ಸಲ್ಲಿಸಿದ್ದ ಕ್ಷಮಾದಾನದ ಮನವಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನವೆಂಬರ್ 5, 2012 ರಂದು ತಿರಸ್ಕರಿಸಿದರುಇಂಡಿಯನ್ ಎಕ್ಸ್‌ಪ್ರೆಸ್‌ನ 2012ರ ವರದಿಯ ಪ್ರಕಾರ, ಮರಣದಂಡನೆ ಶಿಕ್ಷೆಯನ್ನು ಬದಲಿಸುವಂತೆ 203 ಕ್ಕೂ ಹೆಚ್ಚು ಜನರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಸಲ್ಲಿಸಿದ್ದ ಮನವಿಗೆ ಸಹಿ ಹಾಕಿದ್ದರು.

ಮುಂಬೈ ಮೂಲದ ವಕೀಲ ಯುಗ್ ಚೌಧರಿ ಅವರು ಅಕ್ಟೋಬರ್ 28, 2012 ರಂದು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು. ರಾಷ್ಟ್ರಪತಿಗಳಿಗೆ ಕಳುಹಿಸಿದ ಮೊದಲ ಬ್ಯಾಚ್‌ನಲ್ಲಿ 203 ಜನರು ಅರ್ಜಿಗೆ ಸಹಿ ಹಾಕಿದ್ದರು. ಎರಡನೇ ಬ್ಯಾಚ್‌ನಲ್ಲಿ ಸುಮಾರು 15-20 ಸಹಿಗಳನ್ನು ಪಡೆಯಲಾಗಿದೆ, ಅದನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ” ಎಂದು ಚೌಧರಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅಖಿಲೇಶ್‌ ಯಾದವ್ ಕೂಡ ಅರ್ಜಿಗೆ ಸಹಿ ಹಾಕಿದ್ದಾರೆ ಎಂಬ ಹೇಳಿಕೆಗಳು ವೈರಲ್‌ ಆಗುತ್ತಿದ್ದ ಹಿನ್ನೆಲೆಯಲ್ಲಿ ಆಲ್ಟ್‌ ನ್ಯೂಸ್‌ ಕೂಡ ಚೌಧರಿ ಅವರನ್ನು ಸಂಪರ್ಕಿಸಿದಾಗ, ಅವರು ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಮಾಡಿದವರಲ್ಲಿ ಒಬ್ಬರಲ್ಲ ಎಂದು ಅವರು ದೃಢಪಡಿಸಿದ್ದಾರೆ. “ಸಹಿ ಮಾಡಿದವರಿಗೆ ಸಾಕಷ್ಟು ಕಿರುಕುಳ ನೀಡಲಾಗಿರುವುದರಿಂದ ವಿಷಯದ ಕುರಿತು ಯಾವುದೇ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ನಾನು ಸಿದ್ಧನಿಲ್ಲ” ಎಂದೂ ಅವರು ಹೇಳಿದ್ದಾರೆ.

ಆದ್ದರಿಂದ, ಬಿಜೆಪಿ ನಾಯಕ ಅರುಣ್ ಯಾದವ್ ಸೇರಿದಂತೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಕಸಬ್‌ನ ಮರಣದಂಡನೆಗೆ ಕ್ಷಮಾದಾನ ಕೋರುವ ಅರ್ಜಿಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹಿ ಮಾಡಿದ್ದಾರೆ ಎಂದು ಸುಳ್ಳು ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ 2022ರ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪ್ರಭಲ ನಾಯಕರಲ್ಲಿ ಒಬ್ಬರಾದ ಅಖಿಲೇಶ್ ಯಾದವ್ ಅವರ ವಿರುದ್ದ ಅಪಪ್ರಚಾರ ಮಾಡಲಾಗುತ್ತಿದ್ದು, ಅಂತದ್ದೇ ಉದ್ದೇಶದಿಂದ ಈ ಪೋಸ್ಟ್‌ ವೈರಲ್ ಆಗಿದೆ.

ಕೃಪೆ: ಆಲ್ಟ್‌ ನ್ಯೂಸ್‌


ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....