HomeದಿಟನಾಗರFact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

- Advertisement -
- Advertisement -

2008 ರ ಮುಂಬೈ ದಾಳಿಯ ಅಪರಾಧಿ ಮೊಹಮ್ಮದ್ ಅಜ್ಮಲ್ ಅಮೀರ್ ಕಸಬ್‌ಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ತಡೆಯಬೇಕೆಂದು ಸಲ್ಲಿಸಿದ್ದ ಅರ್ಜಿಗೆ ಸಹಿ ಮಾಡಿದ 302 ಜನರಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹ ಒಬ್ಬರು ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿದ್ದಾರೆ.

[ವೈರಲ್ ಹೇಳಿಕೆ: ಕಸಬ್ ನನ್ನು ನೇಣಿಗೇರಿಸುವುದನ್ನು ತಡೆಯುವಂತೆ ಮನವಿ ಮಾಡಿದ್ದ ಅರ್ಜಿಗೆ ಸಹಿ ಹಾಕಿದ 302 ಜನರಲ್ಲಿ ಅಖಿಲೇಶ್ ಯಾದವ್ ಒಬ್ಬರು, ಇದನ್ನು ಸಹೋದರರ ಮತ್ತು ಸಹೋದರಿಯರು ನೆನಪಿಸಿಕೊಂಡಿದ್ದಾರೆಯೇ ಅಥವಾ ಮರೆತಿದ್ದಾರೆಯೇ]

ಹರಿಯಾಣ ಬಿಜೆಪಿ ಸಾಮಾಜಿಕ ಮಾಧ್ಯಮ ಮುಖ್ಯಸ್ಥ ಅರುಣ್ ಯಾದವ್ ಈ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಅನ್ನು 23,000 ಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ.

ಹಿಂದೂ ಯುವ ವಾಹಿನಿ ಗುಜರಾತ್-ಉಸ್ತುವಾರಿ ಯೋಗಿ ದೇವನಾಥ್ ಕೂಡ ಈ ಹೇಳಿಕೆನ್ನು ಟ್ವೀಟ್ ಮಾಡಿದ್ದಾರೆ ಮತ್ತು 3,000 ಕ್ಕೂ ಹೆಚ್ಚು ರಿಟ್ವೀಟ್‌ಗಳು (ಆರ್‌ಟಿ) ಆದ ನಂತರ ಅದನ್ನು ಅಳಿಸಿದ್ದಾರೆ.

ಇದೇ ಹೇಳಿಕೆಯನ್ನು ಹಲವಾರು ಫೇಸ್‌ಬುಕ್‌ ಪೇಜ್‌ಗಳಲ್ಲಿ ಪೋಸ್ಟ್‌ ಮಾಡಲಾಗಿದೆ. ಅವುಗಳೆಂದರೆ – ಮಹಾನ್ ಹಿಂದೂಸ್ತಾನ್ (2,000 ಶೇರ್‌ಗಳು), ಯುಪಿ ಸಿಎಂ ರಿಪೋರ್ಟ್ ಕಾರ್ಡ್ (7,500 ಇಷ್ಟಗಳು), ಪ್ರೊ ಮೋದಿ ನ್ಯೂಸ್ (4,500 ಇಷ್ಟಗಳು), ಸರ್ಚ್ ಇಂಡಿಯಾ (2,800 ಲೈಕ್‌ಗಳು) ಅಬ್ ಮೋದಿ ಹೈ ಟು ಮಮ್ಕಿನ್ ಹೈ (1000 ಲೈಕ್‌ಗಳು) ) ), ಏಕ್ ಬಿಹಾರಿ 100 ಪೆ ಭಾರಿ (2,300 ಇಷ್ಟಗಳು).

ಸತ್ಯ:

25 ವರ್ಷದ ಕಸಬ್‌ನನ್ನು ನವೆಂಬರ್ 21, 2012 ರಂದು ಗಲ್ಲಿಗೇರಿಸಲಾಯಿತು. ಕ್ರಿಮಿನಲ್ ಪಿತೂರಿ, ರಾಷ್ಟ್ರದ ವಿರುದ್ಧ ಭಯೋತ್ಪಾದನೆ ನಡೆಸುವುದು ಮತ್ತು ಭಾರತೀಯ ದಂಡ ಸಂಹಿತೆ ಮತ್ತು ಭಯೋತ್ಪಾದನಾ-ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯಿದೆಯ ವಿವಿಧ ನಿಬಂಧನೆಗಳ ಆರೋಪದ ಮೇಲೆ ಮರಣದಂಡನೆಯನ್ನು ಎತ್ತಿಹಿಡಿಯಲಾಯಿತು.

ಮರಣದಂಡನೆಗೆ ಕೆಲವು ವಾರಗಳ ಮೊದಲು ಕಸಬ್‌ ಸಲ್ಲಿಸಿದ್ದ ಕ್ಷಮಾದಾನದ ಮನವಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನವೆಂಬರ್ 5, 2012 ರಂದು ತಿರಸ್ಕರಿಸಿದರುಇಂಡಿಯನ್ ಎಕ್ಸ್‌ಪ್ರೆಸ್‌ನ 2012ರ ವರದಿಯ ಪ್ರಕಾರ, ಮರಣದಂಡನೆ ಶಿಕ್ಷೆಯನ್ನು ಬದಲಿಸುವಂತೆ 203 ಕ್ಕೂ ಹೆಚ್ಚು ಜನರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಸಲ್ಲಿಸಿದ್ದ ಮನವಿಗೆ ಸಹಿ ಹಾಕಿದ್ದರು.

ಮುಂಬೈ ಮೂಲದ ವಕೀಲ ಯುಗ್ ಚೌಧರಿ ಅವರು ಅಕ್ಟೋಬರ್ 28, 2012 ರಂದು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು. ರಾಷ್ಟ್ರಪತಿಗಳಿಗೆ ಕಳುಹಿಸಿದ ಮೊದಲ ಬ್ಯಾಚ್‌ನಲ್ಲಿ 203 ಜನರು ಅರ್ಜಿಗೆ ಸಹಿ ಹಾಕಿದ್ದರು. ಎರಡನೇ ಬ್ಯಾಚ್‌ನಲ್ಲಿ ಸುಮಾರು 15-20 ಸಹಿಗಳನ್ನು ಪಡೆಯಲಾಗಿದೆ, ಅದನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ” ಎಂದು ಚೌಧರಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅಖಿಲೇಶ್‌ ಯಾದವ್ ಕೂಡ ಅರ್ಜಿಗೆ ಸಹಿ ಹಾಕಿದ್ದಾರೆ ಎಂಬ ಹೇಳಿಕೆಗಳು ವೈರಲ್‌ ಆಗುತ್ತಿದ್ದ ಹಿನ್ನೆಲೆಯಲ್ಲಿ ಆಲ್ಟ್‌ ನ್ಯೂಸ್‌ ಕೂಡ ಚೌಧರಿ ಅವರನ್ನು ಸಂಪರ್ಕಿಸಿದಾಗ, ಅವರು ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಮಾಡಿದವರಲ್ಲಿ ಒಬ್ಬರಲ್ಲ ಎಂದು ಅವರು ದೃಢಪಡಿಸಿದ್ದಾರೆ. “ಸಹಿ ಮಾಡಿದವರಿಗೆ ಸಾಕಷ್ಟು ಕಿರುಕುಳ ನೀಡಲಾಗಿರುವುದರಿಂದ ವಿಷಯದ ಕುರಿತು ಯಾವುದೇ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ನಾನು ಸಿದ್ಧನಿಲ್ಲ” ಎಂದೂ ಅವರು ಹೇಳಿದ್ದಾರೆ.

ಆದ್ದರಿಂದ, ಬಿಜೆಪಿ ನಾಯಕ ಅರುಣ್ ಯಾದವ್ ಸೇರಿದಂತೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಕಸಬ್‌ನ ಮರಣದಂಡನೆಗೆ ಕ್ಷಮಾದಾನ ಕೋರುವ ಅರ್ಜಿಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹಿ ಮಾಡಿದ್ದಾರೆ ಎಂದು ಸುಳ್ಳು ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ 2022ರ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪ್ರಭಲ ನಾಯಕರಲ್ಲಿ ಒಬ್ಬರಾದ ಅಖಿಲೇಶ್ ಯಾದವ್ ಅವರ ವಿರುದ್ದ ಅಪಪ್ರಚಾರ ಮಾಡಲಾಗುತ್ತಿದ್ದು, ಅಂತದ್ದೇ ಉದ್ದೇಶದಿಂದ ಈ ಪೋಸ್ಟ್‌ ವೈರಲ್ ಆಗಿದೆ.

ಕೃಪೆ: ಆಲ್ಟ್‌ ನ್ಯೂಸ್‌


ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...