Homeಫ್ಯಾಕ್ಟ್‌ಚೆಕ್Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

- Advertisement -
- Advertisement -

2008 ರ ಮುಂಬೈ ದಾಳಿಯ ಅಪರಾಧಿ ಮೊಹಮ್ಮದ್ ಅಜ್ಮಲ್ ಅಮೀರ್ ಕಸಬ್‌ಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ತಡೆಯಬೇಕೆಂದು ಸಲ್ಲಿಸಿದ್ದ ಅರ್ಜಿಗೆ ಸಹಿ ಮಾಡಿದ 302 ಜನರಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹ ಒಬ್ಬರು ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿದ್ದಾರೆ.

[ವೈರಲ್ ಹೇಳಿಕೆ: ಕಸಬ್ ನನ್ನು ನೇಣಿಗೇರಿಸುವುದನ್ನು ತಡೆಯುವಂತೆ ಮನವಿ ಮಾಡಿದ್ದ ಅರ್ಜಿಗೆ ಸಹಿ ಹಾಕಿದ 302 ಜನರಲ್ಲಿ ಅಖಿಲೇಶ್ ಯಾದವ್ ಒಬ್ಬರು, ಇದನ್ನು ಸಹೋದರರ ಮತ್ತು ಸಹೋದರಿಯರು ನೆನಪಿಸಿಕೊಂಡಿದ್ದಾರೆಯೇ ಅಥವಾ ಮರೆತಿದ್ದಾರೆಯೇ]

ಹರಿಯಾಣ ಬಿಜೆಪಿ ಸಾಮಾಜಿಕ ಮಾಧ್ಯಮ ಮುಖ್ಯಸ್ಥ ಅರುಣ್ ಯಾದವ್ ಈ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಅನ್ನು 23,000 ಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ.

ಹಿಂದೂ ಯುವ ವಾಹಿನಿ ಗುಜರಾತ್-ಉಸ್ತುವಾರಿ ಯೋಗಿ ದೇವನಾಥ್ ಕೂಡ ಈ ಹೇಳಿಕೆನ್ನು ಟ್ವೀಟ್ ಮಾಡಿದ್ದಾರೆ ಮತ್ತು 3,000 ಕ್ಕೂ ಹೆಚ್ಚು ರಿಟ್ವೀಟ್‌ಗಳು (ಆರ್‌ಟಿ) ಆದ ನಂತರ ಅದನ್ನು ಅಳಿಸಿದ್ದಾರೆ.

ಇದೇ ಹೇಳಿಕೆಯನ್ನು ಹಲವಾರು ಫೇಸ್‌ಬುಕ್‌ ಪೇಜ್‌ಗಳಲ್ಲಿ ಪೋಸ್ಟ್‌ ಮಾಡಲಾಗಿದೆ. ಅವುಗಳೆಂದರೆ – ಮಹಾನ್ ಹಿಂದೂಸ್ತಾನ್ (2,000 ಶೇರ್‌ಗಳು), ಯುಪಿ ಸಿಎಂ ರಿಪೋರ್ಟ್ ಕಾರ್ಡ್ (7,500 ಇಷ್ಟಗಳು), ಪ್ರೊ ಮೋದಿ ನ್ಯೂಸ್ (4,500 ಇಷ್ಟಗಳು), ಸರ್ಚ್ ಇಂಡಿಯಾ (2,800 ಲೈಕ್‌ಗಳು) ಅಬ್ ಮೋದಿ ಹೈ ಟು ಮಮ್ಕಿನ್ ಹೈ (1000 ಲೈಕ್‌ಗಳು) ) ), ಏಕ್ ಬಿಹಾರಿ 100 ಪೆ ಭಾರಿ (2,300 ಇಷ್ಟಗಳು).

ಸತ್ಯ:

25 ವರ್ಷದ ಕಸಬ್‌ನನ್ನು ನವೆಂಬರ್ 21, 2012 ರಂದು ಗಲ್ಲಿಗೇರಿಸಲಾಯಿತು. ಕ್ರಿಮಿನಲ್ ಪಿತೂರಿ, ರಾಷ್ಟ್ರದ ವಿರುದ್ಧ ಭಯೋತ್ಪಾದನೆ ನಡೆಸುವುದು ಮತ್ತು ಭಾರತೀಯ ದಂಡ ಸಂಹಿತೆ ಮತ್ತು ಭಯೋತ್ಪಾದನಾ-ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯಿದೆಯ ವಿವಿಧ ನಿಬಂಧನೆಗಳ ಆರೋಪದ ಮೇಲೆ ಮರಣದಂಡನೆಯನ್ನು ಎತ್ತಿಹಿಡಿಯಲಾಯಿತು.

ಮರಣದಂಡನೆಗೆ ಕೆಲವು ವಾರಗಳ ಮೊದಲು ಕಸಬ್‌ ಸಲ್ಲಿಸಿದ್ದ ಕ್ಷಮಾದಾನದ ಮನವಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನವೆಂಬರ್ 5, 2012 ರಂದು ತಿರಸ್ಕರಿಸಿದರುಇಂಡಿಯನ್ ಎಕ್ಸ್‌ಪ್ರೆಸ್‌ನ 2012ರ ವರದಿಯ ಪ್ರಕಾರ, ಮರಣದಂಡನೆ ಶಿಕ್ಷೆಯನ್ನು ಬದಲಿಸುವಂತೆ 203 ಕ್ಕೂ ಹೆಚ್ಚು ಜನರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಸಲ್ಲಿಸಿದ್ದ ಮನವಿಗೆ ಸಹಿ ಹಾಕಿದ್ದರು.

ಮುಂಬೈ ಮೂಲದ ವಕೀಲ ಯುಗ್ ಚೌಧರಿ ಅವರು ಅಕ್ಟೋಬರ್ 28, 2012 ರಂದು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು. ರಾಷ್ಟ್ರಪತಿಗಳಿಗೆ ಕಳುಹಿಸಿದ ಮೊದಲ ಬ್ಯಾಚ್‌ನಲ್ಲಿ 203 ಜನರು ಅರ್ಜಿಗೆ ಸಹಿ ಹಾಕಿದ್ದರು. ಎರಡನೇ ಬ್ಯಾಚ್‌ನಲ್ಲಿ ಸುಮಾರು 15-20 ಸಹಿಗಳನ್ನು ಪಡೆಯಲಾಗಿದೆ, ಅದನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ” ಎಂದು ಚೌಧರಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅಖಿಲೇಶ್‌ ಯಾದವ್ ಕೂಡ ಅರ್ಜಿಗೆ ಸಹಿ ಹಾಕಿದ್ದಾರೆ ಎಂಬ ಹೇಳಿಕೆಗಳು ವೈರಲ್‌ ಆಗುತ್ತಿದ್ದ ಹಿನ್ನೆಲೆಯಲ್ಲಿ ಆಲ್ಟ್‌ ನ್ಯೂಸ್‌ ಕೂಡ ಚೌಧರಿ ಅವರನ್ನು ಸಂಪರ್ಕಿಸಿದಾಗ, ಅವರು ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಮಾಡಿದವರಲ್ಲಿ ಒಬ್ಬರಲ್ಲ ಎಂದು ಅವರು ದೃಢಪಡಿಸಿದ್ದಾರೆ. “ಸಹಿ ಮಾಡಿದವರಿಗೆ ಸಾಕಷ್ಟು ಕಿರುಕುಳ ನೀಡಲಾಗಿರುವುದರಿಂದ ವಿಷಯದ ಕುರಿತು ಯಾವುದೇ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ನಾನು ಸಿದ್ಧನಿಲ್ಲ” ಎಂದೂ ಅವರು ಹೇಳಿದ್ದಾರೆ.

ಆದ್ದರಿಂದ, ಬಿಜೆಪಿ ನಾಯಕ ಅರುಣ್ ಯಾದವ್ ಸೇರಿದಂತೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಕಸಬ್‌ನ ಮರಣದಂಡನೆಗೆ ಕ್ಷಮಾದಾನ ಕೋರುವ ಅರ್ಜಿಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹಿ ಮಾಡಿದ್ದಾರೆ ಎಂದು ಸುಳ್ಳು ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ 2022ರ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪ್ರಭಲ ನಾಯಕರಲ್ಲಿ ಒಬ್ಬರಾದ ಅಖಿಲೇಶ್ ಯಾದವ್ ಅವರ ವಿರುದ್ದ ಅಪಪ್ರಚಾರ ಮಾಡಲಾಗುತ್ತಿದ್ದು, ಅಂತದ್ದೇ ಉದ್ದೇಶದಿಂದ ಈ ಪೋಸ್ಟ್‌ ವೈರಲ್ ಆಗಿದೆ.

ಕೃಪೆ: ಆಲ್ಟ್‌ ನ್ಯೂಸ್‌


ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...