Homeಫ್ಯಾಕ್ಟ್‌ಚೆಕ್FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್...

FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

- Advertisement -
- Advertisement -

ಚುನಾವಣಾ ಭಾಷಣಗಳಲ್ಲಿ ಧರ್ಮದ ವಿಚಾರವನ್ನು ಉಲ್ಲೇಖಿಸುವುದು, ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಆರೋಪಗಳನ್ನು ಮಾಡುವುದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಸೇರಿದಂತೆ ಬಿಜೆಪಿ ನಾಯಕರಿಗೆ ಈಗ ಸಾಮಾನ್ಯ ವಿಷಯವಾಗಿಬಿಟ್ಟಿದೆ.

ಇತ್ತೀಚೆಗೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸೆರಾಂಪೋರ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಗುರಿಯಾಗಿಸಿ ಎರಡು ಆರೋಪಗಳನ್ನು ಮಾಡಿದ್ದರು.

ಅಮಿತ್ ಶಾ ಅವರ ಭಾಷಣವದ ವಿಡಿಯೋವನ್ನು ಮೇ 15, 2024ರಂದು ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ. ಒಟ್ಟು 27 ನಿಮಿಷ 8 ಸೆಕೆಂಡ್ ಅವಧಿಯ ವಿಡಿಯೋದಲ್ಲಿ 18 ನಿಮಿಷ 21 ಸೆಕೆಂಡ್‌ನಿಂದ ಅಮಿತ್ ಶಾ ಈ ಕೆಳಗಿನಂತೆ ಹೇಳಿದ್ದಾರೆ.

ಮಮತಾ ಬ್ಯಾನರ್ಜಿಯವರು ರಂಝಾನ್ ಸಮಯದಲ್ಲಿ ಮುಸ್ಲಿಮರಿಗೆ ರಜೆ ನೀಡುತ್ತಾರೆ. ಆ ಬಗ್ಗೆ ನಮಗೇನು ಅಭ್ಯಂತರವಿಲ್ಲ, ಬೇಕಿದ್ದರೆ ರಜೆ ಕೊಡಲಿ. ಆದರೆ, ದುರ್ಗಾ ಪೂಜೆಯ ಸಮಯದಲ್ಲಿ ಯಾಕೆ ರಜೆ ಕೊಡುತ್ತಿಲ್ಲಎಂಬುವುದಕ್ಕೆ ನಮಗೆ ಉತ್ತರಬೇಕು. ಯಾಕೆ ಈ ತಾರತಮ್ಯ?”

ವಿಡಿಯೋದಲ್ಲಿ 17 ನಿಮಿಷ 46 ಸೆಕೆಂಡ್‌ನಿಂದ ಅಮಿತ್ ಅವರು ಮತ್ತೊಂದು ಆರೋಪ ಮಾಡಿರುವುದು ಇದೆ. ಅದು ಹೀಗಿದೆ…“ಈ ಇಮಾಮ್‌ಗಳು ಮತ್ತು ಮುಲ್ಲಾಗಳು ಬಂಗಾಳದ ಲಾಕರ್‌ಗಳಿಂದ ಸಂಬಳ ಪಡೆಯಬೇಕೇ? ಇಲ್ಲ ಎಂದು ಹೈಕೋರ್ಟ್ ಹೇಳಿದ್ದರಿಂದ ಮಮತಾ ಬ್ಯಾನರ್ಜಿ ಅವರು ನಿಧಿಗಾಗಿ ವಕ್ಫ್ ಮಂಡಳಿಯ ಮೊರೆ ಹೋಗಿದ್ದಾರೆ”

ಫ್ಯಾಕ್ಟ್‌ಚೆಕ್ : ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ಎರಡು ಆರೋಪಗಳನ್ನು ಮಾಡಿದ್ದಾರೆ. ಒಂದು ದುರ್ಗಾ ಪೂಜೆಗೆ ಪಶ್ಚಿಮ ಬಂಗಾಳ ಸರ್ಕಾರ ರಜೆ ನೀಡುತ್ತಿಲ್ಲ ಎಂಬುವುದು. ಮತ್ತೊಂದು ಮಸೀದಿಯ ಇಮಾಮ್‌ಗಳಿಗೆ ವಕ್ಫ್ ಮಂಡಳಿಯಿಂದ ಸಂಬಳ ನೀಡಲಾಗ್ತಿದೆ ಎಂಬುವುದು. ಈ ಬಗ್ಗೆ ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಪಶ್ಚಿಮ ಬಂಗಾಳ ಸರ್ಕಾರದ 2024ರ ಸಾರ್ವಜನಿಕ ರಜಾ ದಿನಗಳನ್ನು ಎರಡು ಪಟ್ಟಿಗಳಾಗಿ ವಿಂಗಡಿಸಲಾಗಿದೆ. ಹಣಕಾಸು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪಟ್ಟಿ-1ರ ಪ್ರಕಾರ, ಅಕ್ಟೋಬರ್ 2 ರಂದು ಮಹಾಲಯ, ಅಕ್ಟೋಬರ್ 10 ರಂದು ದುರ್ಗಾ ಪೂಜೆ, ಮಹಾ ಸಪ್ತಮಿ, ಅಕ್ಟೋಬರ್ 11 ರಂದು ದುರ್ಗಾ ಪೂಜೆ, ಮಹಾ ಅಷ್ಟಮಿ ಮತ್ತು ಮಹಾ ನಾಬಮಿ ಮತ್ತು ಅಕ್ಟೋಬರ್ 12 ರಂದು ದುರ್ಗಾ ಪೂಜೆ, ದಶಮಿ ರಜಾದಿನಗಳಿವೆ.

ಪಟ್ಟಿ-2ರಲ್ಲಿ ಕೋಲ್ಕತ್ತಾದ ರಿಜಿಸ್ಟ್ರಾರ್ ಆಫ್ ಅಶ್ಯೂರೆನ್ಸ್ ಮತ್ತು ಕೋಲ್ಕತ್ತಾದ ಸ್ಟಾಂಪ್ ರೆವಿನ್ಯೂ ಕಲೆಕ್ಟರ್ ಹೊರತುಪಡಿಸಿ ಪಶ್ಚಿಮ ಬಂಗಾಳ ಸರ್ಕಾರದ ಅಧೀನದ ಕಚೇರಿಗಳಿಗೆ ಅಕ್ಟೋಬರ್ 7 ರಂದು ದುರ್ಗಾ ಪೂಜೆ, ಮಹಾ ಚತುರ್ಥಿ, ಅಕ್ಟೋಬರ್ 8 ರಂದು ದುರ್ಗಾ ಪೂಜೆ, ಮಹಾ ಪಂಚಮಿ, ಅಕ್ಟೋಬರ್ 9 ರಂದು ದುರ್ಗಾ ಪೂಜೆ ಮಹಾ ಷಷ್ಠಿ ಮತ್ತು ಅಕ್ಟೋಬರ್ 14 ಮತ್ತು 15 ರಂದು ಹೆಚ್ಚಿನ ದುರ್ಗಾ ಪೂಜೆಗೆ ಹೆಚ್ಚುವರಿ ರಜೆಗಳನ್ನು ನೀಡಲಾಗಿದೆ. ಪಟ್ಟಿ-2 ಸಾರ್ವಜನಿಕ ರಜಾದಿನಗಳ ಅಡಿಯಲ್ಲಿ ಬರುವುದಿಲ್ಲ. ಇದನ್ನು ಹೆಚ್ಚುವರಿ ರಜೆಗಳೆಂದು ಪರಿಗಣಿಸಲಾಗಿದೆ.

ಪಶ್ಚಿಮ ಬಂಗಾಳ ಸರ್ಕಾರದ ಅಧಿಕೃತ ಪ್ರಕಟನೆಯಲ್ಲಿ ದುರ್ಗಾ ಪೂಜೆಗೆ 4 ದಿನಗಳ ಸಾರ್ವಜನಿಕ ರಜೆ ಮತ್ತು 5 ದಿನಗಳ ಹೆಚ್ಚುವರಿ ರಜೆ ಸೇರಿ ಒಟ್ಟು 9 ದಿನಗಳ ರಜೆ ನೀಡಲಾಗಿದೆ. ಹಾಗಾಗಿ, ದುರ್ಗಾ ಪೂಜೆಗೆ ರಜೆ ನೀಡಿಲ್ಲ ಎಂಬ ಅಮಿತ್ ಶಾ ಅವರ ಹೇಳಿಕೆ ಸುಳ್ಳು.

ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ 

ಇಮಾಮ್‌ಗಳು ಮಾತ್ರ ಬಂಗಾಳ ಸರ್ಕಾರದಿಂದ ಗೌರವಧನ ಪಡೆಯುತ್ತಿದ್ದಾರೆಯೇ?

ಅಮಿತ್ ಶಾ ಅವರು ತನ್ನ ಭಾಷಣದಲ್ಲಿ ಮಾಡಿರುವ ಎರಡನೇ ಆರೋಪದ ಬಗ್ಗೆ ನಾವು ಮಾಹಿತಿ ಕಲೆ ಹಾಕಿದ್ದೇವೆ. ನಮಗೆ ಲಭ್ಯವಾದ ಮಾಹಿತಿ ಪ್ರಕಾರ..

2012 ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರವು ಪಶ್ಚಿಮ ಬಂಗಾಳದ ಮಸೀದಿಗಳ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳಿಗೆ ಗೌರವಧನವನ್ನು ಘೋಷಿಸಿತ್ತು. ಈ ನಿರ್ಧಾರವನ್ನು ಆ ಸಮಯದಲ್ಲಿ ಕಲ್ಕತ್ತಾ ಹೈಕೋರ್ಟ್ ತಳ್ಳಿಹಾಕಿತ್ತು. ಅಂದಿನಿಂದ ಮಾಸಿಕ ಗೌರವಧನವನ್ನು ವಕ್ಫ್ ಬೋರ್ಡ್ ಮೂಲಕ ನೀಡಲಾಗ್ತಿದೆ.

ಸೆಪ್ಟೆಂಬರ್ 2020ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರ ರಾಜ್ಯದ ಸುಮಾರು 8,000 ಹಿಂದೂ ಪುರೋಹಿತರಿಗೆ ತಿಂಗಳಿಗೆ 1,000 ರೂಪಾಯಿ ಗೌರವಧನವನ್ನು ಘೋಷಿಸಿದ್ದರು. ಆ ವರ್ಷ ದುರ್ಗಾಪೂಜೆಗೂ ಮುನ್ನ ಗೌರವಧನ ಆರಂಭಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಕ್ರಿಶ್ಚಿಯನ್ ಪಾದ್ರಿಗಳು ಸೇರಿದಂತೆ ಎಲ್ಲಾ ಧರ್ಮಗಳ ಧರ್ಮಗುರುಗಳು ಗೌರವಧನ ಕೇಳಿದರೆ ಅವರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಈ ಘೋಷಣೆಯ ನಂತರ ವಿರೋಧ ಪಕ್ಷಗಳು ಸರ್ಕಾರದ ಕ್ರಮವನ್ನು ಟೀಕಿಸಿದ್ದವು. ಮಮತಾ ಬ್ಯಾನರ್ಜಿ ಧರ್ಮವನ್ನು ರಾಜಕೀಯದೊಂದಿಗೆ ಬೆರೆಸಿದ್ದಾರೆ ಎಂದು ಆರೋಪಿಸಿತ್ತು.

ಆಗಸ್ಟ್ 2023ರಲ್ಲಿ, ಮುಸ್ಲಿಂ ಧರ್ಮಗುರುಗಳು ಮತ್ತು ಹಿಂದೂ ಪುರೋಹಿತರ ಮಾಸಿಕ ಭತ್ಯೆಗಳಲ್ಲಿ 500ರೂ. ಹೆಚ್ಚಳ ಮಾಡಿ ಮಮತಾ ಬ್ಯಾನರ್ಜಿ ಸರ್ಕಾರ ಆದೇಶಿಸಿತ್ತು. 2012ರಿಂದ ಅಲ್ಲಿಯವರೆಗೆ, ಇಮಾಮ್‌ಗಳು ಮಾಸಿಕ 2,500 ರೂ. ಮತ್ತು ಮುಅಝ್ಝಿನ್‌ಗಳು 1,000 ಪಡೆಯುತ್ತಿದ್ದರು. ಹೆಚ್ಚಳದ ನಂತರ, ಇಮಾಮ್‌ಗಳು ರೂ. 3000 ಮತ್ತು ಮುಅಝ್ಝಿನ್‌ಗಳು 1,500 ಪಡೆಯುತ್ತಿದ್ದಾರೆ. ಹಿಂದೂ ಪುರೋಹಿತರ ಗೌರವಧನ 1,500ಕ್ಕೆ ಹೆಚ್ಚಳವಾಗಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳು ಮಾತ್ರ ಸರ್ಕಾರದಿಂದ ಗೌರವಧನ ಪಡೆಯುತ್ತಿಲ್ಲ. ಹಿಂದೂ ಪುರೋಹಿತರು ಕೂಡ ಗೌರವಧನ ಪಡೆಯುತ್ತಿದ್ದಾರೆ. ಆದರೆ, ಎರಡು ಕಡೆಯವರ ಗೌರವಧನದ ಮೊತ್ತದಲ್ಲಿ ವ್ಯತ್ಯಾಸಗಳಿವೆ. ಅಲ್ಲದೆ, ಇಮಾಮ್ ಮತ್ತು ಮುಅಝ್ಝಿನ್‌ಗಳಿಗೆ ಗೌರವಧನ ಘೋಷಿಸಿದ ಎಂಟು ವರ್ಷಗಳ ಬಳಿಕ ಹಿಂದೂ ಪುರೋಹಿತರಿಗೆ ಗೌರವಧನ ಘೋಷಿಸಲಾಗಿದೆ.

ಇದನ್ನೂ ಓದಿ : FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...