Homeಫ್ಯಾಕ್ಟ್‌ಚೆಕ್FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್...

FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

- Advertisement -
- Advertisement -

ಚುನಾವಣಾ ಭಾಷಣಗಳಲ್ಲಿ ಧರ್ಮದ ವಿಚಾರವನ್ನು ಉಲ್ಲೇಖಿಸುವುದು, ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಆರೋಪಗಳನ್ನು ಮಾಡುವುದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಸೇರಿದಂತೆ ಬಿಜೆಪಿ ನಾಯಕರಿಗೆ ಈಗ ಸಾಮಾನ್ಯ ವಿಷಯವಾಗಿಬಿಟ್ಟಿದೆ.

ಇತ್ತೀಚೆಗೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸೆರಾಂಪೋರ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಗುರಿಯಾಗಿಸಿ ಎರಡು ಆರೋಪಗಳನ್ನು ಮಾಡಿದ್ದರು.

ಅಮಿತ್ ಶಾ ಅವರ ಭಾಷಣವದ ವಿಡಿಯೋವನ್ನು ಮೇ 15, 2024ರಂದು ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ. ಒಟ್ಟು 27 ನಿಮಿಷ 8 ಸೆಕೆಂಡ್ ಅವಧಿಯ ವಿಡಿಯೋದಲ್ಲಿ 18 ನಿಮಿಷ 21 ಸೆಕೆಂಡ್‌ನಿಂದ ಅಮಿತ್ ಶಾ ಈ ಕೆಳಗಿನಂತೆ ಹೇಳಿದ್ದಾರೆ.

ಮಮತಾ ಬ್ಯಾನರ್ಜಿಯವರು ರಂಝಾನ್ ಸಮಯದಲ್ಲಿ ಮುಸ್ಲಿಮರಿಗೆ ರಜೆ ನೀಡುತ್ತಾರೆ. ಆ ಬಗ್ಗೆ ನಮಗೇನು ಅಭ್ಯಂತರವಿಲ್ಲ, ಬೇಕಿದ್ದರೆ ರಜೆ ಕೊಡಲಿ. ಆದರೆ, ದುರ್ಗಾ ಪೂಜೆಯ ಸಮಯದಲ್ಲಿ ಯಾಕೆ ರಜೆ ಕೊಡುತ್ತಿಲ್ಲಎಂಬುವುದಕ್ಕೆ ನಮಗೆ ಉತ್ತರಬೇಕು. ಯಾಕೆ ಈ ತಾರತಮ್ಯ?”

ವಿಡಿಯೋದಲ್ಲಿ 17 ನಿಮಿಷ 46 ಸೆಕೆಂಡ್‌ನಿಂದ ಅಮಿತ್ ಅವರು ಮತ್ತೊಂದು ಆರೋಪ ಮಾಡಿರುವುದು ಇದೆ. ಅದು ಹೀಗಿದೆ…“ಈ ಇಮಾಮ್‌ಗಳು ಮತ್ತು ಮುಲ್ಲಾಗಳು ಬಂಗಾಳದ ಲಾಕರ್‌ಗಳಿಂದ ಸಂಬಳ ಪಡೆಯಬೇಕೇ? ಇಲ್ಲ ಎಂದು ಹೈಕೋರ್ಟ್ ಹೇಳಿದ್ದರಿಂದ ಮಮತಾ ಬ್ಯಾನರ್ಜಿ ಅವರು ನಿಧಿಗಾಗಿ ವಕ್ಫ್ ಮಂಡಳಿಯ ಮೊರೆ ಹೋಗಿದ್ದಾರೆ”

ಫ್ಯಾಕ್ಟ್‌ಚೆಕ್ : ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ಎರಡು ಆರೋಪಗಳನ್ನು ಮಾಡಿದ್ದಾರೆ. ಒಂದು ದುರ್ಗಾ ಪೂಜೆಗೆ ಪಶ್ಚಿಮ ಬಂಗಾಳ ಸರ್ಕಾರ ರಜೆ ನೀಡುತ್ತಿಲ್ಲ ಎಂಬುವುದು. ಮತ್ತೊಂದು ಮಸೀದಿಯ ಇಮಾಮ್‌ಗಳಿಗೆ ವಕ್ಫ್ ಮಂಡಳಿಯಿಂದ ಸಂಬಳ ನೀಡಲಾಗ್ತಿದೆ ಎಂಬುವುದು. ಈ ಬಗ್ಗೆ ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಪಶ್ಚಿಮ ಬಂಗಾಳ ಸರ್ಕಾರದ 2024ರ ಸಾರ್ವಜನಿಕ ರಜಾ ದಿನಗಳನ್ನು ಎರಡು ಪಟ್ಟಿಗಳಾಗಿ ವಿಂಗಡಿಸಲಾಗಿದೆ. ಹಣಕಾಸು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪಟ್ಟಿ-1ರ ಪ್ರಕಾರ, ಅಕ್ಟೋಬರ್ 2 ರಂದು ಮಹಾಲಯ, ಅಕ್ಟೋಬರ್ 10 ರಂದು ದುರ್ಗಾ ಪೂಜೆ, ಮಹಾ ಸಪ್ತಮಿ, ಅಕ್ಟೋಬರ್ 11 ರಂದು ದುರ್ಗಾ ಪೂಜೆ, ಮಹಾ ಅಷ್ಟಮಿ ಮತ್ತು ಮಹಾ ನಾಬಮಿ ಮತ್ತು ಅಕ್ಟೋಬರ್ 12 ರಂದು ದುರ್ಗಾ ಪೂಜೆ, ದಶಮಿ ರಜಾದಿನಗಳಿವೆ.

ಪಟ್ಟಿ-2ರಲ್ಲಿ ಕೋಲ್ಕತ್ತಾದ ರಿಜಿಸ್ಟ್ರಾರ್ ಆಫ್ ಅಶ್ಯೂರೆನ್ಸ್ ಮತ್ತು ಕೋಲ್ಕತ್ತಾದ ಸ್ಟಾಂಪ್ ರೆವಿನ್ಯೂ ಕಲೆಕ್ಟರ್ ಹೊರತುಪಡಿಸಿ ಪಶ್ಚಿಮ ಬಂಗಾಳ ಸರ್ಕಾರದ ಅಧೀನದ ಕಚೇರಿಗಳಿಗೆ ಅಕ್ಟೋಬರ್ 7 ರಂದು ದುರ್ಗಾ ಪೂಜೆ, ಮಹಾ ಚತುರ್ಥಿ, ಅಕ್ಟೋಬರ್ 8 ರಂದು ದುರ್ಗಾ ಪೂಜೆ, ಮಹಾ ಪಂಚಮಿ, ಅಕ್ಟೋಬರ್ 9 ರಂದು ದುರ್ಗಾ ಪೂಜೆ ಮಹಾ ಷಷ್ಠಿ ಮತ್ತು ಅಕ್ಟೋಬರ್ 14 ಮತ್ತು 15 ರಂದು ಹೆಚ್ಚಿನ ದುರ್ಗಾ ಪೂಜೆಗೆ ಹೆಚ್ಚುವರಿ ರಜೆಗಳನ್ನು ನೀಡಲಾಗಿದೆ. ಪಟ್ಟಿ-2 ಸಾರ್ವಜನಿಕ ರಜಾದಿನಗಳ ಅಡಿಯಲ್ಲಿ ಬರುವುದಿಲ್ಲ. ಇದನ್ನು ಹೆಚ್ಚುವರಿ ರಜೆಗಳೆಂದು ಪರಿಗಣಿಸಲಾಗಿದೆ.

ಪಶ್ಚಿಮ ಬಂಗಾಳ ಸರ್ಕಾರದ ಅಧಿಕೃತ ಪ್ರಕಟನೆಯಲ್ಲಿ ದುರ್ಗಾ ಪೂಜೆಗೆ 4 ದಿನಗಳ ಸಾರ್ವಜನಿಕ ರಜೆ ಮತ್ತು 5 ದಿನಗಳ ಹೆಚ್ಚುವರಿ ರಜೆ ಸೇರಿ ಒಟ್ಟು 9 ದಿನಗಳ ರಜೆ ನೀಡಲಾಗಿದೆ. ಹಾಗಾಗಿ, ದುರ್ಗಾ ಪೂಜೆಗೆ ರಜೆ ನೀಡಿಲ್ಲ ಎಂಬ ಅಮಿತ್ ಶಾ ಅವರ ಹೇಳಿಕೆ ಸುಳ್ಳು.

ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ 

ಇಮಾಮ್‌ಗಳು ಮಾತ್ರ ಬಂಗಾಳ ಸರ್ಕಾರದಿಂದ ಗೌರವಧನ ಪಡೆಯುತ್ತಿದ್ದಾರೆಯೇ?

ಅಮಿತ್ ಶಾ ಅವರು ತನ್ನ ಭಾಷಣದಲ್ಲಿ ಮಾಡಿರುವ ಎರಡನೇ ಆರೋಪದ ಬಗ್ಗೆ ನಾವು ಮಾಹಿತಿ ಕಲೆ ಹಾಕಿದ್ದೇವೆ. ನಮಗೆ ಲಭ್ಯವಾದ ಮಾಹಿತಿ ಪ್ರಕಾರ..

2012 ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರವು ಪಶ್ಚಿಮ ಬಂಗಾಳದ ಮಸೀದಿಗಳ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳಿಗೆ ಗೌರವಧನವನ್ನು ಘೋಷಿಸಿತ್ತು. ಈ ನಿರ್ಧಾರವನ್ನು ಆ ಸಮಯದಲ್ಲಿ ಕಲ್ಕತ್ತಾ ಹೈಕೋರ್ಟ್ ತಳ್ಳಿಹಾಕಿತ್ತು. ಅಂದಿನಿಂದ ಮಾಸಿಕ ಗೌರವಧನವನ್ನು ವಕ್ಫ್ ಬೋರ್ಡ್ ಮೂಲಕ ನೀಡಲಾಗ್ತಿದೆ.

ಸೆಪ್ಟೆಂಬರ್ 2020ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರ ರಾಜ್ಯದ ಸುಮಾರು 8,000 ಹಿಂದೂ ಪುರೋಹಿತರಿಗೆ ತಿಂಗಳಿಗೆ 1,000 ರೂಪಾಯಿ ಗೌರವಧನವನ್ನು ಘೋಷಿಸಿದ್ದರು. ಆ ವರ್ಷ ದುರ್ಗಾಪೂಜೆಗೂ ಮುನ್ನ ಗೌರವಧನ ಆರಂಭಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಕ್ರಿಶ್ಚಿಯನ್ ಪಾದ್ರಿಗಳು ಸೇರಿದಂತೆ ಎಲ್ಲಾ ಧರ್ಮಗಳ ಧರ್ಮಗುರುಗಳು ಗೌರವಧನ ಕೇಳಿದರೆ ಅವರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಈ ಘೋಷಣೆಯ ನಂತರ ವಿರೋಧ ಪಕ್ಷಗಳು ಸರ್ಕಾರದ ಕ್ರಮವನ್ನು ಟೀಕಿಸಿದ್ದವು. ಮಮತಾ ಬ್ಯಾನರ್ಜಿ ಧರ್ಮವನ್ನು ರಾಜಕೀಯದೊಂದಿಗೆ ಬೆರೆಸಿದ್ದಾರೆ ಎಂದು ಆರೋಪಿಸಿತ್ತು.

ಆಗಸ್ಟ್ 2023ರಲ್ಲಿ, ಮುಸ್ಲಿಂ ಧರ್ಮಗುರುಗಳು ಮತ್ತು ಹಿಂದೂ ಪುರೋಹಿತರ ಮಾಸಿಕ ಭತ್ಯೆಗಳಲ್ಲಿ 500ರೂ. ಹೆಚ್ಚಳ ಮಾಡಿ ಮಮತಾ ಬ್ಯಾನರ್ಜಿ ಸರ್ಕಾರ ಆದೇಶಿಸಿತ್ತು. 2012ರಿಂದ ಅಲ್ಲಿಯವರೆಗೆ, ಇಮಾಮ್‌ಗಳು ಮಾಸಿಕ 2,500 ರೂ. ಮತ್ತು ಮುಅಝ್ಝಿನ್‌ಗಳು 1,000 ಪಡೆಯುತ್ತಿದ್ದರು. ಹೆಚ್ಚಳದ ನಂತರ, ಇಮಾಮ್‌ಗಳು ರೂ. 3000 ಮತ್ತು ಮುಅಝ್ಝಿನ್‌ಗಳು 1,500 ಪಡೆಯುತ್ತಿದ್ದಾರೆ. ಹಿಂದೂ ಪುರೋಹಿತರ ಗೌರವಧನ 1,500ಕ್ಕೆ ಹೆಚ್ಚಳವಾಗಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳು ಮಾತ್ರ ಸರ್ಕಾರದಿಂದ ಗೌರವಧನ ಪಡೆಯುತ್ತಿಲ್ಲ. ಹಿಂದೂ ಪುರೋಹಿತರು ಕೂಡ ಗೌರವಧನ ಪಡೆಯುತ್ತಿದ್ದಾರೆ. ಆದರೆ, ಎರಡು ಕಡೆಯವರ ಗೌರವಧನದ ಮೊತ್ತದಲ್ಲಿ ವ್ಯತ್ಯಾಸಗಳಿವೆ. ಅಲ್ಲದೆ, ಇಮಾಮ್ ಮತ್ತು ಮುಅಝ್ಝಿನ್‌ಗಳಿಗೆ ಗೌರವಧನ ಘೋಷಿಸಿದ ಎಂಟು ವರ್ಷಗಳ ಬಳಿಕ ಹಿಂದೂ ಪುರೋಹಿತರಿಗೆ ಗೌರವಧನ ಘೋಷಿಸಲಾಗಿದೆ.

ಇದನ್ನೂ ಓದಿ : FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...