Homeಫ್ಯಾಕ್ಟ್‌ಚೆಕ್FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್...

FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

- Advertisement -
- Advertisement -

ಚುನಾವಣಾ ಭಾಷಣಗಳಲ್ಲಿ ಧರ್ಮದ ವಿಚಾರವನ್ನು ಉಲ್ಲೇಖಿಸುವುದು, ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಆರೋಪಗಳನ್ನು ಮಾಡುವುದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಸೇರಿದಂತೆ ಬಿಜೆಪಿ ನಾಯಕರಿಗೆ ಈಗ ಸಾಮಾನ್ಯ ವಿಷಯವಾಗಿಬಿಟ್ಟಿದೆ.

ಇತ್ತೀಚೆಗೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸೆರಾಂಪೋರ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಗುರಿಯಾಗಿಸಿ ಎರಡು ಆರೋಪಗಳನ್ನು ಮಾಡಿದ್ದರು.

ಅಮಿತ್ ಶಾ ಅವರ ಭಾಷಣವದ ವಿಡಿಯೋವನ್ನು ಮೇ 15, 2024ರಂದು ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ. ಒಟ್ಟು 27 ನಿಮಿಷ 8 ಸೆಕೆಂಡ್ ಅವಧಿಯ ವಿಡಿಯೋದಲ್ಲಿ 18 ನಿಮಿಷ 21 ಸೆಕೆಂಡ್‌ನಿಂದ ಅಮಿತ್ ಶಾ ಈ ಕೆಳಗಿನಂತೆ ಹೇಳಿದ್ದಾರೆ.

ಮಮತಾ ಬ್ಯಾನರ್ಜಿಯವರು ರಂಝಾನ್ ಸಮಯದಲ್ಲಿ ಮುಸ್ಲಿಮರಿಗೆ ರಜೆ ನೀಡುತ್ತಾರೆ. ಆ ಬಗ್ಗೆ ನಮಗೇನು ಅಭ್ಯಂತರವಿಲ್ಲ, ಬೇಕಿದ್ದರೆ ರಜೆ ಕೊಡಲಿ. ಆದರೆ, ದುರ್ಗಾ ಪೂಜೆಯ ಸಮಯದಲ್ಲಿ ಯಾಕೆ ರಜೆ ಕೊಡುತ್ತಿಲ್ಲಎಂಬುವುದಕ್ಕೆ ನಮಗೆ ಉತ್ತರಬೇಕು. ಯಾಕೆ ಈ ತಾರತಮ್ಯ?”

ವಿಡಿಯೋದಲ್ಲಿ 17 ನಿಮಿಷ 46 ಸೆಕೆಂಡ್‌ನಿಂದ ಅಮಿತ್ ಅವರು ಮತ್ತೊಂದು ಆರೋಪ ಮಾಡಿರುವುದು ಇದೆ. ಅದು ಹೀಗಿದೆ…“ಈ ಇಮಾಮ್‌ಗಳು ಮತ್ತು ಮುಲ್ಲಾಗಳು ಬಂಗಾಳದ ಲಾಕರ್‌ಗಳಿಂದ ಸಂಬಳ ಪಡೆಯಬೇಕೇ? ಇಲ್ಲ ಎಂದು ಹೈಕೋರ್ಟ್ ಹೇಳಿದ್ದರಿಂದ ಮಮತಾ ಬ್ಯಾನರ್ಜಿ ಅವರು ನಿಧಿಗಾಗಿ ವಕ್ಫ್ ಮಂಡಳಿಯ ಮೊರೆ ಹೋಗಿದ್ದಾರೆ”

ಫ್ಯಾಕ್ಟ್‌ಚೆಕ್ : ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ಎರಡು ಆರೋಪಗಳನ್ನು ಮಾಡಿದ್ದಾರೆ. ಒಂದು ದುರ್ಗಾ ಪೂಜೆಗೆ ಪಶ್ಚಿಮ ಬಂಗಾಳ ಸರ್ಕಾರ ರಜೆ ನೀಡುತ್ತಿಲ್ಲ ಎಂಬುವುದು. ಮತ್ತೊಂದು ಮಸೀದಿಯ ಇಮಾಮ್‌ಗಳಿಗೆ ವಕ್ಫ್ ಮಂಡಳಿಯಿಂದ ಸಂಬಳ ನೀಡಲಾಗ್ತಿದೆ ಎಂಬುವುದು. ಈ ಬಗ್ಗೆ ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಪಶ್ಚಿಮ ಬಂಗಾಳ ಸರ್ಕಾರದ 2024ರ ಸಾರ್ವಜನಿಕ ರಜಾ ದಿನಗಳನ್ನು ಎರಡು ಪಟ್ಟಿಗಳಾಗಿ ವಿಂಗಡಿಸಲಾಗಿದೆ. ಹಣಕಾಸು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪಟ್ಟಿ-1ರ ಪ್ರಕಾರ, ಅಕ್ಟೋಬರ್ 2 ರಂದು ಮಹಾಲಯ, ಅಕ್ಟೋಬರ್ 10 ರಂದು ದುರ್ಗಾ ಪೂಜೆ, ಮಹಾ ಸಪ್ತಮಿ, ಅಕ್ಟೋಬರ್ 11 ರಂದು ದುರ್ಗಾ ಪೂಜೆ, ಮಹಾ ಅಷ್ಟಮಿ ಮತ್ತು ಮಹಾ ನಾಬಮಿ ಮತ್ತು ಅಕ್ಟೋಬರ್ 12 ರಂದು ದುರ್ಗಾ ಪೂಜೆ, ದಶಮಿ ರಜಾದಿನಗಳಿವೆ.

ಪಟ್ಟಿ-2ರಲ್ಲಿ ಕೋಲ್ಕತ್ತಾದ ರಿಜಿಸ್ಟ್ರಾರ್ ಆಫ್ ಅಶ್ಯೂರೆನ್ಸ್ ಮತ್ತು ಕೋಲ್ಕತ್ತಾದ ಸ್ಟಾಂಪ್ ರೆವಿನ್ಯೂ ಕಲೆಕ್ಟರ್ ಹೊರತುಪಡಿಸಿ ಪಶ್ಚಿಮ ಬಂಗಾಳ ಸರ್ಕಾರದ ಅಧೀನದ ಕಚೇರಿಗಳಿಗೆ ಅಕ್ಟೋಬರ್ 7 ರಂದು ದುರ್ಗಾ ಪೂಜೆ, ಮಹಾ ಚತುರ್ಥಿ, ಅಕ್ಟೋಬರ್ 8 ರಂದು ದುರ್ಗಾ ಪೂಜೆ, ಮಹಾ ಪಂಚಮಿ, ಅಕ್ಟೋಬರ್ 9 ರಂದು ದುರ್ಗಾ ಪೂಜೆ ಮಹಾ ಷಷ್ಠಿ ಮತ್ತು ಅಕ್ಟೋಬರ್ 14 ಮತ್ತು 15 ರಂದು ಹೆಚ್ಚಿನ ದುರ್ಗಾ ಪೂಜೆಗೆ ಹೆಚ್ಚುವರಿ ರಜೆಗಳನ್ನು ನೀಡಲಾಗಿದೆ. ಪಟ್ಟಿ-2 ಸಾರ್ವಜನಿಕ ರಜಾದಿನಗಳ ಅಡಿಯಲ್ಲಿ ಬರುವುದಿಲ್ಲ. ಇದನ್ನು ಹೆಚ್ಚುವರಿ ರಜೆಗಳೆಂದು ಪರಿಗಣಿಸಲಾಗಿದೆ.

ಪಶ್ಚಿಮ ಬಂಗಾಳ ಸರ್ಕಾರದ ಅಧಿಕೃತ ಪ್ರಕಟನೆಯಲ್ಲಿ ದುರ್ಗಾ ಪೂಜೆಗೆ 4 ದಿನಗಳ ಸಾರ್ವಜನಿಕ ರಜೆ ಮತ್ತು 5 ದಿನಗಳ ಹೆಚ್ಚುವರಿ ರಜೆ ಸೇರಿ ಒಟ್ಟು 9 ದಿನಗಳ ರಜೆ ನೀಡಲಾಗಿದೆ. ಹಾಗಾಗಿ, ದುರ್ಗಾ ಪೂಜೆಗೆ ರಜೆ ನೀಡಿಲ್ಲ ಎಂಬ ಅಮಿತ್ ಶಾ ಅವರ ಹೇಳಿಕೆ ಸುಳ್ಳು.

ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ 

ಇಮಾಮ್‌ಗಳು ಮಾತ್ರ ಬಂಗಾಳ ಸರ್ಕಾರದಿಂದ ಗೌರವಧನ ಪಡೆಯುತ್ತಿದ್ದಾರೆಯೇ?

ಅಮಿತ್ ಶಾ ಅವರು ತನ್ನ ಭಾಷಣದಲ್ಲಿ ಮಾಡಿರುವ ಎರಡನೇ ಆರೋಪದ ಬಗ್ಗೆ ನಾವು ಮಾಹಿತಿ ಕಲೆ ಹಾಕಿದ್ದೇವೆ. ನಮಗೆ ಲಭ್ಯವಾದ ಮಾಹಿತಿ ಪ್ರಕಾರ..

2012 ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರವು ಪಶ್ಚಿಮ ಬಂಗಾಳದ ಮಸೀದಿಗಳ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳಿಗೆ ಗೌರವಧನವನ್ನು ಘೋಷಿಸಿತ್ತು. ಈ ನಿರ್ಧಾರವನ್ನು ಆ ಸಮಯದಲ್ಲಿ ಕಲ್ಕತ್ತಾ ಹೈಕೋರ್ಟ್ ತಳ್ಳಿಹಾಕಿತ್ತು. ಅಂದಿನಿಂದ ಮಾಸಿಕ ಗೌರವಧನವನ್ನು ವಕ್ಫ್ ಬೋರ್ಡ್ ಮೂಲಕ ನೀಡಲಾಗ್ತಿದೆ.

ಸೆಪ್ಟೆಂಬರ್ 2020ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರ ರಾಜ್ಯದ ಸುಮಾರು 8,000 ಹಿಂದೂ ಪುರೋಹಿತರಿಗೆ ತಿಂಗಳಿಗೆ 1,000 ರೂಪಾಯಿ ಗೌರವಧನವನ್ನು ಘೋಷಿಸಿದ್ದರು. ಆ ವರ್ಷ ದುರ್ಗಾಪೂಜೆಗೂ ಮುನ್ನ ಗೌರವಧನ ಆರಂಭಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಕ್ರಿಶ್ಚಿಯನ್ ಪಾದ್ರಿಗಳು ಸೇರಿದಂತೆ ಎಲ್ಲಾ ಧರ್ಮಗಳ ಧರ್ಮಗುರುಗಳು ಗೌರವಧನ ಕೇಳಿದರೆ ಅವರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಈ ಘೋಷಣೆಯ ನಂತರ ವಿರೋಧ ಪಕ್ಷಗಳು ಸರ್ಕಾರದ ಕ್ರಮವನ್ನು ಟೀಕಿಸಿದ್ದವು. ಮಮತಾ ಬ್ಯಾನರ್ಜಿ ಧರ್ಮವನ್ನು ರಾಜಕೀಯದೊಂದಿಗೆ ಬೆರೆಸಿದ್ದಾರೆ ಎಂದು ಆರೋಪಿಸಿತ್ತು.

ಆಗಸ್ಟ್ 2023ರಲ್ಲಿ, ಮುಸ್ಲಿಂ ಧರ್ಮಗುರುಗಳು ಮತ್ತು ಹಿಂದೂ ಪುರೋಹಿತರ ಮಾಸಿಕ ಭತ್ಯೆಗಳಲ್ಲಿ 500ರೂ. ಹೆಚ್ಚಳ ಮಾಡಿ ಮಮತಾ ಬ್ಯಾನರ್ಜಿ ಸರ್ಕಾರ ಆದೇಶಿಸಿತ್ತು. 2012ರಿಂದ ಅಲ್ಲಿಯವರೆಗೆ, ಇಮಾಮ್‌ಗಳು ಮಾಸಿಕ 2,500 ರೂ. ಮತ್ತು ಮುಅಝ್ಝಿನ್‌ಗಳು 1,000 ಪಡೆಯುತ್ತಿದ್ದರು. ಹೆಚ್ಚಳದ ನಂತರ, ಇಮಾಮ್‌ಗಳು ರೂ. 3000 ಮತ್ತು ಮುಅಝ್ಝಿನ್‌ಗಳು 1,500 ಪಡೆಯುತ್ತಿದ್ದಾರೆ. ಹಿಂದೂ ಪುರೋಹಿತರ ಗೌರವಧನ 1,500ಕ್ಕೆ ಹೆಚ್ಚಳವಾಗಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳು ಮಾತ್ರ ಸರ್ಕಾರದಿಂದ ಗೌರವಧನ ಪಡೆಯುತ್ತಿಲ್ಲ. ಹಿಂದೂ ಪುರೋಹಿತರು ಕೂಡ ಗೌರವಧನ ಪಡೆಯುತ್ತಿದ್ದಾರೆ. ಆದರೆ, ಎರಡು ಕಡೆಯವರ ಗೌರವಧನದ ಮೊತ್ತದಲ್ಲಿ ವ್ಯತ್ಯಾಸಗಳಿವೆ. ಅಲ್ಲದೆ, ಇಮಾಮ್ ಮತ್ತು ಮುಅಝ್ಝಿನ್‌ಗಳಿಗೆ ಗೌರವಧನ ಘೋಷಿಸಿದ ಎಂಟು ವರ್ಷಗಳ ಬಳಿಕ ಹಿಂದೂ ಪುರೋಹಿತರಿಗೆ ಗೌರವಧನ ಘೋಷಿಸಲಾಗಿದೆ.

ಇದನ್ನೂ ಓದಿ : FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...