Homeಫ್ಯಾಕ್ಟ್‌ಚೆಕ್FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್...

FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

- Advertisement -
- Advertisement -

ಚುನಾವಣಾ ಭಾಷಣಗಳಲ್ಲಿ ಧರ್ಮದ ವಿಚಾರವನ್ನು ಉಲ್ಲೇಖಿಸುವುದು, ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಆರೋಪಗಳನ್ನು ಮಾಡುವುದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಸೇರಿದಂತೆ ಬಿಜೆಪಿ ನಾಯಕರಿಗೆ ಈಗ ಸಾಮಾನ್ಯ ವಿಷಯವಾಗಿಬಿಟ್ಟಿದೆ.

ಇತ್ತೀಚೆಗೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸೆರಾಂಪೋರ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಗುರಿಯಾಗಿಸಿ ಎರಡು ಆರೋಪಗಳನ್ನು ಮಾಡಿದ್ದರು.

ಅಮಿತ್ ಶಾ ಅವರ ಭಾಷಣವದ ವಿಡಿಯೋವನ್ನು ಮೇ 15, 2024ರಂದು ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ. ಒಟ್ಟು 27 ನಿಮಿಷ 8 ಸೆಕೆಂಡ್ ಅವಧಿಯ ವಿಡಿಯೋದಲ್ಲಿ 18 ನಿಮಿಷ 21 ಸೆಕೆಂಡ್‌ನಿಂದ ಅಮಿತ್ ಶಾ ಈ ಕೆಳಗಿನಂತೆ ಹೇಳಿದ್ದಾರೆ.

ಮಮತಾ ಬ್ಯಾನರ್ಜಿಯವರು ರಂಝಾನ್ ಸಮಯದಲ್ಲಿ ಮುಸ್ಲಿಮರಿಗೆ ರಜೆ ನೀಡುತ್ತಾರೆ. ಆ ಬಗ್ಗೆ ನಮಗೇನು ಅಭ್ಯಂತರವಿಲ್ಲ, ಬೇಕಿದ್ದರೆ ರಜೆ ಕೊಡಲಿ. ಆದರೆ, ದುರ್ಗಾ ಪೂಜೆಯ ಸಮಯದಲ್ಲಿ ಯಾಕೆ ರಜೆ ಕೊಡುತ್ತಿಲ್ಲಎಂಬುವುದಕ್ಕೆ ನಮಗೆ ಉತ್ತರಬೇಕು. ಯಾಕೆ ಈ ತಾರತಮ್ಯ?”

ವಿಡಿಯೋದಲ್ಲಿ 17 ನಿಮಿಷ 46 ಸೆಕೆಂಡ್‌ನಿಂದ ಅಮಿತ್ ಅವರು ಮತ್ತೊಂದು ಆರೋಪ ಮಾಡಿರುವುದು ಇದೆ. ಅದು ಹೀಗಿದೆ…“ಈ ಇಮಾಮ್‌ಗಳು ಮತ್ತು ಮುಲ್ಲಾಗಳು ಬಂಗಾಳದ ಲಾಕರ್‌ಗಳಿಂದ ಸಂಬಳ ಪಡೆಯಬೇಕೇ? ಇಲ್ಲ ಎಂದು ಹೈಕೋರ್ಟ್ ಹೇಳಿದ್ದರಿಂದ ಮಮತಾ ಬ್ಯಾನರ್ಜಿ ಅವರು ನಿಧಿಗಾಗಿ ವಕ್ಫ್ ಮಂಡಳಿಯ ಮೊರೆ ಹೋಗಿದ್ದಾರೆ”

ಫ್ಯಾಕ್ಟ್‌ಚೆಕ್ : ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ಎರಡು ಆರೋಪಗಳನ್ನು ಮಾಡಿದ್ದಾರೆ. ಒಂದು ದುರ್ಗಾ ಪೂಜೆಗೆ ಪಶ್ಚಿಮ ಬಂಗಾಳ ಸರ್ಕಾರ ರಜೆ ನೀಡುತ್ತಿಲ್ಲ ಎಂಬುವುದು. ಮತ್ತೊಂದು ಮಸೀದಿಯ ಇಮಾಮ್‌ಗಳಿಗೆ ವಕ್ಫ್ ಮಂಡಳಿಯಿಂದ ಸಂಬಳ ನೀಡಲಾಗ್ತಿದೆ ಎಂಬುವುದು. ಈ ಬಗ್ಗೆ ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಪಶ್ಚಿಮ ಬಂಗಾಳ ಸರ್ಕಾರದ 2024ರ ಸಾರ್ವಜನಿಕ ರಜಾ ದಿನಗಳನ್ನು ಎರಡು ಪಟ್ಟಿಗಳಾಗಿ ವಿಂಗಡಿಸಲಾಗಿದೆ. ಹಣಕಾಸು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪಟ್ಟಿ-1ರ ಪ್ರಕಾರ, ಅಕ್ಟೋಬರ್ 2 ರಂದು ಮಹಾಲಯ, ಅಕ್ಟೋಬರ್ 10 ರಂದು ದುರ್ಗಾ ಪೂಜೆ, ಮಹಾ ಸಪ್ತಮಿ, ಅಕ್ಟೋಬರ್ 11 ರಂದು ದುರ್ಗಾ ಪೂಜೆ, ಮಹಾ ಅಷ್ಟಮಿ ಮತ್ತು ಮಹಾ ನಾಬಮಿ ಮತ್ತು ಅಕ್ಟೋಬರ್ 12 ರಂದು ದುರ್ಗಾ ಪೂಜೆ, ದಶಮಿ ರಜಾದಿನಗಳಿವೆ.

ಪಟ್ಟಿ-2ರಲ್ಲಿ ಕೋಲ್ಕತ್ತಾದ ರಿಜಿಸ್ಟ್ರಾರ್ ಆಫ್ ಅಶ್ಯೂರೆನ್ಸ್ ಮತ್ತು ಕೋಲ್ಕತ್ತಾದ ಸ್ಟಾಂಪ್ ರೆವಿನ್ಯೂ ಕಲೆಕ್ಟರ್ ಹೊರತುಪಡಿಸಿ ಪಶ್ಚಿಮ ಬಂಗಾಳ ಸರ್ಕಾರದ ಅಧೀನದ ಕಚೇರಿಗಳಿಗೆ ಅಕ್ಟೋಬರ್ 7 ರಂದು ದುರ್ಗಾ ಪೂಜೆ, ಮಹಾ ಚತುರ್ಥಿ, ಅಕ್ಟೋಬರ್ 8 ರಂದು ದುರ್ಗಾ ಪೂಜೆ, ಮಹಾ ಪಂಚಮಿ, ಅಕ್ಟೋಬರ್ 9 ರಂದು ದುರ್ಗಾ ಪೂಜೆ ಮಹಾ ಷಷ್ಠಿ ಮತ್ತು ಅಕ್ಟೋಬರ್ 14 ಮತ್ತು 15 ರಂದು ಹೆಚ್ಚಿನ ದುರ್ಗಾ ಪೂಜೆಗೆ ಹೆಚ್ಚುವರಿ ರಜೆಗಳನ್ನು ನೀಡಲಾಗಿದೆ. ಪಟ್ಟಿ-2 ಸಾರ್ವಜನಿಕ ರಜಾದಿನಗಳ ಅಡಿಯಲ್ಲಿ ಬರುವುದಿಲ್ಲ. ಇದನ್ನು ಹೆಚ್ಚುವರಿ ರಜೆಗಳೆಂದು ಪರಿಗಣಿಸಲಾಗಿದೆ.

ಪಶ್ಚಿಮ ಬಂಗಾಳ ಸರ್ಕಾರದ ಅಧಿಕೃತ ಪ್ರಕಟನೆಯಲ್ಲಿ ದುರ್ಗಾ ಪೂಜೆಗೆ 4 ದಿನಗಳ ಸಾರ್ವಜನಿಕ ರಜೆ ಮತ್ತು 5 ದಿನಗಳ ಹೆಚ್ಚುವರಿ ರಜೆ ಸೇರಿ ಒಟ್ಟು 9 ದಿನಗಳ ರಜೆ ನೀಡಲಾಗಿದೆ. ಹಾಗಾಗಿ, ದುರ್ಗಾ ಪೂಜೆಗೆ ರಜೆ ನೀಡಿಲ್ಲ ಎಂಬ ಅಮಿತ್ ಶಾ ಅವರ ಹೇಳಿಕೆ ಸುಳ್ಳು.

ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ 

ಇಮಾಮ್‌ಗಳು ಮಾತ್ರ ಬಂಗಾಳ ಸರ್ಕಾರದಿಂದ ಗೌರವಧನ ಪಡೆಯುತ್ತಿದ್ದಾರೆಯೇ?

ಅಮಿತ್ ಶಾ ಅವರು ತನ್ನ ಭಾಷಣದಲ್ಲಿ ಮಾಡಿರುವ ಎರಡನೇ ಆರೋಪದ ಬಗ್ಗೆ ನಾವು ಮಾಹಿತಿ ಕಲೆ ಹಾಕಿದ್ದೇವೆ. ನಮಗೆ ಲಭ್ಯವಾದ ಮಾಹಿತಿ ಪ್ರಕಾರ..

2012 ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರವು ಪಶ್ಚಿಮ ಬಂಗಾಳದ ಮಸೀದಿಗಳ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳಿಗೆ ಗೌರವಧನವನ್ನು ಘೋಷಿಸಿತ್ತು. ಈ ನಿರ್ಧಾರವನ್ನು ಆ ಸಮಯದಲ್ಲಿ ಕಲ್ಕತ್ತಾ ಹೈಕೋರ್ಟ್ ತಳ್ಳಿಹಾಕಿತ್ತು. ಅಂದಿನಿಂದ ಮಾಸಿಕ ಗೌರವಧನವನ್ನು ವಕ್ಫ್ ಬೋರ್ಡ್ ಮೂಲಕ ನೀಡಲಾಗ್ತಿದೆ.

ಸೆಪ್ಟೆಂಬರ್ 2020ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರ ರಾಜ್ಯದ ಸುಮಾರು 8,000 ಹಿಂದೂ ಪುರೋಹಿತರಿಗೆ ತಿಂಗಳಿಗೆ 1,000 ರೂಪಾಯಿ ಗೌರವಧನವನ್ನು ಘೋಷಿಸಿದ್ದರು. ಆ ವರ್ಷ ದುರ್ಗಾಪೂಜೆಗೂ ಮುನ್ನ ಗೌರವಧನ ಆರಂಭಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಕ್ರಿಶ್ಚಿಯನ್ ಪಾದ್ರಿಗಳು ಸೇರಿದಂತೆ ಎಲ್ಲಾ ಧರ್ಮಗಳ ಧರ್ಮಗುರುಗಳು ಗೌರವಧನ ಕೇಳಿದರೆ ಅವರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಈ ಘೋಷಣೆಯ ನಂತರ ವಿರೋಧ ಪಕ್ಷಗಳು ಸರ್ಕಾರದ ಕ್ರಮವನ್ನು ಟೀಕಿಸಿದ್ದವು. ಮಮತಾ ಬ್ಯಾನರ್ಜಿ ಧರ್ಮವನ್ನು ರಾಜಕೀಯದೊಂದಿಗೆ ಬೆರೆಸಿದ್ದಾರೆ ಎಂದು ಆರೋಪಿಸಿತ್ತು.

ಆಗಸ್ಟ್ 2023ರಲ್ಲಿ, ಮುಸ್ಲಿಂ ಧರ್ಮಗುರುಗಳು ಮತ್ತು ಹಿಂದೂ ಪುರೋಹಿತರ ಮಾಸಿಕ ಭತ್ಯೆಗಳಲ್ಲಿ 500ರೂ. ಹೆಚ್ಚಳ ಮಾಡಿ ಮಮತಾ ಬ್ಯಾನರ್ಜಿ ಸರ್ಕಾರ ಆದೇಶಿಸಿತ್ತು. 2012ರಿಂದ ಅಲ್ಲಿಯವರೆಗೆ, ಇಮಾಮ್‌ಗಳು ಮಾಸಿಕ 2,500 ರೂ. ಮತ್ತು ಮುಅಝ್ಝಿನ್‌ಗಳು 1,000 ಪಡೆಯುತ್ತಿದ್ದರು. ಹೆಚ್ಚಳದ ನಂತರ, ಇಮಾಮ್‌ಗಳು ರೂ. 3000 ಮತ್ತು ಮುಅಝ್ಝಿನ್‌ಗಳು 1,500 ಪಡೆಯುತ್ತಿದ್ದಾರೆ. ಹಿಂದೂ ಪುರೋಹಿತರ ಗೌರವಧನ 1,500ಕ್ಕೆ ಹೆಚ್ಚಳವಾಗಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳು ಮಾತ್ರ ಸರ್ಕಾರದಿಂದ ಗೌರವಧನ ಪಡೆಯುತ್ತಿಲ್ಲ. ಹಿಂದೂ ಪುರೋಹಿತರು ಕೂಡ ಗೌರವಧನ ಪಡೆಯುತ್ತಿದ್ದಾರೆ. ಆದರೆ, ಎರಡು ಕಡೆಯವರ ಗೌರವಧನದ ಮೊತ್ತದಲ್ಲಿ ವ್ಯತ್ಯಾಸಗಳಿವೆ. ಅಲ್ಲದೆ, ಇಮಾಮ್ ಮತ್ತು ಮುಅಝ್ಝಿನ್‌ಗಳಿಗೆ ಗೌರವಧನ ಘೋಷಿಸಿದ ಎಂಟು ವರ್ಷಗಳ ಬಳಿಕ ಹಿಂದೂ ಪುರೋಹಿತರಿಗೆ ಗೌರವಧನ ಘೋಷಿಸಲಾಗಿದೆ.

ಇದನ್ನೂ ಓದಿ : FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...