Homeಫ್ಯಾಕ್ಟ್‌ಚೆಕ್FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್...

FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

- Advertisement -
- Advertisement -

ಚುನಾವಣಾ ಭಾಷಣಗಳಲ್ಲಿ ಧರ್ಮದ ವಿಚಾರವನ್ನು ಉಲ್ಲೇಖಿಸುವುದು, ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಆರೋಪಗಳನ್ನು ಮಾಡುವುದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಸೇರಿದಂತೆ ಬಿಜೆಪಿ ನಾಯಕರಿಗೆ ಈಗ ಸಾಮಾನ್ಯ ವಿಷಯವಾಗಿಬಿಟ್ಟಿದೆ.

ಇತ್ತೀಚೆಗೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸೆರಾಂಪೋರ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಗುರಿಯಾಗಿಸಿ ಎರಡು ಆರೋಪಗಳನ್ನು ಮಾಡಿದ್ದರು.

ಅಮಿತ್ ಶಾ ಅವರ ಭಾಷಣವದ ವಿಡಿಯೋವನ್ನು ಮೇ 15, 2024ರಂದು ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ. ಒಟ್ಟು 27 ನಿಮಿಷ 8 ಸೆಕೆಂಡ್ ಅವಧಿಯ ವಿಡಿಯೋದಲ್ಲಿ 18 ನಿಮಿಷ 21 ಸೆಕೆಂಡ್‌ನಿಂದ ಅಮಿತ್ ಶಾ ಈ ಕೆಳಗಿನಂತೆ ಹೇಳಿದ್ದಾರೆ.

ಮಮತಾ ಬ್ಯಾನರ್ಜಿಯವರು ರಂಝಾನ್ ಸಮಯದಲ್ಲಿ ಮುಸ್ಲಿಮರಿಗೆ ರಜೆ ನೀಡುತ್ತಾರೆ. ಆ ಬಗ್ಗೆ ನಮಗೇನು ಅಭ್ಯಂತರವಿಲ್ಲ, ಬೇಕಿದ್ದರೆ ರಜೆ ಕೊಡಲಿ. ಆದರೆ, ದುರ್ಗಾ ಪೂಜೆಯ ಸಮಯದಲ್ಲಿ ಯಾಕೆ ರಜೆ ಕೊಡುತ್ತಿಲ್ಲಎಂಬುವುದಕ್ಕೆ ನಮಗೆ ಉತ್ತರಬೇಕು. ಯಾಕೆ ಈ ತಾರತಮ್ಯ?”

ವಿಡಿಯೋದಲ್ಲಿ 17 ನಿಮಿಷ 46 ಸೆಕೆಂಡ್‌ನಿಂದ ಅಮಿತ್ ಅವರು ಮತ್ತೊಂದು ಆರೋಪ ಮಾಡಿರುವುದು ಇದೆ. ಅದು ಹೀಗಿದೆ…“ಈ ಇಮಾಮ್‌ಗಳು ಮತ್ತು ಮುಲ್ಲಾಗಳು ಬಂಗಾಳದ ಲಾಕರ್‌ಗಳಿಂದ ಸಂಬಳ ಪಡೆಯಬೇಕೇ? ಇಲ್ಲ ಎಂದು ಹೈಕೋರ್ಟ್ ಹೇಳಿದ್ದರಿಂದ ಮಮತಾ ಬ್ಯಾನರ್ಜಿ ಅವರು ನಿಧಿಗಾಗಿ ವಕ್ಫ್ ಮಂಡಳಿಯ ಮೊರೆ ಹೋಗಿದ್ದಾರೆ”

ಫ್ಯಾಕ್ಟ್‌ಚೆಕ್ : ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ಎರಡು ಆರೋಪಗಳನ್ನು ಮಾಡಿದ್ದಾರೆ. ಒಂದು ದುರ್ಗಾ ಪೂಜೆಗೆ ಪಶ್ಚಿಮ ಬಂಗಾಳ ಸರ್ಕಾರ ರಜೆ ನೀಡುತ್ತಿಲ್ಲ ಎಂಬುವುದು. ಮತ್ತೊಂದು ಮಸೀದಿಯ ಇಮಾಮ್‌ಗಳಿಗೆ ವಕ್ಫ್ ಮಂಡಳಿಯಿಂದ ಸಂಬಳ ನೀಡಲಾಗ್ತಿದೆ ಎಂಬುವುದು. ಈ ಬಗ್ಗೆ ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಪಶ್ಚಿಮ ಬಂಗಾಳ ಸರ್ಕಾರದ 2024ರ ಸಾರ್ವಜನಿಕ ರಜಾ ದಿನಗಳನ್ನು ಎರಡು ಪಟ್ಟಿಗಳಾಗಿ ವಿಂಗಡಿಸಲಾಗಿದೆ. ಹಣಕಾಸು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪಟ್ಟಿ-1ರ ಪ್ರಕಾರ, ಅಕ್ಟೋಬರ್ 2 ರಂದು ಮಹಾಲಯ, ಅಕ್ಟೋಬರ್ 10 ರಂದು ದುರ್ಗಾ ಪೂಜೆ, ಮಹಾ ಸಪ್ತಮಿ, ಅಕ್ಟೋಬರ್ 11 ರಂದು ದುರ್ಗಾ ಪೂಜೆ, ಮಹಾ ಅಷ್ಟಮಿ ಮತ್ತು ಮಹಾ ನಾಬಮಿ ಮತ್ತು ಅಕ್ಟೋಬರ್ 12 ರಂದು ದುರ್ಗಾ ಪೂಜೆ, ದಶಮಿ ರಜಾದಿನಗಳಿವೆ.

ಪಟ್ಟಿ-2ರಲ್ಲಿ ಕೋಲ್ಕತ್ತಾದ ರಿಜಿಸ್ಟ್ರಾರ್ ಆಫ್ ಅಶ್ಯೂರೆನ್ಸ್ ಮತ್ತು ಕೋಲ್ಕತ್ತಾದ ಸ್ಟಾಂಪ್ ರೆವಿನ್ಯೂ ಕಲೆಕ್ಟರ್ ಹೊರತುಪಡಿಸಿ ಪಶ್ಚಿಮ ಬಂಗಾಳ ಸರ್ಕಾರದ ಅಧೀನದ ಕಚೇರಿಗಳಿಗೆ ಅಕ್ಟೋಬರ್ 7 ರಂದು ದುರ್ಗಾ ಪೂಜೆ, ಮಹಾ ಚತುರ್ಥಿ, ಅಕ್ಟೋಬರ್ 8 ರಂದು ದುರ್ಗಾ ಪೂಜೆ, ಮಹಾ ಪಂಚಮಿ, ಅಕ್ಟೋಬರ್ 9 ರಂದು ದುರ್ಗಾ ಪೂಜೆ ಮಹಾ ಷಷ್ಠಿ ಮತ್ತು ಅಕ್ಟೋಬರ್ 14 ಮತ್ತು 15 ರಂದು ಹೆಚ್ಚಿನ ದುರ್ಗಾ ಪೂಜೆಗೆ ಹೆಚ್ಚುವರಿ ರಜೆಗಳನ್ನು ನೀಡಲಾಗಿದೆ. ಪಟ್ಟಿ-2 ಸಾರ್ವಜನಿಕ ರಜಾದಿನಗಳ ಅಡಿಯಲ್ಲಿ ಬರುವುದಿಲ್ಲ. ಇದನ್ನು ಹೆಚ್ಚುವರಿ ರಜೆಗಳೆಂದು ಪರಿಗಣಿಸಲಾಗಿದೆ.

ಪಶ್ಚಿಮ ಬಂಗಾಳ ಸರ್ಕಾರದ ಅಧಿಕೃತ ಪ್ರಕಟನೆಯಲ್ಲಿ ದುರ್ಗಾ ಪೂಜೆಗೆ 4 ದಿನಗಳ ಸಾರ್ವಜನಿಕ ರಜೆ ಮತ್ತು 5 ದಿನಗಳ ಹೆಚ್ಚುವರಿ ರಜೆ ಸೇರಿ ಒಟ್ಟು 9 ದಿನಗಳ ರಜೆ ನೀಡಲಾಗಿದೆ. ಹಾಗಾಗಿ, ದುರ್ಗಾ ಪೂಜೆಗೆ ರಜೆ ನೀಡಿಲ್ಲ ಎಂಬ ಅಮಿತ್ ಶಾ ಅವರ ಹೇಳಿಕೆ ಸುಳ್ಳು.

ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ 

ಇಮಾಮ್‌ಗಳು ಮಾತ್ರ ಬಂಗಾಳ ಸರ್ಕಾರದಿಂದ ಗೌರವಧನ ಪಡೆಯುತ್ತಿದ್ದಾರೆಯೇ?

ಅಮಿತ್ ಶಾ ಅವರು ತನ್ನ ಭಾಷಣದಲ್ಲಿ ಮಾಡಿರುವ ಎರಡನೇ ಆರೋಪದ ಬಗ್ಗೆ ನಾವು ಮಾಹಿತಿ ಕಲೆ ಹಾಕಿದ್ದೇವೆ. ನಮಗೆ ಲಭ್ಯವಾದ ಮಾಹಿತಿ ಪ್ರಕಾರ..

2012 ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರವು ಪಶ್ಚಿಮ ಬಂಗಾಳದ ಮಸೀದಿಗಳ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳಿಗೆ ಗೌರವಧನವನ್ನು ಘೋಷಿಸಿತ್ತು. ಈ ನಿರ್ಧಾರವನ್ನು ಆ ಸಮಯದಲ್ಲಿ ಕಲ್ಕತ್ತಾ ಹೈಕೋರ್ಟ್ ತಳ್ಳಿಹಾಕಿತ್ತು. ಅಂದಿನಿಂದ ಮಾಸಿಕ ಗೌರವಧನವನ್ನು ವಕ್ಫ್ ಬೋರ್ಡ್ ಮೂಲಕ ನೀಡಲಾಗ್ತಿದೆ.

ಸೆಪ್ಟೆಂಬರ್ 2020ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರ ರಾಜ್ಯದ ಸುಮಾರು 8,000 ಹಿಂದೂ ಪುರೋಹಿತರಿಗೆ ತಿಂಗಳಿಗೆ 1,000 ರೂಪಾಯಿ ಗೌರವಧನವನ್ನು ಘೋಷಿಸಿದ್ದರು. ಆ ವರ್ಷ ದುರ್ಗಾಪೂಜೆಗೂ ಮುನ್ನ ಗೌರವಧನ ಆರಂಭಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಕ್ರಿಶ್ಚಿಯನ್ ಪಾದ್ರಿಗಳು ಸೇರಿದಂತೆ ಎಲ್ಲಾ ಧರ್ಮಗಳ ಧರ್ಮಗುರುಗಳು ಗೌರವಧನ ಕೇಳಿದರೆ ಅವರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಈ ಘೋಷಣೆಯ ನಂತರ ವಿರೋಧ ಪಕ್ಷಗಳು ಸರ್ಕಾರದ ಕ್ರಮವನ್ನು ಟೀಕಿಸಿದ್ದವು. ಮಮತಾ ಬ್ಯಾನರ್ಜಿ ಧರ್ಮವನ್ನು ರಾಜಕೀಯದೊಂದಿಗೆ ಬೆರೆಸಿದ್ದಾರೆ ಎಂದು ಆರೋಪಿಸಿತ್ತು.

ಆಗಸ್ಟ್ 2023ರಲ್ಲಿ, ಮುಸ್ಲಿಂ ಧರ್ಮಗುರುಗಳು ಮತ್ತು ಹಿಂದೂ ಪುರೋಹಿತರ ಮಾಸಿಕ ಭತ್ಯೆಗಳಲ್ಲಿ 500ರೂ. ಹೆಚ್ಚಳ ಮಾಡಿ ಮಮತಾ ಬ್ಯಾನರ್ಜಿ ಸರ್ಕಾರ ಆದೇಶಿಸಿತ್ತು. 2012ರಿಂದ ಅಲ್ಲಿಯವರೆಗೆ, ಇಮಾಮ್‌ಗಳು ಮಾಸಿಕ 2,500 ರೂ. ಮತ್ತು ಮುಅಝ್ಝಿನ್‌ಗಳು 1,000 ಪಡೆಯುತ್ತಿದ್ದರು. ಹೆಚ್ಚಳದ ನಂತರ, ಇಮಾಮ್‌ಗಳು ರೂ. 3000 ಮತ್ತು ಮುಅಝ್ಝಿನ್‌ಗಳು 1,500 ಪಡೆಯುತ್ತಿದ್ದಾರೆ. ಹಿಂದೂ ಪುರೋಹಿತರ ಗೌರವಧನ 1,500ಕ್ಕೆ ಹೆಚ್ಚಳವಾಗಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳು ಮಾತ್ರ ಸರ್ಕಾರದಿಂದ ಗೌರವಧನ ಪಡೆಯುತ್ತಿಲ್ಲ. ಹಿಂದೂ ಪುರೋಹಿತರು ಕೂಡ ಗೌರವಧನ ಪಡೆಯುತ್ತಿದ್ದಾರೆ. ಆದರೆ, ಎರಡು ಕಡೆಯವರ ಗೌರವಧನದ ಮೊತ್ತದಲ್ಲಿ ವ್ಯತ್ಯಾಸಗಳಿವೆ. ಅಲ್ಲದೆ, ಇಮಾಮ್ ಮತ್ತು ಮುಅಝ್ಝಿನ್‌ಗಳಿಗೆ ಗೌರವಧನ ಘೋಷಿಸಿದ ಎಂಟು ವರ್ಷಗಳ ಬಳಿಕ ಹಿಂದೂ ಪುರೋಹಿತರಿಗೆ ಗೌರವಧನ ಘೋಷಿಸಲಾಗಿದೆ.

ಇದನ್ನೂ ಓದಿ : FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...