Homeಫ್ಯಾಕ್ಟ್‌ಚೆಕ್FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್...

FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

- Advertisement -
- Advertisement -

ಚುನಾವಣಾ ಭಾಷಣಗಳಲ್ಲಿ ಧರ್ಮದ ವಿಚಾರವನ್ನು ಉಲ್ಲೇಖಿಸುವುದು, ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಆರೋಪಗಳನ್ನು ಮಾಡುವುದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಸೇರಿದಂತೆ ಬಿಜೆಪಿ ನಾಯಕರಿಗೆ ಈಗ ಸಾಮಾನ್ಯ ವಿಷಯವಾಗಿಬಿಟ್ಟಿದೆ.

ಇತ್ತೀಚೆಗೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸೆರಾಂಪೋರ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಗುರಿಯಾಗಿಸಿ ಎರಡು ಆರೋಪಗಳನ್ನು ಮಾಡಿದ್ದರು.

ಅಮಿತ್ ಶಾ ಅವರ ಭಾಷಣವದ ವಿಡಿಯೋವನ್ನು ಮೇ 15, 2024ರಂದು ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ. ಒಟ್ಟು 27 ನಿಮಿಷ 8 ಸೆಕೆಂಡ್ ಅವಧಿಯ ವಿಡಿಯೋದಲ್ಲಿ 18 ನಿಮಿಷ 21 ಸೆಕೆಂಡ್‌ನಿಂದ ಅಮಿತ್ ಶಾ ಈ ಕೆಳಗಿನಂತೆ ಹೇಳಿದ್ದಾರೆ.

ಮಮತಾ ಬ್ಯಾನರ್ಜಿಯವರು ರಂಝಾನ್ ಸಮಯದಲ್ಲಿ ಮುಸ್ಲಿಮರಿಗೆ ರಜೆ ನೀಡುತ್ತಾರೆ. ಆ ಬಗ್ಗೆ ನಮಗೇನು ಅಭ್ಯಂತರವಿಲ್ಲ, ಬೇಕಿದ್ದರೆ ರಜೆ ಕೊಡಲಿ. ಆದರೆ, ದುರ್ಗಾ ಪೂಜೆಯ ಸಮಯದಲ್ಲಿ ಯಾಕೆ ರಜೆ ಕೊಡುತ್ತಿಲ್ಲಎಂಬುವುದಕ್ಕೆ ನಮಗೆ ಉತ್ತರಬೇಕು. ಯಾಕೆ ಈ ತಾರತಮ್ಯ?”

ವಿಡಿಯೋದಲ್ಲಿ 17 ನಿಮಿಷ 46 ಸೆಕೆಂಡ್‌ನಿಂದ ಅಮಿತ್ ಅವರು ಮತ್ತೊಂದು ಆರೋಪ ಮಾಡಿರುವುದು ಇದೆ. ಅದು ಹೀಗಿದೆ…“ಈ ಇಮಾಮ್‌ಗಳು ಮತ್ತು ಮುಲ್ಲಾಗಳು ಬಂಗಾಳದ ಲಾಕರ್‌ಗಳಿಂದ ಸಂಬಳ ಪಡೆಯಬೇಕೇ? ಇಲ್ಲ ಎಂದು ಹೈಕೋರ್ಟ್ ಹೇಳಿದ್ದರಿಂದ ಮಮತಾ ಬ್ಯಾನರ್ಜಿ ಅವರು ನಿಧಿಗಾಗಿ ವಕ್ಫ್ ಮಂಡಳಿಯ ಮೊರೆ ಹೋಗಿದ್ದಾರೆ”

ಫ್ಯಾಕ್ಟ್‌ಚೆಕ್ : ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ಎರಡು ಆರೋಪಗಳನ್ನು ಮಾಡಿದ್ದಾರೆ. ಒಂದು ದುರ್ಗಾ ಪೂಜೆಗೆ ಪಶ್ಚಿಮ ಬಂಗಾಳ ಸರ್ಕಾರ ರಜೆ ನೀಡುತ್ತಿಲ್ಲ ಎಂಬುವುದು. ಮತ್ತೊಂದು ಮಸೀದಿಯ ಇಮಾಮ್‌ಗಳಿಗೆ ವಕ್ಫ್ ಮಂಡಳಿಯಿಂದ ಸಂಬಳ ನೀಡಲಾಗ್ತಿದೆ ಎಂಬುವುದು. ಈ ಬಗ್ಗೆ ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಪಶ್ಚಿಮ ಬಂಗಾಳ ಸರ್ಕಾರದ 2024ರ ಸಾರ್ವಜನಿಕ ರಜಾ ದಿನಗಳನ್ನು ಎರಡು ಪಟ್ಟಿಗಳಾಗಿ ವಿಂಗಡಿಸಲಾಗಿದೆ. ಹಣಕಾಸು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪಟ್ಟಿ-1ರ ಪ್ರಕಾರ, ಅಕ್ಟೋಬರ್ 2 ರಂದು ಮಹಾಲಯ, ಅಕ್ಟೋಬರ್ 10 ರಂದು ದುರ್ಗಾ ಪೂಜೆ, ಮಹಾ ಸಪ್ತಮಿ, ಅಕ್ಟೋಬರ್ 11 ರಂದು ದುರ್ಗಾ ಪೂಜೆ, ಮಹಾ ಅಷ್ಟಮಿ ಮತ್ತು ಮಹಾ ನಾಬಮಿ ಮತ್ತು ಅಕ್ಟೋಬರ್ 12 ರಂದು ದುರ್ಗಾ ಪೂಜೆ, ದಶಮಿ ರಜಾದಿನಗಳಿವೆ.

ಪಟ್ಟಿ-2ರಲ್ಲಿ ಕೋಲ್ಕತ್ತಾದ ರಿಜಿಸ್ಟ್ರಾರ್ ಆಫ್ ಅಶ್ಯೂರೆನ್ಸ್ ಮತ್ತು ಕೋಲ್ಕತ್ತಾದ ಸ್ಟಾಂಪ್ ರೆವಿನ್ಯೂ ಕಲೆಕ್ಟರ್ ಹೊರತುಪಡಿಸಿ ಪಶ್ಚಿಮ ಬಂಗಾಳ ಸರ್ಕಾರದ ಅಧೀನದ ಕಚೇರಿಗಳಿಗೆ ಅಕ್ಟೋಬರ್ 7 ರಂದು ದುರ್ಗಾ ಪೂಜೆ, ಮಹಾ ಚತುರ್ಥಿ, ಅಕ್ಟೋಬರ್ 8 ರಂದು ದುರ್ಗಾ ಪೂಜೆ, ಮಹಾ ಪಂಚಮಿ, ಅಕ್ಟೋಬರ್ 9 ರಂದು ದುರ್ಗಾ ಪೂಜೆ ಮಹಾ ಷಷ್ಠಿ ಮತ್ತು ಅಕ್ಟೋಬರ್ 14 ಮತ್ತು 15 ರಂದು ಹೆಚ್ಚಿನ ದುರ್ಗಾ ಪೂಜೆಗೆ ಹೆಚ್ಚುವರಿ ರಜೆಗಳನ್ನು ನೀಡಲಾಗಿದೆ. ಪಟ್ಟಿ-2 ಸಾರ್ವಜನಿಕ ರಜಾದಿನಗಳ ಅಡಿಯಲ್ಲಿ ಬರುವುದಿಲ್ಲ. ಇದನ್ನು ಹೆಚ್ಚುವರಿ ರಜೆಗಳೆಂದು ಪರಿಗಣಿಸಲಾಗಿದೆ.

ಪಶ್ಚಿಮ ಬಂಗಾಳ ಸರ್ಕಾರದ ಅಧಿಕೃತ ಪ್ರಕಟನೆಯಲ್ಲಿ ದುರ್ಗಾ ಪೂಜೆಗೆ 4 ದಿನಗಳ ಸಾರ್ವಜನಿಕ ರಜೆ ಮತ್ತು 5 ದಿನಗಳ ಹೆಚ್ಚುವರಿ ರಜೆ ಸೇರಿ ಒಟ್ಟು 9 ದಿನಗಳ ರಜೆ ನೀಡಲಾಗಿದೆ. ಹಾಗಾಗಿ, ದುರ್ಗಾ ಪೂಜೆಗೆ ರಜೆ ನೀಡಿಲ್ಲ ಎಂಬ ಅಮಿತ್ ಶಾ ಅವರ ಹೇಳಿಕೆ ಸುಳ್ಳು.

ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ 

ಇಮಾಮ್‌ಗಳು ಮಾತ್ರ ಬಂಗಾಳ ಸರ್ಕಾರದಿಂದ ಗೌರವಧನ ಪಡೆಯುತ್ತಿದ್ದಾರೆಯೇ?

ಅಮಿತ್ ಶಾ ಅವರು ತನ್ನ ಭಾಷಣದಲ್ಲಿ ಮಾಡಿರುವ ಎರಡನೇ ಆರೋಪದ ಬಗ್ಗೆ ನಾವು ಮಾಹಿತಿ ಕಲೆ ಹಾಕಿದ್ದೇವೆ. ನಮಗೆ ಲಭ್ಯವಾದ ಮಾಹಿತಿ ಪ್ರಕಾರ..

2012 ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರವು ಪಶ್ಚಿಮ ಬಂಗಾಳದ ಮಸೀದಿಗಳ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳಿಗೆ ಗೌರವಧನವನ್ನು ಘೋಷಿಸಿತ್ತು. ಈ ನಿರ್ಧಾರವನ್ನು ಆ ಸಮಯದಲ್ಲಿ ಕಲ್ಕತ್ತಾ ಹೈಕೋರ್ಟ್ ತಳ್ಳಿಹಾಕಿತ್ತು. ಅಂದಿನಿಂದ ಮಾಸಿಕ ಗೌರವಧನವನ್ನು ವಕ್ಫ್ ಬೋರ್ಡ್ ಮೂಲಕ ನೀಡಲಾಗ್ತಿದೆ.

ಸೆಪ್ಟೆಂಬರ್ 2020ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರ ರಾಜ್ಯದ ಸುಮಾರು 8,000 ಹಿಂದೂ ಪುರೋಹಿತರಿಗೆ ತಿಂಗಳಿಗೆ 1,000 ರೂಪಾಯಿ ಗೌರವಧನವನ್ನು ಘೋಷಿಸಿದ್ದರು. ಆ ವರ್ಷ ದುರ್ಗಾಪೂಜೆಗೂ ಮುನ್ನ ಗೌರವಧನ ಆರಂಭಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಕ್ರಿಶ್ಚಿಯನ್ ಪಾದ್ರಿಗಳು ಸೇರಿದಂತೆ ಎಲ್ಲಾ ಧರ್ಮಗಳ ಧರ್ಮಗುರುಗಳು ಗೌರವಧನ ಕೇಳಿದರೆ ಅವರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಈ ಘೋಷಣೆಯ ನಂತರ ವಿರೋಧ ಪಕ್ಷಗಳು ಸರ್ಕಾರದ ಕ್ರಮವನ್ನು ಟೀಕಿಸಿದ್ದವು. ಮಮತಾ ಬ್ಯಾನರ್ಜಿ ಧರ್ಮವನ್ನು ರಾಜಕೀಯದೊಂದಿಗೆ ಬೆರೆಸಿದ್ದಾರೆ ಎಂದು ಆರೋಪಿಸಿತ್ತು.

ಆಗಸ್ಟ್ 2023ರಲ್ಲಿ, ಮುಸ್ಲಿಂ ಧರ್ಮಗುರುಗಳು ಮತ್ತು ಹಿಂದೂ ಪುರೋಹಿತರ ಮಾಸಿಕ ಭತ್ಯೆಗಳಲ್ಲಿ 500ರೂ. ಹೆಚ್ಚಳ ಮಾಡಿ ಮಮತಾ ಬ್ಯಾನರ್ಜಿ ಸರ್ಕಾರ ಆದೇಶಿಸಿತ್ತು. 2012ರಿಂದ ಅಲ್ಲಿಯವರೆಗೆ, ಇಮಾಮ್‌ಗಳು ಮಾಸಿಕ 2,500 ರೂ. ಮತ್ತು ಮುಅಝ್ಝಿನ್‌ಗಳು 1,000 ಪಡೆಯುತ್ತಿದ್ದರು. ಹೆಚ್ಚಳದ ನಂತರ, ಇಮಾಮ್‌ಗಳು ರೂ. 3000 ಮತ್ತು ಮುಅಝ್ಝಿನ್‌ಗಳು 1,500 ಪಡೆಯುತ್ತಿದ್ದಾರೆ. ಹಿಂದೂ ಪುರೋಹಿತರ ಗೌರವಧನ 1,500ಕ್ಕೆ ಹೆಚ್ಚಳವಾಗಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳು ಮಾತ್ರ ಸರ್ಕಾರದಿಂದ ಗೌರವಧನ ಪಡೆಯುತ್ತಿಲ್ಲ. ಹಿಂದೂ ಪುರೋಹಿತರು ಕೂಡ ಗೌರವಧನ ಪಡೆಯುತ್ತಿದ್ದಾರೆ. ಆದರೆ, ಎರಡು ಕಡೆಯವರ ಗೌರವಧನದ ಮೊತ್ತದಲ್ಲಿ ವ್ಯತ್ಯಾಸಗಳಿವೆ. ಅಲ್ಲದೆ, ಇಮಾಮ್ ಮತ್ತು ಮುಅಝ್ಝಿನ್‌ಗಳಿಗೆ ಗೌರವಧನ ಘೋಷಿಸಿದ ಎಂಟು ವರ್ಷಗಳ ಬಳಿಕ ಹಿಂದೂ ಪುರೋಹಿತರಿಗೆ ಗೌರವಧನ ಘೋಷಿಸಲಾಗಿದೆ.

ಇದನ್ನೂ ಓದಿ : FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...