Homeಫ್ಯಾಕ್ಟ್‌ಚೆಕ್FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್...

FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

- Advertisement -
- Advertisement -

ಚುನಾವಣಾ ಭಾಷಣಗಳಲ್ಲಿ ಧರ್ಮದ ವಿಚಾರವನ್ನು ಉಲ್ಲೇಖಿಸುವುದು, ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಆರೋಪಗಳನ್ನು ಮಾಡುವುದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಸೇರಿದಂತೆ ಬಿಜೆಪಿ ನಾಯಕರಿಗೆ ಈಗ ಸಾಮಾನ್ಯ ವಿಷಯವಾಗಿಬಿಟ್ಟಿದೆ.

ಇತ್ತೀಚೆಗೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸೆರಾಂಪೋರ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಗುರಿಯಾಗಿಸಿ ಎರಡು ಆರೋಪಗಳನ್ನು ಮಾಡಿದ್ದರು.

ಅಮಿತ್ ಶಾ ಅವರ ಭಾಷಣವದ ವಿಡಿಯೋವನ್ನು ಮೇ 15, 2024ರಂದು ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ. ಒಟ್ಟು 27 ನಿಮಿಷ 8 ಸೆಕೆಂಡ್ ಅವಧಿಯ ವಿಡಿಯೋದಲ್ಲಿ 18 ನಿಮಿಷ 21 ಸೆಕೆಂಡ್‌ನಿಂದ ಅಮಿತ್ ಶಾ ಈ ಕೆಳಗಿನಂತೆ ಹೇಳಿದ್ದಾರೆ.

ಮಮತಾ ಬ್ಯಾನರ್ಜಿಯವರು ರಂಝಾನ್ ಸಮಯದಲ್ಲಿ ಮುಸ್ಲಿಮರಿಗೆ ರಜೆ ನೀಡುತ್ತಾರೆ. ಆ ಬಗ್ಗೆ ನಮಗೇನು ಅಭ್ಯಂತರವಿಲ್ಲ, ಬೇಕಿದ್ದರೆ ರಜೆ ಕೊಡಲಿ. ಆದರೆ, ದುರ್ಗಾ ಪೂಜೆಯ ಸಮಯದಲ್ಲಿ ಯಾಕೆ ರಜೆ ಕೊಡುತ್ತಿಲ್ಲಎಂಬುವುದಕ್ಕೆ ನಮಗೆ ಉತ್ತರಬೇಕು. ಯಾಕೆ ಈ ತಾರತಮ್ಯ?”

ವಿಡಿಯೋದಲ್ಲಿ 17 ನಿಮಿಷ 46 ಸೆಕೆಂಡ್‌ನಿಂದ ಅಮಿತ್ ಅವರು ಮತ್ತೊಂದು ಆರೋಪ ಮಾಡಿರುವುದು ಇದೆ. ಅದು ಹೀಗಿದೆ…“ಈ ಇಮಾಮ್‌ಗಳು ಮತ್ತು ಮುಲ್ಲಾಗಳು ಬಂಗಾಳದ ಲಾಕರ್‌ಗಳಿಂದ ಸಂಬಳ ಪಡೆಯಬೇಕೇ? ಇಲ್ಲ ಎಂದು ಹೈಕೋರ್ಟ್ ಹೇಳಿದ್ದರಿಂದ ಮಮತಾ ಬ್ಯಾನರ್ಜಿ ಅವರು ನಿಧಿಗಾಗಿ ವಕ್ಫ್ ಮಂಡಳಿಯ ಮೊರೆ ಹೋಗಿದ್ದಾರೆ”

ಫ್ಯಾಕ್ಟ್‌ಚೆಕ್ : ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ಎರಡು ಆರೋಪಗಳನ್ನು ಮಾಡಿದ್ದಾರೆ. ಒಂದು ದುರ್ಗಾ ಪೂಜೆಗೆ ಪಶ್ಚಿಮ ಬಂಗಾಳ ಸರ್ಕಾರ ರಜೆ ನೀಡುತ್ತಿಲ್ಲ ಎಂಬುವುದು. ಮತ್ತೊಂದು ಮಸೀದಿಯ ಇಮಾಮ್‌ಗಳಿಗೆ ವಕ್ಫ್ ಮಂಡಳಿಯಿಂದ ಸಂಬಳ ನೀಡಲಾಗ್ತಿದೆ ಎಂಬುವುದು. ಈ ಬಗ್ಗೆ ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಪಶ್ಚಿಮ ಬಂಗಾಳ ಸರ್ಕಾರದ 2024ರ ಸಾರ್ವಜನಿಕ ರಜಾ ದಿನಗಳನ್ನು ಎರಡು ಪಟ್ಟಿಗಳಾಗಿ ವಿಂಗಡಿಸಲಾಗಿದೆ. ಹಣಕಾಸು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪಟ್ಟಿ-1ರ ಪ್ರಕಾರ, ಅಕ್ಟೋಬರ್ 2 ರಂದು ಮಹಾಲಯ, ಅಕ್ಟೋಬರ್ 10 ರಂದು ದುರ್ಗಾ ಪೂಜೆ, ಮಹಾ ಸಪ್ತಮಿ, ಅಕ್ಟೋಬರ್ 11 ರಂದು ದುರ್ಗಾ ಪೂಜೆ, ಮಹಾ ಅಷ್ಟಮಿ ಮತ್ತು ಮಹಾ ನಾಬಮಿ ಮತ್ತು ಅಕ್ಟೋಬರ್ 12 ರಂದು ದುರ್ಗಾ ಪೂಜೆ, ದಶಮಿ ರಜಾದಿನಗಳಿವೆ.

ಪಟ್ಟಿ-2ರಲ್ಲಿ ಕೋಲ್ಕತ್ತಾದ ರಿಜಿಸ್ಟ್ರಾರ್ ಆಫ್ ಅಶ್ಯೂರೆನ್ಸ್ ಮತ್ತು ಕೋಲ್ಕತ್ತಾದ ಸ್ಟಾಂಪ್ ರೆವಿನ್ಯೂ ಕಲೆಕ್ಟರ್ ಹೊರತುಪಡಿಸಿ ಪಶ್ಚಿಮ ಬಂಗಾಳ ಸರ್ಕಾರದ ಅಧೀನದ ಕಚೇರಿಗಳಿಗೆ ಅಕ್ಟೋಬರ್ 7 ರಂದು ದುರ್ಗಾ ಪೂಜೆ, ಮಹಾ ಚತುರ್ಥಿ, ಅಕ್ಟೋಬರ್ 8 ರಂದು ದುರ್ಗಾ ಪೂಜೆ, ಮಹಾ ಪಂಚಮಿ, ಅಕ್ಟೋಬರ್ 9 ರಂದು ದುರ್ಗಾ ಪೂಜೆ ಮಹಾ ಷಷ್ಠಿ ಮತ್ತು ಅಕ್ಟೋಬರ್ 14 ಮತ್ತು 15 ರಂದು ಹೆಚ್ಚಿನ ದುರ್ಗಾ ಪೂಜೆಗೆ ಹೆಚ್ಚುವರಿ ರಜೆಗಳನ್ನು ನೀಡಲಾಗಿದೆ. ಪಟ್ಟಿ-2 ಸಾರ್ವಜನಿಕ ರಜಾದಿನಗಳ ಅಡಿಯಲ್ಲಿ ಬರುವುದಿಲ್ಲ. ಇದನ್ನು ಹೆಚ್ಚುವರಿ ರಜೆಗಳೆಂದು ಪರಿಗಣಿಸಲಾಗಿದೆ.

ಪಶ್ಚಿಮ ಬಂಗಾಳ ಸರ್ಕಾರದ ಅಧಿಕೃತ ಪ್ರಕಟನೆಯಲ್ಲಿ ದುರ್ಗಾ ಪೂಜೆಗೆ 4 ದಿನಗಳ ಸಾರ್ವಜನಿಕ ರಜೆ ಮತ್ತು 5 ದಿನಗಳ ಹೆಚ್ಚುವರಿ ರಜೆ ಸೇರಿ ಒಟ್ಟು 9 ದಿನಗಳ ರಜೆ ನೀಡಲಾಗಿದೆ. ಹಾಗಾಗಿ, ದುರ್ಗಾ ಪೂಜೆಗೆ ರಜೆ ನೀಡಿಲ್ಲ ಎಂಬ ಅಮಿತ್ ಶಾ ಅವರ ಹೇಳಿಕೆ ಸುಳ್ಳು.

ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ 

ಇಮಾಮ್‌ಗಳು ಮಾತ್ರ ಬಂಗಾಳ ಸರ್ಕಾರದಿಂದ ಗೌರವಧನ ಪಡೆಯುತ್ತಿದ್ದಾರೆಯೇ?

ಅಮಿತ್ ಶಾ ಅವರು ತನ್ನ ಭಾಷಣದಲ್ಲಿ ಮಾಡಿರುವ ಎರಡನೇ ಆರೋಪದ ಬಗ್ಗೆ ನಾವು ಮಾಹಿತಿ ಕಲೆ ಹಾಕಿದ್ದೇವೆ. ನಮಗೆ ಲಭ್ಯವಾದ ಮಾಹಿತಿ ಪ್ರಕಾರ..

2012 ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರವು ಪಶ್ಚಿಮ ಬಂಗಾಳದ ಮಸೀದಿಗಳ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳಿಗೆ ಗೌರವಧನವನ್ನು ಘೋಷಿಸಿತ್ತು. ಈ ನಿರ್ಧಾರವನ್ನು ಆ ಸಮಯದಲ್ಲಿ ಕಲ್ಕತ್ತಾ ಹೈಕೋರ್ಟ್ ತಳ್ಳಿಹಾಕಿತ್ತು. ಅಂದಿನಿಂದ ಮಾಸಿಕ ಗೌರವಧನವನ್ನು ವಕ್ಫ್ ಬೋರ್ಡ್ ಮೂಲಕ ನೀಡಲಾಗ್ತಿದೆ.

ಸೆಪ್ಟೆಂಬರ್ 2020ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರ ರಾಜ್ಯದ ಸುಮಾರು 8,000 ಹಿಂದೂ ಪುರೋಹಿತರಿಗೆ ತಿಂಗಳಿಗೆ 1,000 ರೂಪಾಯಿ ಗೌರವಧನವನ್ನು ಘೋಷಿಸಿದ್ದರು. ಆ ವರ್ಷ ದುರ್ಗಾಪೂಜೆಗೂ ಮುನ್ನ ಗೌರವಧನ ಆರಂಭಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಕ್ರಿಶ್ಚಿಯನ್ ಪಾದ್ರಿಗಳು ಸೇರಿದಂತೆ ಎಲ್ಲಾ ಧರ್ಮಗಳ ಧರ್ಮಗುರುಗಳು ಗೌರವಧನ ಕೇಳಿದರೆ ಅವರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಈ ಘೋಷಣೆಯ ನಂತರ ವಿರೋಧ ಪಕ್ಷಗಳು ಸರ್ಕಾರದ ಕ್ರಮವನ್ನು ಟೀಕಿಸಿದ್ದವು. ಮಮತಾ ಬ್ಯಾನರ್ಜಿ ಧರ್ಮವನ್ನು ರಾಜಕೀಯದೊಂದಿಗೆ ಬೆರೆಸಿದ್ದಾರೆ ಎಂದು ಆರೋಪಿಸಿತ್ತು.

ಆಗಸ್ಟ್ 2023ರಲ್ಲಿ, ಮುಸ್ಲಿಂ ಧರ್ಮಗುರುಗಳು ಮತ್ತು ಹಿಂದೂ ಪುರೋಹಿತರ ಮಾಸಿಕ ಭತ್ಯೆಗಳಲ್ಲಿ 500ರೂ. ಹೆಚ್ಚಳ ಮಾಡಿ ಮಮತಾ ಬ್ಯಾನರ್ಜಿ ಸರ್ಕಾರ ಆದೇಶಿಸಿತ್ತು. 2012ರಿಂದ ಅಲ್ಲಿಯವರೆಗೆ, ಇಮಾಮ್‌ಗಳು ಮಾಸಿಕ 2,500 ರೂ. ಮತ್ತು ಮುಅಝ್ಝಿನ್‌ಗಳು 1,000 ಪಡೆಯುತ್ತಿದ್ದರು. ಹೆಚ್ಚಳದ ನಂತರ, ಇಮಾಮ್‌ಗಳು ರೂ. 3000 ಮತ್ತು ಮುಅಝ್ಝಿನ್‌ಗಳು 1,500 ಪಡೆಯುತ್ತಿದ್ದಾರೆ. ಹಿಂದೂ ಪುರೋಹಿತರ ಗೌರವಧನ 1,500ಕ್ಕೆ ಹೆಚ್ಚಳವಾಗಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳು ಮಾತ್ರ ಸರ್ಕಾರದಿಂದ ಗೌರವಧನ ಪಡೆಯುತ್ತಿಲ್ಲ. ಹಿಂದೂ ಪುರೋಹಿತರು ಕೂಡ ಗೌರವಧನ ಪಡೆಯುತ್ತಿದ್ದಾರೆ. ಆದರೆ, ಎರಡು ಕಡೆಯವರ ಗೌರವಧನದ ಮೊತ್ತದಲ್ಲಿ ವ್ಯತ್ಯಾಸಗಳಿವೆ. ಅಲ್ಲದೆ, ಇಮಾಮ್ ಮತ್ತು ಮುಅಝ್ಝಿನ್‌ಗಳಿಗೆ ಗೌರವಧನ ಘೋಷಿಸಿದ ಎಂಟು ವರ್ಷಗಳ ಬಳಿಕ ಹಿಂದೂ ಪುರೋಹಿತರಿಗೆ ಗೌರವಧನ ಘೋಷಿಸಲಾಗಿದೆ.

ಇದನ್ನೂ ಓದಿ : FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...