Homeಫ್ಯಾಕ್ಟ್‌ಚೆಕ್FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್...

FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

- Advertisement -
- Advertisement -

ಚುನಾವಣಾ ಭಾಷಣಗಳಲ್ಲಿ ಧರ್ಮದ ವಿಚಾರವನ್ನು ಉಲ್ಲೇಖಿಸುವುದು, ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಆರೋಪಗಳನ್ನು ಮಾಡುವುದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಸೇರಿದಂತೆ ಬಿಜೆಪಿ ನಾಯಕರಿಗೆ ಈಗ ಸಾಮಾನ್ಯ ವಿಷಯವಾಗಿಬಿಟ್ಟಿದೆ.

ಇತ್ತೀಚೆಗೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸೆರಾಂಪೋರ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಗುರಿಯಾಗಿಸಿ ಎರಡು ಆರೋಪಗಳನ್ನು ಮಾಡಿದ್ದರು.

ಅಮಿತ್ ಶಾ ಅವರ ಭಾಷಣವದ ವಿಡಿಯೋವನ್ನು ಮೇ 15, 2024ರಂದು ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ. ಒಟ್ಟು 27 ನಿಮಿಷ 8 ಸೆಕೆಂಡ್ ಅವಧಿಯ ವಿಡಿಯೋದಲ್ಲಿ 18 ನಿಮಿಷ 21 ಸೆಕೆಂಡ್‌ನಿಂದ ಅಮಿತ್ ಶಾ ಈ ಕೆಳಗಿನಂತೆ ಹೇಳಿದ್ದಾರೆ.

ಮಮತಾ ಬ್ಯಾನರ್ಜಿಯವರು ರಂಝಾನ್ ಸಮಯದಲ್ಲಿ ಮುಸ್ಲಿಮರಿಗೆ ರಜೆ ನೀಡುತ್ತಾರೆ. ಆ ಬಗ್ಗೆ ನಮಗೇನು ಅಭ್ಯಂತರವಿಲ್ಲ, ಬೇಕಿದ್ದರೆ ರಜೆ ಕೊಡಲಿ. ಆದರೆ, ದುರ್ಗಾ ಪೂಜೆಯ ಸಮಯದಲ್ಲಿ ಯಾಕೆ ರಜೆ ಕೊಡುತ್ತಿಲ್ಲಎಂಬುವುದಕ್ಕೆ ನಮಗೆ ಉತ್ತರಬೇಕು. ಯಾಕೆ ಈ ತಾರತಮ್ಯ?”

ವಿಡಿಯೋದಲ್ಲಿ 17 ನಿಮಿಷ 46 ಸೆಕೆಂಡ್‌ನಿಂದ ಅಮಿತ್ ಅವರು ಮತ್ತೊಂದು ಆರೋಪ ಮಾಡಿರುವುದು ಇದೆ. ಅದು ಹೀಗಿದೆ…“ಈ ಇಮಾಮ್‌ಗಳು ಮತ್ತು ಮುಲ್ಲಾಗಳು ಬಂಗಾಳದ ಲಾಕರ್‌ಗಳಿಂದ ಸಂಬಳ ಪಡೆಯಬೇಕೇ? ಇಲ್ಲ ಎಂದು ಹೈಕೋರ್ಟ್ ಹೇಳಿದ್ದರಿಂದ ಮಮತಾ ಬ್ಯಾನರ್ಜಿ ಅವರು ನಿಧಿಗಾಗಿ ವಕ್ಫ್ ಮಂಡಳಿಯ ಮೊರೆ ಹೋಗಿದ್ದಾರೆ”

ಫ್ಯಾಕ್ಟ್‌ಚೆಕ್ : ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ಎರಡು ಆರೋಪಗಳನ್ನು ಮಾಡಿದ್ದಾರೆ. ಒಂದು ದುರ್ಗಾ ಪೂಜೆಗೆ ಪಶ್ಚಿಮ ಬಂಗಾಳ ಸರ್ಕಾರ ರಜೆ ನೀಡುತ್ತಿಲ್ಲ ಎಂಬುವುದು. ಮತ್ತೊಂದು ಮಸೀದಿಯ ಇಮಾಮ್‌ಗಳಿಗೆ ವಕ್ಫ್ ಮಂಡಳಿಯಿಂದ ಸಂಬಳ ನೀಡಲಾಗ್ತಿದೆ ಎಂಬುವುದು. ಈ ಬಗ್ಗೆ ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಪಶ್ಚಿಮ ಬಂಗಾಳ ಸರ್ಕಾರದ 2024ರ ಸಾರ್ವಜನಿಕ ರಜಾ ದಿನಗಳನ್ನು ಎರಡು ಪಟ್ಟಿಗಳಾಗಿ ವಿಂಗಡಿಸಲಾಗಿದೆ. ಹಣಕಾಸು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪಟ್ಟಿ-1ರ ಪ್ರಕಾರ, ಅಕ್ಟೋಬರ್ 2 ರಂದು ಮಹಾಲಯ, ಅಕ್ಟೋಬರ್ 10 ರಂದು ದುರ್ಗಾ ಪೂಜೆ, ಮಹಾ ಸಪ್ತಮಿ, ಅಕ್ಟೋಬರ್ 11 ರಂದು ದುರ್ಗಾ ಪೂಜೆ, ಮಹಾ ಅಷ್ಟಮಿ ಮತ್ತು ಮಹಾ ನಾಬಮಿ ಮತ್ತು ಅಕ್ಟೋಬರ್ 12 ರಂದು ದುರ್ಗಾ ಪೂಜೆ, ದಶಮಿ ರಜಾದಿನಗಳಿವೆ.

ಪಟ್ಟಿ-2ರಲ್ಲಿ ಕೋಲ್ಕತ್ತಾದ ರಿಜಿಸ್ಟ್ರಾರ್ ಆಫ್ ಅಶ್ಯೂರೆನ್ಸ್ ಮತ್ತು ಕೋಲ್ಕತ್ತಾದ ಸ್ಟಾಂಪ್ ರೆವಿನ್ಯೂ ಕಲೆಕ್ಟರ್ ಹೊರತುಪಡಿಸಿ ಪಶ್ಚಿಮ ಬಂಗಾಳ ಸರ್ಕಾರದ ಅಧೀನದ ಕಚೇರಿಗಳಿಗೆ ಅಕ್ಟೋಬರ್ 7 ರಂದು ದುರ್ಗಾ ಪೂಜೆ, ಮಹಾ ಚತುರ್ಥಿ, ಅಕ್ಟೋಬರ್ 8 ರಂದು ದುರ್ಗಾ ಪೂಜೆ, ಮಹಾ ಪಂಚಮಿ, ಅಕ್ಟೋಬರ್ 9 ರಂದು ದುರ್ಗಾ ಪೂಜೆ ಮಹಾ ಷಷ್ಠಿ ಮತ್ತು ಅಕ್ಟೋಬರ್ 14 ಮತ್ತು 15 ರಂದು ಹೆಚ್ಚಿನ ದುರ್ಗಾ ಪೂಜೆಗೆ ಹೆಚ್ಚುವರಿ ರಜೆಗಳನ್ನು ನೀಡಲಾಗಿದೆ. ಪಟ್ಟಿ-2 ಸಾರ್ವಜನಿಕ ರಜಾದಿನಗಳ ಅಡಿಯಲ್ಲಿ ಬರುವುದಿಲ್ಲ. ಇದನ್ನು ಹೆಚ್ಚುವರಿ ರಜೆಗಳೆಂದು ಪರಿಗಣಿಸಲಾಗಿದೆ.

ಪಶ್ಚಿಮ ಬಂಗಾಳ ಸರ್ಕಾರದ ಅಧಿಕೃತ ಪ್ರಕಟನೆಯಲ್ಲಿ ದುರ್ಗಾ ಪೂಜೆಗೆ 4 ದಿನಗಳ ಸಾರ್ವಜನಿಕ ರಜೆ ಮತ್ತು 5 ದಿನಗಳ ಹೆಚ್ಚುವರಿ ರಜೆ ಸೇರಿ ಒಟ್ಟು 9 ದಿನಗಳ ರಜೆ ನೀಡಲಾಗಿದೆ. ಹಾಗಾಗಿ, ದುರ್ಗಾ ಪೂಜೆಗೆ ರಜೆ ನೀಡಿಲ್ಲ ಎಂಬ ಅಮಿತ್ ಶಾ ಅವರ ಹೇಳಿಕೆ ಸುಳ್ಳು.

ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ 

ಇಮಾಮ್‌ಗಳು ಮಾತ್ರ ಬಂಗಾಳ ಸರ್ಕಾರದಿಂದ ಗೌರವಧನ ಪಡೆಯುತ್ತಿದ್ದಾರೆಯೇ?

ಅಮಿತ್ ಶಾ ಅವರು ತನ್ನ ಭಾಷಣದಲ್ಲಿ ಮಾಡಿರುವ ಎರಡನೇ ಆರೋಪದ ಬಗ್ಗೆ ನಾವು ಮಾಹಿತಿ ಕಲೆ ಹಾಕಿದ್ದೇವೆ. ನಮಗೆ ಲಭ್ಯವಾದ ಮಾಹಿತಿ ಪ್ರಕಾರ..

2012 ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರವು ಪಶ್ಚಿಮ ಬಂಗಾಳದ ಮಸೀದಿಗಳ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳಿಗೆ ಗೌರವಧನವನ್ನು ಘೋಷಿಸಿತ್ತು. ಈ ನಿರ್ಧಾರವನ್ನು ಆ ಸಮಯದಲ್ಲಿ ಕಲ್ಕತ್ತಾ ಹೈಕೋರ್ಟ್ ತಳ್ಳಿಹಾಕಿತ್ತು. ಅಂದಿನಿಂದ ಮಾಸಿಕ ಗೌರವಧನವನ್ನು ವಕ್ಫ್ ಬೋರ್ಡ್ ಮೂಲಕ ನೀಡಲಾಗ್ತಿದೆ.

ಸೆಪ್ಟೆಂಬರ್ 2020ರಲ್ಲಿ, ಮಮತಾ ಬ್ಯಾನರ್ಜಿ ಸರ್ಕಾರ ರಾಜ್ಯದ ಸುಮಾರು 8,000 ಹಿಂದೂ ಪುರೋಹಿತರಿಗೆ ತಿಂಗಳಿಗೆ 1,000 ರೂಪಾಯಿ ಗೌರವಧನವನ್ನು ಘೋಷಿಸಿದ್ದರು. ಆ ವರ್ಷ ದುರ್ಗಾಪೂಜೆಗೂ ಮುನ್ನ ಗೌರವಧನ ಆರಂಭಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಕ್ರಿಶ್ಚಿಯನ್ ಪಾದ್ರಿಗಳು ಸೇರಿದಂತೆ ಎಲ್ಲಾ ಧರ್ಮಗಳ ಧರ್ಮಗುರುಗಳು ಗೌರವಧನ ಕೇಳಿದರೆ ಅವರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಈ ಘೋಷಣೆಯ ನಂತರ ವಿರೋಧ ಪಕ್ಷಗಳು ಸರ್ಕಾರದ ಕ್ರಮವನ್ನು ಟೀಕಿಸಿದ್ದವು. ಮಮತಾ ಬ್ಯಾನರ್ಜಿ ಧರ್ಮವನ್ನು ರಾಜಕೀಯದೊಂದಿಗೆ ಬೆರೆಸಿದ್ದಾರೆ ಎಂದು ಆರೋಪಿಸಿತ್ತು.

ಆಗಸ್ಟ್ 2023ರಲ್ಲಿ, ಮುಸ್ಲಿಂ ಧರ್ಮಗುರುಗಳು ಮತ್ತು ಹಿಂದೂ ಪುರೋಹಿತರ ಮಾಸಿಕ ಭತ್ಯೆಗಳಲ್ಲಿ 500ರೂ. ಹೆಚ್ಚಳ ಮಾಡಿ ಮಮತಾ ಬ್ಯಾನರ್ಜಿ ಸರ್ಕಾರ ಆದೇಶಿಸಿತ್ತು. 2012ರಿಂದ ಅಲ್ಲಿಯವರೆಗೆ, ಇಮಾಮ್‌ಗಳು ಮಾಸಿಕ 2,500 ರೂ. ಮತ್ತು ಮುಅಝ್ಝಿನ್‌ಗಳು 1,000 ಪಡೆಯುತ್ತಿದ್ದರು. ಹೆಚ್ಚಳದ ನಂತರ, ಇಮಾಮ್‌ಗಳು ರೂ. 3000 ಮತ್ತು ಮುಅಝ್ಝಿನ್‌ಗಳು 1,500 ಪಡೆಯುತ್ತಿದ್ದಾರೆ. ಹಿಂದೂ ಪುರೋಹಿತರ ಗೌರವಧನ 1,500ಕ್ಕೆ ಹೆಚ್ಚಳವಾಗಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಇಮಾಮ್‌ಗಳು ಮತ್ತು ಮುಅಝ್ಝಿನ್‌ಗಳು ಮಾತ್ರ ಸರ್ಕಾರದಿಂದ ಗೌರವಧನ ಪಡೆಯುತ್ತಿಲ್ಲ. ಹಿಂದೂ ಪುರೋಹಿತರು ಕೂಡ ಗೌರವಧನ ಪಡೆಯುತ್ತಿದ್ದಾರೆ. ಆದರೆ, ಎರಡು ಕಡೆಯವರ ಗೌರವಧನದ ಮೊತ್ತದಲ್ಲಿ ವ್ಯತ್ಯಾಸಗಳಿವೆ. ಅಲ್ಲದೆ, ಇಮಾಮ್ ಮತ್ತು ಮುಅಝ್ಝಿನ್‌ಗಳಿಗೆ ಗೌರವಧನ ಘೋಷಿಸಿದ ಎಂಟು ವರ್ಷಗಳ ಬಳಿಕ ಹಿಂದೂ ಪುರೋಹಿತರಿಗೆ ಗೌರವಧನ ಘೋಷಿಸಲಾಗಿದೆ.

ಇದನ್ನೂ ಓದಿ : FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...