Homeಫ್ಯಾಕ್ಟ್‌ಚೆಕ್FACT CHECK : ಹಳೆಯ ವಿಡಿಯೋವನ್ನು ಕಾಂಗ್ರೆಸ್‌ ಜಾಹೀರಾತು ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

FACT CHECK : ಹಳೆಯ ವಿಡಿಯೋವನ್ನು ಕಾಂಗ್ರೆಸ್‌ ಜಾಹೀರಾತು ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಈ ಬಾರಿಯ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಈ ಪೈಕಿ ಮಹಿಳೆಯರಿಗೆ ಮಾಸಿಕ 8,500 ರೂಪಾಯಿ ಸಹಾಯಧನ ಕೊಡುವ ‘ಮಹಾಲಕ್ಷಿ’ ಯೋಜನೆಯೂ ಒಂದು.

ಮಹಾಲಕ್ಷಿ ಯೋಜನೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿ ಚುನಾವಣಾ ಭಾಷಣದಲ್ಲೂ ಪ್ರಸ್ತಾಪಿಸುತ್ತಿದ್ದಾರೆ. ಮಹಿಳೆಯರು ವಿಶೇಷವಾಗಿ ಗೃಹಿಣಿಯರು, ಕುಟುಂಬದ ಜವಬ್ದಾರಿಯನ್ನು ಹೊತ್ತ ತಾಯಂದಿರು ಬಹಳ ಕಷ್ಟಪಡುತ್ತಿದ್ದಾರೆ. ಅವರಿಗೆ ಸಹಾಯ ಮಾಡುವ ಸಲುವಾಗಿ ಈ ಗ್ಯಾರಂಟಿ ಜಾರಿಗೊಳಿಸುತ್ತೇವೆ ಎನ್ನುತ್ತಿದ್ದಾರೆ.

ಕಾಂಗ್ರೆಸ್ ತನ್ನ ಐದು ಗ್ಯಾರಂಟಿಗಳು ಸೇರಿದಂತೆ ಚುನಾವಣಾ ಭರವಸೆಗಳ ಕುರಿತು ಆಗಾಗ ವಿಡಿಯೋ ಹಂಚಿಕೊಳ್ಳುತ್ತಿರುತ್ತದೆ. ಇತ್ತೀಚೆಗೆ ‘ಮಹಾಲಕ್ಷಿ’ ಯೋಜನೆಯದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ವಿಡಿಯೋದಲ್ಲಿ ತಾಯಿಯೊಬ್ಬಳು ಮಗುವಿಗೆ ಹಾಲುಣಿಸುತ್ತಿರುವಾಗ ಆಕೆಯ ಕೈಯಿಂದ ಹಾಲಿನ ಬಾಟಲಿ ಕೆಳಗೆ ಬೀಳುವುದು. ಆಕೆಯ ಪಕ್ಕ ಇದ್ದ ಮಹಿಳೆಯರು ಅದನ್ನು ಎತ್ತಿ ಕೊಡದೆ ಸುಮ್ಮನೆ ಕೂರುವುದು. ಆಗ ಸ್ವಚ್ಚತಾ ಸಿಬ್ಬಂದಿಯಾಗಿರುವ ಮಹಿಳೆಯೊಬ್ಬರು ಬಂದು ಬಾಟಲಿ ಎತ್ತಿ ಕೊಡುವ ದೃಶ್ಯವಿದೆ.

ಮುಂದುವರಿದು, ಮಗುವಿನ ಹಾಲುಣಿಸುತ್ತಿದ್ದ ತಾಯಿ ಮತ್ತು ಸ್ವಚ್ಚತಾ ಸಿಬ್ಬಂದಿ ಮಹಿಳೆ ನಡುವೆ ನಡೆಯುವ ಸಂಭಾಷಣೆ ವಿಡಿಯೋದಲ್ಲಿ ಇದೆ. ಹಾಲುಣಿಸುತ್ತಿದ್ದ ತಾಯಿ ಸ್ವಚ್ಚತಾ ಸಿಬ್ಬಂದಿ ಮಹಿಳೆಗೆ “ನಿಮಗೆ ಎಷ್ಟು ಮಕ್ಕಳು, ನೀವು ಮನೆ ಮತ್ತು ಮಕ್ಕಳು ಎರಡೂ ಕೆಲಸವನ್ನು ಹೇಗೆ ನಿಭಾಯಿಸುವಿರಿ?” ಎಂದು ಪ್ರಶ್ನಿಸುತ್ತಾರೆ. ಆಗ ಮಹಿಳೆ ಉತ್ತರಿಸುತ್ತಾ, “10 ಗಂಟೆ ಪಾಳಿಯಲ್ಲಿ ಕಚೇರಿ ಕೆಲಸ ಮುಗಿಸಿ ಮನೆಗೆ ಹೋದ ಮೇಲೆ ತಾಯಿಯ “ಎನ್ನುತ್ತಾರೆ. ಆಗ ಅಲ್ಲೇ ಕುಳಿತಿದ್ದ ಮತ್ತೊಬ್ಬ ಮಹಿಳೆ, “ಎರಡೆರಡು ಕೆಲಸಗಳನ್ನು ಮಾಡುವುದರಲ್ಲೇ ನಿನ್ನ ಆಯಸ್ಸು ಮುಗಿಯುತ್ತದೆ” ಎಂದು ಹೇಳುವುದನ್ನು ನೋಡಬಹುದು.

ವಿಡಿಯೋದಲ್ಲಿ ಮಹಿಳೆಯರ ಸಂಭಾಷಣೆ ಮುಗಿದ ಬಳಿಕ, ರಾಹುಲ್ ಗಾಂಧಿಯವರು ಮಹಾಲಕ್ಷಿ ಯೋಜನೆ ಕುರಿತು ಮಾತನಾಡಿರುವ ದೃಶ್ಯವಿದೆ. ಅನೇಕ ಕಾಂಗ್ರೆಸ್ ಮುಖಂಡರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಈ ವಿಡಿಯೋ ಕುರಿತು ಅನುಮಾನ ವ್ಯಕ್ತವಾದ ಕಾರಣ, ನಾವು ಇದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಇದು ಕಾಂಗ್ರೆಸ್‌ನ ಮಹಾಲಕ್ಷಿ ಯೋಜನೆ ಕುರಿತ ವಿಡಿಯೋ ಅಲ್ಲ. ಎಡಿಟೆಡ್ ವಿಡಿಯೋ ಎಂಬ ಸತ್ಯ ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಬಳಸಿ ನಾವು ಸರ್ಚ್ ಮಾಡಿದಾಗ, ಪ್ರೆಗಾ ನ್ಯೂಸ್ ಯೂಟ್ಯೂಬ್ ಚಾನೆಲ್‌ನಲ್ಲಿ 19 ಫೆಬ್ರವರಿ 2022 ರಂದು ಅಪ್ಲೋಡ್ ಮಾಡಲಾದ ಮೂಲ ವಿಡಿಯೋ ದೊರೆತಿದೆ.

ಮೂಲ ವಿಡಿಯೋದಲ್ಲೂ ವೈರಲ್ ವಿಡಿಯೋದಲ್ಲಿರುವ ದೃಶ್ಯಗಳೇ ಇದ್ದು, ಕೊನೆಯಲ್ಲಿ ಮಾತ್ರ ಮಹಿಳಾ ದಿನಾಚರಣೆಯ ಸಂದೇಶ ಸಾರುವ ಸನ್ನಿವೇಶವಿದೆ. ಮಹಿಳಾ ದಿನಾಚರಣೆಯ ಪ್ರಯುಕ್ತ ಪ್ರೆಗಾ ನ್ಯೂಸ್ ಸಿದ್ದಪಡಿಸಿದ ವಿಶೇಷ ವಿಡಿಯೋವನ್ನು ಕಟ್‌ ಮಾಡಿ, ಅದಕ್ಕೆ ರಾಹುಲ್ ಗಾಂಧಿಯ ವಿಡಿಯೋ ಎಡಿಟ್ ಮಾಡಿ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...