Homeಫ್ಯಾಕ್ಟ್‌ಚೆಕ್FACT CHECK : ಹಳೆಯ ವಿಡಿಯೋವನ್ನು ಕಾಂಗ್ರೆಸ್‌ ಜಾಹೀರಾತು ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

FACT CHECK : ಹಳೆಯ ವಿಡಿಯೋವನ್ನು ಕಾಂಗ್ರೆಸ್‌ ಜಾಹೀರಾತು ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಈ ಬಾರಿಯ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಈ ಪೈಕಿ ಮಹಿಳೆಯರಿಗೆ ಮಾಸಿಕ 8,500 ರೂಪಾಯಿ ಸಹಾಯಧನ ಕೊಡುವ ‘ಮಹಾಲಕ್ಷಿ’ ಯೋಜನೆಯೂ ಒಂದು.

ಮಹಾಲಕ್ಷಿ ಯೋಜನೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿ ಚುನಾವಣಾ ಭಾಷಣದಲ್ಲೂ ಪ್ರಸ್ತಾಪಿಸುತ್ತಿದ್ದಾರೆ. ಮಹಿಳೆಯರು ವಿಶೇಷವಾಗಿ ಗೃಹಿಣಿಯರು, ಕುಟುಂಬದ ಜವಬ್ದಾರಿಯನ್ನು ಹೊತ್ತ ತಾಯಂದಿರು ಬಹಳ ಕಷ್ಟಪಡುತ್ತಿದ್ದಾರೆ. ಅವರಿಗೆ ಸಹಾಯ ಮಾಡುವ ಸಲುವಾಗಿ ಈ ಗ್ಯಾರಂಟಿ ಜಾರಿಗೊಳಿಸುತ್ತೇವೆ ಎನ್ನುತ್ತಿದ್ದಾರೆ.

ಕಾಂಗ್ರೆಸ್ ತನ್ನ ಐದು ಗ್ಯಾರಂಟಿಗಳು ಸೇರಿದಂತೆ ಚುನಾವಣಾ ಭರವಸೆಗಳ ಕುರಿತು ಆಗಾಗ ವಿಡಿಯೋ ಹಂಚಿಕೊಳ್ಳುತ್ತಿರುತ್ತದೆ. ಇತ್ತೀಚೆಗೆ ‘ಮಹಾಲಕ್ಷಿ’ ಯೋಜನೆಯದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ವಿಡಿಯೋದಲ್ಲಿ ತಾಯಿಯೊಬ್ಬಳು ಮಗುವಿಗೆ ಹಾಲುಣಿಸುತ್ತಿರುವಾಗ ಆಕೆಯ ಕೈಯಿಂದ ಹಾಲಿನ ಬಾಟಲಿ ಕೆಳಗೆ ಬೀಳುವುದು. ಆಕೆಯ ಪಕ್ಕ ಇದ್ದ ಮಹಿಳೆಯರು ಅದನ್ನು ಎತ್ತಿ ಕೊಡದೆ ಸುಮ್ಮನೆ ಕೂರುವುದು. ಆಗ ಸ್ವಚ್ಚತಾ ಸಿಬ್ಬಂದಿಯಾಗಿರುವ ಮಹಿಳೆಯೊಬ್ಬರು ಬಂದು ಬಾಟಲಿ ಎತ್ತಿ ಕೊಡುವ ದೃಶ್ಯವಿದೆ.

ಮುಂದುವರಿದು, ಮಗುವಿನ ಹಾಲುಣಿಸುತ್ತಿದ್ದ ತಾಯಿ ಮತ್ತು ಸ್ವಚ್ಚತಾ ಸಿಬ್ಬಂದಿ ಮಹಿಳೆ ನಡುವೆ ನಡೆಯುವ ಸಂಭಾಷಣೆ ವಿಡಿಯೋದಲ್ಲಿ ಇದೆ. ಹಾಲುಣಿಸುತ್ತಿದ್ದ ತಾಯಿ ಸ್ವಚ್ಚತಾ ಸಿಬ್ಬಂದಿ ಮಹಿಳೆಗೆ “ನಿಮಗೆ ಎಷ್ಟು ಮಕ್ಕಳು, ನೀವು ಮನೆ ಮತ್ತು ಮಕ್ಕಳು ಎರಡೂ ಕೆಲಸವನ್ನು ಹೇಗೆ ನಿಭಾಯಿಸುವಿರಿ?” ಎಂದು ಪ್ರಶ್ನಿಸುತ್ತಾರೆ. ಆಗ ಮಹಿಳೆ ಉತ್ತರಿಸುತ್ತಾ, “10 ಗಂಟೆ ಪಾಳಿಯಲ್ಲಿ ಕಚೇರಿ ಕೆಲಸ ಮುಗಿಸಿ ಮನೆಗೆ ಹೋದ ಮೇಲೆ ತಾಯಿಯ “ಎನ್ನುತ್ತಾರೆ. ಆಗ ಅಲ್ಲೇ ಕುಳಿತಿದ್ದ ಮತ್ತೊಬ್ಬ ಮಹಿಳೆ, “ಎರಡೆರಡು ಕೆಲಸಗಳನ್ನು ಮಾಡುವುದರಲ್ಲೇ ನಿನ್ನ ಆಯಸ್ಸು ಮುಗಿಯುತ್ತದೆ” ಎಂದು ಹೇಳುವುದನ್ನು ನೋಡಬಹುದು.

ವಿಡಿಯೋದಲ್ಲಿ ಮಹಿಳೆಯರ ಸಂಭಾಷಣೆ ಮುಗಿದ ಬಳಿಕ, ರಾಹುಲ್ ಗಾಂಧಿಯವರು ಮಹಾಲಕ್ಷಿ ಯೋಜನೆ ಕುರಿತು ಮಾತನಾಡಿರುವ ದೃಶ್ಯವಿದೆ. ಅನೇಕ ಕಾಂಗ್ರೆಸ್ ಮುಖಂಡರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಈ ವಿಡಿಯೋ ಕುರಿತು ಅನುಮಾನ ವ್ಯಕ್ತವಾದ ಕಾರಣ, ನಾವು ಇದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಇದು ಕಾಂಗ್ರೆಸ್‌ನ ಮಹಾಲಕ್ಷಿ ಯೋಜನೆ ಕುರಿತ ವಿಡಿಯೋ ಅಲ್ಲ. ಎಡಿಟೆಡ್ ವಿಡಿಯೋ ಎಂಬ ಸತ್ಯ ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಬಳಸಿ ನಾವು ಸರ್ಚ್ ಮಾಡಿದಾಗ, ಪ್ರೆಗಾ ನ್ಯೂಸ್ ಯೂಟ್ಯೂಬ್ ಚಾನೆಲ್‌ನಲ್ಲಿ 19 ಫೆಬ್ರವರಿ 2022 ರಂದು ಅಪ್ಲೋಡ್ ಮಾಡಲಾದ ಮೂಲ ವಿಡಿಯೋ ದೊರೆತಿದೆ.

ಮೂಲ ವಿಡಿಯೋದಲ್ಲೂ ವೈರಲ್ ವಿಡಿಯೋದಲ್ಲಿರುವ ದೃಶ್ಯಗಳೇ ಇದ್ದು, ಕೊನೆಯಲ್ಲಿ ಮಾತ್ರ ಮಹಿಳಾ ದಿನಾಚರಣೆಯ ಸಂದೇಶ ಸಾರುವ ಸನ್ನಿವೇಶವಿದೆ. ಮಹಿಳಾ ದಿನಾಚರಣೆಯ ಪ್ರಯುಕ್ತ ಪ್ರೆಗಾ ನ್ಯೂಸ್ ಸಿದ್ದಪಡಿಸಿದ ವಿಶೇಷ ವಿಡಿಯೋವನ್ನು ಕಟ್‌ ಮಾಡಿ, ಅದಕ್ಕೆ ರಾಹುಲ್ ಗಾಂಧಿಯ ವಿಡಿಯೋ ಎಡಿಟ್ ಮಾಡಿ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...