Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು...

FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶ ಘೋಷಣೆಯಾಗಿ ಹೊಸ ಸರ್ಕಾರ ರಚನೆಯಾದ ಬಳಿಕ, ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಮುಸ್ಲಿಂ ಮಹಿಳೆಯರು ಬ್ಯಾಂಕ್, ಅಂಚೆ ಕಚೇರಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿರುವ ವಿಡಿಯೋಗಳನ್ನ ಹಂಚಿಕೊಂಡು, ” ಇವರು ಕಾಂಗ್ರೆಸ್‌ನ ಕಟಾ ಕಟಾ ಹಣಕ್ಕಾಗಿ ಕಾಯುತ್ತಿದ್ದಾರೆ” ಎಂದು ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

Baba Banaras(@RealBababanaras) ಎಂಬ ಎಕ್ಸ್‌ ಬಳಕೆದಾರ ಬುರ್ಕಾಧಾರಿ ಮಹಿಳೆಯರು ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ಕುಳಿತಿದ್ದ ವಿಡಿಯೋವೊಂದನ್ನು ಇತ್ತೀಚೆಗೆ ಹಂಚಿಕೊಂಡು, “ಅಕ್ಬರ್, ಬಾಬರ್ ಮತ್ತು ಔರಂಗಝೇಬ್‌ನ ಕುಟುಂಬ ಸದಸ್ಯರು ರಾಹುಲ್ ಗಾಂಧಿಯವರ “ಕಟಾಕಟ್‌ ಯೋಜನೆ” ಅಡಿಯಲ್ಲಿ ತಿಂಗಳಿಗೆ ಸಿಗುವ 8,500 ರೂಪಾಯಿ ಪಡೆಯಲು ಸರದಿ ಸಾಲಿನಲ್ಲಿ ಕಾಯುತ್ತಿದ್ದಾರೆ ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ ಚೆಕ್ : ಎಕ್ಸ್‌ ಬಳಕೆದಾರ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಇದು 2020ರಲ್ಲಿ ಕೇಂದ್ರ ಸರ್ಕಾರದ ಜನ್‌ಧನ್ ಯೋಜನೆಯ ಮಹಿಳಾ ಫಲಾನುಭವಿಗಳು ಉತ್ತರ ಪ್ರದೇಶದ ಮುಝಾಫರ್ ನಗರದ ಬ್ಯಾಂಕ್‌ ಒಂದರ ಹೊರಗೆ ಸಾಲುಗಟ್ಟಿ ನಿಂತಿದ್ದ ದೃಶ್ಯ ಎಂದು ಗೊತ್ತಾಗಿದೆ.

ಆಗಾಗ ಕೋಮು ವೈಷಮ್ಯದ ಸುದ್ದಿಗಳನ್ನು ಹಂಚಿಕೊಳ್ಳುವ ಸುದರ್ಶನ್ ನ್ಯೂಸ್‌ನ ಸಂಪಾದಕ ಸುರೇಶ್ ಚವ್ಹಾಂಕೆ 2021ರಲ್ಲಿ ಇದೇ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡು “ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಿ, ಉಚಿತ ಪಡಿತರ ಸಾಲು ನೋಡಿ ಕಣ್ಣು ತೆರೆಯಿರಿ” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದರು. ಈ ಮೂಲಕ ಪರೋಕ್ಷವಾಗಿ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿ ದ್ವೇಷ ಹರಡುವ ಪ್ರಯತ್ನ ಮಾಡಿದ್ದರು.

ಸುರೇಶ್ ಚವ್ಹಾಂಕೆ ಹಂಚಿಕೊಂಡಿದ್ದ ವಿಡಿಯೋಗೆ ಕಮೆಂಟ್ ಮಾಡಿದ್ದ ಖ್ಯಾತ ಫ್ಯಾಕ್ಟ್‌ ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್” “ಕಳೆದ ವರ್ಷ ಮುಝಾಫರ್‌ ನಗರದ ಬ್ಯಾಂಕ್‌ನ ಹೊರಗೆ ಮಹಿಳೆಯರು ತಮ್ಮ ಜನ್ ಧನ್ ಖಾತೆಯಿಂದ ಹಣವನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ ಎಂಬ ಭಯದಿಂದ ಸರತಿ ಸಾಲಿನಲ್ಲಿ ನಿಂತಿದ್ದ ವಿಡಿಯೋವನ್ನು, ಮುಸ್ಲಿಂ ಮಹಿಳೆಯರು ಉಚಿತ ಪಡಿತರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ” ಎಂದು ತಿಳಿಸಿದ್ದರು.

ಏಪ್ರಿಲ್ 20, 2020ರಲ್ಲಿ ನ್ಯೂಸ್‌ 18 ಇಂಡಿಯಾ ಈ ಕುರಿತು ವಿಡಿಯೋ ಸುದ್ದಿ ಪ್ರಕಟಿಸಿತ್ತು. ಸುದ್ದಿಯಲ್ಲಿ “ಜನ್ ಧನ್ ಯೋಜನೆಯ ಫಲಾನುಭವಿಗಳು ತಮ್ಮ ಖಾತೆಯಲ್ಲಿ ಠೇವಣಿ ಇಟ್ಟಿರುವ 500 ರೂ. ಅನ್ನು ಹಿಂತೆಗೆದುಕೊಳ್ಳದಿದ್ದರೆ ಬ್ಯಾಂಕ್‌ಗೆ ವಾಪಸ್ ಹೋಗಲಿದೆ ಎಂಬ ವದಂತಿ ಹಬ್ಬಿದೆ. ಇದರಿಂದ ಮಹಿಳಾ ಖಾತೆದಾರರು ತಮ್ಮ ಖಾತೆಯಿಂದ ಹಣ ವಾಪಸ್ ಪಡೆದುಕೊಳ್ಳಲು ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ, ಬ್ಯಾಂಕ್ ಅಧಿಕಾರಿಗಳು ಖಾತೆಯಿಂದ ಹಣ ವಾಪಸ್ ಹೋಗುವುದಿಲ್ಲ. ಖಾತೆಯಲ್ಲೇ ಉಳಿಯಲಿದೆ ಎಂದು ತಿಳಿಸಿದ್ದಾರೆ ಎಂದು ಹೇಳಲಾಗಿತ್ತು.

ಕೋವಿಡ್ -19ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನರಿಗೆ ಸಹಾಯವಾಗಲೆಂದು ಜನ್ ಧನ್ ಖಾತೆದಾರರಿಗೆ ಮೂರು ತಿಂಗಳಿಗೊಮ್ಮೆ 500 ರೂ. ಸಹಾಯಧನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಮಹಿಳೆಯರ ಖಾತೆಗೆ 500 ರೂ. ಜಮಾ ಮಾಡಲಾಗಿತ್ತು. ಹೀಗೆ ಜಮೆಯಾದ ಹಣ ಡ್ರಾ ಮಾಡದಿದ್ದರೆ ವಾಪಸ್ ಹೋಗಲಿದೆ ಎಂಬ ವದಂತಿ ಹರಡಿದ್ದರಿಂದ ಮಹಿಳಾ ಖಾತೆದಾರರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದರು. ಆದರ ವಿಡಿಯೋ ಈಗ ಹಂಚಿಕೊಳ್ಳಲಾಗಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ನಾವು ಮೇಲೆ ಉಲ್ಲೇಖಿಸಿದಂತೆ ಎಕ್ಸ್ ಬಳಕೆದಾರ ಹಂಚಿಕೊಂಡಿರುವ ವಿಡಿಯೋ, ರಾಹುಲ್ ಗಾಂಧಿ ಹೇಳಿರುವ ಕಾಂಗ್ರೆಸ್‌ನ ಭರವಸೆಯಾದ ಮಹಾಲಕ್ಷಿ ಯೋಜನೆಯ ಹಣ ಪಡೆಯಲು ಮಹಿಳೆಯರು ಕಾಯುತ್ತಿರುವುದಲ್ಲ. ಬದಲಿಗೆ 2020ರಲ್ಲಿ ಜನ್ ಧನ್ ಖಾತೆಯ ಹಣ ಡ್ರಾ ಮಾಡಲು ಕಾದಿರುವ ವಿಡಿಯೋ ಆಗಿದೆ.

ಇದನ್ನೂ ಓದಿ : FACT CHECK : ರಾಷ್ಟ್ರಪತಿ ಭವನದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...