Homeಫ್ಯಾಕ್ಟ್‌ಚೆಕ್FACT CHECK : ಮುಂಬೈನಲ್ಲಿ ಬಾರ್ಬರ್ ಜಿಹಾದ್ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೊಳ್ಳಲಾಗುತ್ತಿದೆ

FACT CHECK : ಮುಂಬೈನಲ್ಲಿ ಬಾರ್ಬರ್ ಜಿಹಾದ್ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಮುಂಬೈನಲ್ಲಿ ಬಾರ್ಬರ್ (ಕ್ಷೌರಿಕ) ಜಿಹಾದ್ ಎಂದು ಬರೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿರುವ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ನಿಲುಮೆ ಎಂಬ ಫೇಸ್‌ಬುಕ್ ಗ್ರೂಪ್ ಒಂದರಲ್ಲಿ ಉಮಾ ಶಂಕರ್ ಎಂಬಾತ ಫೋಟೋ ಹಂಚಿಕೊಂಡು ಹೀಗೆ ಬರೆದಿದ್ದಾರೆ..”ಮುಂಬೈನಲ್ಲಿ ಬಾರ್ಬರ್ ಜಿಹಾದ್… ಮಸೀದಿಗಳಲ್ಲಿ ಹಿಂದೂಗಳ ಗಡ್ಡ/ಕೂದಲು ಕತ್ತರಿಸುವಾಗ ಏಡ್ಸ್ ಬ್ಲೇಡ್‌ಗಳಿಂದ ಲಘುವಾಗಿ ಕತ್ತರಿಸುವ ಕೌಶಲ್ಯವನ್ನು ಕಲಿಸಲಾಗುತ್ತದೆ ಮತ್ತು ಈ ಕೆಲಸಕ್ಕೆ ಅವರು ಅಲ್ಲಿಂದ ಹಣವನ್ನು ಪಡೆಯುತ್ತಾರೆ ಎಂದು ಈ ಹುಡುಗರು ಪೊಲೀಸರಿಗೆ ತಿಳಿಸಿದರು.”

“ಇದು ಹೊಸಾ ಜಿಹಾದ್, ಈ ಮೂಲಕ ಹಿಂದೂಗಳನ್ನು ಏಡ್ಸ್ ರೋಗಿಗಳನ್ನಾಗಿ ಮಾಡಿ ಕೊಲ್ಲಲಾಗುತ್ತಿದೆ.
ಶಸ್ತ್ರಾಸ್ತ್ರಗಳಿಲ್ಲದ ಹೋರಾಟಗಾರರನ್ನು ಈ ಆಂತರಿಕ ಯುದ್ಧಕ್ಕೆ ಸಿದ್ಧಪಡಿಸಲಾಗುತ್ತಿದೆ. ಆದ್ದರಿಂದ ಎಲ್ಲಾ ಹಿಂದೂಜರು ಶೇವಿಂಗ್ ಮತ್ತು ಕಟಿಂಗ್ ಅನ್ನು ಹಿಂದೂ ಕ್ಷೌರಿಕರಿಂದ ಮಾತ್ರ ಮಾಡಿಸಿಕೊಳ್ಳಿ, ಮಹಿಳೆಯರು ಕೂಡ ಹಿಂದೂಜರಿರುವ ಪಾರ್ಲರ್ಗೆ ಹೋಗಿ(.ನಾಗರಾಜ್ ಖೋಡೆ ನವರ ಪೇಜ್ ಇಂದ )”

ಇದೇ ರೀತಿಯ ಪೋಸ್ಟ್‌ಗಳನ್ನು ಅನೇಕ ಫೇಸ್‌ಬುಕ್ ಬಳಕೆದಾರರು ತಮ್ಮ ಖಾತೆಗಳಲ್ಲಿ ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್ : ಫೇಸ್‌ಬುಕ್‌ ಖಾತೆಗಳಲ್ಲಿ ಹಂಚಿಕೊಂಡಿರುವ ವೈರಲ್ ಫೋಟೋದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಜುಲೈ 18,2013 ರಂದು ‘ಇಂಡಿಯಾ ಟಿವಿ‘ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯೊಂದರಲ್ಲಿ ಇದೇ ವೈರಲ್ ಫೋಟೋ ಕಂಡು ಬಂದಿದೆ.

ವರದಿಯಲ್ಲಿ ಕ್ರೆಡಿಟ್ ಕಾರ್ಡ್ ಕಳ್ಳತನ ಮತ್ತು ವಂಚನೆ ಆರೋಪದ ಮೇಲೆ ಮುಂಬೈ ಪೋಲೀಸರು ಭೋಜ್ಪುರಿ ನಟ ಇರ್ಫಾನ್ ಖಾನ್ ಮತ್ತು ಆತನ ಸ್ನೇಹಿತ ಸಂಜಯ್ ಯಾದವ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ. “ಕ್ರೆಡಿಟ್ ಕಾರ್ಡ್‌ಗಳು, ಚೆಕ್ ಪುಸ್ತಕಗಳು ಮತ್ತು ಬಿಲ್ ಪುಸ್ತಕಗಳನ್ನು ಕದ್ದು, ನಂತರ ಬೆಲೆ ಬಾಳುವ ವಸ್ತುಗಳನ್ನು ಖರೀದಿಸಿದ ಆರೋಪದ ಮೇಲೆ ಇರ್ಫಾನ್ ಖಾನ್ ಮತ್ತು ಸಂಜಯ್ ಯಾದವ್ ಅವರನ್ನು ಮುಂಬೈ ಪೊಲೀಸರು ಬಿಹಾರದ ಛಾಪ್ರಾ ಜಿಲ್ಲೆಯಿಂದ ಬಂಧಿಸಿದ್ದಾರೆ” ಎಂದು ವರದಿ ವಿವರಿಸಿದೆ.

ಜುಲೈ 18, 2013ರಂದು ಎಬಿಪಿ ನ್ಯೂಸ್ ಮತ್ತು ಟಿವಿ9 ಗುಜರಾತ್ ಕೂಡ ಇದೇ ಪ್ರಕರಣದ ಕುರಿತು ವರದಿ ಮಾಡಿತ್ತು. ಎರಡೂ ವರದಿಗಳಲ್ಲೂ ಕಳ್ಳತನ ಮತ್ತು ವಂಚನೆ ಆರೋಪದ ಮೇಲೆ ಇರ್ಫಾನ್ ಖಾನ್ ಮತ್ತು ಸಂಜಯ್ ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಹೇಳಲಾಗಿತ್ತು.

ಮಾಧ್ಯಮ ವರದಿಗಳ ಪ್ರಕಾರ, ವೈರಲ್ ಫೋಟೋ 2013ರಲ್ಲಿ ನಡೆದ ಕಳ್ಳತನ ಪ್ರಕರಣವೊಂದರಲ್ಲಿ ಆರೋಪಿಗಳನ್ನು ಬಂಧಿಸಿದ್ದಾಗಿದೆ. ಅಲ್ಲದೆ, ಬಾರ್ಬರ್ ಜಿಹಾದ್, ಹಿಂದೂಗಳಿಗೆ ಏಡ್ಸ್ ಹರಡುವುದಕ್ಕೆ ಸಂಬಂಧಿಸಿದಲ್ಲ. ಸಾಮಾಜಿಕ ಜಾಲತಾಣದ ಸುಳ್ಳು ಪೋಸ್ಟ್‌ಗಳು ಮುಸ್ಲಿಮರ ವಿರುದ್ದ ಕೋಮು ವೈಷಮ್ಯ ಹರಡುವ ಉದ್ದೇಶಕ್ಕೆ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ : FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...